Homeಮುಖಪುಟಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಬಿಜೆಪಿ ತನ್ನ ಯಾತ್ರೆಗೆ ಪರಿವರ್ತನ್ ಯಾತ್ರೆ ಎಂದು ಹೆಸರಿಟ್ಟರೆ, ಟಿಎಂಸಿ ತನ್ನ ರ್‍ಯಾಲಿಗೆ ಜನಸಮರ್ಥನ್ ಯಾತ್ರೆ ಎಂದು ಹೆಸರಿಟ್ಟಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ’ಪರಿವರ್ತನಾ’ ರಥಯಾತ್ರೆಯನ್ನು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಶನಿವಾರ(ನಾಳೆ) ಉದ್ಘಾಟನೆ ಮಾಡಲಿದ್ದಾರೆ. ಆದರೆ ಬಿಜೆಪಿ ರಥಯಾತ್ರೆ ಪ್ರಾರಂಭಿಸುವ ನಾಡಿಯಾ ಜಿಲ್ಲೆಯಲ್ಲೇ ತೃಣಮೂಲ ಯುವ ಕಾಂಗ್ರೆಸ್ ಎರಡು ದಿನಗಳ ’ಜನಸಮಾರ್ಥನ್ ಯಾತ್ರೆ’ಯನ್ನು ಅಂದೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಯಾತ್ರೆಯಲ್ಲಿ ಸಾವಿರಾರು ಬೈಕುಗಳ ಮೂಲಕ ರ್‍ಯಾಲಿ ನಡೆಸಲಾಗುತ್ತದೆ.

“ನಮ್ಮ ಪರಿವರ್ತನ ಯಾತ್ರೆಯು ಟಿಎಂಸಿಯ ’ಅಂತಿಮ ಯಾತ್ರೆ’ ಆಗಿದೆ. ಕಳೆದ ಬಾರಿ ನಾವು ಅನುಮತಿಗಾಗಿ ನ್ಯಾಯಾಲಯಕ್ಕೆ ಹೋಗಿದ್ದೆವು. ಈ ಬಾರಿ ಟಿಎಂಸಿಯೆ ಮೊದಲು ನ್ಯಾಯಾಲಯಕ್ಕೆ ಹೋಗಿದೆ. ನಾವು ಹಿಂದೆ ‘ಪ್ರಜಾಪ್ರಭುತ್ವವನ್ನು ಉಳಿಸಲು’ ಪ್ರಯತ್ನಿಸಿದ್ದೆವು ಆದರೆ ಅವರು ನಮ್ಮನ್ನು ತಡೆದರು. ಈ ಬಾರಿ ಏನಾಗುತ್ತದೆ ಎಂದು ನೋಡೋಣ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ಆದರೆ ಬಿಜೆಪಿಯ ಆರೋಪವನ್ನು ಆಡಳಿತರೂಢ ಟಿಎಂಸಿ ನಿರಾಕರಿಸಿದೆ. “ಬಿಜೆಪಿಯ ಬಂಗಾಳ ಘಟಕ ಪ್ರತಿಪಾದಿಸಿದಂತೆ ರಾಜ್ಯ ಸರ್ಕಾರವು ಯಾವುದೇ ಯಾತ್ರೆಗೆ ಅನುಮತಿಯನ್ನು ನಿರಾಕರಿಸಿಲ್ಲ. ಬಿಜೆಪಿಯು ದುರುದ್ದೇಶಪೂರಿತ ಅಪಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಯಾತ್ರೆಗೆ ಅನುಮತಿಯನ್ನು ರಾಜ್ಯ ಸರ್ಕಾರ ನಿರಾಕರಿಸಿದೆ ಎಂಬ ಯಾವುದಾದರೂ ಪುರಾವೆಯನ್ನು ತೋರಿಸಬೇಕು. ಇದು ತಾನು ಬಲಿಪಶು ಎಂದು ಹೇಳಿಕೊಳ್ಳುವ ಬಿಜೆಪಿಯ ಪ್ರಯತ್ನ” ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ಕಾರ್ಯಕರ್ತರೊಬ್ಬರು ಮುಖ್ಯ ಕಾರ್ಯದರ್ಶಿಯಿಂದ ಅನುಮತಿ ಕೋರಿದ್ದರು, ಅವರ ಕಚೇರಿ ಅವರನ್ನು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಿತು. ಈ ಮಧ್ಯೆ ಯಾತ್ರೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಅರ್ಜಿ ಸಲ್ಲಿಸಲಾಗಿತ್ತು. ಪ್ರಸ್ತುತ ವಿಷಯವು ಈಗ ನ್ಯಾಯಾಲಯದಲ್ಲಿದೆ. ಈ ಮೂಲಕ ತೃಣಮೂಲ ಕಾಂಗ್ರೆಸ್‌‌ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ” ಎಂದು ಪಕ್ಷ ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ನಾಡಿಯಾ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಕೂಡಾ ಬಿಜೆಪಿಯ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿಲ್ಲ, ಆದರೆ “ಝೆಡ್‌” ವರ್ಗದ ರಕ್ಷಣೆ ಹೊಂದಿರುವ ಜೆ.ಪಿ ನಡ್ಡಾ ಅವರು ಈ ಕಾರ್ಯಕ್ರಮಕ್ಕೆ ಬರುವುದರಿಂದ ಅದರ ವ್ಯವಸ್ಥೆಗಳ ಬಗ್ಗೆ ವಿವರಗಳನ್ನು ಕೋರಿ ಪಕ್ಷಕ್ಕೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.

ರಥಯಾತ್ರೆಯ ಸಮಾರೋಪ, ಮಾರ್ಗ, ರಾತ್ರಿಯ ನಿಲುಗಡೆ, ವಸತಿ ವ್ಯವಸ್ಥೆಗಳ ವಿವರಗಳನ್ನೂ ಪೊಲೀಸರು ಬಯಸಿದ್ದು, ಕಾರ್ಯಕ್ರಮದಲ್ಲಿ ಕೊರೊನಾ ಸುರಕ್ಷತಾ ನಿಯಮಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಬಿಜೆಪಿಯನ್ನು ಕೇಳಿದ್ದಾರೆ.

ಈ ನಡುವೆ ತೃಣಮೂಲ ಕಾಂಗ್ರೆಸ್ ಶನಿವಾರ ನಾಡಿಯಾ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿದ್ದು, ಬಿಜೆಪಿಯ ರಥಯಾತ್ರೆಯ ಸಮಯದಲ್ಲೇ ಜಿಲ್ಲೆಯಾದ್ಯಂತ ಸಾವಿರಾರು ಬೈಕ್‌ಗಳಲ್ಲಿ ರ್‍ಯಾಲಿ ನಡೆಯಲಿದೆ. ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಡುವೆ ಭಾರಿ ಜಿದ್ದಾ ಜಿದ್ದಿನ ಹೋರಾಟ ಪ್ರಾರಂಭವಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...