HomeUncategorizedದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

ದೆಹಲಿಯ ಮೀನು ತಿನ್ನುವ ಬಂಗಾಳಿಗಳಿಗೆ ಹಿಂದುತ್ವ ಗುಂಪಿನಿಂದ ಬೆದರಿಕೆ: ವೀಡಿಯೋ

- Advertisement -
- Advertisement -

ನವದೆಹಲಿ: ದೇಶದ ರಾಜಧಾನಿಯ ಚಿತ್ರಾಂಜನ್ ಪಾರ್ಕ್ ಬಳಿ ಮೀನು ತಿನ್ನುವುದಕ್ಕಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರು ಮತ್ತು ಕೆಲವು ಹಿಂದುತ್ವ ಗುಂಪುಗಳು ಬಂಗಾಳಿ ಸಮುದಾಯದ ಸದಸ್ಯರಿಗೆ ಬೆದರಿಕೆ ಹಾಕಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸಂಸದೆ ಮಹುವಾ ಮೊಯಿತ್ರಾ  ಆರೋಪಿಸಿದ್ದಾರೆ.

ಮಂಗಳವಾರದಂದು ಮೊಯಿತ್ರಾ ತಮ್ಮ ಸಾಮಾಜಿಕ ಮಾಧ್ಯಮ ಖಾತೆಯ ಮೂಲಕ ಘಟನೆಯ ವೀಡಿಯೊವನ್ನು ಪೋಸ್ಟ್ ಮಾಡಿ, ಕಳೆದ 60 ವರ್ಷಗಳಲ್ಲಿ ಇಂತಹ ಘಟನೆ ಎಂದಿಗೂ ಸಂಭವಿಸಿಲ್ಲ ಎಂದು ಹೇಳಿದ್ದಾರೆ.

ದಯವಿಟ್ಟು ಕೇಸರಿ ದಳದ ಬಿಜೆಪಿ ಗೂಂಡಾಗಳು ದೆಹಲಿಯ ಚಿತ್ತರಂಜನ್ ಪಾರ್ಕ್‌ನ ಮೀನು ತಿನ್ನುವ ಬಂಗಾಳಿಗಳಿಗೆ ಬೆದರಿಕೆ ಹಾಕುತ್ತಿರುವುದನ್ನು ನೋಡಿ. ಕಳೆದ 60 ವರ್ಷಗಳಲ್ಲಿ ಇದು ಎಂದಿಗೂ ಸಂಭವಿಸಿಲ್ಲ ಎಂದು ನಿವಾಸಿಗಳು ಹೇಳುತ್ತಾರೆ ಎಂದು ಅವರು ತಿಳಿಸಿದರು.

ದೇವಾಲಯದ ಬಳಿ ತಮ್ಮ ಅಂಗಡಿಗಳನ್ನು ತೆರೆಯದಂತೆ ಮೀನು ಮಾರಾಟಗಾರರಿಗೆ ನಿರ್ದೇಶಿಸುವ ಜನರ ಗುಂಪೊಂದು ವೀಡಿಯೊದಲ್ಲಿ ತೋರಿಸಲಾಗಿದೆ. ಸನಾತನ ಧರ್ಮದಲ್ಲಿ ಜೀವಿಗಳನ್ನು ಕೊಲ್ಲಲು ಅವಕಾಶವಿಲ್ಲ ಎಂದು ಅವರು ವಾದಿಸುತ್ತಿದ್ದಾರೆ.

ದೇವಾಲಯದ ಬಳಿ ಮೀನು ಮಾರಾಟ ಮಾಡುವುದರಿಂದ ಅದು ಅಶುದ್ಧವಾಗುತ್ತಿದೆ ಎಂದು ಹಿಂದುತ್ವ ನಾಯಕರೊಬ್ಬರು ಅಂಗಡಿಯವರಿಗೆ ಹೇಳುತ್ತಾರೆ. ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ಮಾರುಕಟ್ಟೆಯನ್ನು ನಿರ್ಮಿಸಿದೆ ಎಂದು ಅಂಗಡಿಯವರು ಹೇಳಿದಾಗ, ಹಿಂದುತ್ವ ನಾಯಕ ಡಿಡಿಎ ಕುತ್ತಿಗೆಗೆ ಕುಣಿಕೆ ಬಿಗಿದು ಅದರ ತಪ್ಪನ್ನು ಸರಿಪಡಿಸುವುದಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೀನು ಮಾರಾಟಗಾರರು ದೇವಸ್ಥಾನದ ಬಳಿ ಪ್ರಾಣಿಗಳನ್ನು ಕೊಲ್ಲುವುದರ ಹಿಂದಿನ ನೈತಿಕತೆಯ ಬಗ್ಗೆ ಅಂಗಡಿಯವನನ್ನು ಮಾಧ್ಯಮ ವ್ಯಕ್ತಿಯೊಬ್ಬರು ಪ್ರಶ್ನಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. ಹಲವಾರು ಸ್ಥಳಗಳಲ್ಲಿ ದೇವಾಲಯಗಳಲ್ಲಿಯೂ ಪ್ರಾಣಿಗಳನ್ನು ವಧಿಸಲಾಗುತ್ತದೆ ಎಂದು ಅಂಗಡಿ ಮಾಲೀಕರು ಹೇಳಿದಾಗ, ಇದನ್ನು ಪ್ರಶ್ನಿಸಿದವರನ್ನು ದಿಗ್ಭ್ರಮೆಗೊಳಿಸಿತು.

