Homeಅಂತರಾಷ್ಟ್ರೀಯಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

ಬಂಗಾಳಿ ವಲಸೆ ಕಾರ್ಮಿಕನನ್ನು ಬಂದೂಕು ತೋರಿಸಿ ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಬಿಎಸ್‌ಎಫ್‌: ಕುಟುಂಬದಿಂದ ಗಂಭೀರ ಆರೋಪ

- Advertisement -
- Advertisement -

ಪಶ್ಚಿಮ ಬಂಗಾಳದ 19 ವರ್ಷದ ವಲಸೆ ಕಾರ್ಮಿಕನನ್ನು ಬಂಧಿಸಿ ಎರಡು ತಿಂಗಳ ಕಾಲ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಇರಿಸಿದ್ದ ಗಡಿ ಭದ್ರತಾ ಪಡೆ (ಬಿಎಸ್‌ಎಫ್‌), ನಂತರ ಬಂದೂಕು ತೋರಿಸಿ ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದೆ ಎಂದು ಕುಟುಂಬ ಆರೋಪಿಸಿದೆ.

ಅಮೀರ್ ಶೇಖ್ ಗಡಿಪಾರು ಮಾಡಲಾಗಿರುವ ವಲಸೆ ಕಾರ್ಮಿಕ. ಅವರು ಬಾಂಗ್ಲಾದೇಶದಿಂದ ಅಲ್ಲಿನ ಜನರೊಂದಿಗೆ ಇದ್ದು ಮಾತನಾಡಿರುವ ವಿಡಿಯೋ ವೈರಲ್ ಆದ ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ ಎಂದು ಅಮೀರ್ ಅವರ ಚಿಕ್ಕಪ್ಪ ಮೊಹಮ್ಮದ್ ಅಜ್ಮಲ್ ಶೇಖ್ ಹೇಳಿದ್ದಾಗಿ scroll.in ವರದಿ ಮಾಡಿದೆ.

ವಿಡಿಯೋದಲ್ಲಿ, ಅಮೀರ್ ಶೇಖ್ ಅವರು ಪಶ್ಚಿಮ ಬಂಗಾಳದ ಮಾಲ್ಡಾ ನಿವಾಸಿ ಎಂದು ಹೇಳುವುದನ್ನು ನೋಡಬಹುದು. ಅವರು ರಾಜಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಪೊಲೀಸರು ಅವರನ್ನು ಬಾಂಗ್ಲಾದೇಶಿ ಎಂಬ ಅನುಮಾನದ ಮೇಲೆ ಬಂಧಿಸಿದ್ದರು ಎಂದು scroll.in ಹೇಳಿದೆ.

ತನ್ನ ಆಧಾರ್ ಕಾರ್ಡ್ ಮತ್ತು ಪೋಷಕರ ಹೆಚ್ಚುವರಿ ದಾಖಲೆಗಳನ್ನು ಪೊಲೀಸರಿಗೆ ತೋರಿಸಿದ್ದೇನೆ ಎಂದು ಅಮೀರ್ ಶೇಖ್ ಹೇಳಿದ್ದಾರೆ. ಆದರೆ, ಪೊಲೀಸರು ಐಡಿ ಪ್ರೂಫ್ ತರುವಂತೆ ಒತ್ತಾಯಿಸಿದ್ದರು. ಅದು ಅವರ ಬಳಿ ಇರಲಿಲ್ಲ ಎಂದು scroll.in ವಿವರಿಸಿದೆ.

“ನನಗೆ ಬಾಂಗ್ಲಾದೇಶದಲ್ಲಿ ಯಾರೂ ಪರಿಚಯವಿಲ್ಲ, ನನ್ನ ಬಳಿ ತಿನ್ನಲು ಏನೂ ಇಲ್ಲ” ಎಂದು ಅಮೀರ್ ಶೇಖ್ ಹೇಳುತ್ತಿರುವುದು ವಿಡಿಯೋದಲ್ಲಿ ಇದೆ.

ಅಮೀರ್ ಶೇಖ್ ಮೂರು ತಿಂಗಳ ಹಿಂದೆ ರಾಜಸ್ಥಾನಕ್ಕೆ ಹೋಗಿದ್ದರು ಎಂದು ಚಿಕ್ಕಪ್ಪ ಮೊಹಮ್ಮದ್ ಅಜ್ಮೌಲ್ ಶೇಖ್ scroll.inಗೆ ಹೇಳಿದ್ದಾರೆ.

