Homeಕರ್ನಾಟಕಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

’ಕೇವಲ ಒಂದು ಸಿನೆಮಾಗೆ ತೆರಿಗೆ ವಿನಾಯಿತಿ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು’

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ನಟ, ನಿರ್ಮಾಪಕ ರಕ್ಷಿತ್‌ ಶೆಟ್ಟಿ ಅವರ ಚಾರ್ಲಿ 777 ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ, ಭಾವುಕರಾಗಿದ್ದರು. ಇದಾದ ಬಳಿಕ ಈ ಸಿನಿಮಾಗೆ ಶೇಕಡಾ 100 ರಷ್ಟು ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, “ಕನ್ನಡ ನೆಲದಲ್ಲಿ ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಎಲ್ಲಾ ಸಿನಿಮಾಗಳಿಗೂ ಹಿಂದೆ ಇದ್ದಂತೆ ತೆರಿಗೆ ವಿನಾಯಿತಿ ನೀಡಿ” ಎಂದು ಆಗ್ರಹಿಸಿದ್ದಾರೆ.

ನಿರ್ದೇಶಕ ಮಂಸೋರೆ ಅವರ ಪತ್ರದ ವಿವರ ಹೀಗಿದೆ.

“ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ. ತಾವು ಕನ್ನಡ ಸಿನೆಮಾ, ಚಾರ್ಲಿ 777 ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ”.

“ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ..? ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ..? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ..?”

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

“ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ ೧೦೦% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ..?”

“ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ”.

“ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾಹರಣೆಗೆ ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ 100% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ”.

“ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್‌ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದಿದ್ದಾರೆ.

ಪತ್ರದ ಜೊತೆಗೆ ಚಾರ್ಲಿ 777 ಸಿನಿಮಾಗೆ ನೀಡಿರುವ ತೆರಿಗೆ ವಿನಾಯಿತಿಯ ಆದೇಶ ಪತ್ರವನ್ನು ಮಂಸೋರೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...