Homeಮುಖಪುಟಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಬಂಗಾಳ: ಬಿಜೆಪಿಯ ರಥಯಾತ್ರೆಯಂದು, ಅದೇ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿರುವ ಟಿಎಂಸಿ

ಬಿಜೆಪಿ ತನ್ನ ಯಾತ್ರೆಗೆ ಪರಿವರ್ತನ್ ಯಾತ್ರೆ ಎಂದು ಹೆಸರಿಟ್ಟರೆ, ಟಿಎಂಸಿ ತನ್ನ ರ್‍ಯಾಲಿಗೆ ಜನಸಮರ್ಥನ್ ಯಾತ್ರೆ ಎಂದು ಹೆಸರಿಟ್ಟಿದೆ.

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ’ಪರಿವರ್ತನಾ’ ರಥಯಾತ್ರೆಯನ್ನು ಪಕ್ಷದ ಮುಖ್ಯಸ್ಥ ಜೆ.ಪಿ.ನಡ್ಡಾ ಶನಿವಾರ(ನಾಳೆ) ಉದ್ಘಾಟನೆ ಮಾಡಲಿದ್ದಾರೆ. ಆದರೆ ಬಿಜೆಪಿ ರಥಯಾತ್ರೆ ಪ್ರಾರಂಭಿಸುವ ನಾಡಿಯಾ ಜಿಲ್ಲೆಯಲ್ಲೇ ತೃಣಮೂಲ ಯುವ ಕಾಂಗ್ರೆಸ್ ಎರಡು ದಿನಗಳ ’ಜನಸಮಾರ್ಥನ್ ಯಾತ್ರೆ’ಯನ್ನು ಅಂದೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಯಾತ್ರೆಯಲ್ಲಿ ಸಾವಿರಾರು ಬೈಕುಗಳ ಮೂಲಕ ರ್‍ಯಾಲಿ ನಡೆಸಲಾಗುತ್ತದೆ.

“ನಮ್ಮ ಪರಿವರ್ತನ ಯಾತ್ರೆಯು ಟಿಎಂಸಿಯ ’ಅಂತಿಮ ಯಾತ್ರೆ’ ಆಗಿದೆ. ಕಳೆದ ಬಾರಿ ನಾವು ಅನುಮತಿಗಾಗಿ ನ್ಯಾಯಾಲಯಕ್ಕೆ ಹೋಗಿದ್ದೆವು. ಈ ಬಾರಿ ಟಿಎಂಸಿಯೆ ಮೊದಲು ನ್ಯಾಯಾಲಯಕ್ಕೆ ಹೋಗಿದೆ. ನಾವು ಹಿಂದೆ ‘ಪ್ರಜಾಪ್ರಭುತ್ವವನ್ನು ಉಳಿಸಲು’ ಪ್ರಯತ್ನಿಸಿದ್ದೆವು ಆದರೆ ಅವರು ನಮ್ಮನ್ನು ತಡೆದರು. ಈ ಬಾರಿ ಏನಾಗುತ್ತದೆ ಎಂದು ನೋಡೋಣ” ಎಂದು ಪಶ್ಚಿಮ ಬಂಗಾಳ ಬಿಜೆಪಿ ಮುಖ್ಯಸ್ಥ ದಿಲೀಪ್ ಘೋಷ್ ಹೇಳಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಓವೈಸಿ ಬಿಜೆಪಿಗೆ ನೆರವಾಗಲಿದ್ದಾರೆ: ಸ್ಪೋಟಕ ಹೇಳಿಕೆ ನೀಡಿದ ಸಾಕ್ಷಿ ಮಹರಾಜ್

