Homeಮುಖಪುಟರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

ರಾಜ್ಯಕ್ಕೆ ಮರಳುವ ಬಂಗಾಳಿ ವಲಸೆ ಕಾರ್ಮಿಕರಿಗೆ ಮಾಸಿಕ ರೂ. 5000 ಧನ ಸಹಾಯ: ಮಮತಾ ಬ್ಯಾನರ್ಜಿ

- Advertisement -
- Advertisement -

ರಾಜ್ಯಕ್ಕೆ ಮರಳುವ ಬಂಗಾಳದ ವಲಸೆ ಕಾರ್ಮಿಕರು ಮಾಸಿಕ 5 ಸಾವಿರ ರೂಪಾಯಿ ಧನ ಸಹಾಯ ಪಡೆಯಲಿದ್ದಾರೆ ಎಂದು ಪಶ್ವಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆ.18) ಘೋಷಿಸಿದ್ದಾರೆ.

ರಾಜ್ಯ ಆಡಳಿತ ಕೇಂದ್ರವಾದ ನಬನ್ನಾದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಮಾತನಾಡಿದ ಮಮತಾ ಬ್ಯಾನರ್ಜಿ, “ಇತರ ರಾಜ್ಯಗಳಿಂದ ಪಶ್ಚಿಮ ಬಂಗಾಳಕ್ಕೆ ಹಿಂದಿರುಗುವ ವಲಸೆ ಕಾರ್ಮಿಕರಿಗೆ ಮುಂದಿನ 12 ತಿಂಗಳವರೆಗೆ ಮಾಸಿಕ 5,000 ರೂ.ಗಳ ಆರ್ಥಿಕ ಸಹಾಯವನ್ನು ನೀಡಲಾಗುವುದು ಮತ್ತು ‘ಖಾದ್ಯ ಸತಿ’ ಮತ್ತು ‘ಸ್ವಸ್ಥ ಸತಿ’ ನಂತಹ ಸಾಮಾಜಿಕ ಪ್ರಯೋಜನಗಳನ್ನು ಅವರು ಪಡೆಯಬಹುದು ಎಂದು ಹೇಳಿದ್ದಾರೆ.

ಈ ಸೌಲಭ್ಯಗಳನ್ನು ಜಾರಿಗೆ ತರಲು ‘ಶ್ರಮಶ್ರೀ’ ಎಂಬ ಹೊಸ ಯೋಜನೆಯನ್ನು ಘೋಷಿಸಿದ್ದಾರೆ.

“ಈ ಯೋಜನೆಯು ಬಂಗಾಳದ ವಲಸೆ ಕಾರ್ಮಿಕರಿಗೆ ಮಾತ್ರ ಅನ್ವಯವಾಗುತ್ತದೆ. ರಾಜ್ಯಕ್ಕೆ ಮರಳುವವರು ಪ್ರಯಾಣ ಸಹಾಯದೊಂದಿಗೆ 5,000 ರೂ.ಗಳ ಒಂದು ಮೊದಲ ಪಾವತಿಯನ್ನು ಪಡೆಯಲಿದ್ದಾರೆ. ಇದು ಪುನರ್ವಸತಿ ಭತ್ಯೆಯಾಗಿದೆ. ಅವರಿಗೆ ಹೊಸ ಕೆಲಸದ ವ್ಯವಸ್ಥೆ ಮಾಡುವವರೆಗೆ, ಕನಿಷ್ಠ ಒಂದು ವರ್ಷದವರೆಗೆ ತಿಂಗಳಿಗೆ 5,000 ರೂ.ಗಳ ಆರ್ಥಿಕ ಸಹಾಯವನ್ನು ಸಹ ನೀಡಲಾಗುವುದು” ಎಂದು ಮಮತಾ ಬ್ಯಾರ್ಜಿ ತಿಳಿಸಿದ್ದಾರೆ.

ಈ ಯೋಜನೆಗೆ ಪಶ್ಚಿಮ ಬಂಗಾಳ ಕಾರ್ಮಿಕ ಇಲಾಖೆ ನೋಡಲ್ ಇಲಾಖೆಯಾಗಿದೆ. ರಾಜ್ಯ ಸರ್ಕಾರದ ‘ಉತ್ಕರ್ಷ್ ಬಾಂಗ್ಲಾ’ ಯೋಜನೆಯ ಮೂಲಕ ವಲಸೆ ಕಾರ್ಮಿಕರಿಗೆ ಕೌಶಲ್ಯ ತರಬೇತಿಯನ್ನೂ ನೀಡಲಾಗುವುದು ಎಂದು ಹೇಳಿದ್ದಾರೆ.

“ರಾಜ್ಯಕ್ಕೆ ಮರಳುವ ಕಾರ್ಮಿಕರ ಕೌಶಲ್ಯಗಳನ್ನು ನಾವು ಪರಿಶೀಲಿಸುತ್ತೇವೆ. ಅವರಲ್ಲಿ ಕೌಶಲ್ಯವಿದ್ದರೆ ಅದಕ್ಕೆ ತಕ್ಕ ತರಬೇತಿ ನೀಡುತ್ತೇವೆ. ಅಲ್ಲದೆ, ಉದ್ಯೋಗವನ್ನೂ ಒದಗಿಸುತ್ತೇವೆ. ಜೊತೆಗೆ ‘ಉದ್ಯೋಗ ಕಾರ್ಡ್’ಗಳನ್ನು ವಿತರಿಸುತ್ತೇವೆ. ‘ಕರ್ಮಶ್ರೀ’ ಯೋಜನೆಯಡಿ ಇದುವರೆಗೆ 78 ಲಕ್ಷ ಉದ್ಯೋಗ ಕಾರ್ಡ್‌ಗಳನ್ನು ನೀಡಲಾಗಿದೆ” ಎಂದು ಸಿಎಂ ತಿಳಿಸಿದ್ದಾರೆ.

