Homeಕರ್ನಾಟಕಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಸಂವಿಧಾನದ ಆರ್ಟಿಕಲ್ 25, ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ.

- Advertisement -
- Advertisement -

ಕಳೆದೆರಡು ತಿಂಗಳಿನಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿರುವ ರಾಜ್ಯದ ವಿಷಯ ಹಿಜಾಬ್. ನ್ಯಾಯಾಲಯದಲ್ಲಿ ಹಿಜಾಬ್ ಪರ-ವಿರೋಧ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ನ್ಯಾಯಾಲಯದ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಬಹುತೇಕ ಕಾಲೇಜುಗಳು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಪಟ್ಟು ಹಿಡಿದಿವೆ. ಇದರ ಜೊತೆಗೆ ಹೊಸ ಸೇರ್ಪಡೆಯಾಗಿ ಟರ್ಬನ್ ಧರಿಸುವ ವಿದ್ಯಾರ್ಥಿನಿಯರ ಮೇಲೂ ಒತ್ತಡ ಉಂಟಾಗಿದೆ.

ಹೌದು, ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿ ಸಿಖ್ ವಿದ್ಯಾರ್ಥಿನಿಯೊಬ್ಬರಿಗೆ ಟರ್ಬನ್ ತೆಗೆದು ಬರುವುದಾದರೆ ಮಾತ್ರ ತರಗತಿಗೆ ಪ್ರವೇಶ ಎಂದು ನಿರ್ದೇಶಿಸಿದ್ದಾರೆ. ಫೆಬ್ರವರಿ 10ರ ಹೈಕೋರ್ಟ್ ಮಧ್ಯಂತರ ಆದೇಶದ ಮೇರೆಗೆ 17 ವರ್ಷದ ಅಮೃತ್‌ಧಾರಿ (ದೀಕ್ಷಾಸ್ನಾನ ಪಡೆದ) ಸಿಖ್ ವಿದ್ಯಾರ್ಥಿನಿಗೆ ಟರ್ಬನ್‌ ತೆಗೆಯಬೇಕು ಎಂದು ಆದೇಶಿಸಲಾಗಿದೆ.

ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯು ಆಗಿರುವ ವಿದ್ಯಾರ್ಥಿನಿಗೆ ಫೆಬ್ರವರಿ 16 ರಂದು ಮೊದಲ ಬಾರಿಗೆ ತನ್ನ ಟರ್ಬನ್‌ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಆದರೆ, ಆಕೆ ನಿರಾಕರಿಸಿ, ತನ್ನ ತಂದೆಗೆ ಈ ವಿಷಯ ತಿಳಿಸಿದ್ದಾರೆ. ಕಾಲೇಜು ಆಡಳಿತ ಆಕೆಯ ತಂದೆಯೊಂದಿಗೆ ಮಾತನಾಡಿ, ತಮಗೆ ಸಿಖ್‌ ಟರ್ಬನ್‌ನ ಪ್ರಾಮುಖ್ಯತೆ ತಿಳಿದಿದೆ. ಆದರೆ, ತಾವು ಹೈಕೋರ್ಟ್ ಆದೇಶಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

 ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಸೋಮವಾರ ಕಾಲೇಜಿನಲ್ಲಿ ನಡೆದ ಪ್ರಾಯೋಗಿಕ ಪರೀಕ್ಷೆ ವೇಳೆ ಕಾಲೇಜಿನಲ್ಲಿ ಪರಿಶೀಲನೆ ನಡೆಸುತ್ತಿದ್ದ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಶ್ರೀರಾಮ್ ಅವರು ನ್ಯಾಯಾಲಯದ ಆದೇಶದಂತೆ ಇಬ್ಬರು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಸೂಚಿಸಿದ್ದರಿಂದ ಈ ಸಮಸ್ಯೆ ಆರಂಭವಾಗಿದೆ. ಯಾವುದೇ ವಿದ್ಯಾರ್ಥಿನಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದರೇ, ಸಿಖ್ ವಿದ್ಯಾರ್ಥಿನಿಯರಿಗೂ ಟರ್ಬನ್ ಧರಿಸಲು ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಕಾಲೇಜು ಆಡಳಿತಮಂಡಳಿ ಸಿಖ್ ವಿದ್ಯಾರ್ಥಿನಿ ಟರ್ಬನ್ ತೆಗೆಯುವಂತೆ ತಿಳಿಸಿ, ಆಕೆಯ ತಂದೆಗೆ ಈ ಬಗ್ಗೆ ಇ-ಮೇಲ್ ಮಾಡಿದ್ದಾರೆ.

