Homeಮುಖಪುಟಬಂಗಾಳ: ರ್‍ಯಾಲಿಗಳಲ್ಲಿ ಮಾಸ್ಕ್, ದೈಹಿಕ ಅಂತರ ಕಡ್ಡಾಯಗೊಳಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ

ಬಂಗಾಳ: ರ್‍ಯಾಲಿಗಳಲ್ಲಿ ಮಾಸ್ಕ್, ದೈಹಿಕ ಅಂತರ ಕಡ್ಡಾಯಗೊಳಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ

- Advertisement -
- Advertisement -

ಕೊರೊನಾ ಎರಡನೇ ಅಲೆಯ ಬಗ್ಗೆ ಆರೋಗ್ಯ ತಜ್ಞರಿಂದ ಎಚ್ಚರಿಸಿರುವ ಪಶ್ಚಿಮ ಬಂಗಾಳ ಸರ್ಕಾರ ರಾಜಕೀಯ ರ್‍ಯಾಲಿಗಳಲ್ಲಿ ಮಾಸ್ಕ್‌‌ ಧರಿಸಲು ಮತ್ತು ದೈಹಿಕ ಅಂತರವನ್ನು ಕಡ್ಡಾಯಗೊಳಿಸುವಂತೆ ಎಲ್ಲಾ ಜಿಲ್ಲಾ ಆಡಳಿತಗಳಿಗೆ ಸೋಮವಾರ ನಿರ್ದೇಶನ ನೀಡಿದೆ.

ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ, ಜಿಲ್ಲಾ ನ್ಯಾಯಾಧೀಶರು ಮತ್ತು ಉನ್ನತ ಪೊಲೀಸ್ ಅಧಿಕಾರಿಗಳೊಂದಿಗಿನ ಸಭೆಯಲ್ಲಿ, ಬಂಗಾಳದ ಕೊರೊನಾ ಪರಿಸ್ಥಿತಿಯ ಬಗ್ಗೆ ಮತ್ತು ಚುನಾವಣೆಯ ಮಧ್ಯೆ ಅದರ ಹರಡುವಿಕೆಯನ್ನು ನಿಯಂತ್ರಿಸುವ ಸಿದ್ಧತೆಯ ಬಗ್ಗೆ ಚರ್ಚಿಸಲಾಯಿತು.

“ಚುನಾವಣೆಗಳು ಹತ್ತಿರದಲ್ಲಿವೆ, 30 ವಿಧಾನಸಭಾ ಕ್ಷೇತ್ರಗಳಲ್ಲಿ ಇನ್ನು ಕೆಲವೇ ದಿನಗಳಲ್ಲಿ (ಮಾರ್ಚ್ 27 ರಂದು) ಚುಣಾವಣೆ ನಡೆಯುತ್ತವೆ. ಈ ಸಮಯದಲ್ಲಿ ಕೊರೊನಾ ಸಂಖ್ಯೆಯಲ್ಲಿನ ಈ ಹಠಾತ್ ಏರಿಕೆ ಆತಂಕದ ವಿಷಯವಾಗಿದೆ” ಎಂದು ಸಭೆಯಲ್ಲಿ ಭಾಗವಹಿಸಿದ ಹಿರಿಯ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೇರಳ ನಾಮಪತ್ರ ವಿವಾದ- ಬಿಜೆಪಿ ಅಭ್ಯರ್ಥಿಗಳ ಮನವಿ ಹೈಕೋರ್ಟ್‌ನಲ್ಲೂ ತಿರಸ್ಕೃತ

ರೋಗ ತಡೆಗಟ್ಟುವುದು ಹಾಗೂ ಜನರು ಮೂಲಭೂತ ನೈರ್ಮಲ್ಯ ನಿಯಮಗಳನ್ನು ಅನುಸರಿಸುತ್ತಾರೆಯೆ ಎಂದು ಖಚಿತಪಡಿಸಿಕೊಳ್ಳಲು ಮುಖ್ಯ ಕಾರ್ಯದರ್ಶಿ ಎಲ್ಲಾ ಜಿಲ್ಲಾಧಿಕಾರಿ ಮತ್ತು ಎಸ್ಪಿಗಳನ್ನು ಕೇಳಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಸಿಎಪಿಎಫ್ ಸಿಬ್ಬಂದಿ, ಬೂತ್ ಅಧಿಕಾರಿಗಳು ಮತ್ತು ರಾಜಕೀಯ ಪಕ್ಷಗಳ ಕಾರ್ಯಕರ್ತರು ಸಾಂಕ್ರಮಿಕಕ್ಕೆ ಬಲಿಯಾಗದಂತೆ ನೋಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಗೃಹ ಕಾರ್ಯದರ್ಶಿ ಎಚ್‌.ಕೆ. ದ್ವೀದೇವಿ, ಡಿಜಿಪಿ ನೀರಜ್ ನಾಯನ್ ಮತ್ತು ರಾಜ್ಯ ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಪಶ್ಚಿಮ ಬಂಗಾಳದಲ್ಲಿ ಮಾರ್ಚ್ 27 ರಿಂದ ಏಪ್ರಿಲ್ 29 ರವರೆಗೆ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೇ 2 ರಂದು ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...