Homeಕರ್ನಾಟಕಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

ಹಿಂದೆ ಇದ್ದಂತೆ ಎಲ್ಲ ಕನ್ನಡ ಸಿನಿಮಾಗಳಿಗೂ ತೆರಿಗೆ ವಿನಾಯಿತಿ ನೀಡಿ: ಸಿಎಂಗೆ ನಿರ್ದೇಶಕ ಮಂಸೋರೆ ಆಗ್ರಹ

’ಕೇವಲ ಒಂದು ಸಿನೆಮಾಗೆ ತೆರಿಗೆ ವಿನಾಯಿತಿ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು’

- Advertisement -
- Advertisement -

ಇತ್ತೀಚೆಗೆ ಬಿಡುಗಡೆಯಾದ ನಟ, ನಿರ್ಮಾಪಕ ರಕ್ಷಿತ್‌ ಶೆಟ್ಟಿ ಅವರ ಚಾರ್ಲಿ 777 ಸಿನಿಮಾವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಕ್ಷಿಸಿ, ಭಾವುಕರಾಗಿದ್ದರು. ಇದಾದ ಬಳಿಕ ಈ ಸಿನಿಮಾಗೆ ಶೇಕಡಾ 100 ರಷ್ಟು ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಮಂಸೋರೆ, “ಕನ್ನಡ ನೆಲದಲ್ಲಿ ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಎಲ್ಲಾ ಸಿನಿಮಾಗಳಿಗೂ ಹಿಂದೆ ಇದ್ದಂತೆ ತೆರಿಗೆ ವಿನಾಯಿತಿ ನೀಡಿ” ಎಂದು ಆಗ್ರಹಿಸಿದ್ದಾರೆ.

ನಿರ್ದೇಶಕ ಮಂಸೋರೆ ಅವರ ಪತ್ರದ ವಿವರ ಹೀಗಿದೆ.

“ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರಿಗೆ ನಮಸ್ಕಾರ. ತಾವು ಕನ್ನಡ ಸಿನೆಮಾ, ಚಾರ್ಲಿ 777 ಗೆ ನಿರ್ಮಾಪಕರ ಕೋರಿಕೆಯ ಮೇರೆಗೆ ಸದರಿ ಸಿನೆಮಾಗೆ 100% ಜಿಎಸ್‌ಟಿ ಇಂದ ವಿನಾಯಿತಿ ಕೊಟ್ಟಿರುವುದು ತುಂಬಾ ಸಂತೋಷದ ವಿಷಯ. ಕನ್ನಡ ಸಿನೆಮಾಗಳ ಏಳಿಗೆಗೆ ಇದು ಅತ್ಯವಶ್ಯಕ. ಜೊತೆಗೆ ಈ ಹಿಂದೆ ಯಾವುದೋ ಅನ್ಯ ಭಾಷೆಯ ಸಿನೆಮಾಗು ತಾವು 100% ಜಿಎಸ್‌ಟಿ ತೆರಿಗೆ ವಿನಾಯಿತಿ ಕೊಟ್ಟಿದ್ದೀರಿ ಎಂದು ಯಾವುದೋ ಸುದ್ದಿ ಪತ್ರಿಕೆಯಲ್ಲಿ ಓದಿದ ನೆನಪು. ಈಗ ಈ ಪತ್ರವನ್ನು ತಮಗೆ ಬರೆಯುತ್ತಿರುವುದರ ಕಾರಣವನ್ನು ಮೊದಲಿಗೆ ತಮಗೆ ವಿವರಿಸುತ್ತೇನೆ”.