ಈ ಕುರಿತು ವಿದ್ಯಾರ್ಥಿನಿ ತಂದೆ ಗುರುಚರಣ್ ಸಿಂಗ್, ಗುರುಸಿಂಗ್ ಸಭಾಗೆ ಪತ್ರ ಬರೆದಿದ್ದಾರೆ. ಕಳೆದ 17 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅಮೃತ್‌ಧಾರಿ ಸಿಖ್‌ ಆಗಿರುವ ನನ್ನ ಮತ್ತು ನನ್ನ ಕುಟುಂಬಕ್ಕೆ ಎಂದಿಗೂ ತೊಂದರೆಯಾಗಿಲ್ಲ. ನನಗೆ ಮೂವರು ಹೆಣ್ಣು ಮತ್ತು ಒಬ್ಬ ಗಂಡು ಮಗನಿದ್ದಾನೆ. ನನ್ನ ಎಲ್ಲಾ ಹೆಣ್ಣು ಮಕ್ಕಳು ಕೇಂದ್ರಿಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದಾರೆ. ಹೆಮ್ಮೆಯಿಂದ ಶಾಲೆಯಲ್ಲಿ ಈ ಐದು ಕಕ್ಕರ್‌ಗಳನ್ನು ( Uncut Hair and Keski(Dastaar), Kanga, Kara, Kirpaan and Kachera) ಧರಿಸಿದ್ದರು. 16 ವರ್ಷಗಳಿಂದ ಯಾರೂ ಇದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಮಕ್ಕಳು ಶಾಲೆಯಲ್ಲಿ ಸಿಖ್ ಮಾರ್ಷಲ್ ಆರ್ಟ್ ಮತ್ತು ಕೀರ್ತನ್ ಅನ್ನು ವಿಭಿನ್ನವಾಗಿ ಪ್ರದರ್ಶಿಸಿದ್ದಾರೆ. ನನ್ನ ಮಗಳು ತನ್ನ ಟರ್ಬನ್ ಜೊತೆಗೆ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಅಲ್ಲಿಯೂ ಹೆಲ್ಮೆಟ್ ಬಳಸಲಿಲ್ಲ. ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ, ಸಿಖ್ ಪುರುಷರು ಮತ್ತು ಮಹಿಳೆಯರು ದ್ವಿಚಕ್ರ ವಾಹನಗಳನ್ನು ಓಡಿಸುವಾಗ ಟರ್ಬನ್ ಧರಿಸುತ್ತಾರೆ. ಭಾರತೀಯ ಸೇನೆ ಮತ್ತು ಇತರ ದೇಶಗಳಲ್ಲಿ ಸಿಖ್ ಸೈನಿಕರು ಕ್ಯಾಪ್ ಅಥವಾ ಹೆಲ್ಮೆಟ್ ಬದಲಿಗೆ ಟರ್ಬನ್ ಧರಿಸುತ್ತಾರೆ. ಯುದ್ಧದ ನಡುವೆಯೂ ಸಹ ಹೆಲ್ಮೆಟ್ ಬದಲಿಗೆ ಟರ್ಬನ್  ಧರಿಸುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್ ಲೈವ್‌ | ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗಷ್ಟೆ ಅನ್ವಯ, ಶಿಕ್ಷಕರಿಗಲ್ಲ: ಮುಖ್ಯ ನ್ಯಾಯಮೂರ್ತಿ

