Homeಕರ್ನಾಟಕಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಸಂವಿಧಾನದ ಆರ್ಟಿಕಲ್ 25, ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ.

- Advertisement -
- Advertisement -

ಕಳೆದೆರಡು ತಿಂಗಳಿನಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿರುವ ರಾಜ್ಯದ ವಿಷಯ ಹಿಜಾಬ್. ನ್ಯಾಯಾಲಯದಲ್ಲಿ ಹಿಜಾಬ್ ಪರ-ವಿರೋಧ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ನ್ಯಾಯಾಲಯದ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಬಹುತೇಕ ಕಾಲೇಜುಗಳು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಪಟ್ಟು ಹಿಡಿದಿವೆ. ಇದರ ಜೊತೆಗೆ ಹೊಸ ಸೇರ್ಪಡೆಯಾಗಿ ಟರ್ಬನ್ ಧರಿಸುವ ವಿದ್ಯಾರ್ಥಿನಿಯರ ಮೇಲೂ ಒತ್ತಡ ಉಂಟಾಗಿದೆ.

ಹೌದು, ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿ ಸಿಖ್ ವಿದ್ಯಾರ್ಥಿನಿಯೊಬ್ಬರಿಗೆ ಟರ್ಬನ್ ತೆಗೆದು ಬರುವುದಾದರೆ ಮಾತ್ರ ತರಗತಿಗೆ ಪ್ರವೇಶ ಎಂದು ನಿರ್ದೇಶಿಸಿದ್ದಾರೆ. ಫೆಬ್ರವರಿ 10ರ ಹೈಕೋರ್ಟ್ ಮಧ್ಯಂತರ ಆದೇಶದ ಮೇರೆಗೆ 17 ವರ್ಷದ ಅಮೃತ್‌ಧಾರಿ (ದೀಕ್ಷಾಸ್ನಾನ ಪಡೆದ) ಸಿಖ್ ವಿದ್ಯಾರ್ಥಿನಿಗೆ ಟರ್ಬನ್‌ ತೆಗೆಯಬೇಕು ಎಂದು ಆದೇಶಿಸಲಾಗಿದೆ.

ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯು ಆಗಿರುವ ವಿದ್ಯಾರ್ಥಿನಿಗೆ ಫೆಬ್ರವರಿ 16 ರಂದು ಮೊದಲ ಬಾರಿಗೆ ತನ್ನ ಟರ್ಬನ್‌ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಆದರೆ, ಆಕೆ ನಿರಾಕರಿಸಿ, ತನ್ನ ತಂದೆಗೆ ಈ ವಿಷಯ ತಿಳಿಸಿದ್ದಾರೆ. ಕಾಲೇಜು ಆಡಳಿತ ಆಕೆಯ ತಂದೆಯೊಂದಿಗೆ ಮಾತನಾಡಿ, ತಮಗೆ ಸಿಖ್‌ ಟರ್ಬನ್‌ನ ಪ್ರಾಮುಖ್ಯತೆ ತಿಳಿದಿದೆ. ಆದರೆ, ತಾವು ಹೈಕೋರ್ಟ್ ಆದೇಶಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

 ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಸೋಮವಾರ ಕಾಲೇಜಿನಲ್ಲಿ ನಡೆದ ಪ್ರಾಯೋಗಿಕ ಪರೀಕ್ಷೆ ವೇಳೆ ಕಾಲೇಜಿನಲ್ಲಿ ಪರಿಶೀಲನೆ ನಡೆಸುತ್ತಿದ್ದ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಶ್ರೀರಾಮ್ ಅವರು ನ್ಯಾಯಾಲಯದ ಆದೇಶದಂತೆ ಇಬ್ಬರು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಸೂಚಿಸಿದ್ದರಿಂದ ಈ ಸಮಸ್ಯೆ ಆರಂಭವಾಗಿದೆ. ಯಾವುದೇ ವಿದ್ಯಾರ್ಥಿನಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದರೇ, ಸಿಖ್ ವಿದ್ಯಾರ್ಥಿನಿಯರಿಗೂ ಟರ್ಬನ್ ಧರಿಸಲು ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಕಾಲೇಜು ಆಡಳಿತಮಂಡಳಿ ಸಿಖ್ ವಿದ್ಯಾರ್ಥಿನಿ ಟರ್ಬನ್ ತೆಗೆಯುವಂತೆ ತಿಳಿಸಿ, ಆಕೆಯ ತಂದೆಗೆ ಈ ಬಗ್ಗೆ ಇ-ಮೇಲ್ ಮಾಡಿದ್ದಾರೆ.

