Homeಮುಖಪುಟಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

ಬಂಗಾಳದಲ್ಲಿ 8 ಹಂತದ ಚುನಾವಣೆ: ಮೋದಿ, ಶಾ ತಂತ್ರ ಎಂದು ಮಮತಾ ಬ್ಯಾನರ್ಜಿ ಆಕ್ರೋಶ

'ನಾನು ಬಂಗಾಳದ ಮಗಳು. 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ'

- Advertisement -
- Advertisement -

ಚುನಾವಣಾ ಆಯೋಗ ನಾಲ್ಕು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಚುನಾವಣಾ ದಿನಾಂಕಗಳನ್ನು  ಘೋಷಿಸಿದ ಬೆನ್ನಲ್ಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಬಂಗಾಳದಲ್ಲಿ ಎಂಟು ಹಂತದ ಮತದಾನವು ಕೇಂದ್ರ ಸರ್ಕಾರದ ಆಡಳಿತರೂಢ ಬಿಜೆಪಿಯ “ಪಿತೂರಿಯ” ಭಾಗವಾಗಿದೆ ಎಂದು ಆರೋಪಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ಮೇರೆಗೆ ಈ ತೀರ್ಮಾನ ಕೈಗೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ’ಬಿಜೆಪಿ ಪಕ್ಷದ ಮೂಲಗಳಿಂದ, ಅವರು ಬಯಸಿದ ಮತದಾನ ದಿನಾಂಕಗಳ ಪಟ್ಟಿಯನ್ನು ನಾನು ನೋಡಿದ್ದೇನೆ. ಈಗ ಚುನಾವಣಾ ಆಯೋಗದ ಪಟ್ಟಿಯನ್ನು ನೋಡಿದ್ದೇನೆ. ಎರಡು ಒಂದೇ ಆಗಿವೆ. ನನಗೆ ಆಘಾತವಾಗಿದೆ’ ಎಂದಿದ್ದಾರೆ.

ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮತದಾನ ಪ್ರಾರಂಭವಾಗಲಿದೆ. ಆದರೆ ಸುದೀರ್ಘ 8 ಹಂತಗಳಲ್ಲಿ ಮತದಾನ ನಡೆಯಲಿದೆ. ಇಲ್ಲಿಗೆ ಸುಮಾರು 33 ದಿನಗಳ ನಂತರ ಮೇ 2ಕ್ಕೆ ಫಲಿತಾಂಶ ಹೊರಬೀಳಲಿದೆ.

ಇದನ್ನೂ ಓದಿ: ಪ.ಬಂಗಾಳ, ಕೇರಳ, ಅಸ್ಸಾಂ, ತ.ನಾಡು, ಪುದುಚೇರಿ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಇದರಿಂದ ಆಕ್ರೋಶಗೊಂಡಿರುವ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, “ನಾನು ದೇಶದ ಏಕೈಕ ಮಹಿಳಾ ಮುಖ್ಯಮಂತ್ರಿ. ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ತದನಂತರ ಮೋದಿ ಮತ್ತು ಶಾ ನೀವು 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಬಲ ಹೋರಾಟವನ್ನು ವೀಕ್ಷಿಸುತ್ತೀರಿ. ನಾವು ಅದರಲ್ಲೂ ಹೋರಾಡುತ್ತೇವೆ’ ಎಂದಿದ್ದಾರೆ.

ಬಂಗಾಳದಲ್ಲಿ 2016 ರ ರಾಜ್ಯ ಚುನಾವಣೆಯಲ್ಲಿ ಮತ್ತು 2019 ರ ರಾಷ್ಟ್ರೀಯ ಚುನಾವಣೆಯಲ್ಲಿ ಏಳು ಹಂತಗಳಲ್ಲಿ ಮತದಾನ ನಡೆದಿದೆ. ಸಂಭವನೀಯ ಹಿಂಸಾಚಾರದ ಆತಂಕ ಹೆಚ್ಚಿನ ಮತದಾನದ ಹಂತಗಳಿಗೆ ಕಾರಣ ಎಂದು ಚುನಾವಣಾ ಆಯೋಗ ತಿಳಿಸಿದೆ.

