Homeಮುಖಪುಟಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ

ಬಂಗಾಳದಲ್ಲಿ ಎಸ್‌ಐಆರ್ ಭಯದಿಂದ 110 ಮಂದಿ ಆತ್ಮಹತ್ಯೆ : ಸಿಎಂ ಮಮತಾ ಬ್ಯಾನರ್ಜಿ

- Advertisement -
- Advertisement -

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಭಯದಿಂದ ಪ್ರತಿದಿನ ಪಶ್ಚಿಮ ಬಂಗಾಳದಲ್ಲಿ ಮೂರ್ನಾಲ್ಕು ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ (ಜ.23) ಹೇಳಿದ್ದಾರೆ. ಚುನಾವಣಾ ಆಯೋಗ ಮತ್ತು ಕೇಂದ್ರ ಸರ್ಕಾರ ಈ ಸಾವುಗಳ ಹೊಣೆ ಹೊತ್ತುಕೊಳ್ಳಬೇಕು ಎಂದಿದ್ದಾರೆ.

ಎಸ್‌ಐಆರ್ ಸಂಬಂಧಿತ ಸಾವುಗಳಿಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದ ವಿರುದ್ದ ಏಕೆ ಎಫ್‌ಐಆರ್ ದಾಖಲಿಸಿಲ್ಲ ಎಂದು ಮಮತಾ ಬ್ಯಾನರ್ಜಿ ಪ್ರಶ್ನಿಸಿದ್ದಾರೆ. “110ಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ. ಚುನಾವಣಾ ಆಯೋಗದ ವಿರುದ್ದ ಏಕೆ ಪ್ರಕರಣ ದಾಖಲಿಸಿಲ್ಲ. ಭಾರತೀಯ ಚುನಾವಣಾ ಆಯೋಗ ಈ ಸಾವುಗಳ ಹೊಣೆ ಹೊರಬೇಕು, ಕೇಂದ್ರ ಸರ್ಕಾರ ಕೂಡ ಹೊಣೆ ಹೊರಬೇಕು. ರಾಜ್ಯದಲ್ಲಿ ಚುನಾವಣಾ ಆಯೋಗದ ವಿರುದ್ಧ ಜನರು ಪೊಲೀಸ್ ದೂರುಗಳನ್ನು ದಾಖಲಿಸಿರುವ ನಿದರ್ಶನಗಳಿವೆ” ಎಂದು ಕೋಲ್ಕತ್ತಾದ ರೆಡ್‌ರೋಡ್‌ನಲ್ಲಿ ನೇತಾಜಿ ಸುಭಾಶ್‌ ಚಂದ್ರ ಬೋಸ್‌ ಅವರ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಸೇರಿದಂತೆ ದೇಶದಲ್ಲಿ ಚುನಾವಣಾ ಆಯೋಗ ಎಸ್‌ಐಆರ್‌ ಕೈಗೊಂಡಿರುವುದನ್ನು ಮಮತಾ ಬ್ಯಾನರ್ಜಿ ಆರಂಭದಿಂದಲೇ ವಿರೋಧಿಸುತ್ತಾ ಬಂದಿದ್ದಾರೆ. ಪಶ್ಚಿಮ ಬಂಗಾಳದಲ್ಲಿ 2025ರ ನವೆಂಬರ್ ತಿಂಗಳಲ್ಲಿ ಎಸ್‌ಐಆರ್ ಪ್ರಾರಂಭಗೊಂಡ ಬಳಿಕ, ಇದುವರೆಗೆ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ ಮಮತಾ ಬ್ಯಾನರ್ಜಿ ಐದು ಪತ್ರಗಳನ್ನು ಬರೆದಿದ್ದಾರೆ.

