Homeಮುಖಪುಟಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಬಿಜೆಪಿ ತನ್ನ ಯಾತ್ರೆಗೆ ಪರಿವರ್ತನ್ ಯಾತ್ರೆ ಎಂದು ಹೆಸರಿಟ್ಟರೆ, ಟಿಎಂಸಿ ತನ್ನ ರ್‍ಯಾಲಿಗೆ ಜನಸಮರ್ಥನ್ ಯಾತ್ರೆ ಎಂದು ಹೆಸರಿಟ್ಟಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ’ಪರಿವರ್ತನಾ’ ರಥಯಾತ್ರೆಯನ್ನು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಶನಿವಾರ(ನಾಳೆ) ಉದ್ಘಾಟನೆ ಮಾಡಲಿದ್ದಾರೆ. ಆದರೆ ಬಿಜೆಪಿ ರಥಯಾತ್ರೆ ಪ್ರಾರಂಭಿಸುವ ನಾಡಿಯಾ ಜಿಲ್ಲೆಯಲ್ಲೇ ತೃಣಮೂಲ ಯುವ ಕಾಂಗ್ರೆಸ್ ಎರಡು ದಿನಗಳ ’ಜನಸಮಾರ್ಥನ್ ಯಾತ್ರೆ’ಯನ್ನು ಅಂದೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಯಾತ್ರೆಯಲ್ಲಿ ಸಾವಿರಾರು ಬೈಕುಗಳ ಮೂಲಕ ರ್‍ಯಾಲಿ ನಡೆಸಲಾಗುತ್ತದೆ.

“ನಮ್ಮ ಪರಿವರ್ತನ ಯಾತ್ರೆಯು ಟಿಎಂಸಿಯ ’ಅಂತಿಮ ಯಾತ್ರೆ’ ಆಗಿದೆ. ಕಳೆದ ಬಾರಿ ನಾವು ಅನುಮತಿಗಾಗಿ ನ್ಯಾಯಾಲಯಕ್ಕೆ ಹೋಗಿದ್ದೆವು. ಈ ಬಾರಿ ಟಿಎಂಸಿಯೆ ಮೊದಲು ನ್ಯಾಯಾಲಯಕ್ಕೆ ಹೋಗಿದೆ. ನಾವು ಹಿಂದೆ ‘ಪ್ರಜಾಪ್ರಭುತ್ವವನ್ನು ಉಳಿಸಲು’ ಪ್ರಯತ್ನಿಸಿದ್ದೆವು ಆದರೆ ಅವರು ನಮ್ಮನ್ನು ತಡೆದರು. ಈ ಬಾರಿ ಏನಾಗುತ್ತದೆ ಎಂದು ನೋಡೋಣ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ಆದರೆ ಬಿಜೆಪಿಯ ಆರೋಪವನ್ನು ಆಡಳಿತರೂಢ ಟಿಎಂಸಿ ನಿರಾಕರಿಸಿದೆ. “ಬಿಜೆಪಿಯ ಬಂಗಾಳ ಘಟಕ ಪ್ರತಿಪಾದಿಸಿದಂತೆ ರಾಜ್ಯ ಸರ್ಕಾರವು ಯಾವುದೇ ಯಾತ್ರೆಗೆ ಅನುಮತಿಯನ್ನು ನಿರಾಕರಿಸಿಲ್ಲ. ಬಿಜೆಪಿಯು ದುರುದ್ದೇಶಪೂರಿತ ಅಪಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಯಾತ್ರೆಗೆ ಅನುಮತಿಯನ್ನು ರಾಜ್ಯ ಸರ್ಕಾರ ನಿರಾಕರಿಸಿದೆ ಎಂಬ ಯಾವುದಾದರೂ ಪುರಾವೆಯನ್ನು ತೋರಿಸಬೇಕು. ಇದು ತಾನು ಬಲಿಪಶು ಎಂದು ಹೇಳಿಕೊಳ್ಳುವ ಬಿಜೆಪಿಯ ಪ್ರಯತ್ನ” ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ಕಾರ್ಯಕರ್ತರೊಬ್ಬರು ಮುಖ್ಯ ಕಾರ್ಯದರ್ಶಿಯಿಂದ ಅನುಮತಿ ಕೋರಿದ್ದರು, ಅವರ ಕಚೇರಿ ಅವರನ್ನು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಿತು. ಈ ಮಧ್ಯೆ ಯಾತ್ರೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಅರ್ಜಿ ಸಲ್ಲಿಸಲಾಗಿತ್ತು. ಪ್ರಸ್ತುತ ವಿಷಯವು ಈಗ ನ್ಯಾಯಾಲಯದಲ್ಲಿದೆ. ಈ ಮೂಲಕ ತೃಣಮೂಲ ಕಾಂಗ್ರೆಸ್‌‌ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ” ಎಂದು ಪಕ್ಷ ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ನಾಡಿಯಾ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಕೂಡಾ ಬಿಜೆಪಿಯ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿಲ್ಲ, ಆದರೆ “ಝೆಡ್‌” ವರ್ಗದ ರಕ್ಷಣೆ ಹೊಂದಿರುವ ಜೆ.ಪಿ ನಡ್ಡಾ ಅವರು ಈ ಕಾರ್ಯಕ್ರಮಕ್ಕೆ ಬರುವುದರಿಂದ ಅದರ ವ್ಯವಸ್ಥೆಗಳ ಬಗ್ಗೆ ವಿವರಗಳನ್ನು ಕೋರಿ ಪಕ್ಷಕ್ಕೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.

ರಥಯಾತ್ರೆಯ ಸಮಾರೋಪ, ಮಾರ್ಗ, ರಾತ್ರಿಯ ನಿಲುಗಡೆ, ವಸತಿ ವ್ಯವಸ್ಥೆಗಳ ವಿವರಗಳನ್ನೂ ಪೊಲೀಸರು ಬಯಸಿದ್ದು, ಕಾರ್ಯಕ್ರಮದಲ್ಲಿ ಕೊರೊನಾ ಸುರಕ್ಷತಾ ನಿಯಮಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಬಿಜೆಪಿಯನ್ನು ಕೇಳಿದ್ದಾರೆ.

ಈ ನಡುವೆ ತೃಣಮೂಲ ಕಾಂಗ್ರೆಸ್ ಶನಿವಾರ ನಾಡಿಯಾ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿದ್ದು, ಬಿಜೆಪಿಯ ರಥಯಾತ್ರೆಯ ಸಮಯದಲ್ಲೇ ಜಿಲ್ಲೆಯಾದ್ಯಂತ ಸಾವಿರಾರು ಬೈಕ್‌ಗಳಲ್ಲಿ ರ್‍ಯಾಲಿ ನಡೆಯಲಿದೆ. ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಡುವೆ ಭಾರಿ ಜಿದ್ದಾ ಜಿದ್ದಿನ ಹೋರಾಟ ಪ್ರಾರಂಭವಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...