ಈ ಕುರಿತು ವಿದ್ಯಾರ್ಥಿನಿ ತಂದೆ ಗುರುಚರಣ್ ಸಿಂಗ್, ಗುರುಸಿಂಗ್ ಸಭಾಗೆ ಪತ್ರ ಬರೆದಿದ್ದಾರೆ. ಕಳೆದ 17 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅಮೃತ್‌ಧಾರಿ ಸಿಖ್‌ ಆಗಿರುವ ನನ್ನ ಮತ್ತು ನನ್ನ ಕುಟುಂಬಕ್ಕೆ ಎಂದಿಗೂ ತೊಂದರೆಯಾಗಿಲ್ಲ. ನನಗೆ ಮೂವರು ಹೆಣ್ಣು ಮತ್ತು ಒಬ್ಬ ಗಂಡು ಮಗನಿದ್ದಾನೆ. ನನ್ನ ಎಲ್ಲಾ ಹೆಣ್ಣು ಮಕ್ಕಳು ಕೇಂದ್ರಿಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದಾರೆ. ಹೆಮ್ಮೆಯಿಂದ ಶಾಲೆಯಲ್ಲಿ ಈ ಐದು ಕಕ್ಕರ್‌ಗಳನ್ನು ( Uncut Hair and Keski(Dastaar), Kanga, Kara, Kirpaan and Kachera) ಧರಿಸಿದ್ದರು. 16 ವರ್ಷಗಳಿಂದ ಯಾರೂ ಇದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಮಕ್ಕಳು ಶಾಲೆಯಲ್ಲಿ ಸಿಖ್ ಮಾರ್ಷಲ್ ಆರ್ಟ್ ಮತ್ತು ಕೀರ್ತನ್ ಅನ್ನು ವಿಭಿನ್ನವಾಗಿ ಪ್ರದರ್ಶಿಸಿದ್ದಾರೆ. ನನ್ನ ಮಗಳು ತನ್ನ ಟರ್ಬನ್ ಜೊತೆಗೆ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಅಲ್ಲಿಯೂ ಹೆಲ್ಮೆಟ್ ಬಳಸಲಿಲ್ಲ. ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ, ಸಿಖ್ ಪುರುಷರು ಮತ್ತು ಮಹಿಳೆಯರು ದ್ವಿಚಕ್ರ ವಾಹನಗಳನ್ನು ಓಡಿಸುವಾಗ ಟರ್ಬನ್ ಧರಿಸುತ್ತಾರೆ. ಭಾರತೀಯ ಸೇನೆ ಮತ್ತು ಇತರ ದೇಶಗಳಲ್ಲಿ ಸಿಖ್ ಸೈನಿಕರು ಕ್ಯಾಪ್ ಅಥವಾ ಹೆಲ್ಮೆಟ್ ಬದಲಿಗೆ ಟರ್ಬನ್ ಧರಿಸುತ್ತಾರೆ. ಯುದ್ಧದ ನಡುವೆಯೂ ಸಹ ಹೆಲ್ಮೆಟ್ ಬದಲಿಗೆ ಟರ್ಬನ್  ಧರಿಸುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್ ಲೈವ್‌ | ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗಷ್ಟೆ ಅನ್ವಯ, ಶಿಕ್ಷಕರಿಗಲ್ಲ: ಮುಖ್ಯ ನ್ಯಾಯಮೂರ್ತಿ

