Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...