“ಒಬ್ಬ ಗುತ್ತಿಗೆದಾರ ನಮಗೆ ಅಮೀರ್ ಬಂಧನದ ಬಗ್ಗೆ ಮಾಹಿತಿ ನೀಡಿದ್ದರು. ನಾವು ಅವರ ಸಹಾಯದಿಂದ ಎಲ್ಲಾ ದಾಖಲೆಗಳನ್ನು ಸಲ್ಲಿಸಿದ್ದೆವು. ಆಧಾರ್ ಮತ್ತು ಜನನ ಪ್ರಮಾಣಪತ್ರಗಳನ್ನೂ ಸಲ್ಲಿಸಿದ್ದೆವು. ಆದರೆ ಅವರು (ಪೊಲೀಸರು) ಅವುಗಳನ್ನು ಸ್ವೀಕರಿಸಿಲ್ಲ” ಎಂದು ಅಜ್ಮೌಲ್ ಶೇಖ್ ಆರೋಪಿಸಿದ್ದಾರೆ.

ಅಮೀರ್ ಶೇಖ್ ಅವರನ್ನು ಬಿಡುಗಡೆ ಮಾಡಲು ರಾಜಸ್ಥಾನ ಪೊಲೀಸರು 50,000 ರೂ.ಗಳನ್ನು ಕೇಳಿದ್ದರು. ಅಷ್ಟೊಂದು ಹಣ ಕೊಡಲು ನಮಗೆ ಸಾಧ್ಯವಾಗಲಿಲ್ಲ. ಹಾಗಾಗಿ, ಅಮೀರ್ ರಾಜಸ್ಥಾನದ ಬಂಧನ ಕೇಂದ್ರದಲ್ಲಿ ಎರಡು ತಿಂಗಳು ಕಳೆದರು” ಎಂದು ಅಜ್ಮೌಲ್ ಶೇಖ್ ತಿಳಿಸಿದ್ದಾರೆ.

ವಿಡಿಯೋದಲ್ಲಿ ಕಾಣಿಸಿಕೊಳ್ಳುವವರೆಗೆ ಅಮೀರ್ ಎಲ್ಲಿದ್ದರು ಎಂದು ನಮಗೆ ಗೊತ್ತಿರಲಿಲ್ಲ. ಬಾಂಗ್ಲಾದೇಶದ ವ್ಯಕ್ತಿಯೊಬ್ಬರು ನಮಗೆ ಕರೆ ಮಾಡಿದ ನಂತರ ನಾವು ಅವರೊಂದಿಗೆ ಒಮ್ಮೆ ಮಾತನಾಡಿದೆವು. ಗಡಿ ಭದ್ರತಾ ಪಡೆ ತನ್ನ ಮೇಲೆ ಹಲ್ಲೆ ನಡೆಸಿದೆ ಎಂದು ಅಮೀರ್ ಹೇಳಿಕೊಂಡಿದ್ದಾರೆ ಎಂದು ಅಜ್ಮೌಲ್ ಶೇಖ್ ಮಾಹಿತಿ ನೀಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪೊಲೀಸ್ ದೂರು ದಾಖಲಿಸಿರುವ ಅಮೀರ್ ಕುಟುಂಬ, 1950ರ ದಶಕದಿಂದಲೂ ಭಾರತದಲ್ಲಿ ವಾಸಿಸುತ್ತಿರುವುದನ್ನು ಸಾಬೀತುಪಡಿಸುವ ದಾಖಲೆಗಳು ತಮ್ಮ ಬಳಿ ಇದೆ ಎಂದು ತಿಳಿಸಿದೆ.

ಬಾಂಗ್ಲಾದೇಶೀಯರು ಎಂಬ ಅನುಮಾನದ ಮೇಲೆ ದೇಶದ ಹಲವು ಭಾಗಗಳಲ್ಲಿ ಬಂಗಾಳಿ ಮಾತನಾಡುವ ವಲಸೆ ಕಾರ್ಮಿಕರನ್ನು ಬಂಧಿಸಿ ಕಿರುಕುಳ ನೀಡಲಾಗುತ್ತಿದೆ ಎಂದು ಇತ್ತೀಚಿಗೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕೋಲ್ಕತ್ತಾದಲ್ಲಿ ದೊಡ್ಡ ಮಟ್ಟದ ಪ್ರತಿಭಟನೆ ನಡೆಸಿತ್ತು.

ಏಪ್ರಿಲ್ 22ರ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಪೊಲೀಸರು ಬಂಗಾಳಿ ಮಾತನಾಡುವ ಜನರನ್ನು, ಹೆಚ್ಚಾಗಿ ಮುಸ್ಲಿಮರನ್ನು ಬಂಧಿಸಿ ಭಾರತೀಯ ನಾಗರಿಕರು ಎಂದು ಸಾಬೀತುಪಡಿಸಲು ಒತ್ತಾಯಿಸುತ್ತಿದ್ದಾರೆ ಎಂಬ ಆರೋಪವಿದೆ.

ಭಾರತೀಯ ಪೌರತ್ವವನ್ನು ಸಾಬೀತುಪಡಿಸಲು ವಿಫಲರಾದ ಹಲವಾರು ಜನರನ್ನು ಬಲವಂತವಾಗಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ ಅರೋಪವಿದೆ. ಕೆಲ ಜನರನ್ನು ತಪ್ಪಾಗಿ ಗಡಿಯಾಚೆಗೆ ತಳ್ಳಿ ಬಳಿಕ ವಾಪಸ್ ಕರೆದುಕೊಂಡು ಬಂದ ಬಗ್ಗೆ ವರದಿಯಾಗಿವೆ.

