Homeಮುಖಪುಟಬಂಗಾಳ ಚುನಾವಣೆ: ಚುನಾವಣಾ ರ್‍ಯಾಲಿಗಳಲ್ಲಿ 500 ಜನರಿಗೆ ಮಾತ್ರ ಅವಕಾಶ

ಬಂಗಾಳ ಚುನಾವಣೆ: ಚುನಾವಣಾ ರ್‍ಯಾಲಿಗಳಲ್ಲಿ 500 ಜನರಿಗೆ ಮಾತ್ರ ಅವಕಾಶ

- Advertisement -
- Advertisement -

ಪಶ್ಚಿಮ ಬಂಗಾಳ ಚುನಾವಣಾ ರ್‍ಯಾಲಿ, ರೋಡ್ ಶೋ ಮತ್ತು ಸಾರ್ವಜನಿಕ ಸಭೆಗಳಲ್ಲಿ 500 ಕ್ಕೂ ಹೆಚ್ಚು ಜನರು ಸೇರುವಂತಿಲ್ಲ ಎಂದು ಚುನಾವಣಾ ಆಯೋಗ ಘೋಷಿಸಿದೆ. ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಪ್ರಚಾರದ ಸಮಯದಲ್ಲಿ ಕೊರೊನಾ ಸುರಕ್ಷತಾ ಮಾನದಂಡಗಳನ್ನು ಅನುಸರಿಸುತ್ತಿಲ್ಲ ಎಂದು ಆಯೋಗ ತಿಳಿಸಿದೆ.

ಎಂಟು ಹಂತಗಳಲ್ಲಿ ನಡೆಯುತ್ತಿರುವ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಈಗಾಗಲೇ  6 ಹಂತಗಳ ಮತದಾನ ಮುಗಿದಿದ್ದು ಇನ್ನು 2 ಹಂತಗಳು ಬಾಕಿ ಇವೆ. ಈಗಾಗಲೇ ರ್‍ಯಾಲಿ, ಸಭೆಗಳಿಗೆ ನೀಡಲಾಗಿರುವ ಅನುಮತಿಗಳನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ.

ಕೊರೊನಾ ಎರಡನೇ ಅಲೆಯಲ್ಲಿ ರಾಜಕೀಯ ಪಕ್ಷಗಳು ಸೂಕ್ತವಾದ ಕೋವಿಡ್ ಪ್ರೋಟೋಕಾಲ್‌ಗಳನ್ನು ಅನುಸರಿಸುತ್ತಿವೆ ಎಂದು ಖಚಿತಪಡಿಸಿಕೊಳ್ಳಲು, ಕ್ರಮ ಕೈಗೊಳ್ಳಲು ಕಲ್ಕತ್ತಾ ಹೈಕೋರ್ಟ್ ಆಯೋಗಕ್ಕೆ ಸೂಚನೆ ನೀಡಿದ ಬೆನ್ನಲೆ ಚುನಾವಣಾ ಆಯೋಗ ಈ ನಿರ್ಧಾರ ಕೈಗೊಂಡಿದೆ.

ಇದನ್ನೂ ಓದಿ: ‘ಎರಡೇಟು ತಿನ್ನುತ್ತಿ’; ಆಕ್ಸಿಜನ್ ಸಿಲಿಂಡರ್‌ ಕೇಳಿದ ವ್ಯಕ್ತಿಗೆ ಬೆದರಿಸಿದ ಕೇಂದ್ರ ಸಚಿವ!

ಚುನಾವಣಾ ರ್‍ಯಾಲಿ, ರೋಶೋಗಳಲ್ಲಿ 500 ಜನರಿಗೆ ಮಾತ್ರ ಅನುಮತಿ ನೀಡಲಾಗುವುದು. ರಾಜ್ಯದ ಜನರು ಇಂದಿಗೂ ಮುಕ್ತವಾಗಿ ಓಡಾಡುತ್ತಿರುವುದರಿಂದ ನಾವು ಪ್ರಚಾರವನ್ನು ನಿಷೇಧಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ತಿಳಿಸಿದೆ.

ಚುನಾವಣಾ ಅಭ್ಯರ್ಥಿಗಳು ಮತ್ತು ಪಕ್ಷಗಳು ಕೊರೊನಾ ನಿಯಮಾವಳಿಗಳನ್ನು ಅನುಸರಿಸಲು ನಿರಾಕರಿಸುತ್ತಿರುವುದರಿಂದ ಆಯೋಗವು ದುಃಖಿತವಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಭಿರ್‌ಬೂಮ್ ಜಿಲ್ಲೆಯಲ್ಲಿ ಕೊರೊನಾ ನಿಯಮ ಉಲ್ಲಂಘನೆಗಾಗಿ ಎನ್‌ಡಿಎಂಎ ಕಾಯ್ದೆಯ ಸೆಕ್ಷನ್ 51 (ಬಿ) ಅಡಿಯಲ್ಲಿ 13 ಪ್ರಕರಣಗಳನ್ನು ದಾಖಲಿಸಲಾಗಿದೆ. ಈ ಪೈಕಿ ಬಿಜೆಪಿ ಮತ್ತು ಟಿಎಂಸಿ ವಿರುದ್ಧ ತಲಾ ಎರಡು ಪ್ರಕರಣ ಮತ್ತು ಕಾಂಗ್ರೆಸ್ ಮತ್ತು ಸಿಪಿಎಂ ವಿರುದ್ಧ ತಲಾ ಒಂದು ಪ್ರಕರಣ ದಾಖಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚುನಾವಣಾ ಆಯೋಗದ ಆದೇಶದ ನಂತರ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಎಲ್ಲಾ ಚುನಾವಣಾ ಸಭೆಗಳನ್ನು ರದ್ದುಗೊಳಿಸಿದ್ದಾರೆ.

ಪಶ್ಚಿಮ ಬಂಗಾಳವು 24 ಗಂಟೆಗಳಲ್ಲಿ 11,948 ಹೊಸ ಪ್ರಕರಣಗಳನ್ನು ದಾಖಲಿಸಿದೆ. ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 68,798ಕ್ಕೆ ಏರಿಕೆಯಾಗಿದೆ.ಕಳೆದ 24 ಗಂಟೆಗಳಲ್ಲಿ 56 ಸಾವುಗಳೂ ಸಂಭವಿಸಿವೆ ಎಂದು ರಾಜ್ಯ ಸರ್ಕಾರ ತನ್ನ ದೈನಂದಿನ ಕೊರೊನಾ ಬುಲೆಟಿನ್‌ನಲ್ಲಿ ತಿಳಿಸಿದೆ.


ಇದನ್ನೂ ಓದಿ: ’ಇದು ನನ್ನ ಕೊನೆಯ ಸಂದೇಶ’ ಎಂದಿದ್ದ ವೈದ್ಯೆ ಕೊರೊನಾಗೆ ಬಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...