Homeಕರ್ನಾಟಕಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಸಂವಿಧಾನದ ಆರ್ಟಿಕಲ್ 25, ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ.

- Advertisement -
- Advertisement -

ಕಳೆದೆರಡು ತಿಂಗಳಿನಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿರುವ ರಾಜ್ಯದ ವಿಷಯ ಹಿಜಾಬ್. ನ್ಯಾಯಾಲಯದಲ್ಲಿ ಹಿಜಾಬ್ ಪರ-ವಿರೋಧ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ನ್ಯಾಯಾಲಯದ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಬಹುತೇಕ ಕಾಲೇಜುಗಳು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಪಟ್ಟು ಹಿಡಿದಿವೆ. ಇದರ ಜೊತೆಗೆ ಹೊಸ ಸೇರ್ಪಡೆಯಾಗಿ ಟರ್ಬನ್ ಧರಿಸುವ ವಿದ್ಯಾರ್ಥಿನಿಯರ ಮೇಲೂ ಒತ್ತಡ ಉಂಟಾಗಿದೆ.

ಹೌದು, ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿ ಸಿಖ್ ವಿದ್ಯಾರ್ಥಿನಿಯೊಬ್ಬರಿಗೆ ಟರ್ಬನ್ ತೆಗೆದು ಬರುವುದಾದರೆ ಮಾತ್ರ ತರಗತಿಗೆ ಪ್ರವೇಶ ಎಂದು ನಿರ್ದೇಶಿಸಿದ್ದಾರೆ. ಫೆಬ್ರವರಿ 10ರ ಹೈಕೋರ್ಟ್ ಮಧ್ಯಂತರ ಆದೇಶದ ಮೇರೆಗೆ 17 ವರ್ಷದ ಅಮೃತ್‌ಧಾರಿ (ದೀಕ್ಷಾಸ್ನಾನ ಪಡೆದ) ಸಿಖ್ ವಿದ್ಯಾರ್ಥಿನಿಗೆ ಟರ್ಬನ್‌ ತೆಗೆಯಬೇಕು ಎಂದು ಆದೇಶಿಸಲಾಗಿದೆ.

ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯು ಆಗಿರುವ ವಿದ್ಯಾರ್ಥಿನಿಗೆ ಫೆಬ್ರವರಿ 16 ರಂದು ಮೊದಲ ಬಾರಿಗೆ ತನ್ನ ಟರ್ಬನ್‌ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಆದರೆ, ಆಕೆ ನಿರಾಕರಿಸಿ, ತನ್ನ ತಂದೆಗೆ ಈ ವಿಷಯ ತಿಳಿಸಿದ್ದಾರೆ. ಕಾಲೇಜು ಆಡಳಿತ ಆಕೆಯ ತಂದೆಯೊಂದಿಗೆ ಮಾತನಾಡಿ, ತಮಗೆ ಸಿಖ್‌ ಟರ್ಬನ್‌ನ ಪ್ರಾಮುಖ್ಯತೆ ತಿಳಿದಿದೆ. ಆದರೆ, ತಾವು ಹೈಕೋರ್ಟ್ ಆದೇಶಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

 ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಸೋಮವಾರ ಕಾಲೇಜಿನಲ್ಲಿ ನಡೆದ ಪ್ರಾಯೋಗಿಕ ಪರೀಕ್ಷೆ ವೇಳೆ ಕಾಲೇಜಿನಲ್ಲಿ ಪರಿಶೀಲನೆ ನಡೆಸುತ್ತಿದ್ದ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಶ್ರೀರಾಮ್ ಅವರು ನ್ಯಾಯಾಲಯದ ಆದೇಶದಂತೆ ಇಬ್ಬರು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಸೂಚಿಸಿದ್ದರಿಂದ ಈ ಸಮಸ್ಯೆ ಆರಂಭವಾಗಿದೆ. ಯಾವುದೇ ವಿದ್ಯಾರ್ಥಿನಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದರೇ, ಸಿಖ್ ವಿದ್ಯಾರ್ಥಿನಿಯರಿಗೂ ಟರ್ಬನ್ ಧರಿಸಲು ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಕಾಲೇಜು ಆಡಳಿತಮಂಡಳಿ ಸಿಖ್ ವಿದ್ಯಾರ್ಥಿನಿ ಟರ್ಬನ್ ತೆಗೆಯುವಂತೆ ತಿಳಿಸಿ, ಆಕೆಯ ತಂದೆಗೆ ಈ ಬಗ್ಗೆ ಇ-ಮೇಲ್ ಮಾಡಿದ್ದಾರೆ.

