Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...