Homeಮುಖಪುಟಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ಪ.ಬಂಗಾಳಕ್ಕೆ ಸ್ವಂತ ಮಗಳು ಬೇಕು: ಟಿಎಂಸಿಯ ಚುನಾವಣಾ ಘೋಷವಾಕ್ಯ

ರಾಜ್ಯದ ಜನರು ತಮ್ಮ ಮುಖ್ಯಮಂತ್ರಿಯಾಗಿ ಕಳೆದ ಹಲವಾರು ವರ್ಷಗಳಿಂದ ತಮ್ಮ ಜೊತೆಯಲ್ಲೇ ಇರುವ ತಮ್ಮ ಸ್ವಂತ ಮಗಳನ್ನು ಬಯಸುತ್ತಾರೆ. ಹೊರಗಿನವರು ಬಂಗಾಳದಲ್ಲಿ ತೀರ್ಮಾನ ತೆಗೆದುಕೊಳ್ಳುವುದನ್ನು ನಾವು ಬಯಸುವುದಿಲ್ಲ.

- Advertisement -
- Advertisement -

ತೃಣಮೂಲ ಕಾಂಗ್ರೆಸ್ ಇಂದು ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ತನ್ನ ಘೋಷಣೆಯನ್ನು ಪ್ರಕಟಿಸಿದೆ.. ಅದು ’ಬಾಂಗ್ಲಾ ನಿಜರ್ ಮೆಯೆಕೈ ಚಾಯೆ’ (ಬಂಗಾಳವು ತನ್ನ ಸ್ವಂತ ಮಗಳನ್ನು ಬಯಸಿದೆ). ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು “ಬಂಗಾಳದ ಮಗಳು” ಎಂದು ಚಿತ್ರಿಸುವಾಗ ಒಳಗಿನವರು ವರ್ಸಸ್ ಹೊರಗಿನವರು ಎಂಬ ತನ್ನ ವಾದಕ್ಕೆ ಆದ್ಯತೆ ನೀಡಿದೆ.

ರಾಜ್ಯದ ಆಡಳಿತ ಪಕ್ಷವು ನಗರದ ಪ್ರಧಾನ ಕಚೇರಿಯಿಂದ ಅಧಿಕೃತವಾಗಿ ಈ ಘೋಷಣೆ ಬಿಡುಗಡೆ ಮಾಡುತ್ತಿದ್ದಂತೆಯೇ, ಕೋಲ್ಕತ್ತಾದಾದ್ಯಂತ ಜಾಹೀರಾತು ಹೋರ್ಡಿಂಗ್‌ಗಳಲ್ಲಿ ಮಮತಾ ಬ್ಯಾನರ್ಜಿಯವರ ಫೋಟೋ ಜೊತೆಗೆ ಈ ಘೋಷಣೆ ಪ್ರಕಟಿಸಲಾಗಿದೆ.

“ರಾಜ್ಯದ ಜನರು ತಮ್ಮ ಮುಖ್ಯಮಂತ್ರಿಯಾಗಿ ಕಳೆದ ಹಲವಾರು ವರ್ಷಗಳಿಂದ ತಮ್ಮ ಜೊತೆಯಲ್ಲೇ ಇರುವ ತಮ್ಮ ಸ್ವಂತ ಮಗಳನ್ನು ಬಯಸುತ್ತಾರೆ. ಹೊರಗಿನವರು ಬಂಗಾಳದಲ್ಲಿ ತೀರ್ಮಾನ ತೆಗೆದುಕೊಳ್ಳುವುದನ್ನು ನಾವು ಬಯಸುವುದಿಲ್ಲ” ಎಂದು ತೃಣಮೂಲ ಪ್ರಧಾನ ಕಾರ್ಯದರ್ಶಿ ಪಾರ್ಥ ಚಟರ್ಜಿ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್ ಬಿಜೆಪಿಯೊಂದಿಗೆ ತೀವ್ರ ರಾಜಕೀಯ ಹೋರಾಟದಲ್ಲಿ ತೊಡಗಿದ್ದು, ವಿರೋಧ ಪಕ್ಷದ ನಾಯಕರನ್ನು “ರಾಜ್ಯಕ್ಕೆ ಚುನಾವಣಾ ಪ್ರವಾಸೋದ್ಯಮದಲ್ಲಿರುವ ಹೊರಗಿನವರು” ಎಂದು ಗೇಲಿ ಮಾಡಿದೆ.

ಟಿಎಂಸಿ ನರೇಂದ್ರ ಮೋದಿ ಮತ್ತು ಅಮಿತ್ ಶಾರನ್ನು ಗುರಿಯಾಗಿಸಿ ಚುನಾವಣಾ ಪ್ರಚಾರ ತಂತ್ರ ಹೆಣೆಯುತ್ತಿರುವುದರ ಭಾಗವಾಗಿ ಇಂದಿನ ಹೊಸ ಘೋಷಣೆ ಹೊರಬಿದ್ದಿದೆ. ಬಂಗಾಳದ ಮಗಳು ವರ್ಸಸ್ ಬಿಜೆಪಿ ಎಂಬ ಚರ್ಚೆಗೆ ಇದು ದಾರಿ ಮಾಡಬಹುದು.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯನ್ನು “ಬಂಗಾಳದ ಮಗಳು” ಎಂದು ಚಿತ್ರಿಸಿ, ವಿರೋಧಪಕ್ಷಗಳನ್ನು ಹೊರಗಿನವರು ಎಂದು ಚಿತ್ರಸಲಾಗುತ್ತಿದೆ. ಈ ಮೊದಲು ಕೂಡ ಟಿಎಂಸಿ ಮುಖಂಡರು ತಮ್ಮ ಚುನಾವಣಾ ಭಾಷಣಗಳಲ್ಲಿ ಬಿಜೆಪಿಯನ್ನು ಹೊರಗಿನಿಂದ ಬಂದವರು ಎಂದೇ ಟೀಕಿಸಿದೆ.

ಇದನ್ನೂ ಓದಿ: ಮತ್ತೆ ಮುಖಭಂಗ – ಆಂಧ್ರದ 3,221 ಪಂಚಾಯತ್‌ಗಳಲ್ಲಿ‌ BJP ಗೆ‌‌‌ ಕೇವಲ 13 ಸ್ಥಾನ!

 

 

ಇನ್ನು ನಿನ್ನೆಯಷ್ಟೇ (ಫೆ.19) ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ವಿರುದ್ಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆಬ್ರವರಿ 22 ರಂದು ವೈಯಕ್ತಿಕವಾಗಿ ಅಥವಾ ವಕೀಲರ ಮೂಲಕ ಹಾಜರಾಗುವಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ಜಾರಿಗೊಳಿಸಿದೆ.


ಇದನ್ನೂ ಓದಿ: ಕೇಂದ್ರ ಗೃಹ ಸಚಿವ ಅಮಿತ್‌‌‌‌ ಶಾಗೆ ಸಮನ್ಸ್ ಜಾರಿಗೊಳಿಸಿದ ಪಶ್ಚಿಮ ಬಂಗಾಳ ನ್ಯಾಯಾಲಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...