ಈ ಕುರಿತು ವಿದ್ಯಾರ್ಥಿನಿ ತಂದೆ ಗುರುಚರಣ್ ಸಿಂಗ್, ಗುರುಸಿಂಗ್ ಸಭಾಗೆ ಪತ್ರ ಬರೆದಿದ್ದಾರೆ. ಕಳೆದ 17 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅಮೃತ್‌ಧಾರಿ ಸಿಖ್‌ ಆಗಿರುವ ನನ್ನ ಮತ್ತು ನನ್ನ ಕುಟುಂಬಕ್ಕೆ ಎಂದಿಗೂ ತೊಂದರೆಯಾಗಿಲ್ಲ. ನನಗೆ ಮೂವರು ಹೆಣ್ಣು ಮತ್ತು ಒಬ್ಬ ಗಂಡು ಮಗನಿದ್ದಾನೆ. ನನ್ನ ಎಲ್ಲಾ ಹೆಣ್ಣು ಮಕ್ಕಳು ಕೇಂದ್ರಿಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದಾರೆ. ಹೆಮ್ಮೆಯಿಂದ ಶಾಲೆಯಲ್ಲಿ ಈ ಐದು ಕಕ್ಕರ್‌ಗಳನ್ನು ( Uncut Hair and Keski(Dastaar), Kanga, Kara, Kirpaan and Kachera) ಧರಿಸಿದ್ದರು. 16 ವರ್ಷಗಳಿಂದ ಯಾರೂ ಇದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಮಕ್ಕಳು ಶಾಲೆಯಲ್ಲಿ ಸಿಖ್ ಮಾರ್ಷಲ್ ಆರ್ಟ್ ಮತ್ತು ಕೀರ್ತನ್ ಅನ್ನು ವಿಭಿನ್ನವಾಗಿ ಪ್ರದರ್ಶಿಸಿದ್ದಾರೆ. ನನ್ನ ಮಗಳು ತನ್ನ ಟರ್ಬನ್ ಜೊತೆಗೆ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಅಲ್ಲಿಯೂ ಹೆಲ್ಮೆಟ್ ಬಳಸಲಿಲ್ಲ. ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ, ಸಿಖ್ ಪುರುಷರು ಮತ್ತು ಮಹಿಳೆಯರು ದ್ವಿಚಕ್ರ ವಾಹನಗಳನ್ನು ಓಡಿಸುವಾಗ ಟರ್ಬನ್ ಧರಿಸುತ್ತಾರೆ. ಭಾರತೀಯ ಸೇನೆ ಮತ್ತು ಇತರ ದೇಶಗಳಲ್ಲಿ ಸಿಖ್ ಸೈನಿಕರು ಕ್ಯಾಪ್ ಅಥವಾ ಹೆಲ್ಮೆಟ್ ಬದಲಿಗೆ ಟರ್ಬನ್ ಧರಿಸುತ್ತಾರೆ. ಯುದ್ಧದ ನಡುವೆಯೂ ಸಹ ಹೆಲ್ಮೆಟ್ ಬದಲಿಗೆ ಟರ್ಬನ್  ಧರಿಸುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್ ಲೈವ್‌ | ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗಷ್ಟೆ ಅನ್ವಯ, ಶಿಕ್ಷಕರಿಗಲ್ಲ: ಮುಖ್ಯ ನ್ಯಾಯಮೂರ್ತಿ

