Homeಮುಖಪುಟಪಶ್ಚಿಮ ಬಂಗಾಳ: ಇವಿಎಂ ಜೊತೆಗೆ ಟಿಎಂಸಿ ಮುಖಂಡನ ಮನೆಯಲ್ಲಿ ತಂಗಿದ್ದ ಅಧಿಕಾರಿ ಅಮಾನತು

ಪಶ್ಚಿಮ ಬಂಗಾಳ: ಇವಿಎಂ ಜೊತೆಗೆ ಟಿಎಂಸಿ ಮುಖಂಡನ ಮನೆಯಲ್ಲಿ ತಂಗಿದ್ದ ಅಧಿಕಾರಿ ಅಮಾನತು

- Advertisement -
- Advertisement -

ಇವಿಎಂ ಜೊತೆಗೆ ತೃಣಮೂಲ ಕಾಂಗ್ರೆಸ್ ಮುಖಂಡನಾದ ತನ್ನ ಸಂಬಂಧಿಕರ ಮನೆಯಲ್ಲಿ ತಂಗಿದ್ದೆ ಎಂದು ಹೇಳಿರುವ ಪಶ್ಚಿಮ ಬಂಗಾಳ ಚುನಾವಣಾ ಅಧಿಕಾರಿಯನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ. ಮತದಾನದಲ್ಲಿ ಅವರು ತೆಗೆದುಕೊಂಡು ಹೋಗಿದ್ದ ಮೀಸಲು ಇವಿಎಂ ಮತ್ತು ವಿವಿಪ್ಯಾಟ್‌ ಮತದಾನದಲ್ಲಿ ಬಳಸುವುದಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಉತ್ತರ ಉಲುಬೇರಿಯಾದಲ್ಲಿ ಹೌರಾದ ಸೆಕ್ಟರ್ 17 ರ ನಿಯೋಜಿತ ಅಧಿಕಾರಿ ತಪನ್ ಸರ್ಕಾರ್ ಅವರು ತಮ್ಮ ಸಂಬಂಧಿಕರಾಗಿರುವ ಟಿಎಂಸಿ ನಾಯಕರ ಮನೆಗೆ ರಾತ್ರಿ ಮಲಗಲು ಹೋಗುವಾಗ ಜೊತೆಯಲ್ಲಿ ಮೀಸಲು ಇವಿಎಂ ಮತ್ತು ವಿವಿಪ್ಯಾಟ್‌ಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಚುನಾವಣಾ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಚುನಾವಣಾ ಆಯೋಗದ ಸೂಚನೆಗಳನ್ನು ಉಲ್ಲಂಘಿಸಿರುವುದರಿಂದ ಅವರೊಂದಿಗೆ ಇದ್ದ ಪೊಲೀಸ್ ಅಧಿಕಾರಿಗಳು ಸಹ ಕ್ರಮ ಎದುರಿಸಬೇಕಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

“ಇದು ಭಾರತದ ಚುನಾವಣಾ ಆಯೋಗದ ಸೂಚನೆಗಳ ಸಂಪೂರ್ಣ ಉಲ್ಲಂಘನೆಯಾಗಿದ್ದು, ಇದಕ್ಕಾಗಿ ವಲಯ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಸೆಕ್ಟರ್ ಅಧಿಕಾರಿ ಜತೆ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿಯ ಅಮಾನತಿಗೂ ನಿರ್ದೇಶಿಸಲಾಗಿದೆ” ಎಂದು ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಸ್ಸಾಂ ಬಿಜೆಪಿ ಅಭ್ಯರ್ಥಿ ಕಾರಿನಲ್ಲಿ ಇವಿಎಂ ಪತ್ತೆ: ಮರುಮತದಾನಕ್ಕೆ ಆದೇಶ, 4 ಅಧಿಕಾರಿಗಳ ಅಮಾನತು!

ಅಧಿಕಾರಿ ತಪನ್ ಸರ್ಕಾರ್ ಬಳಿಯಿದ್ದ ಮತಯಂತ್ರಗಳನ್ನು ಮತ್ತು ವಿವಿಪ್ಯಾಟ್‌ಗಳನ್ನು ವಾಪಸ್ ಪಡೆದು ಪರಿಶೀಲಿಸಲಾಗಿದೆ. ಇವುಗಳನ್ನು ಪ್ರತ್ಯೇಕ ಕೋಣೆಯಲ್ಲಿ ಸಂಗ್ರಹಿಸಲಾಗಿದ್ದು, ಚುನಾವಣಾ ಪ್ರಕ್ರಿಯೆಯಲ್ಲಿ ಬಳಸುವುದಿಲ್ಲ ಎಂದು ಆಯೋಗ ಹೇಳಿದೆ.

ಇತ್ತಿಚೆಗೆ ಅಸ್ಸಾಂನ ಬರಾಕ್ ಕಣಿವೆ ಪ್ರದೇಶದ ಕರೀಂಗಂಜ್ ಜಿಲ್ಲೆಯ ಬಿಜೆಪಿ ಅಭ್ಯರ್ಥಿಗೆ ಸೇರಿದ ಕಾರಿನಲ್ಲಿ ಚುನಾವಣಾ ಅಧಿಕಾರಿಗಳು ಇವಿಎಂ ಜೊತೆ ಪ್ರಯಾಣಿಸಿದ ಘಟನೆ ದೊಡ್ಡ ಕೋಲಾಹಲಕ್ಕೆ ಕಾರಣವಾಗಿತ್ತು. ಆ ನಾಲ್ವರು ಅಧಿಕಾರಿಗಳನ್ನು ಕರ್ತವ್ಯಲೋಪದ ಆರೋಪದ ಮೇಲೆ ಅಮಾನತು ಮಾಡಿ, ಆ ಕ್ಷೇತ್ರದಲ್ಲಿ ಮರುಮತದಾನ ನಡೆಸುವಂತೆ ಚುನಾವಣಾ ಆಯೋಗ ಆದೇಶ ನೀಡಿದೆ.

ಪಶ್ಚಿಮ ಬಂಗಾಳದ ಎಂಟು ಹಂತದ ವಿಧಾನಸಭಾ ಚುನಾವಣೆಯಲ್ಲಿ ಮಂಗಳವಾರ ಮೂರನೇ ಹಂತದ ಮತದಾನ ನಡೆಯುತ್ತಿದೆ ಸ್ಥಾನದಲ್ಲಿದೆ.


ಇದನ್ನೂ ಓದಿ: ಇವಿಎಂ ವಿರೋಧಿಸಿ 100 ದಿನದಲ್ಲಿ 3000 ಕಿ.ಮೀ ನಡೆದ ಓಂಕಾರ್ ಸಿಂಗ್ ಬೆಂಗಳೂರಿಗೆ ಆಗಮನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...