Homeಮುಖಪುಟಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಬಂಗಾಳಿ ಹಿರಿಯ ಗಾಯಕಿ!

ಪದ್ಮಶ್ರೀ ಪ್ರಶಸ್ತಿ ನಿರಾಕರಿಸಿದ ಬಂಗಾಳಿ ಹಿರಿಯ ಗಾಯಕಿ!

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯುನಿಷ್ಟ್‌ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ಕೂಡಾ ಪ್ರಶಸ್ತಿ ನಿರಾಕರಿಸಿದ್ದಾರೆ

- Advertisement -
- Advertisement -

ಒಕ್ಕೂಟ ಸರ್ಕಾರ ಘೋಷಿಸಿರುವ ಪದ್ಮಶ್ರೀ ಪ್ರಶಸ್ತಿಯನ್ನು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ, ಹಿರಿಯ ಕಮ್ಯುನಿಷ್ಟ್‌ ನಾಯಕ ಬುದ್ಧದೇವ್‌ ಭಟ್ಟಾಚಾರ್ಯ ನಿರಾಕರಿಸಿದ ಬೆನ್ನಿಗೆ ಮತ್ತೊಬ್ಬ ಸಾಧಕಿ ಕೂಡಾ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ. ಸುಮಾರು 8 ದಶಕಗಳ ಕಾಲ ಗಾಯನ ವೃತ್ತಿಯನ್ನು ಹೊಂದಿರುವ 90 ವರ್ಷದ ಸಂಧ್ಯಾ ಮುಖರ್ಜಿ ಅವರು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ತಮಗೆ ಪದ್ಮಶ್ರೀಯ ಅಗತ್ಯವಿಲ್ಲ ಎಂದು ಹೇಳಿರುವ ಅವರು, “ಪ್ರಶಸ್ತಿಯು ತನಗಿಂತಲೂ ಕಿರಿಯ ಕಲಾವಿದರಿಗೆ ನೀಡುವುದು ಹೆಚ್ಚು ಸೂಕ್ತವಾಗಿದೆ” ಎಂದು ಸಂಧ್ಯಾ ಮುಖೋಪಾಧ್ಯಾಯ ಎಂದೂ ಕರೆಯಲ್ಪಡುವ ಬಂಗಾಳಿ ಗಾಯಕಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಪಿಐ(ಎಂ) ನಾಯಕ, ಪ.ಬಂ. ಮಾಜಿ ಸಿಎಂ ಬುದ್ಧದೇಬ್‌‌ ಭಟ್ಟಾಚಾರ್ಯ ‘ಪದ್ಮಭೂಷಣ’ ನಿರಾಕರಣೆ

ದೆಹಲಿಯಿಂದ ಕರೆ ಮಾಡಿದ ಹಿರಿಯ ಅಧಿಕಾರಿಗೆ, ತನ್ನ ತಾಯಿ ಪದ್ಮಶ್ರೀ ಪುರಸ್ಕೃತೆ ಎಂದು ಕರೆಯುವುದನ್ನು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾಗಿ ಅವರ ಪುತ್ರಿ ಸೌಮಿ ಸೆಂಗುಪ್ತಾ ಹೇಳಿದ್ದಾರೆ. ಅವರಿಗೆ ಇಳಿ ವಯಸ್ಸಿನಲ್ಲಿ ಪ್ರಶಸ್ತಿ ನೀಡುವುದು ಅವಮಾನವಾಗಿದೆ ಎಂದು ಅವರು ತಿಳಿಸಿದ್ದಾರೆ. ಗಣರಾಜ್ಯೋತ್ಸವ ಪ್ರಶಸ್ತಿಗಳ ಪಟ್ಟಿಯಲ್ಲಿ ಪದ್ಮಶ್ರೀ ಎಂದು ಹೆಸರಿಸಲು ಒಪ್ಪಿಗೆ ಕೋರಿ ಅಧಿಕಾರಿಗಳು ಅವರನ್ನು ಸಂಪರ್ಕಿಸಿದ್ದರು.

ಪಶ್ಚಿಮ ಬಂಗಾಳದಿಂದ ಈ ಪ್ರಶಸ್ತಿಯನ್ನು ತಿರಸ್ಕರಿಸಿದವರಲ್ಲಿ ಮುಖರ್ಜಿ ಎರಡನೇ ವ್ಯಕ್ತಿಯಾಗಿದ್ದಾರೆ. ಅವರಿಗಿಂತ ಮೊದಲು ಬುದ್ಧದೇವ್ ಭಟ್ಟಾಚಾರ್ಯ ಪದ್ಮಶ್ರೀ ಪ್ರಶಸ್ತಿಯನ್ನು ನಿರಾಕರಿಸಿದ್ದರು. ಮುಖರ್ಜಿ ಅವರ ನಿರ್ಧಾರವು ರಾಜಕೀಯವಲ್ಲ ಎಂದು ಅವರು ಮಗಳು ಸೇನ್‌ಗುಪ್ತಾ ಹೇಳಿದ್ದಾರೆ.

ಇದನ್ನೂ ಓದಿ: ತಾಲಿಬಾನಿಗಳಿಂದ ಹತರಾದ ದಾನಿಶ್ ಸಿದ್ದೀಕಿಗೆ ಮರಣೋತ್ತರವಾಗಿ ’ವರ್ಷದ ಪತ್ರಕರ್ತ’ ಪ್ರಶಸ್ತಿ

“90 ನೇ ವಯಸ್ಸಿನಲ್ಲಿ, ಸುಮಾರು ಎಂಟು ದಶಕಗಳ ಕಾಲ ಗಾಯನ ವೃತ್ತಿಜೀವನ ಹೊಂದಿರುವ ಅವರು ಪದ್ಮಶ್ರೀಗೆ ಆಯ್ಕೆಯಾಗಿರುವುದು ಅವರ ಸ್ಥಾನಮಾನದ ಗಾಯಕರಿಗೆ ಮಾಡಿದ ಅವಮಾನವಾಗಿದೆ. ಪದ್ಮಶ್ರೀಗೆ ಕಿರಿಯ ಕಲಾವಿದೆಗೆ ಹೆಚ್ಚು ಅರ್ಹರೇ ಹೊರತು, ಸಂಧ್ಯಾ ಮುಖೋಪಾಧ್ಯಾಯ ಅಲ್ಲ” ಎಂದು ಅವರು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಜಿ ಅವರು, ಪ್ರಶಸ್ತಿಗೆ ನಾನು ಆಯ್ಕೆಯಾಗಿದ್ದೇನೆ ಎಂದು ಸರ್ಕಾರದ ಕರೆ ಬಂದಿಲ್ಲ, ಒಂದು ವೇಳೆ ನಾನು ಆಯ್ಕೆಯಾಗಿದ್ದರೆ, ನಾನದನ್ನು ನಿರಾಕರಿಸುತ್ತೇನೆ ಎಂದು ಹೇಳಿದ್ದಾರೆ. ಆದರೆ ಕೇಂದ್ರ ಸಚಿವಾಲಯವು ಅವರ ಪರವಾಗಿ ಅವರ ಪತ್ನಿಯನ್ನು ಸಂಪರ್ಕಿಸಿದೆ ಎಂದು ಹೇಳಿದೆ.

ಇದನ್ನೂ ಓದಿ:ನೊಬೆಲ್‌ ಪ್ರಶಸ್ತಿ ಪುರಸ್ಕೃತ ಆಂಗ್‌ ಸಾನ್‌ ಸೂಕಿಗೆ ನಾಲ್ಕು ವರ್ಷ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...