Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...