“ಆದರೆ, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಇಂದು ನಡೆದ ಘಟನೆ ನಮ್ಮ ಕುಟುಂಬವನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗಳು, ಪಿಯು ಎರಡನೇ ವರ್ಷದ ವಿದ್ಯಾರ್ಥಿನಿ ಮತ್ತು ಕಾಲೇಜಿನ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಅಮಿತೇಶ್ವರ್ ಕೌರ್ ಅವರನ್ನು ಕಾಲೇಜು ಅಧಿಕಾರಿಗಳು ಕರೆದು ಟರ್ಬನ್ ತೆಗೆದು ನಂತರ ಕಾಲೇಜಿಗೆ ಬರಬಹುದೇ ಎಂದು ಕೇಳಿದ್ದಾರೆ. ಆದರೆ ಅಕೆ ಅಮೃತಧಾರಿ ಸಿಖ್ ಆಗಿರುವುದರಿಂದ ಅದನ್ನು ನಿರಾಕರಿಸಿದ್ದಾರೆ. ಸಿಖ್‌ ಸಮುದಾಯದವರಿಗೆ ಟರ್ಬನ್ ತೆಗೆಯಲು ಹೇಳುವುದು ಇಡೀ ಸಿಖ್ ಸಮುದಾಯಕ್ಕೆ ಮಾಡಿದ ದೊಡ್ಡ ಅವಮಾನ” ಎಂದಿದ್ದಾರೆ.

“ತಮ್ಮ ನಂಬಿಕೆಯ ಭಾಗವಾಗಿ ಸ್ಕಾರ್ಫ್ / ದುಪಟ್ಟಾದಿಂದ ತಲೆಯನ್ನು ಮುಚ್ಚಲು ಬಯಸುವ ಮುಸ್ಲಿಂ ಹುಡುಗಿಯರು/ಮಹಿಳೆಯರ ಪರವಾಗಿ ನಾವು ಸಹ ನಿಲ್ಲುತ್ತೇವೆ ಮತ್ತು ನಮ್ಮ ದೇಶದಲ್ಲಿ ಈಗಾಗಲೇ ಆಚರಣೆಯಲ್ಲಿರುವಂತೆ, ಇದರಿಂದ ಯಾರಿಗೂ ಯಾವುದೇ ತೊಂದರೆಯು ಆಗದ ಕಾರಣ, ಸ್ಕಾರ್ಫ್ ಮತ್ತು ಟರ್ಬನ್ ಬಣ್ಣವು ಸಂಸ್ಥೆಯ ಸಮವಸ್ತ್ರದೊಂದಿಗೆ ಹೊಂದಿಕೆಯಾಗುವವಂತಿದ್ದು ಅವರಿಗೆ ಧರಿಸಲು ಅವಕಾಶ ನೀಡುವಂತೆ ಅಧಿಕಾರಿಗಳನ್ನು ವಿನಂತಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಘಟನೆಯು ಒಂದೇ ಅಲ್ಲ. ವಿವಿಧ ಶಾಲೆಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ಮೆಟ್ರೋ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು ಇತ್ಯಾದಿಗಳಲ್ಲಿ ಹಲವಾರು ಬಾರಿ ಸಂಭವಿಸಿದೆ. ಅಲ್ಲಿ ಸಿಖ್ ವಿದ್ಯಾರ್ಥಿಗಳನ್ನು ತಮ್ಮ ದೇಹದ ಮೇಲೆ ಐದು ಕಕ್ಕರ್‌ಗಳನ್ನು ಧರಿಸಲು ಅನುಮತಿ ನೀಡದೆ ಅವಮಾನಿಸಲಾಗಿದೆ. ಈ ವಿದ್ಯಾರ್ಥಿಗಳು ಅನೇಕ ಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಪರ್ಧಿಸಲು ವಿಫಲರಾಗುತ್ತಾರೆ.  ಹೀಗಾಗಿ ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಪ್ರಮುಖ ಜಾಗೃತಿ ಸಮಸ್ಯೆ ಕಂಡುಬರುತ್ತಿದೆ. ಸಿಖ್ ಆಚರಣೆಗಳು, ಸಂಸ್ಕೃತಿ ಮತ್ತು ಐದು ಕಕ್ಕರ್‌ಗಳ ಪ್ರಾಮುಖ್ಯತೆಯ ಕುರಿತು ಸಂಬಂಧಿತ ಸರ್ಕಾರಿ ಅಧಿಕಾರಿಗಳಿಂದ ಈ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಬೇಕು. ಸಿಖ್ ರೆಹತ್ ಮರ್ಯಾದಾ ಮತ್ತು ಭಾರತದ ಸಂವಿಧಾನದ ಆರ್ಟಿಕಲ್ 25ರ ಪ್ರಕಾರ ಸಿಖ್ ಸಮುದಾಯವು ತಮ್ಮ ನಂಬಿಕೆಯನ್ನು ಮುಕ್ತವಾಗಿ ಅನುಸರಿಸಲು ಶ್ರೀ ಗುರು ಸಿಂಗ್ ಸಭಾ ಎಲ್ಲಾ ಸಂಸ್ಥೆಗಳಿಗೆ ಒಂದು ಸುತ್ತೋಲೆ ಕಳುಹಿಸುವ ಅಗತ್ಯವಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಇನ್ನು ಈ ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಲೇಖಕ ಅಮನ್‌ದೀಪ್ ಸಂಧು, “ಸದ್ಯದಲ್ಲಿ ಈ ಘಟನೆಯ ವಿಚಾರಣೆ ವೇಗ ಪಡೆಯಬೇಕು. ಪ್ರಕರಣ ಬೀದಿಗಿಳಿದೆರೆ ನಿಜಕ್ಕೂ ಕೆಟ್ಟ ಸ್ಥಿತಿ ಉಂಟಾಗುತ್ತದೆ. ಸಂವಿಧಾನದ ಆರ್ಟಿಕಲ್ 25 ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ. ಆದ್ದರಿಂದ ಇದು ಸಂವಿಧಾನದ ಉಲ್ಲಂಘನೆಯಗುತ್ತದೆ. ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾರಿಗೆ ಏನು ಬೇಕೊ ಅದನ್ನು ಧರಿಸಲು ನ್ಯಾಯಾಲಯ ಅನುಮತಿ ನೀಡಬೇಕು. ಶಿಕ್ಷಣ ಮುಖ್ಯವಾಗಬೇಕೆ ಹೊರತು ಅವರು ಧರಿಸು ಬಟ್ಟೆಯಲ್ಲ. ಮುಸ್ಲಿಂಮರು ಹಿಜಾಬ್, ಸಿಖ್ಖರು ಟರ್ಬನ್, ಹಿಂದೂಗಳು ಜನಿವಾರ, ಸಿಂಧೂರ ಧರಿಸುತ್ತಾರೆ. ನಾವು ಮನುಷ್ಯರು ನಾವು ಇರುವುದೇ ಹೀಗೆ…ಹೀಗಾಗಿ ಶಿಕ್ಷಣ ಮುಖ್ಯವಾಗಬೇಕು” ಎಂದಿದ್ದಾರೆ.