ಮೇ ತಿಂಗಳಲ್ಲಿ, ಕೇಂದ್ರ ಗೃಹ ಸಚಿವಾಲಯವು ಬಾಂಗ್ಲಾದೇಶ ಮತ್ತು ಮ್ಯಾನ್ಮಾರ್‌ನಿಂದ ಬಂದ ದಾಖಲೆರಹಿತ ವಲಸಿಗರೆಂದು ಶಂಕಿಸಲಾಗಿರುವ ವ್ಯಕ್ತಿಗಳ ಬಗ್ಗೆ ಪರಿಶೀಲನೆ ನಡೆಸುವಂತೆ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು.

ಜುಲೈ 19ರಂದು ಹರಿಯಾಣದ ಗುರುಗ್ರಾಮದಲ್ಲಿ ಪೊಲೀಸರು ಬಾಂಗ್ಲಾದೇಶದವರೆಂಬ ಅನುಮಾನದ ಮೇಲೆ ಕನಿಷ್ಠ 74 ವಲಸೆ ಕಾರ್ಮಿಕರನ್ನು ಬಂಧಿಸಿದ್ದರು. ಇವರಲ್ಲಿ 11 ಮಂದಿ ಪಶ್ಚಿಮ ಬಂಗಾಳದವರು ಮತ್ತು 63 ಮಂದಿ ಅಸ್ಸಾಂನವರು ಎಂದು ದಿ ವೈರ್ ವರದಿ ಮಾಡಿತ್ತು.

ಮಂಗಳವಾರ scroll.in ಮಾಡಿರುವ ವರದಿ ಪ್ರಕಾರ, ಅಸ್ಸಾಂ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರ ಮಗನನ್ನು ಕೂಡ ದಾಖಲೆರಹಿತ ಬಾಂಗ್ಲಾದೇಶಿ ವಲಸಿಗ ಎಂಬ ಅನುಮಾನದ ಮೇಲೆ ಬಂಧಿಸಲಾಗಿದೆ.

ಬುಧವಾರ, ಮಾನವ ಹಕ್ಕುಗಳ ಸಂಸ್ಥೆ ಭಾರತವು ಕಾನೂನುಬಾಹಿರವಾಗಿ ಜನರನ್ನು ಬಾಂಗ್ಲಾದೇಶಕ್ಕೆ ಗಡಿಪಾರು ಮಾಡುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದೆ.

ಛತ್ತೀಸ್‌ಗಢ:  ಕ್ರಿಶ್ಚಿಯನ್ ಕುಟುಂಬಕ್ಕೆ ‘ಘರ್ ವಾಪ್ಸಿ’ಗೆ  ನಿರಾಕರಿಸಿದ್ದಕ್ಕೆ ಬಹಿಷ್ಕಾರ; ಅರಣ್ಯದಲ್ಲಿ ಆಶ್ರಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫೇಕ್ ಮದುವೆ ಜಾಲಕ್ಕೆ ಬಿದ್ದ ಫೇಮಸ್ ಗೋರಕ್ಷಕ ‘ಬಿಟ್ಟು ಬಜರಂಗಿ’

ಹರಿಯಾಣದಲ್ಲಿ "ಲವ್ ಜಿಹಾದ್" ಮತ್ತು ಅಂತರ್ಧರ್ಮೀಯ ವಿವಾಹಗಳ ವಿರುದ್ಧ ನಿರಂತರವಾಗಿ ಹೋರಾಡುತ್ತಾ, ತನ್ನದೇ ಆದ ಸಾರ್ವಜನಿಕ ಪ್ರಭಾವ ಬೆಳೆಸಿಕೊಂಡಿದ್ದ ರಾಜ್ ಕುಮಾರ್ ಅಲಿಯಾಸ್ ಬಿಟ್ಟು ಬಜರಂಗಿಗೆ ತನಗೆ ಇಂತಹದ್ದೊಂದು ಪರಿಸ್ಥಿತಿ ಎದುರಾಗಬಹುದು ಎಂಬ...

ಕರ್ನಾಟಕದ ಎಸ್‌ಐಆರ್ ಪ್ರಕ್ರಿಯೆಯಲ್ಲಿ ‘ಸಾಮೂಹಿಕ ಅಕ್ರಮ’ ಆರೋಪ: ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಿದ ಎನ್‌ಡಿಎ ನಿಯೋಗ

ಬೆಂಗಳೂರು: ಕರ್ನಾಟಕದಲ್ಲಿ ಸದ್ಯ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ಸಾಂಸ್ಥಿಕ ಅಕ್ರಮಗಳು ನಡೆಯುತ್ತಿವೆ ಎಂದು ಆರೋಪಿಸಿ, ರಾಜ್ಯದ ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು...

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...