Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...