“ಆದರೆ, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಇಂದು ನಡೆದ ಘಟನೆ ನಮ್ಮ ಕುಟುಂಬವನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗಳು, ಪಿಯು ಎರಡನೇ ವರ್ಷದ ವಿದ್ಯಾರ್ಥಿನಿ ಮತ್ತು ಕಾಲೇಜಿನ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಅಮಿತೇಶ್ವರ್ ಕೌರ್ ಅವರನ್ನು ಕಾಲೇಜು ಅಧಿಕಾರಿಗಳು ಕರೆದು ಟರ್ಬನ್ ತೆಗೆದು ನಂತರ ಕಾಲೇಜಿಗೆ ಬರಬಹುದೇ ಎಂದು ಕೇಳಿದ್ದಾರೆ. ಆದರೆ ಅಕೆ ಅಮೃತಧಾರಿ ಸಿಖ್ ಆಗಿರುವುದರಿಂದ ಅದನ್ನು ನಿರಾಕರಿಸಿದ್ದಾರೆ. ಸಿಖ್‌ ಸಮುದಾಯದವರಿಗೆ ಟರ್ಬನ್ ತೆಗೆಯಲು ಹೇಳುವುದು ಇಡೀ ಸಿಖ್ ಸಮುದಾಯಕ್ಕೆ ಮಾಡಿದ ದೊಡ್ಡ ಅವಮಾನ” ಎಂದಿದ್ದಾರೆ.

“ತಮ್ಮ ನಂಬಿಕೆಯ ಭಾಗವಾಗಿ ಸ್ಕಾರ್ಫ್ / ದುಪಟ್ಟಾದಿಂದ ತಲೆಯನ್ನು ಮುಚ್ಚಲು ಬಯಸುವ ಮುಸ್ಲಿಂ ಹುಡುಗಿಯರು/ಮಹಿಳೆಯರ ಪರವಾಗಿ ನಾವು ಸಹ ನಿಲ್ಲುತ್ತೇವೆ ಮತ್ತು ನಮ್ಮ ದೇಶದಲ್ಲಿ ಈಗಾಗಲೇ ಆಚರಣೆಯಲ್ಲಿರುವಂತೆ, ಇದರಿಂದ ಯಾರಿಗೂ ಯಾವುದೇ ತೊಂದರೆಯು ಆಗದ ಕಾರಣ, ಸ್ಕಾರ್ಫ್ ಮತ್ತು ಟರ್ಬನ್ ಬಣ್ಣವು ಸಂಸ್ಥೆಯ ಸಮವಸ್ತ್ರದೊಂದಿಗೆ ಹೊಂದಿಕೆಯಾಗುವವಂತಿದ್ದು ಅವರಿಗೆ ಧರಿಸಲು ಅವಕಾಶ ನೀಡುವಂತೆ ಅಧಿಕಾರಿಗಳನ್ನು ವಿನಂತಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಘಟನೆಯು ಒಂದೇ ಅಲ್ಲ. ವಿವಿಧ ಶಾಲೆಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ಮೆಟ್ರೋ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು ಇತ್ಯಾದಿಗಳಲ್ಲಿ ಹಲವಾರು ಬಾರಿ ಸಂಭವಿಸಿದೆ. ಅಲ್ಲಿ ಸಿಖ್ ವಿದ್ಯಾರ್ಥಿಗಳನ್ನು ತಮ್ಮ ದೇಹದ ಮೇಲೆ ಐದು ಕಕ್ಕರ್‌ಗಳನ್ನು ಧರಿಸಲು ಅನುಮತಿ ನೀಡದೆ ಅವಮಾನಿಸಲಾಗಿದೆ. ಈ ವಿದ್ಯಾರ್ಥಿಗಳು ಅನೇಕ ಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಪರ್ಧಿಸಲು ವಿಫಲರಾಗುತ್ತಾರೆ.  ಹೀಗಾಗಿ ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಪ್ರಮುಖ ಜಾಗೃತಿ ಸಮಸ್ಯೆ ಕಂಡುಬರುತ್ತಿದೆ. ಸಿಖ್ ಆಚರಣೆಗಳು, ಸಂಸ್ಕೃತಿ ಮತ್ತು ಐದು ಕಕ್ಕರ್‌ಗಳ ಪ್ರಾಮುಖ್ಯತೆಯ ಕುರಿತು ಸಂಬಂಧಿತ ಸರ್ಕಾರಿ ಅಧಿಕಾರಿಗಳಿಂದ ಈ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಬೇಕು. ಸಿಖ್ ರೆಹತ್ ಮರ್ಯಾದಾ ಮತ್ತು ಭಾರತದ ಸಂವಿಧಾನದ ಆರ್ಟಿಕಲ್ 25ರ ಪ್ರಕಾರ ಸಿಖ್ ಸಮುದಾಯವು ತಮ್ಮ ನಂಬಿಕೆಯನ್ನು ಮುಕ್ತವಾಗಿ ಅನುಸರಿಸಲು ಶ್ರೀ ಗುರು ಸಿಂಗ್ ಸಭಾ ಎಲ್ಲಾ ಸಂಸ್ಥೆಗಳಿಗೆ ಒಂದು ಸುತ್ತೋಲೆ ಕಳುಹಿಸುವ ಅಗತ್ಯವಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಇನ್ನು ಈ ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಲೇಖಕ ಅಮನ್‌ದೀಪ್ ಸಂಧು, “ಸದ್ಯದಲ್ಲಿ ಈ ಘಟನೆಯ ವಿಚಾರಣೆ ವೇಗ ಪಡೆಯಬೇಕು. ಪ್ರಕರಣ ಬೀದಿಗಿಳಿದೆರೆ ನಿಜಕ್ಕೂ ಕೆಟ್ಟ ಸ್ಥಿತಿ ಉಂಟಾಗುತ್ತದೆ. ಸಂವಿಧಾನದ ಆರ್ಟಿಕಲ್ 25 ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ. ಆದ್ದರಿಂದ ಇದು ಸಂವಿಧಾನದ ಉಲ್ಲಂಘನೆಯಗುತ್ತದೆ. ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾರಿಗೆ ಏನು ಬೇಕೊ ಅದನ್ನು ಧರಿಸಲು ನ್ಯಾಯಾಲಯ ಅನುಮತಿ ನೀಡಬೇಕು. ಶಿಕ್ಷಣ ಮುಖ್ಯವಾಗಬೇಕೆ ಹೊರತು ಅವರು ಧರಿಸು ಬಟ್ಟೆಯಲ್ಲ. ಮುಸ್ಲಿಂಮರು ಹಿಜಾಬ್, ಸಿಖ್ಖರು ಟರ್ಬನ್, ಹಿಂದೂಗಳು ಜನಿವಾರ, ಸಿಂಧೂರ ಧರಿಸುತ್ತಾರೆ. ನಾವು ಮನುಷ್ಯರು ನಾವು ಇರುವುದೇ ಹೀಗೆ…ಹೀಗಾಗಿ ಶಿಕ್ಷಣ ಮುಖ್ಯವಾಗಬೇಕು” ಎಂದಿದ್ದಾರೆ.

