Homeಮುಖಪುಟಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

ಪ. ಬಂಗಾಳ ಎಸ್‌ಐಆರ್ : ಏಳು ಅಧಿಕಾರಿಗಳನ್ನು ಅಮಾನತುಗೊಳಿಸಿದ ಚುನಾವಣಾ ಆಯೋಗ

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಸಹಾಯಕ ಚುನಾವಣಾ ನೋಂದಣಿ ಅಧಿಕಾರಿಗಳಾಗಿ (ಎಇಆರ್‌ಒ) ಕಾರ್ಯ ನಿರ್ವಹಿಸುತ್ತಿರುವ ಏಳು ರಾಜ್ಯ ಸರ್ಕಾರಿ ಅಧಿಕಾರಿಗಳನ್ನು ತಕ್ಷಣ ಅಮಾನತುಗೊಳಿಸುವಂತೆ ಚುನಾವಣಾ ಆಯೋಗ ಆದೇಶಿಸಿದೆ. ಇವರ ವಿರುದ್ಧ ‘ಗಂಭೀರ ದುರ್ನಡತೆ’ ಆರೋಪ ಮಾಡಿದೆ ಎಂದು ವರದಿಯಾಗಿದೆ.

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ‘ಕರ್ತವ್ಯ ಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗ’ದ ಆರೋಪಗಳನ್ನು ಈ ಅಧಿಕಾರಿಗಳ ವಿರುದ್ಧ ಮಾಡಲಾಗಿದೆ.

ಎಲ್ಲಾ ಏಳು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಪಶ್ಚಿಮ ಬಂಗಾಳ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

ಮುರ್ಷಿದಾಬಾದ್ ಜಿಲ್ಲೆಯ ಸಂಶೀರ್‌ಗಂಜ್‌ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶಿಫಾವುರ್ರಹ್ಮಾನ್, ಫರಕ್ಕಾ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಫರಕ್ಕಾದ ಕಂದಾಯ ಅಧಿಕಾರಿ ನಿತೀಶ್ ದಾಸ್, ಮಾಯನಗುರಿ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಮಹಿಳಾ ಅಭಿವೃದ್ಧಿ ಅಧಿಕಾರಿ ಡಾಲಿಯಾ ರೇ ಚೌಧರಿ, ಸೂಟಿ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಸೂಟಿಯ ಸಹಾಯಕ ಕೃಷಿ ನಿರ್ದೇಶಕ ಶೇಕ್ ಮುರ್ಷಿದ್ ಆಲಂ, ಕ್ಯಾನಿಂಗ್ ಪರ್ಬೋ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಇಬ್ಬರು ಅಧಿಕಾರಿಗಳಾದ ಜಂಟಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ ಸತ್ಯಜಿತ್ ದಾಸ್ ಮತ್ತು ಫೀಲ್ಡ್ ಎಲೆಕ್ಷನ್ ಆಫೀಸರ್ ಜಯದೀಪ್ ಕುಂಡು, ದೆಬ್ರಾ ವಿಧಾನಸಭಾ ಕ್ಷೇತ್ರದ ಎಇಆರ್‌ಒ ಆಗಿರುವ ಜಂಟಿ ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೆಬಾಶಿಸ್ ಬಿಸ್ವಾಸ್ ಅಮಾನತುಗೊಂಡವರು.

ಈ ಎಲ್ಲಾ ಅಧಿಕಾರಿಗಳು ತಮ್ಮ ವಿಧಾನಸಭಾ ಕ್ಷೇತ್ರಗಳಲ್ಲಿ ಅಂತಿಮ ಪ್ರಕಟಣೆಗಾಗಿ ಬಾಕಿ ಉಳಿದಿದ್ದ ಪ್ರಕರಣಗಳ ಪರಿಶೀಲನೆಯ ಸಂದರ್ಭದಲ್ಲಿ, ಅಗತ್ಯ ದಾಖಲೆಗಳನ್ನು ಸಲ್ಲಿಸದಿದ್ದರೂ ಅನೇಕ ಪ್ರಕರಣಗಳನ್ನು ವಿಲೇವಾರಿ ಮಾಡಿರುವುದು ಕಂಡುಬಂದಿದೆ. ಮತದಾರರ ಅರ್ಹತೆ ಮತ್ತು ಮ್ಯಾಪಿಂಗ್‌ನಲ್ಲಿ ಅಸಮಂಜಸತೆಗಳಿದ್ದರೂ ಸಹ ಅವರು ಯಾವುದೇ ತಿದ್ದುಪಡಿ ಕ್ರಮಗಳನ್ನು ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಆ ಮೂಲಕ, ಅನರ್ಹ ಪ್ರಕರಣಗಳನ್ನು ಅನುಮೋದಿಸಿ ತಮ್ಮ ಶಾಸನಬದ್ಧ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

1950ರ ಜನಪ್ರತಿನಿಧಿ ಕಾಯ್ದೆಯ ಸೆಕ್ಷನ್ 13ಸಿಸಿ ಅಡಿಯಲ್ಲಿ ತನಗೆ ನೀಡಲಾದ ಅಧಿಕಾರವನ್ನು ಬಳಸಿಕೊಂಡು, ಪಶ್ಚಿಮ ಬಂಗಾಳದ 7 ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಭಾರತೀಯ ಚುನಾವಣಾ ಆಯೋಗವು ಅಮಾನತುಗೊಳಿಸಿದೆ. ಎಸ್‌ಐಆರ್ ಪ್ರಕ್ರಿಯೆಯಲ್ಲಿನ ಗಂಭೀರ ದುರ್ನಡತೆ, ಕರ್ತವ್ಯ ಲೋಪ ಮತ್ತು ಶಾಸನಬದ್ಧ ಅಧಿಕಾರಗಳ ದುರುಪಯೋಗಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಸೋಮವಾರ (ಫೆ.16) ತನ್ನ ಆದೇಶದಲ್ಲಿ ತಿಳಿಸಿದೆ.

ಸಂಬಂಧಪಟ್ಟ ಕೇಡರ್ ನಿಯಂತ್ರಣ ಪ್ರಾಧಿಕಾರಗಳು ಈ ಅಧಿಕಾರಿಗಳ ವಿರುದ್ಧ ಯಾವುದೇ ವಿಳಂಬವಿಲ್ಲದೆ ಶಿಸ್ತು ಕ್ರಮಗಳನ್ನು ಪ್ರಾರಂಭಿಸಬೇಕು ಎಂದು ಆದೇಶಿಸಿದ ಆಯೋಗವು, ಈ ಕುರಿತಾದ ಪ್ರಗತಿಯನ್ನು ತನಗೆ ತಿಳಿಸಬೇಕು ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...