“ಆದರೆ, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಇಂದು ನಡೆದ ಘಟನೆ ನಮ್ಮ ಕುಟುಂಬವನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗಳು, ಪಿಯು ಎರಡನೇ ವರ್ಷದ ವಿದ್ಯಾರ್ಥಿನಿ ಮತ್ತು ಕಾಲೇಜಿನ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಅಮಿತೇಶ್ವರ್ ಕೌರ್ ಅವರನ್ನು ಕಾಲೇಜು ಅಧಿಕಾರಿಗಳು ಕರೆದು ಟರ್ಬನ್ ತೆಗೆದು ನಂತರ ಕಾಲೇಜಿಗೆ ಬರಬಹುದೇ ಎಂದು ಕೇಳಿದ್ದಾರೆ. ಆದರೆ ಅಕೆ ಅಮೃತಧಾರಿ ಸಿಖ್ ಆಗಿರುವುದರಿಂದ ಅದನ್ನು ನಿರಾಕರಿಸಿದ್ದಾರೆ. ಸಿಖ್‌ ಸಮುದಾಯದವರಿಗೆ ಟರ್ಬನ್ ತೆಗೆಯಲು ಹೇಳುವುದು ಇಡೀ ಸಿಖ್ ಸಮುದಾಯಕ್ಕೆ ಮಾಡಿದ ದೊಡ್ಡ ಅವಮಾನ” ಎಂದಿದ್ದಾರೆ.

“ತಮ್ಮ ನಂಬಿಕೆಯ ಭಾಗವಾಗಿ ಸ್ಕಾರ್ಫ್ / ದುಪಟ್ಟಾದಿಂದ ತಲೆಯನ್ನು ಮುಚ್ಚಲು ಬಯಸುವ ಮುಸ್ಲಿಂ ಹುಡುಗಿಯರು/ಮಹಿಳೆಯರ ಪರವಾಗಿ ನಾವು ಸಹ ನಿಲ್ಲುತ್ತೇವೆ ಮತ್ತು ನಮ್ಮ ದೇಶದಲ್ಲಿ ಈಗಾಗಲೇ ಆಚರಣೆಯಲ್ಲಿರುವಂತೆ, ಇದರಿಂದ ಯಾರಿಗೂ ಯಾವುದೇ ತೊಂದರೆಯು ಆಗದ ಕಾರಣ, ಸ್ಕಾರ್ಫ್ ಮತ್ತು ಟರ್ಬನ್ ಬಣ್ಣವು ಸಂಸ್ಥೆಯ ಸಮವಸ್ತ್ರದೊಂದಿಗೆ ಹೊಂದಿಕೆಯಾಗುವವಂತಿದ್ದು ಅವರಿಗೆ ಧರಿಸಲು ಅವಕಾಶ ನೀಡುವಂತೆ ಅಧಿಕಾರಿಗಳನ್ನು ವಿನಂತಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಘಟನೆಯು ಒಂದೇ ಅಲ್ಲ. ವಿವಿಧ ಶಾಲೆಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ಮೆಟ್ರೋ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು ಇತ್ಯಾದಿಗಳಲ್ಲಿ ಹಲವಾರು ಬಾರಿ ಸಂಭವಿಸಿದೆ. ಅಲ್ಲಿ ಸಿಖ್ ವಿದ್ಯಾರ್ಥಿಗಳನ್ನು ತಮ್ಮ ದೇಹದ ಮೇಲೆ ಐದು ಕಕ್ಕರ್‌ಗಳನ್ನು ಧರಿಸಲು ಅನುಮತಿ ನೀಡದೆ ಅವಮಾನಿಸಲಾಗಿದೆ. ಈ ವಿದ್ಯಾರ್ಥಿಗಳು ಅನೇಕ ಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಪರ್ಧಿಸಲು ವಿಫಲರಾಗುತ್ತಾರೆ.  ಹೀಗಾಗಿ ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಪ್ರಮುಖ ಜಾಗೃತಿ ಸಮಸ್ಯೆ ಕಂಡುಬರುತ್ತಿದೆ. ಸಿಖ್ ಆಚರಣೆಗಳು, ಸಂಸ್ಕೃತಿ ಮತ್ತು ಐದು ಕಕ್ಕರ್‌ಗಳ ಪ್ರಾಮುಖ್ಯತೆಯ ಕುರಿತು ಸಂಬಂಧಿತ ಸರ್ಕಾರಿ ಅಧಿಕಾರಿಗಳಿಂದ ಈ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಬೇಕು. ಸಿಖ್ ರೆಹತ್ ಮರ್ಯಾದಾ ಮತ್ತು ಭಾರತದ ಸಂವಿಧಾನದ ಆರ್ಟಿಕಲ್ 25ರ ಪ್ರಕಾರ ಸಿಖ್ ಸಮುದಾಯವು ತಮ್ಮ ನಂಬಿಕೆಯನ್ನು ಮುಕ್ತವಾಗಿ ಅನುಸರಿಸಲು ಶ್ರೀ ಗುರು ಸಿಂಗ್ ಸಭಾ ಎಲ್ಲಾ ಸಂಸ್ಥೆಗಳಿಗೆ ಒಂದು ಸುತ್ತೋಲೆ ಕಳುಹಿಸುವ ಅಗತ್ಯವಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಇನ್ನು ಈ ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಲೇಖಕ ಅಮನ್‌ದೀಪ್ ಸಂಧು, “ಸದ್ಯದಲ್ಲಿ ಈ ಘಟನೆಯ ವಿಚಾರಣೆ ವೇಗ ಪಡೆಯಬೇಕು. ಪ್ರಕರಣ ಬೀದಿಗಿಳಿದೆರೆ ನಿಜಕ್ಕೂ ಕೆಟ್ಟ ಸ್ಥಿತಿ ಉಂಟಾಗುತ್ತದೆ. ಸಂವಿಧಾನದ ಆರ್ಟಿಕಲ್ 25 ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ. ಆದ್ದರಿಂದ ಇದು ಸಂವಿಧಾನದ ಉಲ್ಲಂಘನೆಯಗುತ್ತದೆ. ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾರಿಗೆ ಏನು ಬೇಕೊ ಅದನ್ನು ಧರಿಸಲು ನ್ಯಾಯಾಲಯ ಅನುಮತಿ ನೀಡಬೇಕು. ಶಿಕ್ಷಣ ಮುಖ್ಯವಾಗಬೇಕೆ ಹೊರತು ಅವರು ಧರಿಸು ಬಟ್ಟೆಯಲ್ಲ. ಮುಸ್ಲಿಂಮರು ಹಿಜಾಬ್, ಸಿಖ್ಖರು ಟರ್ಬನ್, ಹಿಂದೂಗಳು ಜನಿವಾರ, ಸಿಂಧೂರ ಧರಿಸುತ್ತಾರೆ. ನಾವು ಮನುಷ್ಯರು ನಾವು ಇರುವುದೇ ಹೀಗೆ…ಹೀಗಾಗಿ ಶಿಕ್ಷಣ ಮುಖ್ಯವಾಗಬೇಕು” ಎಂದಿದ್ದಾರೆ.