ಮಮತಾ ಬ್ಯಾನರ್ಜಿ ಮತದಾನದ ವೇಳಾಪಟ್ಟಿಯನ್ನು ಬಿಜೆಪಿ ನಿರ್ದೇಶಿಸುತ್ತಿದೆ ಎಂದು ಆರೋಪಿಸಿದ್ದಾರೆ. “ಒಂದೇ ದಿನದಲ್ಲಿ ಸರಿಸಮ ಒಂದೇ ಸಂಖ್ಯೆಯ ಕ್ಷೇತ್ರಗಳನ್ನು ಹೊಂದಿರುವ ರಾಜ್ಯಗಳಲ್ಲಿ ಒಂದೇ ದಿನದಲ್ಲಿ ಮತದಾನ ನಡೆಯುತ್ತಿದೆ. ಆದರೆ ಬಂಗಾಳಕ್ಕೆ ಮಾತ್ರ 8 ಹಂತಗಳ ಮತದಾನ ನೀಡಿ ಏಕೆ ಅವಮಾನಿಸಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳ ಚುನಾವಣೆ: ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಟಿಎಂಸಿ ಸೇರಿದ ಕ್ರಿಕೆಟಿಗ ಮನೋಜ್ ತಿವಾರಿ

ಅಸ್ಸಾಂ, ತಮಿಳುನಾಡು, ಕೇರಳ ಹಾಗೂ ಪುದುಚೇರಿ ಚುನಾವಣೆ ಮುಗಿದ ಬಳಿಕ ಬಂಗಾಳದಲ್ಲಿ ಚುನಾವಣಾ ಪ್ರಚಾರ ನಡೆಸಲು ಮೋದಿ ಮತ್ತು ಶಾ ಅವರಿಗೆ ಸಮಯವಿದೆಯೇ ಎಂದು ನೋಡಿಕೊಂಡು ರಾಜ್ಯದ ಜಿಲ್ಲೆಗಳಲ್ಲಿ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಆರೋಪಿಸಿದ್ದಾರೆ.

“ನಾನು ಬಂಗಾಳದ ಮಗಳು. ನಾನು 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ನನಗೆ ಪ್ರತಿ ಜಿಲ್ಲೆ, ಪ್ರತಿ ವಿಧಾನಸಭೆ ಸ್ಥಾನ ತಿಳಿದಿದೆ. ನೀವು ಏನೇ ಮಾಡಿದರೂ ನಾನು ನಿಮ್ಮ ಪಿತೂರಿಯನ್ನು ಒಡೆಯುತ್ತೇನೆ. ಬಂಗಾಳದ ಜನರು ಬಂಗಾಳವನ್ನು ಆಳುತ್ತಾರೆ. ಬಂಗಾಳದ ಜನರು ಎಂಟು ಹಂತದ ಮತದಾನದ ಅವಮಾನಕ್ಕೆ ಪ್ರತೀಕಾರ ತೀರಿಸುತ್ತಾರೆ “ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಹಾಗೂ ಪುದುಚೇರಿ ವಿಧಾನಸಭೆಗೆ ಚುನಾವಣಾ ವೇಳಾಪಟ್ಟಿಯನ್ನು ಶುಕ್ರವಾರ (ಫೆ.26) ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಪಶ್ಚಿಮ ಬಂಗಾಳದಲ್ಲಿ 8 ಹಂತದಲ್ಲಿ, ಅಸ್ಸಾಂನಲ್ಲಿ 3 ಹಂತದಲ್ಲಿ ಮತ್ತು ಕೇರಳ, ತಮಿಳುನಾಡು ಹಾಗೂ ಪುದುಚೇರಿಗಳಲ್ಲಿ ಒಂದೇ ದಿನ ಮತದಾನ ನಡೆಸಲು ನಿರ್ಧರಿಸಲಾಗಿದೆ.


ಇದನ್ನೂ ಓದಿ: ’ಪ್ರಧಾನಿ ಒಬ್ಬ ದಂಗಾಬಾಜ್ ಮತ್ತು ರಾಕ್ಷಸ’: ಬಿಜೆಪಿ ವಿರುದ್ಧ ಗುಡುಗಿದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...