Homeಕರ್ನಾಟಕಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಟರ್ಬನ್‌ಗೂ ವಿರೋಧ ಆರಂಭ: ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಟರ್ಬನ್ ತೆಗೆಯುವಂತೆ ಸಿಖ್ ವಿದ್ಯಾರ್ಥಿನಿಗೆ ಒತ್ತಡ

ಸಂವಿಧಾನದ ಆರ್ಟಿಕಲ್ 25, ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ.

- Advertisement -
- Advertisement -

ಕಳೆದೆರಡು ತಿಂಗಳಿನಿಂದ ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿರುವ ರಾಜ್ಯದ ವಿಷಯ ಹಿಜಾಬ್. ನ್ಯಾಯಾಲಯದಲ್ಲಿ ಹಿಜಾಬ್ ಪರ-ವಿರೋಧ ವಿಚಾರಣೆ ನಡೆಯುತ್ತಿದೆ. ಇದೇ ವೇಳೆ ನ್ಯಾಯಾಲಯದ ