Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...