“ತಾವು ಮುಖ್ಯಮಂತ್ರಿ ಆಗುವ ಮೊದಲು, ತಮ್ಮ ಬಿಜೆಪಿ ಸರ್ಕಾರ ಬರುವ ಮೊದಲು ಕನ್ನಡದ ಸಿನೆಮಾಗಳಿಗೆ ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ (ಹೊರ ರಾಜ್ಯದಲ್ಲಿ ಚಿತ್ರೀಕರಣವಾಗುವುದಾದರೆ ಅದಕ್ಕೆ ಸೂಕ್ತ ಕಾರಣ ಕೊಡಬೇಕಿತ್ತು) ಎಲ್ಲಾ ಕನ್ನಡ ಸಿನೆಮಾಗಳಿಗೆ 100% ತೆರಿಗೆ ವಿನಾಯಿತಿ ಇತ್ತು ಎಂಬ ವಿಷಯ ತಮಗೆ ಗೊತ್ತಿತ್ತೇ..? ಕನ್ನಡದ ಸಿನೆಮಾಗಳಿಗೆ ಇದ್ದ ಈ ವಿನಾಯಿತಿಯನ್ನು ಕನ್ನಡಿಗರ ಕೈಯಿಂದ (ಕನ್ನಡದ ನಿರ್ಮಾಪಕರ ಹೊಟ್ಟೆ ಮೇಲೆ ಹೊಡೆದು ಕಿತ್ತುಕೊಂಡಿದ್ದು) ನಿಮ್ಮದೇ ಆದ ಬಿಜೆಪಿ ಸರ್ಕಾರ ಎಂಬುದು ನಿಮಗೆ ತಿಳಿದಿದೆಯೇ..? ಅದು ಜಿಎಸ್‌ಟಿ ಎಂಬ ಹೆಮ್ಮಾರಿಯ ಹೆಸರಲ್ಲಿ ಎಂಬುದು ತಮಗೆ ತಿಳಿದಿದೆಯೇ..?”

ಇದನ್ನೂ ಓದಿ: ಪೊಲೀಸ್ ವ್ಯವಸ್ಥೆಯ ವಾಸ್ತವಗಳತ್ತ ತಮಿಳು, ಮಲಯಾಳಂ ಚಿತ್ರರಂಗ

“ಈ ಹಿಂದೆ ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ರಾಮಕೃಷ್ಣ ಹೆಗಡೆ ಅವರು ಕನ್ನಡ ಸಿನೆಮಾಗಳ ಮೇಲೆ ಮನರಂಜನಾ ತೆರಿಗೆ ವಿಧಿಸಲು ಹೋದಾಗ, ನಮ್ಮೆಲ್ಲರ ಪಾಲಿನ ಅಣ್ಣಾವ್ರು, ಡಾ. ರಾಜ್‌ಕುಮಾರ್ ಅವರು ಕನ್ನಡ ಚಿತ್ರರಂಗವನ್ನೇ ತ್ಯಜಿಸಿ ತಮ್ಮ ಹಳ್ಳಿಗೆ ಹೋಗುವ ನಿರ್ಧಾರ ಮಾಡುತ್ತಾರೆ, ಆಗ ಮುಖ್ಯಮಂತ್ರಿಗಳೇ ಅಣ್ಣಾವ್ರ ಮನೆಗೆ ಹೋಗಿ ಅವರ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಅವರ ಮನವೊಲಿಸಿ ಅವರು ತಮ್ಮ ನಿರ್ಧಾರವನ್ನು ಹಿಂತೆಗೆದುಕೊಳ್ಳುವಂತೆ ಒಪ್ಪಿಸುತ್ತಾರೆ ಹಾಗು ತೆರಿಗೆ ವಿಧಿಸುವ ತಮ್ಮ ನಿಲುವನ್ನು ಹಿಂತೆಗೆದುಕೊಳ್ಳುತ್ತಾರೆ. (ಹಿರಿಯ ಪತ್ರಕರ್ತರಾದ ಬಿ.ವಿ.ವೈಕುಂಠರಾಜು ರವರ ಸಿನೆಮಾತು ಪುಸ್ತಕದಲ್ಲಿ ಇದರ ಬಗ್ಗೆ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ) ಅದೇ ಮುಂದೆ ಕನ್ನಡ ಹಾಗೂ ಕನ್ನಡ ನೆಲದಲ್ಲಿ ತಯಾರಾಗುವ ಎಲ್ಲಾ ಸಿನೆಮಾಗಳಿಗೂ ೧೦೦% ತೆರಿಗೆ ವಿನಾಯಿತಿ ನೀಡಲಾಗುವ ನಿರ್ಧಾರ ಕೈಗೊಳ್ಳಲಾಗುತ್ತದೆ. ಅಂತಹ ಮಹಾನುಭಾವರ ನಿರ್ಧಾರದಿಂದ ಕನ್ನಡ ಚಿತ್ರರಂಗಕ್ಕೆ ಸಿಕ್ಕಿದ್ದ ಸೌಲಭ್ಯವನ್ನು ಕಿತ್ತುಕೊಂಡಿದ್ದು ಜಿಎಸ್‌ಟಿ ನೆಪದಲ್ಲಿ ನಿಮ್ಮದೇ ಬಿಜೆಪಿ ಸರ್ಕಾರ ಎಂಬುದು ತಮಗೆ ತಿಳಿದಿದೆಯೇ..?”