“ಇದಲ್ಲದೇ ಟರ್ಬನ್ ಧರಿಸುವ ಒಂದು ಕಾರಣಕ್ಕೆ ಮಂಗಳೂರಿನಲ್ಲಿ 7 ವರ್ಷದ ಸಿಖ್ ಮಗುವಿಗೆ ಶಾಲಾ ದಾಖಲಾತಿ ನಿರಾಕರಿಸಲಾಗಿದೆ. ಇಂತಹ ವಿಚಾರ ಬೀದಿಗೆ (ಪ್ರತಿಭಟನೆಗೆ) ಬಂದರೆ ಮಾತ್ರ ಪರಿಸ್ಥಿತಿ ಅತಿ ಕೆಟ್ಟದಾಗುತ್ತದೆ. ಐತಿಹಾಸಿಕ ರೈತ ಆಂದೋಲನ ಹಿಂದುತ್ವ ಸರ್ಕಾರವನ್ನು ಸೋಲಿಸಿದೆ. ಈಗ ಮತ್ತೆ ಈ ಘಟನೆ ಹಿಂದುತ್ವಕ್ಕೆ ಭಾರಿ ಪೆಟ್ಟು ನೀಡುತ್ತದೆ. ಇದು ಈಗಾಗಲೇ ದೊಡ್ಡ ವಿವಾದವಾಗಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚರಿ ಸೇರಿದಂತೆ ಹಲವೆಡೆ ಇಂತಹ ಘಟನೆಗಳು ನಡೆಯುತ್ತಿದೆ. ಇದು ಜನರನ್ನು ನೈಜ್ಯ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಯತ್ನ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...