Homeಮುಖಪುಟರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ.

ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, “ಇತರ ರಾಜ್ಯಗಳಿಂದ ಪಶ್ಚಿಮ ಬಂಗಾಳಕ್ಕೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ ಮುಂದಿನ 12 ತಿಂಗಳವರೆಗೆ ಮಾಸಿಕ 5,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು ಮತ್ತು ‘ಖಾದ್ಯ ಸತಿ’ ಮತ್ತು ‘ಸ್ವಸ್ಥ ಸತಿ’ ನಂತಹ ಸಾಮಾಜಿಕ ಪ್ರಯೋಜನಗಳನ್ನು ಅವರು ಪಡೆಯಬಹುದು ಎಂದು ಹೇಳಿದ್ದಾರೆ.

ಈ ಸೌಲಭ್ಯಗಳನ್ನು ಜಾರಿಗೆ ತರಲು ‘ಶ್ರಮಶ್ರೀ’ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

“ಈ ಯೋಜನೆಯು ಬಂಗಾಳದ ವಲಸೆ ಕಾರ್ಮಿಕರಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯಕ್ಕೆ ಮರಳುವವರು ಪ್ರಯಾಣ ಸಹಾಯದೊಂದಿಗೆ 5,000 ರೂ.ಗಳ ಒಂದು ಮೊದಲ ಪಾವತಿಯನ್ನು ಪಡೆಯಲಿದ್ದಾರೆ. ಇದು ಪುನರ್ವಸತಿ ಭತ್ಯೆಯಾಗಿದೆ. ಅವರಿಗೆ ಹೊಸ ಕೆಲಸದ ವ್ಯವಸ್ಥೆ ಮಾಡುವವರೆಗೆ, ಕನಿಷ್ಠ ಒಂದು ವರ್ಷದವರೆಗೆ ತಿಂಗಳಿಗೆ 5,000 ರೂ.ಗಳ ಆರ್ಥಿಕ ಸಹಾಯವನ್ನು ಸಹ ನೀಡಲಾಗುವುದು” ಎಂದು ಮಮತಾ ಬ್ಯಾರ್ಜಿ ತಿಳಿಸಿದ್ದಾರೆ.

ಈ ಯೋಜನೆಗೆ ಪಶ್ಚಿಮ ಬಂಗಾಳ ಕಾರ್ಮಿಕ ಇಲಾಖೆ ನೋಡಲ್ ಇಲಾಖೆಯಾಗಿದೆ. ರಾಜ್ಯ ಸರ್ಕಾರದ ‘ಉತ್ಕರ್ಷ್ ಬಾಂಗ್ಲಾ’ ಯೋಜನೆಯ ಮೂಲಕ ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿಯನ್ನೂ ನೀಡಲಾಗುವುದು ಎಂದು ಹೇಳಿದ್ದಾರೆ.

“ರಾಜ್ಯಕ್ಕೆ ಮರಳುವ ಕಾರ್ಮಿಕರ ಕೌಶಲ್ಯಗಳನ್ನು ನಾವು ಪರಿಶೀಲಿಸುತ್ತೇವೆ. ಅವರಲ್ಲಿ ಕೌಶಲ್ಯವಿದ್ದರೆ ಅದಕ್ಕೆ ತಕ್ಕ ತರಬೇತಿ ನೀಡುತ್ತೇವೆ. ಅಲ್ಲದೆ, ಉದ್ಯೋಗವನ್ನೂ ಒದಗಿಸುತ್ತೇವೆ. ಜೊತೆಗೆ ‘ಉದ್ಯೋಗ ಕಾರ್ಡ್’ಗಳನ್ನು ವಿತರಿಸುತ್ತೇವೆ. ‘ಕರ್ಮಶ್ರೀ’ ಯೋಜನೆಯಡಿ ಇದುವರೆಗೆ 78 ಲಕ್ಷ ಉದ್ಯೋಗ ಕಾರ್ಡ್‌ಗಳನ್ನು ನೀಡಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಮನೆ ಇಲ್ಲದಿದ್ದರೆ ಸಮುದಾಯ ತರಬೇತಿ ಕೇಂದ್ರಗಳಲ್ಲಿ ಅವರಿಗೆ ವಸತಿ ಒದಗಿಸಲಾಗುವುದು. ಅವರ ಮಕ್ಕಳಿಗೆ ಶಾಲಾ ಪ್ರವೇಶ ವ್ಯವಸ್ಥೆ ಮಾಡಲಾಗುವುದು. ಇದಲ್ಲದೆ ವಲಸೆ ಕಾರ್ಮಿಕರು ‘ಕನ್ಯಾಶ್ರೀ’ ಮತ್ತು ‘ಶಿಕ್ಷಶ್ರೀ’ಯ ಯೋಜನೆಗಳ ಪ್ರಯೋಜನಗಳನ್ನು ಕೂಡ ಪಡೆಯಲಿದ್ದಾರೆ ಎಂದಿದ್ದಾರೆ.

“ಬಂಗಾಳದಿಂದ ವಲಸೆ ಹೋಗಿರುವ 22.40 ಲಕ್ಷ ಕಾರ್ಮಿಕರಿಗೆ ‘ಶ್ರಮಶ್ರೀ’ ಯೋಜನೆಯ ಪ್ರಯೋಜನಗಳು ಸಿಗಲಿವೆ. ಅವರು ‘ಶ್ರಮಶ್ರೀ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡರೆ, ಐ-ಕಾರ್ಡ್ ನೀಡಲಾಗುವುದು. ಇದರ ಮೂಲಕ ಅವರು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಾರೆ” ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ದಿನಗಳಲ್ಲಿ, ಇತರ ರಾಜ್ಯಗಳಲ್ಲಿ ಚಿತ್ರಹಿಂಸೆಗೊಳಗಾದ 2,700 ಕುಟುಂಬಗಳು ಬಂಗಾಳಕ್ಕೆ ಮರಳಿವೆ . ರಾಜ್ಯ ಸರ್ಕಾರವು 10,000ಕ್ಕೂ ಹೆಚ್ಚು ಜನರನ್ನು ಕರೆತಂದಿದೆ ಎಂದು ಸಿಎಂ ವಿವರಿಸಿದ್ದಾರೆ.

ಬಿಜೆಪಿಯ ಹೆಸರನ್ನು ಉಲ್ಲೇಖಿಸದೆ, ‘ಡಬಲ್ ಎಂಜಿನ್ ಸರ್ಕಾರ’ ಆಳ್ವಿಕೆ ನಡೆಸುತ್ತಿರುವ ವಿವಿಧ ರಾಜ್ಯಗಳಲ್ಲಿ ಬಂಗಾಳಿ ಭಾಷೆ ಮತ್ತು ಬಂಗಾಳಿ ಗುರುತಿನ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಯಾರಾದರೂ ಬಂಗಾಳಿ ಮಾತನಾಡಿದರೆ, ಅವರನ್ನು ಅಪರಾಧಿ ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಸಿಕ್ಕ ಸಿಕ್ಕವರನ್ನು ಬಾಂಗ್ಲಾದೇಶಕ್ಕೆ ತಳ್ಳಲಾಗುತ್ತಿದೆ. ಎಲ್ಲೋ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಎಲ್ಲೋ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಸುಮಾರು 22 ಲಕ್ಷ ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದಕ್ಕಾಗಿ ಕಿರುಕುಳ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇತರ ರಾಜ್ಯಗಳ ಸುಮಾರು 1.5 ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಇದೇ ವೇಳೆ ಹೇಳಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ | ‘ಇಂಡಿಯಾ’ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...