Homeಮುಖಪುಟಒತ್ತಡ ಹೇರಿದರೆ ಬಂಗಾಳಿ ಮುಸ್ಲಿಮರನ್ನು ರಾಜ್ಯದಿಂದ ಓಡಿಸಬಹುದು: ಹಿಮಂತ ಶರ್ಮಾ ದ್ವೇಷ ಪೂರಿತ ಹೇಳಿಕೆ

ಒತ್ತಡ ಹೇರಿದರೆ ಬಂಗಾಳಿ ಮುಸ್ಲಿಮರನ್ನು ರಾಜ್ಯದಿಂದ ಓಡಿಸಬಹುದು: ಹಿಮಂತ ಶರ್ಮಾ ದ್ವೇಷ ಪೂರಿತ ಹೇಳಿಕೆ

- Advertisement -
- Advertisement -

ಒತ್ತಡ ಹೇರಿದರೆ ಮುಂದಿನ 10-15 ವರ್ಷಗಳಲ್ಲಿ ಬಂಗಾಳಿ ಮುಸ್ಲಿಮರನ್ನು ರಾಜ್ಯದಿಂದ ಓಡಿಸಬಹುದು, ಅವರನ್ನು ಅಸ್ಸಾಂ ಬಿಟ್ಟು ಹೋಗುವಂತೆ ಒತ್ತಾಯಿಸಬೇಕು ಎಂದು ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ದ್ವೇಷ ಪೂರಿತ ಹೇಳಿಕೆ ನೀಡಿದ್ದಾರೆ.

ವರದಿಗಾರರೊಂದಿಗೆ ಶನಿವಾರ ಮಾತನಾಡಿದ ಶರ್ಮಾ ಮಾತನಾಡಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಬಂಗಾಳಿ ಮಾತನಾಡುವ ಮುಸ್ಲಿಮರ ವಿರುದ್ಧ ದ್ವೇಷ ಪೂರಿತ ಹೇಳಿಕೆ ನೀಡಿದ್ದಾರೆ. ಸಮುದಾಯವೊಂದರ ವಿರುದ್ಧ ‘ಮಿಯಾಸ್’ ಎಂಬ ಅವಹೇಳನಕಾರಿ ಪದ ಬಳಸಿದ್ದಾರೆ. “ಬಂಗಾಳಿ ಮಾತನಾಡುವ ಮುಸ್ಲಿಮರು ಕೆಳ ಅಸ್ಸಾಂನಿಂದ ವಾಪಸ್ ಕಳುಹಿಸಲು ಸಾಧ್ಯವಿಲ್ಲ, ಅವರು ರಾಜ್ಯದ ಮೇಲಿನ ಜಿಲ್ಲೆಗಳ ಕಡೆಗೆ ಹೋಗದಂತೆ ಅವರ ಮೇಲೆ ಒತ್ತಡ ಹೇರಬೇಕು” ಎಂದು ಅವರು ಹೇಳಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಬಂಗಾಳಿ ಮುಸ್ಲಿಮರ ಮೇಲೆ ಸಾಕಷ್ಟು ಒತ್ತಡ ಹೇರಿದರೆ, ಅವರನ್ನು 10-15 ವರ್ಷಗಳಲ್ಲಿ ರಾಜ್ಯದಿಂದ ಓಡಿಸಬಹುದು ಎಂದು ಅವರು ಹೇಳಿದರು.

“ಕೆಳ ಅಸ್ಸಾಂ ಅನ್ನು ಅವರಿಂದ ಹಿಂದಕ್ಕೆ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅವರು ಮುಂದೆ ಹೋಗಲು ಸಾಧ್ಯವಿಲ್ಲ ಎಂದು ನಾವು ಖಚಿತಪಡಿಸಿಕೊಳ್ಳಬೇಕು. ನಾವು ಅವರನ್ನು ಒತ್ತಡದಲ್ಲಿ ಇಡಬೇಕು. ತೊಂದರೆಗಳನ್ನು ಸೃಷ್ಟಿಸಬೇಕು, ಇದರಿಂದ ಇಂದು ಅಲ್ಲದಿದ್ದರೆ ಮುಂದಿನ 10-15 ವರ್ಷಗಳ ನಂತರ ಅವರು ಹೊರಹೋಗುವಂತೆ ಒತ್ತಾಯಿಸಲಾಗುತ್ತದೆ” ಎಂದು ಮುಸ್ಲಿಂ ವಿರೋಧಿ ಹೇಳಿಕೆಗಳಿಗೆ ಹೆಸರುವಾಸಿಯಾದ ಬಿಜೆಪಿ ನಾಯಕ ಹೇಳಿದರು.