ಆದರೆ ಬಿಜೆಪಿಯ ಆರೋಪವನ್ನು ಆಡಳಿತರೂಢ ಟಿಎಂಸಿ ನಿರಾಕರಿಸಿದೆ. “ಬಿಜೆಪಿಯ ಬಂಗಾಳ ಘಟಕ ಪ್ರತಿಪಾದಿಸಿದಂತೆ ರಾಜ್ಯ ಸರ್ಕಾರವು ಯಾವುದೇ ಯಾತ್ರೆಗೆ ಅನುಮತಿಯನ್ನು ನಿರಾಕರಿಸಿಲ್ಲ. ಬಿಜೆಪಿಯು ದುರುದ್ದೇಶಪೂರಿತ ಅಪಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಯಾತ್ರೆಗೆ ಅನುಮತಿಯನ್ನು ರಾಜ್ಯ ಸರ್ಕಾರ ನಿರಾಕರಿಸಿದೆ ಎಂಬ ಯಾವುದಾದರೂ ಪುರಾವೆಯನ್ನು ತೋರಿಸಬೇಕು. ಇದು ತಾನು ಬಲಿಪಶು ಎಂದು ಹೇಳಿಕೊಳ್ಳುವ ಬಿಜೆಪಿಯ ಪ್ರಯತ್ನ” ತೃಣಮೂಲ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ಕಾರ್ಯಕರ್ತರೊಬ್ಬರು ಮುಖ್ಯ ಕಾರ್ಯದರ್ಶಿಯಿಂದ ಅನುಮತಿ ಕೋರಿದ್ದರು, ಅವರ ಕಚೇರಿ ಅವರನ್ನು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶಿಸಿತು. ಈ ಮಧ್ಯೆ ಯಾತ್ರೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಅರ್ಜಿ ಸಲ್ಲಿಸಲಾಗಿತ್ತು. ಪ್ರಸ್ತುತ ವಿಷಯವು ಈಗ ನ್ಯಾಯಾಲಯದಲ್ಲಿದೆ. ಈ ಮೂಲಕ ತೃಣಮೂಲ ಕಾಂಗ್ರೆಸ್‌‌ಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಎಂದು ನಾವು ಸ್ಪಷ್ಟಪಡಿಸುತ್ತೇವೆ” ಎಂದು ಪಕ್ಷ ಹೇಳಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ʼಬಿಜೆಪಿಗೆ ಮತ ನೀಡಬೇಡಿʼ ಅಭಿಯಾನ ಆರಂಭ

ನಾಡಿಯಾ ಜಿಲ್ಲಾ ಪೊಲೀಸ್ ಮುಖ್ಯಸ್ಥರು ಕೂಡಾ ಬಿಜೆಪಿಯ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಿಲ್ಲ, ಆದರೆ “ಝೆಡ್‌” ವರ್ಗದ ರಕ್ಷಣೆ ಹೊಂದಿರುವ ಜೆ.ಪಿ ನಡ್ಡಾ ಅವರು ಈ ಕಾರ್ಯಕ್ರಮಕ್ಕೆ ಬರುವುದರಿಂದ ಅದರ ವ್ಯವಸ್ಥೆಗಳ ಬಗ್ಗೆ ವಿವರಗಳನ್ನು ಕೋರಿ ಪಕ್ಷಕ್ಕೆ ಪತ್ರ ಬರೆದಿದ್ದೇವೆ ಎಂದು ಹೇಳಿದ್ದಾರೆ.

ರಥಯಾತ್ರೆಯ ಸಮಾರೋಪ, ಮಾರ್ಗ, ರಾತ್ರಿಯ ನಿಲುಗಡೆ, ವಸತಿ ವ್ಯವಸ್ಥೆಗಳ ವಿವರಗಳನ್ನೂ ಪೊಲೀಸರು ಬಯಸಿದ್ದು, ಕಾರ್ಯಕ್ರಮದಲ್ಲಿ ಕೊರೊನಾ ಸುರಕ್ಷತಾ ನಿಯಮಗಳನ್ನು ಅನುಸರಿಸಲಾಗಿದೆಯೆ ಎಂದು ಖಚಿತಪಡಿಸಿಕೊಳ್ಳಲು ಪೊಲೀಸರು ಬಿಜೆಪಿಯನ್ನು ಕೇಳಿದ್ದಾರೆ.

ಈ ನಡುವೆ ತೃಣಮೂಲ ಕಾಂಗ್ರೆಸ್ ಶನಿವಾರ ನಾಡಿಯಾ ಜಿಲ್ಲೆಯಲ್ಲಿ ಬೈಕ್ ರ್‍ಯಾಲಿ ನಡೆಸಲಿದ್ದು, ಬಿಜೆಪಿಯ ರಥಯಾತ್ರೆಯ ಸಮಯದಲ್ಲೇ ಜಿಲ್ಲೆಯಾದ್ಯಂತ ಸಾವಿರಾರು ಬೈಕ್‌ಗಳಲ್ಲಿ ರ್‍ಯಾಲಿ ನಡೆಯಲಿದೆ. ಬಂಗಾಳದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಬಿಜೆಪಿ ಮತ್ತು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಡುವೆ ಭಾರಿ ಜಿದ್ದಾ ಜಿದ್ದಿನ ಹೋರಾಟ ಪ್ರಾರಂಭವಾಗಿದೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ: ಎಡಪಕ್ಷಗಳೊಂದಿಗೆ ‘ಕೈ’ ಜೋಡಿಸಲು ಒಪ್ಪಿಗೆ – ಅಧೀರ್‌ ಚೌಧರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...