“ಈಗ ವಾಪಸ್ಸು ನಿಮ್ಮ ಆಡಳಿತದ ಸರ್ಕಾರದ ವಿಷಯಕ್ಕೆ ಬರುವುದಾದರೆ, ಶ್ವಾನದ ಕಾಳಜಿಯಿಂದ ತಾವು ಆ ‘ಒಂದು’ ಕನ್ನಡ ಸಿನೆಮಾಗೆ ಮಾತ್ರ 100% ಜಿಎಸ್‌ಟಿ ತೆರಿಗೆ ವಿನಾಯಿತಿ ನೀಡಲು ಆ ಹಣವನ್ನು ತಾವು ತಮ್ಮ ಜೇಬಿನಿಂದ ನೀಡುತ್ತಿದ್ದೀರ ಎಂದು ತಿಳಿಯಲು ಡಾ.ಬಿ.ಆರ್.ಅಂಬೇಡ್ಕರ್ ಸರ್ ಬರೆದಿರುವ, ಸಾಂವಿಧಾನಿಕ ಹಕ್ಕನ್ನು ಪಡೆದಿರುವ ಕರ್ನಾಟಕದ ಪ್ರಜೆಗಳಾಗಿ ಕೇಳಿತ್ತಿದ್ದೇನೆ, ದಯವಿಟ್ಟು ತಿಳಿಸಿ”.

“ಶ್ವಾನದಷ್ಟೇ ಅಮೂಲ್ಯವಾದ ಜೀವ ಪಡೆದಿರುವ ಮಾನವೀಯ, ಮನುಷ್ಯತ್ವದ ಅಂಶ ಎತ್ತಿ ಹಿಡಿಯುವ ನೂರಾರು ಕನ್ನಡ ಸಿನೆಮಾಗಳು ಪ್ರತೀ ವರ್ಷ ತಯಾರಾಗುತ್ತಿವೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಪ್ರದರ್ಶನವಾಗುತ್ತಿರುವ ಅನೇಕ ಕನ್ನಡ ಚಿತ್ರಗಳು ಕನ್ನಡ ನೆಲದಲ್ಲಿ ತಯಾರಾಗುತ್ತಿವೆ. ಉದಾಹರಣೆಗೆ ಪೆಡ್ರೋ, ಕೋಳಿತಾಲ್, ಡೊಳ್ಳು, ದಾರಿ ಯಾವುದಯ್ಯ ವೈಕುಂಟಕ್ಕೆ, ಅಮೃತಮತಿ, ನೀಲಿ ಹಕ್ಕಿ ಇನ್ನೂ ಬಹಳಷ್ಟು ಸಿನೆಮಾ ಇದೆ. ಜೊತೆಗೆ ಅಂತರ್ರಾಷ್ಟ್ರೀಯ ಚಿತ್ರೋತ್ಸವಕ್ಕೆ ಹೋಗದಿದ್ದರೂ ಸಹ, ಅನೇಕ ಕನ್ನಡ ಸಿನೆಮಾಗಳು ಅತ್ತ್ಯುತ್ತಮವಾದ ಮಾನವೀಯ ಗುಣವುಳ್ಳ ಸಿನೆಮಾಗಳು ಕಳೆದ ನಾಲ್ಲೈದು ವರ್ಷಗಳಲ್ಲೇ ಸಾಕಷ್ಟಿವೆ, ಅದು ಯಾವುದಕ್ಕೂ ನೀಡದ 100% ತೆರಿಗೆ ವಿನಾಯಿತಿ ಕೇವಲ ಒಂದು ಸಿನೆಮಾಗೆ ನೀಡುವುದು ನಮ್ಮೆಲ್ಲರ ಮೆಚ್ಚಿನ ಅಣ್ಣಾವ್ರ ಆಶಯಕ್ಕೆ ತದ್ವಿರುದ್ಧವಾದದ್ದು ಎಂದು ತಮಗೆ ಮನವರಿಕೆ ಮಾಡಲು ಇಚ್ಚಿಸುತ್ತೇನೆ”.

