Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾವಿನ ವಿಷ ಪ್ರಕರಣ : ಎಲ್ವಿಶ್ ಯಾದವ್ ವಿರುದ್ಧದ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಯೂಟ್ಯೂಬರ್ ಎಲ್ವಿಶ್ ಯಾದವ್ ವಿರುದ್ಧದ ಹಾವಿನ ವಿಷ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ ಮತ್ತು ಕ್ರಿಮಿನಲ್ ಪ್ರಕ್ರಿಯೆಗಳನ್ನು ಸುಪ್ರೀಂ ಕೋರ್ಟ್ ಗುರುವಾರ (ಮಾ.19) ರದ್ದುಗೊಳಿಸಿದೆ.  ವನ್ಯಜೀವಿ (ರಕ್ಷಣೆ) ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲು ಅಧಿಕೃತ ವ್ಯಕ್ತಿಯಿಂದ ದೂರು...

ದೆಹಲಿಯ ಉತ್ತಮ್ ನಗರದಲ್ಲಿ ಮುಸ್ಲಿಮರಿಗೆ ಬೆದರಿಕೆ; ಅಮಿತ್ ಶಾಗೆ ಪತ್ರ ಬರೆದ ವಿಪಕ್ಷ ಸಂಸದರು

ರಾಷ್ಟ್ರ ರಾಜಧಾನಿಯ ಉತ್ತಮ್ ನಗರದಲ್ಲಿ ಮುಸ್ಲಿಮರನ್ನು ಗುರಿಯಾಗಿಸಿಕೊಂಡು ಹಿಂದುತ್ವ ಗುಂಪುಗಳು ಮಾಡುತ್ತಿರುವ ಬೆದರಿಕೆಗಳ ಬಗ್ಗೆ ತುರ್ತು ಹಸ್ತಕ್ಷೇಪವನ್ನು ಕೋರಿ ಹಲವಾರು ವಿರೋಧ ಪಕ್ಷದ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ...

‘ಇರಾನ್ ಕತಾರ್ ಮೇಲೆ ಮತ್ತೊಮ್ಮೆ ದಾಳಿ ಮಾಡಿದರೆ, ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಸ್ಪೋಟಿಸುತ್ತೇವೆ’; ಟ್ರಂಪ್ ಬೆದರಿಕೆ

ಇರಾನ್ ಕತಾರ್‌ನ ಇಂಧನ ಸೌಲಭ್ಯಗಳನ್ನು ಗುರಿಯಾಗಿಸಿಕೊಂಡರೆ, ಅಮೆರಿಕ ”ಸೌತ್ ಪಾರ್ಸ್ ಅನಿಲ ಕ್ಷೇತ್ರವನ್ನು ಬೃಹತ್ ಪ್ರಮಾಣದಲ್ಲಿ ಸ್ಫೋಟಿಸುತ್ತದೆ” ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ರಾಜ್ಯಸಭೆಯಲ್ಲಿ ಎಚ್ಚರಿಸಿದ್ದಾರೆ. ಇರಾನ್‌ನ ಸೌತ್ ಪಾರ್ಸ್ ಗ್ಯಾಸ್...

ಮುಸ್ಲಿಂ ಪ್ರಯಾಣಿಕರ ಮೇಲೆ ಹಲ್ಲೆ ನಡೆಸಿದ್ದಾಗಿ ಹೇಳಿಕೊಂಡ ಓಲಾ ಚಾಲಕ; ‘ಇಸ್ಲಾಮೋಫೋಬಿಕ್’ ಕುರಿತು ಆತಂಕ ವ್ಯಕ್ತಪಡಿಸಿದ ವಕೀಲ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿನ ಓಲಾ ಕ್ಯಾಬ್ ಪ್ರಯಾಣದ ಸಂದರ್ಭದಲ್ಲಿ ಚಾಲಕನಿಂದ ನನಗೆ ಬೆದರಿಕೆ ಮತ್ತು ಇಸ್ಲಾಮೋಫೋಬಿಕ್ ಹೇಳಿಕೆಗಳು ಬಂದಿವೆ ಎಂದು ಸುಪ್ರೀಂ ಕೋರ್ಟ್ ವಕೀಲರೊಬ್ಬರು ಆರೋಪಿಸಿದ್ದಾರೆ. ಈ ಘಟನೆಯು, ಪ್ರಯಾಣಿಕರ ಸುರಕ್ಷತೆ ಮತ್ತು...

