Homeಮುಖಪುಟಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ :...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

- Advertisement -
- Advertisement -

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ (ಏ.5) ಮರುಸೇರ್ಪಡೆಗೊಳಿಸಿದೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ನ್ಯಾಯಮಂಡಳಿಯು ನಿರ್ಧರಿಸಿದ ಮೊದಲ ಪ್ರಕರಣ ಶೇಖ್ ಅವರದ್ದಾಗಿದೆ. ಕಲ್ಕತ್ತಾ ಹೈಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಟಿ.ಎಸ್. ಶಿವಜ್ಞಾನಂ ಅವರು ತಮ್ಮ ಆದೇಶದಲ್ಲಿ, ಶೇಖ್ ಅವರ ಹೆಸರು ಕೈಬಿಟ್ಟ ಕಾರಣಗಳನ್ನು ಚುನಾವಣಾ ಆಯೋಗ ಒದಗಿಸಿಲ್ಲ. ಇದಕ್ಕೆ ಅವರು ‘ತಾಂತ್ರಿಕ ಕಾರಣಗಳನ್ನು’ ಉಲ್ಲೇಖಿಸಿದ್ದಾರೆ ಎಂದು ಹೇಳಿರುವುದಾಗಿ ವರದಿ ತಿಳಿಸಿದೆ.

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಈ ಬೆಳವಣಿಗೆ ನಡೆದಿದೆ. ಏಪ್ರಿಲ್ 23 ಮತ್ತು ಏಪ್ರಿಲ್ 29 ರಂದು ಎರಡು ಹಂತಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಮತದಾನ ನಡೆಯಲಿದ್ದು, ಫಲಿತಾಂಶವು ಮೇ 4ರಂದು ಪ್ರಕಟವಾಗಲಿದೆ.

ಚುನಾವಣೆ ಮುಂಚಿತವಾಗಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆದ ಮೂರು ಕೇಂದ್ರಾಡಳಿತ ಪ್ರದೇಶಗಳು ಮತ್ತು 9 ರಾಜ್ಯಗಳಲ್ಲಿ ಪಶ್ಚಿಮ ಬಂಗಾಳವೂ ಸೇರಿದೆ.

ಎಸ್‌ಐಆರ್‌ ಬಳಿಕ 2026ರ ಫೆಬ್ರವರಿ 28ರಂದು ಚುನಾವಣಾ ಆಯೋಗ ಮೊದಲ ಮತದಾರರ ಪಟ್ಟಿ ಪ್ರಕಟಿಸಿತ್ತು. ಇದರಲ್ಲಿ ಬರೋಬ್ಬರಿ 61 ಲಕ್ಷ ಹೆಸರುಗಳನ್ನು ಕೈಬಿಡಲಾಗಿತ್ತು. ಇದಕ್ಕೂ ಮೊದಲು 2025ರ ಡಿಸೆಂಬರ್‌ನಲ್ಲಿ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

ಕರಡು ಪಟ್ಟಿಯಲ್ಲಿ ಹೆಸರು ಕೈಬಿಟ್ಟಿರುವುದರ ವಿರುದ್ಧ ಸಲ್ಲಿಸಲಾದ ಆಕ್ಷೇಪಣೆಗಳ ಆಧಾರದ ಮೇಲೆ, ಸುಮಾರು 60 ಲಕ್ಷ “ಸಂದೇಹಾಸ್ಪದ ಮತ್ತು ಬಾಕಿ ಉಳಿದಿರುವ” ಪ್ರಕರಣಗಳ ನ್ಯಾಯ ನಿರ್ಣಯ ಪ್ರಕ್ರಿಯೆಯು ಮುಂದುವರಿದಿದೆ.

ಎಸ್‌ಐಆರ್‌ ಕಾರ್ಯ ಪೂರ್ಣಗೊಳಿಸಲು ಸಹಾಯ ಮಾಡುವ ಸಲುವಾಗಿ ಜಿಲ್ಲಾ ನ್ಯಾಯಾಧೀಶರು ಅಥವಾ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸುವಂತೆ ಸುಪ್ರೀಂ ಕೋರ್ಟ್ 2026ರ ಫೆಬ್ರವರಿ 20ರಂದು ಚುನಾವಣಾ ಆಯೋಗಕ್ಕೆ ಆದೇಶಿಸಿದೆ.