“ಚಾರ್ಲಿ ಸಿನೆಮಾದ ನಿರ್ಮಾಪಕರೂ ಸೇರಿದಂತೆ ಕನ್ನಡದ ಯಾರೊಬ್ಬ ನಿರ್ಮಾಪಕರು ಅಣ್ಣಾವ್ರ ಆಶಯ ಮೀರಿ, ಕನ್ನಡ ಚಿತ್ರರಂಗವನ್ನು ಹೊರಗಿಟ್ಟು, ಸ್ವಾರ್ಥಿಗಳಂತೆ ತಮ್ಮ ಸಿನೆಮಾಗೆ ಮಾತ್ರ 100% ತೆರಿಗೆ ವಿನಾಯಿತಿ ಕೊಡಬೇಕೆಂದು ಹಂಬಲಿಸಲಾರರು, ತಮ್ಮಲ್ಲಿ ಬೇಡಿಕೊಳ್ಳಲಾರರು ಎಂದು ನನ್ನ ಬಲವಾದ ನಂಬಿಕೆ. ಇದು ಕನ್ನಡ ಚಿತ್ರರಂಗದ ಏಳಿಗೆಗಾಗಿ ಶ್ರಮಿಸುತ್ತಿರುವ ಪ್ರತಿಯೊಬ್ಬ ನಿರ್ಮಾಪಕರ, ತಂತ್ರಜ್ಞ, ಶ್ರಮಿಕ ಹಾಗೂ ಕಲಾವಿದರ ಅನ್ನದ ಪ್ರಶ್ನೆಯಾಗಿರುವುದರಿಂದ ಹಾಗೂ ನಮ್ಮ ನೆಚ್ಚಿನ ಅಣ್ಣಾವ್ರು ಡಾ. ರಾಜ್‌ಕುಮಾರ್ ಅವರ ಆಶಯವೂ ಆಗಿರುವ ಕಾರಣದಿಂದಾಗಿ ಕನ್ನಡದ, ಕನ್ನಡದ ನೆಲದಲ್ಲೇ ಸಂಪೂರ್ಣವಾಗಿ ತಯಾರಾಗುವ ಪ್ರತೀ ಸಿನೆಮಾಗೂ ಈ ಹಿಂದೆ ಇದ್ದಂತೆ ಸಂಪೂರ್ಣ ತೆರಿಗೆ ವಿನಾಯಿತಿ ನೀಡುತ್ತೀರಾ ಎಂಬ ನಂಬಿಕೆಯಿಂದ ಈ ಪತ್ರ ಬರೆಯುತ್ತಿದ್ದೇನೆ” ಎಂದಿದ್ದಾರೆ.

ಪತ್ರದ ಜೊತೆಗೆ ಚಾರ್ಲಿ 777 ಸಿನಿಮಾಗೆ ನೀಡಿರುವ ತೆರಿಗೆ ವಿನಾಯಿತಿಯ ಆದೇಶ ಪತ್ರವನ್ನು ಮಂಸೋರೆ ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ‘ಚಾರ್ಲಿ 777’ ಭಾವುಕತೆಯಾಚೆಗೆ ತೆರೆದುಕೊಳ್ಳದ ಸರಳರೇಖೆಯ ಸಿನಿಮಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....