ನೇತಾಜಿ ಸುಭಾಶ್ ಚಂದ್ರ ಬೋಸ್‌ ಏನಾದರು ಬದುಕಿದ್ದರೆ ಅವರನ್ನೂ ಎಸ್‌ಐಆರ್ ವಿಚಾರಣೆಗೆ ಕರೆಸಲಾಗುತ್ತಿತ್ತು. ರವೀಂದ್ರನಾಥ ಟ್ಯಾಗೋರ್‌ನಿಂದ ಬೋಸ್‌ವರೆಗಿನ ರಾಷ್ಟ್ರೀಯ ಐಕಾನ್‌ಗಳನ್ನು ಅಗೌರವಿಸುವ ಮತ್ತು ದೇಶದ ಇತಿಹಾಸವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ನಮ್ಮ ಭಾಷೆ ಮತ್ತು ಸಂಸ್ಕೃತಿಗೆ ಅಗೌರವ ತೋರಲಾಗುತ್ತಿದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

“ಕಾಂಗ್ರೆಸ್ ಪರಂಪರೆಯನ್ನು ನಂಬಿಕೊಂಡು ರಾಜಕೀಯದಲ್ಲಿರುವವರು ರಾಷ್ಟ್ರೀಯ ಐಕಾನ್‌ಗಳನ್ನು ನಡೆಸಿಕೊಳ್ಳುವ ಬಗ್ಗೆ ಯಾವುದೇ ಹೇಳಿಕೆ ನೀಡಬಾರದು” ಎಂದು ಪಶ್ಚಿಮ ಬಂಗಾಳದ ಬಿಜೆಪಿ ಅಧ್ಯಕ್ಷ ಸಮಿಕ್ ಭಟ್ಟಾಚಾರ್ಯ ಅವರಿಗೆ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ.

“ವಸಾಹತುಶಾಹಿ ಹ್ಯಾಂಗೊವರ್” ಅನ್ನು ತೊಡೆದುಹಾಕುವ ಮೂಲಕ ಬಿಜೆಪಿ ನಿಜಕ್ಕೂ ದೇಶದ “ಇತಿಹಾಸವನ್ನು ಬದಲಾಯಿಸುತ್ತಿದೆ” ಎಂದು ಭಟ್ಟಾಚಾರ್ಯ ಈ ಹಿಂದೆ ಹೇಳಿದ್ದರು.

ಚುನಾವಣೆ ಸಮೀಪಿಸುತ್ತಿರುವ ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ರಾಜಕೀಯ ಗರಿಗೆದರಿದೆ. ಮೊದಲ ಹಂತದ ಎಸ್‌ಐಆರ್ ಪ್ರಕ್ರಿಯೆ ಬಳಿಕ, ಸುಮಾರು 58 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ, ಇದರಿಂದಾಗಿ ರಾಜ್ಯದಲ್ಲಿ ಮತದಾರರ ಸಂಖ್ಯೆ 7.66 ಕೋಟಿಯಿಂದ 7.08 ಕೋಟಿಗೆ ಕಡಿಮೆಯಾಗಿದೆ.

ಎಸ್‌ಐಆರ್ ಸಂಬಂಧ “ತಾರ್ಕಿಕ ವ್ಯತ್ಯಾಸಗಳ” ಹಿನ್ನೆಲೆ ಮತದಾರರಿಗೆ ನೋಟಿಸ್‌ಗಳನ್ನು ನೀಡಿರುವುದನ್ನು ವಿರೋಧಿಸಿ ಹಿಂಸಾತ್ಮಕ ಪ್ರತಿಭಟನೆಗಳು ನಡೆದಿವೆ. ಸುಮಾರು 1.36 ಕೋಟಿ ಅಂತಹ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ವರದಿಯಾಗಿದೆ.

ಈ ತಿಂಗಳ ಆರಂಭದಲ್ಲಿ ಫರಕ್ಕಾದಲ್ಲಿರುವ ಬ್ಲಾಕ್ ಅಭಿವೃದ್ಧಿ ಕಚೇರಿಯನ್ನು ಧ್ವಂಸ ಮಾಡಿದ ಆರೋಪದ ಮೇಲೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಮುನೀರುಲ್ ಇಸ್ಲಾಂ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಚುನಾವಣಾ ಆಯೋಗ ಗುರುವಾರ (ಜ.22) ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.

ನೆನಪಿಡಿ : ಯಾವುದೇ ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ. ದುಡುಕಿನ ನಿರ್ಧಾರ ತೆಗೆದುಕೊಳ್ಳಬೇಡಿ. ತುರ್ತು ಪರಿಸ್ಥಿತಿಯಿದ್ದರೆ ಕರೆ ಮಾಡಿ ವೈದ್ಯರೊಂದಿಗೆ ಮಾತನಾಡಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...