ಬಿಜೆಪಿ ಗೂಂಡಾಗಳು ಹೇಳಿಕೊಳ್ಳುವ ಸಿಆರ್ ಪಾರ್ಕ್‌ನಲ್ಲಿರುವ ದೇವಸ್ಥಾನವನ್ನು ಮಾಂಸಾಹಾರಿ ಮಾರುಕಟ್ಟೆ ಮಾರಾಟಗಾರರು ನಿರ್ಮಿಸಿದ್ದಾರೆ. ಅವರು ಅಲ್ಲಿ ಪ್ರಾರ್ಥಿಸುತ್ತಾರೆ. ಅಲ್ಲಿ ದೊಡ್ಡ ಪೂಜೆಗಳು ನಡೆಯುತ್ತವೆ. ಇಂತಹ ಬೆದರಿಕೆ ದೆಹಲಿಯಲ್ಲಿ ಬಿಜೆಪಿ ಸರ್ಕಾರದ 3 ತಿಂಗಳುಗಳ ಆಡಳಿತದ ಉಡುಗೊರೆ ಎಂದು ಮೊಯಿತ್ರಾ ಹೇಳಿದರು.

ಟಿಎಂಸಿ ನಾಯಕಿ ಮಾರುಕಟ್ಟೆಯ ಬಳಿ ವಾಸಿಸುವ ಕೆಲವು ಬಂಗಾಳಿ ನಿವಾಸಿಗಳ ವಾಟ್ಸಾಪ್ ಸಂದೇಶವನ್ನು ಸಹ ಪೋಸ್ಟ್ ಮಾಡಿದ್ದಾರೆ. ಅಲ್ಲಿಯ ನಿವಾಸಿಗಳು  ಪರಿಸ್ಥಿತಿಯನ್ನು “ಭಯಾನಕ” ಎಂದು ಬಣ್ಣಿಸಿದ್ದಾರೆ ಮತ್ತು ಮೀನು ಮಾರುಕಟ್ಟೆ ಮತ್ತು ಮಾಂಸದ ಅಂಗಡಿಗಳು ಕಳೆದ 10 ದಿನಗಳಿಂದ ಮುಚ್ಚಲ್ಪಟ್ಟಿವೆ ಎಂದು ಅವರು ಹೇಳಿದ್ದಾರೆ.

ಬುಧವಾರದಂದು ಮೊಯಿತ್ರಾ ಈ ವಿಷಯದ ಕುರಿತು ವೀಡಿಯೊ ಹೇಳಿಕೆಯನ್ನು ಬಿಡುಗಡೆ ಮಾಡಿ, ಬಂಗಾಳಿ ಅಂಗಡಿಯವರಿಗೆ ಕಿರುಕುಳ ನೀಡಿದ ಎಲ್ಲರನ್ನು ಬಂಧಿಸದ ಬಿಜೆಪಿ ಸರ್ಕಾರವನ್ನು ಟೀಕಿಸಿದರು. ಅಂಗಡಿಯವರೆಲ್ಲರೂ ಹಿಂದೂಗಳು ಮತ್ತು ಇದು ಬಿಜೆಪಿ ಮುಸ್ಲಿಂ ವಿರೋಧಿಗಳಾಗುವುದರ ಜೊತೆಗೆ ಹಿಂದೂ ವಿರೋಧಿ ಎಂದು ಸಾಬೀತುಪಡಿಸುತ್ತದೆ ಎಂದು ಅವರು ಅಭಿಪ್ರಾಯಿಸಿದರು.

ಒಂದು ವೇಳೆ ಈ ಅಂಗಡಿಯವರಿಗೆ ಕಿರುಕುಳ ನೀಡುವ ಜನರು ಮುಸ್ಲಿಮರಾಗಿದ್ದರೆ, ಬಿಜೆಪಿ ಸರ್ಕಾರವು ವಿವಿಧ ಆರೋಪಗಳ ಅಡಿಯಲ್ಲಿ ಅವರನ್ನು ಬಂಧಿಸುವ ಮೂಲಕ ಅವರನ್ನು ಜೈಲಿನಲ್ಲಿ ಹಾಕುತ್ತಿತ್ತು ಎಂದು ಅವರು ಹೇಳಿದರು.

ಹಿಂದೂ ಮೀನು ವ್ಯಾಪಾರಿಗಳನ್ನು ಅವರು ನಿರ್ಮಿಸಿದ ದೇವಾಲಯದ ಪಕ್ಕದಲ್ಲಿ ಕಾನೂನುಬದ್ಧ ಅಂಗಡಿಗಳನ್ನು ಮುಚ್ಚುವಂತೆ ಭಯಭೀತಗೊಳಿಸಲಾಗುತ್ತಿದೆ. ಬಿಜೆಪಿ ಗೂಂಡಾಗಳನ್ನು  ಇನ್ನೂ ಬಂಧಿಸಲಾಗಿಲ್ಲ. ಹಲೋ @DelhiPolice  ಅಥವಾ ನಾವೆಲ್ಲರೂ ಧೋಕ್ಲಾ ತಿಂದು ಜೈ ಶ್ರೀ ರಾಮ್ ಎಂದು ಜಪಿಸಬೇಕೇ” ಎಂದು ಅವರು ವ್ಯಂಗ್ಯವಾಡಿದ್ದಾರೆ.

ಬಿಹಾರ| ಕುಡುಕನನ್ನು ಬಂಧಿಸಲು ತೆರಳಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಗ್ರಾಮಸ್ಥರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...