Homeಮುಖಪುಟಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

ಪ.ಬಂಗಾಳ: ಅತ್ಯಾಚಾರ ಅಪರಾಧಿಗಳಿಗೆ ಮರಣದಂಡನೆ ವಿಧಿಸುವ ಮಸೂದೆ ವಾಪಸ್ ಕಳಿಸಿದ ರಾಜ್ಯಪಾಲ

- Advertisement -
- Advertisement -

ಭಾರತೀಯ ನ್ಯಾಯ ಸಂಹಿತೆಗೆ (ಬಿಎನ್‌ಎಸ್) ಪ್ರಸ್ತಾವಿತ ಬದಲಾವಣೆಗಳ ಕುರಿತು ಕೇಂದ್ರವು ಎತ್ತಿರುವ ಗಂಭೀರ ಆಕ್ಷೇಪಣೆಗಳನ್ನು ಉಲ್ಲೇಖಿಸಿ ಪಶ್ಚಿಮ ಬಂಗಾಳ ರಾಜ್ಯಪಾಲ ಸಿ.ವಿ ಆನಂದ ಬೋಸ್ ಅವರು ‘ಅಪರಾಜಿತ ಮಸೂದೆ’ಯನ್ನು ಮರುಪರಿಶೀಲನೆಗಾಗಿ ವಿಧಾನಸಭೆಗೆ ಹಿಂದಿರುಗಿಸಿದ್ದಾರೆ ಎಂದು ರಾಜಭವನದ ಉನ್ನತ ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಸೆಪ್ಟೆಂಬರ್ 2024ರಲ್ಲಿ ವಿಧಾನಸಭೆ ಅಂಗೀಕರಿಸಿರುವ ‘ಅಪರಾಜಿತ ಮಹಿಳೆಯರು ಮತ್ತು ಮಕ್ಕಳ (ಪಶ್ಚಿಮ ಬಂಗಾಳ ಕ್ರಿಮಿನಲ್ ಕಾನೂನುಗಳ ತಿದ್ದುಪಡಿ) ಮಸೂದೆಯು’ ಬಿಎನ್‌ಎಸ್‌ನ ಹಲವು ವಿಭಾಗಗಳ ಅಡಿಯಲ್ಲಿ ಅತ್ಯಾಚಾರಕ್ಕೆ ಶಿಕ್ಷೆ ವಿಧಿಸುವ ನಿಬಂಧನೆಗಳಲ್ಲಿ ಬದಲಾವಣೆ ಮಾಡಲಿವೆ ಎಂದು ಕೇಂದ್ರವು ಕಂಡುಕೊಂಡಿದೆ. ‘ಅತಿ ಕಠಿಣ ಮತ್ತು ಅಸಮಾನ’ ಶಿಕ್ಷೆಗಳನ್ನು ಪ್ರಸ್ತಾಪಿಸಿವೆ ಎಂದು ಕೇಂದ್ರ ಹೇಳಿದೆ.

ಬಿಎನ್‌ಎಸ್ ಸೆಕ್ಷನ್ 64ಕ್ಕೆ ತಿದ್ದುಪಡಿ ತರುವುದು ಮಸೂದೆಯ ಒಂದು ಪ್ರಮುಖ ವಿವಾದದ ಅಂಶವಾಗಿದೆ. ಮಸೂದೆಯು ಅತ್ಯಾಚಾರಕ್ಕೆ ಪ್ರಸ್ತುತ ಇರುವ ಕನಿಷ್ಠ 10 ವರ್ಷಗಳ ಶಿಕ್ಷೆಯನ್ನು ಅಪರಾಧಿಯ ಸಹಜ ಜೀವಿತಾವಧಿಯ ಉಳಿದ ಅವಧಿಗೆ ಜೈಲು ಶಿಕ್ಷೆ ಅಥವಾ ಮರಣದಂಡನೆಗೆ ಹೆಚ್ಚಿಸಲಿದೆ. ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (ಎಂಎಚ್‌ಎ) ಇದು ಅನಗತ್ಯ ಕಠಿಣ ಮತ್ತು ನೈತಿಕ ತತ್ವಗಳಿಗೆ ಹೊಂದಿಕೆಯಾಗುವುದಿಲ್ಲ ಎಂದು ಪರಿಗಣಿಸಿರುವುದಾಗಿ ವರದಿಯಾಗಿದೆ.

ಅಪ್ರಾಪ್ತ ವಯಸ್ಕರ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಕಠಿಣ ಶಿಕ್ಷೆಯನ್ನು ಸೂಚಿಸುವ ಬಿಎನ್‌ಎಸ್ ಸೆಕ್ಷನ್ 65 ಅನ್ನು ತೆಗೆದುಹಾಕುವುದನ್ನು ಗೃಹ ಸಚಿವಾಲಯ ಆಕ್ಷೇಪಿಸಿದ್ದು ಮತ್ತೊಂದು ಕಾರಣವಾಗಿದೆ. ಮೂಲಗಳ ಪ್ರಕಾರ, ಈ ಸೆಕ್ಷನ್ ರದ್ದುಗೊಳಿಸುವುದರಿಂದ ದುರ್ಬಲ ಗುಂಪುಗಳಿಗೆ ರಕ್ಷಣೆ ದುರ್ಬಲಗೊಳ್ಳುತ್ತದೆ ಮತ್ತು ಅತ್ಯಾಚಾರ ಕಾನೂನುಗಳಲ್ಲಿ ವಯಸ್ಸಿನ ಆಧಾರಿತ ವರ್ಗೀಕರಣದ ಹಿಂದಿನ ಉದ್ದೇಶವನ್ನು ದುರ್ಬಲಗೊಳಿಸುವ ಅಪಾಯವಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.

