Homeಕರ್ನಾಟಕಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

’ಕೇವಲ ಒಂದು ಸಿನೆಮಾಗೆ ತೆರಿಗೆ ವಿನಾಯಿತಿ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು’

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ನಟ, ನಿರ್ಮಾಪಕ ರಕ್ಷಿತ್‌ ಶೆಟ್ಟಿ ಅವರ ಚಾರ್ಲಿ 777 ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ, ಭಾವುಕರಾಗಿದ್ದರು. ಇದಾದ ಬಳಿಕ ಈ ಸಿನಿಮಾಗೆ ಶೇಕಡಾ 100 ರಷ್ಟು ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, “ಕನ್ನಡ ನೆಲದಲ್ಲಿ ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಎಲ್ಲಾ ಸಿನಿಮಾಗಳಿಗೂ ಹಿಂದೆ ಇದ್ದಂತೆ ತೆರಿಗೆ ವಿನಾಯಿತಿ ನೀಡಿ” ಎಂದು ಆಗ್ರಹಿಸಿದ್ದಾರೆ.

ನಿರ್ದೇಶಕ ಮಂಸೋರೆ ಅವರ ಪತ್ರದ ವಿವರ ಹೀಗಿದೆ.

“ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ. ತಾವು ಕನ್ನಡ ಸಿನೆಮಾ, ಚಾರ್ಲಿ 777 ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ”.

“ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ..? ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ..? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ..?”

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

“ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ ೧೦೦% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ..?”

“ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ”.

“ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾಹರಣೆಗೆ ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ 100% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ”.

“ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್‌ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದಿದ್ದಾರೆ.

ಪತ್ರದ ಜೊತೆಗೆ ಚಾರ್ಲಿ 777 ಸಿನಿಮಾಗೆ ನೀಡಿರುವ ತೆರಿಗೆ ವಿನಾಯಿತಿಯ ಆದೇಶ ಪತ್ರವನ್ನು ಮಂಸೋರೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...