Homeಮುಖಪುಟಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

'ನಾನು ಬಂಗಾಳದ ಮಗಳು. 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ'

- Advertisement -
- Advertisement -

ಚುನಾವಣಾ ಆಯೋಗ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ದಿನಾಂಕಗಳನ್ನು  ಘೋಷಿಸಿದ ಬೆನ್ನಲ್ಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಬಂಗಾಳದಲ್ಲಿ ಎಂಟು ಹಂತದ ಮತದಾನವು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಯ “ಪಿತೂರಿಯ” ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ’ಬಿಜೆಪಿ ಪಕ್ಷದ ಮೂಲಗಳಿಂದ, ಅವರು ಬಯಸಿದ ಮತದಾನ ದಿನಾಂಕಗಳ ಪಟ್ಟಿಯನ್ನು ನಾನು ನೋಡಿದ್ದೇನೆ. ಈಗ ಚುನಾವಣಾ ಆಯೋಗದ ಪಟ್ಟಿಯನ್ನು ನೋಡಿದ್ದೇನೆ. ಎರಡು ಒಂದೇ ಆಗಿವೆ. ನನಗೆ ಆಘಾತವಾಗಿದೆ’ ಎಂದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಾರಂಭವಾಗಲಿದೆ. ಆದರೆ ಸುದೀರ್ಘ 8 ಹಂತಗಳಲ್ಲಿ ಮತದಾನ ನಡೆಯಲಿದೆ. ಇಲ್ಲಿಗೆ ಸುಮಾರು 33 ದಿನಗಳ ನಂತರ ಮೇ 2ಕ್ಕೆ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಇದರಿಂದ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾನು ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿ. ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ತದನಂತರ ಮೋದಿ ಮತ್ತು ಶಾ ನೀವು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಬಲ ಹೋರಾಟವನ್ನು ವೀಕ್ಷಿಸುತ್ತೀರಿ. ನಾವು ಅದರಲ್ಲೂ ಹೋರಾಡುತ್ತೇವೆ’ ಎಂದಿದ್ದಾರೆ.

ಬಂಗಾಳದಲ್ಲಿ 2016 ರ ರಾಜ್ಯ ಚುನಾವಣೆಯಲ್ಲಿ ಮತ್ತು 2019 ರ ರಾಷ್ಟ್ರೀಯ ಚುನಾವಣೆಯಲ್ಲಿ ಏಳು ಹಂತಗಳಲ್ಲಿ ಮತದಾನ ನಡೆದಿದೆ. ಸಂಭವನೀಯ ಹಿಂಸಾಚಾರದ ಆತಂಕ ಹೆಚ್ಚಿನ ಮತದಾನದ ಹಂತಗಳಿಗೆ ಕಾರಣ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಮತಾ ಬ್ಯಾನರ್ಜಿ ಮತದಾನದ ವೇಳಾಪಟ್ಟಿಯನ್ನು ಬಿಜೆಪಿ ನಿರ್ದೇಶಿಸುತ್ತಿದೆ ಎಂದು ಆರೋಪಿಸಿದ್ದಾರೆ. “ಒಂದೇ ದಿನದಲ್ಲಿ ಸರಿಸಮ ಒಂದೇ ಸಂಖ್ಯೆಯ ಕ್ಷೇತ್ರಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದೇ ದಿನದಲ್ಲಿ ಮತದಾನ ನಡೆಯುತ್ತಿದೆ. ಆದರೆ ಬಂಗಾಳಕ್ಕೆ ಮಾತ್ರ 8 ಹಂತಗಳ ಮತದಾನ ನೀಡಿ ಏಕೆ ಅವಮಾನಿಸಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ಚುನಾವಣೆ ಮುಗಿದ ಬಳಿಕ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ ಸಮಯವಿದೆಯೇ ಎಂದು ನೋಡಿಕೊಂಡು ರಾಜ್ಯದ ಜಿಲ್ಲೆಗಳಲ್ಲಿ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ನಾನು ಬಂಗಾಳದ ಮಗಳು. ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ. ಬಂಗಾಳದ ಜನರು ಬಂಗಾಳವನ್ನು ಆಳುತ್ತಾರೆ. ಬಂಗಾಳದ ಜನರು ಎಂಟು ಹಂತದ ಮತದಾನದ ಅವಮಾನಕ್ಕೆ ಪ್ರತೀಕಾರ ತೀರಿಸುತ್ತಾರೆ “ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ (ಫೆ.26) ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ, ಅಸ್ಸಾಂನಲ್ಲಿ 3 ಹಂತದಲ್ಲಿ ಮತ್ತು ಕೇರಳ, ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ಒಂದೇ ದಿನ ಮತದಾನ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...