ಇನ್ನು, ಕೇಂದ್ರವು ಅತ್ಯಂತ ಸಮಸ್ಯಾತ್ಮಕವೆಂದು ಕಂಡುಕೊಂಡಿರುವ ನಿಬಂಧನೆ ಸೆಕ್ಷನ್ 66ರ ಅಡಿಯಲ್ಲಿದ್ದು, ಅತ್ಯಾಚಾರ ಪ್ರಕರಣಗಳಲ್ಲಿ ಬಲಿಪಶು ಸಾವನ್ನಪ್ಪಿದರೆ ಅಥವಾ ಅಸ್ವಸ್ಥ ಸ್ಥಿತಿಯಲ್ಲಿ ಉಳಿದರೆ ಇದು ಅಪರಾಧಿಗೆ ಮರಣದಂಡನೆಯನ್ನು ಕಡ್ಡಾಯಗೊಳಿಸುತ್ತದೆ.

ಮಸೂದೆಯ ಕುರಿತು ಗೃಹ ಸಚಿವಾಲಯವು ಸಾಂವಿಧಾನಿಕ ಕಳವಳಗಳನ್ನು ವ್ಯಕ್ತಪಡಿಸಿದ್ದು, ಶಿಕ್ಷೆ ವಿಧಿಸುವಲ್ಲಿ ನ್ಯಾಯಾಂಗದ ವಿವೇಚನೆಯನ್ನು ತೆಗೆದುಹಾಕುವುದು ಸ್ಥಾಪಿತ ಕಾನೂನು ಮಾನದಂಡಗಳು ಮತ್ತು ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಮಸೂದೆಯ ಕುರಿತ ಅವಲೋಕನಗಳ ಬಗ್ಗೆ ಕೇಂದ್ರ ಅಥವಾ ರಾಜ್ಯಪಾಲರ ಕಚೇರಿಯಿಂದ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.

ಈ ಹಿಂದೆ, ಅಪರಾಜಿತ ಮಾದರಿಯಲ್ಲೇ ಎಲ್ಲಾ ಅತ್ಯಾಚಾರ ಮತ್ತು ಸಾಮೂಹಿಕ ಅತ್ಯಾಚಾರ ಪ್ರಕರಣಗಳಿಗೆ ಕಡ್ಡಾಯ ಮರಣದಂಡನೆ ವಿಧಿಸಲು ಪ್ರಸ್ತಾಪಿಸಿದ್ದ ಆಂಧ್ರ ಪ್ರದೇಶ ‘ದಿಶಾ ಮಸೂದೆ, 2019’ ಮತ್ತು ಮಹಾರಾಷ್ಟ್ರದ ‘ಶಕ್ತಿ ಮಸೂದೆ, 2020’ ಅನ್ನು ಆಯಾ ರಾಜ್ಯ ಶಾಸಕಾಂಗಗಳು ಸರ್ವಾನುಮತದಿಂದ ಅಂಗೀಕರಿಸಿದ್ದವು, ಆದರೆ, ರಾಷ್ಟ್ರಪತಿ ಅಂಕಿ ಹಾಕಿರಲಿಲ್ಲ.

ತೃಣಮೂಲ ಕಾಂಗ್ರೆಸ್ ಪಕ್ಷವು ಇದನ್ನು ರಾಜಕೀಯ ವಿಷಯವನ್ನಾಗಿ ಮಾಡಲಿದೆ ಎಂದು ಅದರ ವಕ್ತಾರ ಕುನಾಲ್ ಘೋಷ್ ಹೇಳಿದ್ದಾರೆ. “ಅಪರಾಜಿತ ಮಸೂದೆಯನ್ನು ಹಿಂತಿರುಗಿಸಿರುವುದು ದುರದೃಷ್ಟಕರ, ಶೋಚನೀಯ ಮತ್ತು ಖಂಡನೀಯ. ಬಿಜೆಪಿ ಸದಸ್ಯರು ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರಗಳಲ್ಲಿ ಭಾಗಿಯಾಗಿರುವುದರಿಂದ ಈ ಪ್ರಕರಣಗಳಲ್ಲಿ ಗರಿಷ್ಠ ಶಿಕ್ಷೆಯನ್ನು ವಿಧಿಸಲು ಅವರು ಸಿದ್ಧರಿಲ್ಲ ಎಂಬುವುದನ್ನು ಇದು ಸಾಬೀತುಪಡಿಸಿದೆ” ಎಂದಿದ್ದಾರೆ.

ಉಪರಾಷ್ಟ್ರಪತಿ ಆಯ್ಕೆ: ಬಿಜೆಪಿಯ ಬಂಡಾರು ದತ್ತಾತ್ರೇಯ ಪರ ಬ್ಯಾಟ್ ಬೀಸಿದ ಕಾಂಗ್ರೆಸ್ ಸಿಎಂ ರೇವಂತ್ ರೆಡ್ಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...