ವಲಸೆ ಕಾರ್ಮಿಕರಿಗೆ ಮನೆ ಇಲ್ಲದಿದ್ದರೆ ಸಮುದಾಯ ತರಬೇತಿ ಕೇಂದ್ರಗಳಲ್ಲಿ ಅವರಿಗೆ ವಸತಿ ಒದಗಿಸಲಾಗುವುದು. ಅವರ ಮಕ್ಕಳಿಗೆ ಶಾಲಾ ಪ್ರವೇಶ ವ್ಯವಸ್ಥೆ ಮಾಡಲಾಗುವುದು. ಇದಲ್ಲದೆ ವಲಸೆ ಕಾರ್ಮಿಕರು ‘ಕನ್ಯಾಶ್ರೀ’ ಮತ್ತು ‘ಶಿಕ್ಷಶ್ರೀ’ಯ ಯೋಜನೆಗಳ ಪ್ರಯೋಜನಗಳನ್ನು ಕೂಡ ಪಡೆಯಲಿದ್ದಾರೆ ಎಂದಿದ್ದಾರೆ.

“ಬಂಗಾಳದಿಂದ ವಲಸೆ ಹೋಗಿರುವ 22.40 ಲಕ್ಷ ಕಾರ್ಮಿಕರಿಗೆ ‘ಶ್ರಮಶ್ರೀ’ ಯೋಜನೆಯ ಪ್ರಯೋಜನಗಳು ಸಿಗಲಿವೆ. ಅವರು ‘ಶ್ರಮಶ್ರೀ’ ಪೋರ್ಟಲ್‌ನಲ್ಲಿ ನೋಂದಾಯಿಸಿಕೊಂಡರೆ, ಐ-ಕಾರ್ಡ್ ನೀಡಲಾಗುವುದು. ಇದರ ಮೂಲಕ ಅವರು ರಾಜ್ಯ ಸರ್ಕಾರದ ಸೌಲಭ್ಯಗಳನ್ನು ಪಡೆಯುತ್ತಾರೆ” ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಕೆಲ ದಿನಗಳಲ್ಲಿ, ಇತರ ರಾಜ್ಯಗಳಲ್ಲಿ ಚಿತ್ರಹಿಂಸೆಗೊಳಗಾದ 2,700 ಕುಟುಂಬಗಳು ಬಂಗಾಳಕ್ಕೆ ಮರಳಿವೆ . ರಾಜ್ಯ ಸರ್ಕಾರವು 10,000ಕ್ಕೂ ಹೆಚ್ಚು ಜನರನ್ನು ಕರೆತಂದಿದೆ ಎಂದು ಸಿಎಂ ವಿವರಿಸಿದ್ದಾರೆ.

ಬಿಜೆಪಿಯ ಹೆಸರನ್ನು ಉಲ್ಲೇಖಿಸದೆ, ‘ಡಬಲ್ ಎಂಜಿನ್ ಸರ್ಕಾರ’ ಆಳ್ವಿಕೆ ನಡೆಸುತ್ತಿರುವ ವಿವಿಧ ರಾಜ್ಯಗಳಲ್ಲಿ ಬಂಗಾಳಿ ಭಾಷೆ ಮತ್ತು ಬಂಗಾಳಿ ಗುರುತಿನ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.

“ಯಾರಾದರೂ ಬಂಗಾಳಿ ಮಾತನಾಡಿದರೆ, ಅವರನ್ನು ಅಪರಾಧಿ ಎಂದು ಹಣೆಪಟ್ಟಿ ಕಟ್ಟಲಾಗುತ್ತಿದೆ. ಸಿಕ್ಕ ಸಿಕ್ಕವರನ್ನು ಬಾಂಗ್ಲಾದೇಶಕ್ಕೆ ತಳ್ಳಲಾಗುತ್ತಿದೆ. ಎಲ್ಲೋ ಅವರನ್ನು ಜೈಲಿಗೆ ಹಾಕಲಾಗುತ್ತಿದೆ. ಎಲ್ಲೋ ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ದು ಕಿರುಕುಳ ನೀಡಲಾಗುತ್ತಿದೆ” ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಸುಮಾರು 22 ಲಕ್ಷ ವಲಸೆ ಕಾರ್ಮಿಕರಿಗೆ ಇತರ ರಾಜ್ಯಗಳಲ್ಲಿ ಬಂಗಾಳಿ ಮಾತನಾಡಿದಕ್ಕಾಗಿ ಕಿರುಕುಳ ನೀಡಲಾಗಿದೆ ಎಂದು ಹೇಳಿಕೊಂಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಇತರ ರಾಜ್ಯಗಳ ಸುಮಾರು 1.5 ಕೋಟಿ ಜನರು ಕೆಲಸ ಮಾಡುತ್ತಿದ್ದಾರೆ ಎಂದು ಮಮತಾ ಬ್ಯಾನರ್ಜಿ ಇದೇ ವೇಳೆ ಹೇಳಿದ್ದಾರೆ.

ಉಪರಾಷ್ಟ್ರಪತಿ ಚುನಾವಣೆ | ‘ಇಂಡಿಯಾ’ ಅಭ್ಯರ್ಥಿಯಾಗಿ ನಿವೃತ್ತ ನ್ಯಾ. ಬಿ ಸುದರ್ಶನ್ ರೆಡ್ಡಿ ಆಯ್ಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...