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ವಿರುದ್ಧದ ಮೇಲ್ಮನವಿಗಳ ವಿಚಾರಣೆಗಾಗಿ, ಹೈಕೋರ್ಟ್‌ನ ಮಾಜಿ ಮುಖ್ಯ ನ್ಯಾಯಮೂರ್ತಿಗಳು ಮತ್ತು ನ್ಯಾಯಾಧೀಶರನ್ನು ಒಳಗೊಂಡ ಮೇಲ್ಮನವಿ ನ್ಯಾಯಮಂಡಳಿಯನ್ನು (Appellate Tribunal) ರಚಿಸುವಂತೆ ಸುಪ್ರೀಂ ಕೋರ್ಟ್ ಮಾರ್ಚ್ 10ರಂದು ಆದೇಶಿಸಿದೆ.

ಮತದಾರರ ಪಟ್ಟಿಗೆ ಹೆಸರು ಸೇರಿಸುವ ಅರ್ಜಿಯನ್ನು ನ್ಯಾಯಾಂಗ ಅಧಿಕಾರಿಯು ತಿರಸ್ಕರಿಸಿದಲ್ಲಿ, ಅಂತಹ ವ್ಯಕ್ತಿಯು ಈ ಮೇಲ್ಮನವಿ ನ್ಯಾಯಮಂಡಳಿಯ ಮೊರೆ ಹೋಗಬಹುದು.

ಮತದಾನ ದಿನಾಂಕ ಹತ್ತಿರ ಬರುತ್ತಿದ್ದರೂ, ತಾನು ರಚಿಸಿದ 19 ನ್ಯಾಯಮಂಡಳಿಗಳನ್ನು ಚುನಾವಣಾ ಆಯೋಗವು ಇನ್ನೂ ಭೌತಿಕವಾಗಿ ಸ್ಥಾಪಿಸಿಲ್ಲ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಶೇಖ್ ಅವರ ಪ್ರಕರಣದ ಆದೇಶವು “ನೈಜ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಹೇಗೆ ಅಳಿಸಲಾಗಿದೆ ಎಂಬುದನ್ನು ಸಾಬೀತುಪಡಿಸುತ್ತದೆ” ಎಂದು ಅವರ ವಕೀಲರಾದ ಫಿರ್ದೌಸ್ ಶಮೀಮ್ ಹೇಳಿದ್ದಾರೆ.

ನ್ಯಾಯಮಂಡಳಿ ಹೇಳಿದ್ದೇನು?

ಭಾನುವಾರ (ಏ.5) ರಾತ್ರಿ 8 ಗಂಟೆಯೊಳಗೆ ಹೆಚ್ಚುವರಿ ಪಟ್ಟಿಯ ಮೂಲಕ ಶೇಖ್ ಅವರನ್ನು ಮುರ್ಷಿದಾಬಾದ್‌ನ ಮಾನ್ಯ ಮತದಾರರೆಂದು ಘೋಷಿಸುವಂತೆ ಚುನಾವಣಾ ಆಯೋಗಕ್ಕೆ ನ್ಯಾಯಮೂರ್ತಿ ಶಿವಜ್ಞಾನಂ ಅವರ ನಿರ್ದೇಶನ ನೀಡಿದ್ದಾರೆ.

ಶೇಖ್ ಸಲ್ಲಿಸಿದ ಪಾಸ್‌ಪೋರ್ಟ್ ಸರಿಯಾದ ಪುರಾವೆಯಾಗಿದೆ ಎಂದು ನ್ಯಾಯಮೂರ್ತಿ ಹೇಳಿದ್ದಾರೆ. ಅಲ್ಲದೆ, ಶೇಖ್ ತಂದೆಯ ಹೆಸರಿನಲ್ಲಿ ಯಾವುದೇ ವ್ಯತ್ಯಾಸವಿಲ್ಲದಿರುವುದನ್ನು ಎಲ್ಲಾ ದಾಖಲೆಗಳಲ್ಲಿಯೂ ಅವರು ಬೆಟ್ಟು ಮಾಡಿದ್ದಾರೆ.