ಬೆಳ್ತಂಗಡಿ | ಮುಸ್ಲಿಂ ಬಾಲಕನ ಮೇಲೆ ಗುಂಪು ಹಲ್ಲೆ ಆರೋಪ; ಬಜರಂಗದಳದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಸ್ನೇಹಿತರೊಂದಿಗೆ ತೆರಳಿದ್ದ ಮುಸ್ಲಿಂ ಬಾಲಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ, ಅಪಹರಿಸಿ, ಬೆದರಿಕೆ ಹಾಕಿ ಆತ್ಮಹತ್ಯೆಗೆ ಪ್ರೇರೇಪಿಸಿದ ಆರೋಪದಡಿ...

ಉಮರ್ ಖಾಲಿದ್ ಬಂಧನ ನಿರಂಕುಶ; ಕಾನೂನು ಆಧಾರವಿಲ್ಲ: ವಿಶ್ವಸಂಸ್ಥೆ ಕಾರ್ಯಪಡೆ

"ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿ ಕಾರ್ಯಕರ್ತ ಮತ್ತು ಸಂಶೊಧನಾ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಬಂಧನವು ನಿರಂಕುಶವಾಗಿದೆ, ಅದಕ್ಕೆ ಯಾವುದೇ ಕಾನೂನು ಆಧಾರವಿಲ್ಲ" ಎಂದು ವಿಶ್ವಸಂಸ್ಥೆಯ ಸಮಿತಿ ಹೇಳಿದೆ. ಸಾಮಾಜಿಕ ಕಾರ್ಯಕರ್ತರ...

ಮಹಾರಾಷ್ಟ್ರ | ಲೈಂಗಿಕ ದೌರ್ಜನ್ಯ ಆರೋಪ : ಸ್ವಯಂ ಘೋಷಿತ ದೇವಮಾನವನ ಬಂಧನ

ಮಹಿಳೆಯರನ್ನು ಅಸಭ್ಯವಾಗಿ ಚಿತ್ರೀಕರಿಸಿ, ಆ ವಿಡಿಯೋಗಳನ್ನು ಇಟ್ಟುಕೊಂಡು ಲೈಂಗಿಕವಾಗಿ ಶೋಷಣೆ ಮಾಡುತ್ತಿದ್ದ ಆರೋಪದ ಮೇಲೆ ಸ್ವಯಂಘೋಷಿತ ದೇವಮಾನವ ಮತ್ತು ಜ್ಯೋತಿಷಿ ಕ್ಯಾಪ್ಟನ್ ಅಶೋಕ್ ಖಾರಟ್‌ನನ್ನು ಮಹಾರಾಷ್ಟ್ರದ ನಾಸಿಕ್ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ....

‘ಕಾಂಗ್ರೆಸ್ ಜೊತೆ ಬಲವಂತದ ಮದುವೆ ಆಗಿತ್ತು’: ಖರ್ಗೆ ಅವರ ‘ಮೋದಿ ಜೊತೆ ಮದುವೆ’ ಟೀಕೆಗೆ ದೇವೇಗೌಡ ತಿರುಗೇಟು

ಸಂಸತ್ತಿನಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರ 'ಮದುವೆ' ಮತ್ತು 'ಪ್ರೀತಿ' ಹೇಳಿಕೆಗೆ ಮಾಜಿ ಪ್ರಧಾನಿ ಮತ್ತು ರಾಜ್ಯಸಭಾ ಸಂಸದ ಎಚ್‌ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದೇವೇಗೌಡರು ಕಾಂಗ್ರೆಸ್ ಅನ್ನು "ಪ್ರೀತಿಸಿದರು" ಆದರೆ ಮೋದಿ (ಬಿಜೆಪಿ)...

ರಾಹುಲ್ ಗಾಂಧಿಯನ್ನು ‘ಟಪೋರಿ’ ಎಂದು ಕರೆದ ಬಿಜೆಪಿ ಸಂಸದೆ ಕಂಗನಾ ರಣಾವತ್

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿ ಸಂಸದೆ - ನಟಿ ಕಂಗನಾ ರನೌತ್, ಅವರನ್ನು ಟಪೋರಿ ಎಂದು ಕರೆದಿದ್ದಾರೆ. ಅವರ ನಡವಳಿಕೆಯು ಮಹಿಳೆಯರಿಗೆ ಅನಾನುಕೂಲವನ್ನುಂಟು ಮಾಡುತ್ತದೆ ಎಂದು...

ಎಸ್‌ಬಿಐಗೆ ವಂಚನೆ ಪ್ರಕರಣ : ಅನಿಲ್ ಅಂಬಾನಿ ವಿಚಾರಣೆ ನಡೆಸಿದ ಸಿಬಿಐ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ದೂರಿನ ಮೇರೆಗೆ ರಿಲಯನ್ಸ್ ಕಮ್ಯುನಿಕೇಷನ್ಸ್ ಲಿಮಿಟೆಡ್ ವಿರುದ್ಧ ದಾಖಲಾಗಿರುವ 2,929 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಮಾ.19) ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರನ್ನು ಕೇಂದ್ರ...