“ಇದಲ್ಲದೇ ಟರ್ಬನ್ ಧರಿಸುವ ಒಂದು ಕಾರಣಕ್ಕೆ ಮಂಗಳೂರಿನಲ್ಲಿ 7 ವರ್ಷದ ಸಿಖ್ ಮಗುವಿಗೆ ಶಾಲಾ ದಾಖಲಾತಿ ನಿರಾಕರಿಸಲಾಗಿದೆ. ಇಂತಹ ವಿಚಾರ ಬೀದಿಗೆ (ಪ್ರತಿಭಟನೆಗೆ) ಬಂದರೆ ಮಾತ್ರ ಪರಿಸ್ಥಿತಿ ಅತಿ ಕೆಟ್ಟದಾಗುತ್ತದೆ. ಐತಿಹಾಸಿಕ ರೈತ ಆಂದೋಲನ ಹಿಂದುತ್ವ ಸರ್ಕಾರವನ್ನು ಸೋಲಿಸಿದೆ. ಈಗ ಮತ್ತೆ ಈ ಘಟನೆ ಹಿಂದುತ್ವಕ್ಕೆ ಭಾರಿ ಪೆಟ್ಟು ನೀಡುತ್ತದೆ. ಇದು ಈಗಾಗಲೇ ದೊಡ್ಡ ವಿವಾದವಾಗಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚರಿ ಸೇರಿದಂತೆ ಹಲವೆಡೆ ಇಂತಹ ಘಟನೆಗಳು ನಡೆಯುತ್ತಿದೆ. ಇದು ಜನರನ್ನು ನೈಜ್ಯ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಯತ್ನ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...