“ಇದಲ್ಲದೇ ಟರ್ಬನ್ ಧರಿಸುವ ಒಂದು ಕಾರಣಕ್ಕೆ ಮಂಗಳೂರಿನಲ್ಲಿ 7 ವರ್ಷದ ಸಿಖ್ ಮಗುವಿಗೆ ಶಾಲಾ ದಾಖಲಾತಿ ನಿರಾಕರಿಸಲಾಗಿದೆ. ಇಂತಹ ವಿಚಾರ ಬೀದಿಗೆ (ಪ್ರತಿಭಟನೆಗೆ) ಬಂದರೆ ಮಾತ್ರ ಪರಿಸ್ಥಿತಿ ಅತಿ ಕೆಟ್ಟದಾಗುತ್ತದೆ. ಐತಿಹಾಸಿಕ ರೈತ ಆಂದೋಲನ ಹಿಂದುತ್ವ ಸರ್ಕಾರವನ್ನು ಸೋಲಿಸಿದೆ. ಈಗ ಮತ್ತೆ ಈ ಘಟನೆ ಹಿಂದುತ್ವಕ್ಕೆ ಭಾರಿ ಪೆಟ್ಟು ನೀಡುತ್ತದೆ. ಇದು ಈಗಾಗಲೇ ದೊಡ್ಡ ವಿವಾದವಾಗಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚರಿ ಸೇರಿದಂತೆ ಹಲವೆಡೆ ಇಂತಹ ಘಟನೆಗಳು ನಡೆಯುತ್ತಿದೆ. ಇದು ಜನರನ್ನು ನೈಜ್ಯ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಯತ್ನ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...