“ಮೇಲ್ಮನವಿದಾರರು (ಮೊತಾಬ್ ಶೇಖ್) ತಮ್ಮ ವಂಶವೃಕ್ಷವನ್ನೂ (family tree) ನ್ಯಾಯಮಂಡಳಿಯ ಮುಂದೆ ಮಂಡಿಸಿದ್ದಾರೆ. ತಮ್ಮ ಆರು ಮಂದಿ ಒಡಹುಟ್ಟಿದವರು, ಅವರ ಸಂಗಾತಿಗಳು ಮತ್ತು ಮಕ್ಕಳು ಸೇರಿದಂತೆ ಕುಟುಂಬದ ಉಳಿದೆಲ್ಲಾ ಸದಸ್ಯರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗಿವೆ ಮತ್ತು ಅಲ್ಲಿ ಯಾವುದೇ ವ್ಯತ್ಯಾಸಗಳು ಕಂಡುಬಂದಿಲ್ಲ ಎಂದು ಅವರು ತಿಳಿಸಿದ್ದಾರೆ” ಎಂದು ನ್ಯಾಯಮೂರ್ತಿ ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ಉಲ್ಲೇಖಿಸಿದೆ.

ಶೇಖ್ ಅವರ ಹೆಸರನ್ನು ಕೈಬಿಡಲು ನ್ಯಾಯಾಂಗ ಅಧಿಕಾರಿಯು ನೀಡಿದ ಕಾರಣಗಳನ್ನು ಪರಿಶೀಲಿಸಲು ತನಗೆ ಸಾಧ್ಯವಾಗಿಲ್ಲ ಎಂದೂ ನ್ಯಾಯಮೂರ್ತಿ ತಿಳಿಸಿದ್ದಾರೆ.

ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ಕೈಬಿಟ್ಟಿರುವುದರ ವಿರುದ್ಧ ನ್ಯಾಯಮಂಡಳಿಯನ್ನು ಸಂಪರ್ಕಿಸುವಂತೆ ಏಪ್ರಿಲ್ 2ರಂದು ಸುಪ್ರೀಂ ಕೋರ್ಟ್ ಶೇಖ್ ಅವರಿಗೆ ಸೂಚಿಸಿತ್ತು. ಇದಾಗಿ ಕೆಲ ದಿನಗಳಲ್ಲಿ ಈ ಬೆಳವಣಿಗೆ ನಡೆಸಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಶೇಖ್ ಅವರು ಮತದಾರರ ಪಟ್ಟಿಯಲ್ಲಿ ತನ್ನ ಹೆಸರನ್ನು ಮರುಸ್ಥಾಪಿಸಲು ಮತ್ತು ನಾಮಪತ್ರ ಸಲ್ಲಿಸಲು ಅನುಮತಿ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಮೇಲ್ಮನವಿ ನ್ಯಾಯಮಂಡಳಿಗಳನ್ನು ತಕ್ಷಣವೇ ಕಾರ್ಯರೂಪಕ್ಕೆ ತರಲು ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡುವಂತೆಯೂ ಅವರು ಕೋರಿದ್ದರು.

ತೀರ್ಪು ನೀಡಿದ ನಂತರ ಚುನಾವಣಾ ಆಯೋಗವು ಹಲವಾರು ಪೂರಕ ಮತದಾರರ ಪಟ್ಟಿಯನ್ನು ಪ್ರಕಟಿಸಿದೆ.ಶನಿವಾರದವರೆಗೆ 60 ಲಕ್ಷ ಪ್ರಕರಣಗಳ ಪೈಕಿ 57 ಲಕ್ಷ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿಯ ಕಚೇರಿಯನ್ನು ಉಲ್ಲೇಖಿಸಿ ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಆದಾಗ್ಯೂ, ಈ ಪ್ರಕರಣಗಳ ಪೈಕಿ ಎಷ್ಟು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗವು ಸ್ಪಷ್ಟಪಡಿಸಿಲ್ಲ.

ನ್ಯಾಯಾಂಗ ಅಧಿಕಾರಿಗಳು ಸುಮಾರು 49 ಲಕ್ಷ ಪ್ರಕರಣಗಳ ಕುರಿತು ನಿರ್ಧಾರ ಕೈಗೊಂಡಾಗ, ಅದರಲ್ಲಿ ಸುಮಾರು 22 ಲಕ್ಷ ಅಂದರೆ ಶೇಕಡ 45 ರಷ್ಟು ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸಿಹಾಕಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿತ್ತು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...