ಬಂಗಾಳಿ ಮಾತನಾಡುವ ಮುಸ್ಲಿಮರು ಒಗ್ಗಟ್ಟಿನಿಂದ ಮತ ಚಲಾಯಿಸುತ್ತಾರೆ. ಇದರಿಂದ ಅವರು ‘ರಾಜಕೀಯವಾಗಿ ಮುಂದುವರಿಯುತ್ತಿದ್ದಾರೆ, ಆದರೆ ನಮ್ಮ ಜನರ ಮತಗಳು ಚದುರಿಹೋಗಿವೆ ಎಂದು ಖಚಿತಪಡಿಸಿದೆ.

“ಮಿಯಾಗಳು ಒಟ್ಟಾಗಿ ಮತ ಚಲಾಯಿಸುತ್ತಾರೆ. ಅದಕ್ಕಾಗಿಯೇ ಅವರು ರಾಜಕೀಯವಾಗಿ ಮುಂದುವರಿಯುತ್ತಿದ್ದಾರೆ. ನಮ್ಮ ಮತಗಳು ಚದುರಿಹೋಗಿವೆ. ಅದಕ್ಕಾಗಿಯೇ ನಾನು ನಮ್ಮ ಜನರಿಗೆ ಒಟ್ಟಿಗೆ ಮತ ಚಲಾಯಿಸಲು ಹೇಳುತ್ತೇನೆ, ಅದು ಯಾವುದೇ ಪಕ್ಷ ಅಥವಾ ವ್ಯಕ್ತಿಯಾಗಿರಲಿ” ಎಂದರು.

‘ಮಿಯಾ’ ಮೂಲತಃ ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರ ಅವಹೇಳನಕ್ಕೆ ಬಳಸಲಾಗುವ ಪದವಾಗಿದೆ. ಬಂಗಾಳಿ ಮಾತನಾಡದ ಜನರು ಸಾಮಾನ್ಯವಾಗಿ ಅವರನ್ನು ಬಾಂಗ್ಲಾದೇಶಿ ವಲಸಿಗರೆಂದು ಗುರುತಿಸುತ್ತಾರೆ. ಇತ್ತೀಚಿನ ವರ್ಷಗಳಲ್ಲಿ, ಹಿಂದುತ್ವವಾದಿಗಳು ಈ ಪದವನ್ನು ಪ್ರತಿಭಟನೆಯ ಸೂಚಕವಾಗಿ ಅಳವಡಿಸಿಕೊಳ್ಳಲು ಪ್ರಾರಂಭಿಸಿದ್ದಾರೆ.

ಅಸ್ಸಾಂನಲ್ಲಿನ ಬಿಜೆಪಿ ಸರ್ಕಾರವು ಅತಿಕ್ರಮಣವನ್ನು ತೆರವುಗೊಳಿಸುವ ಹೆಸರಿನಲ್ಲಿ ದಶಕಗಳಿಂದ ವಾಸಿಸುತ್ತಿದ್ದ ಕುಟುಂಬಗಳನ್ನು ಅಲ್ಲಿಂದ ಹೊರಹಾಕಲು ಬೃಹತ್ ಅಭಿಯಾನ ನಡೆಸುತ್ತಿದೆ. ಹೊರಹಾಕಲ್ಪಟ್ಟವರಲ್ಲಿ ಸಿಂಹಪಾಲು ಜನರು ಬಂಗಾಳಿ ಮಾತನಾಡುವ ಮುಸ್ಲಿಮರಾಗಿದ್ದರು ಎಂಬುದನ್ನು ಗಮನಿಸಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...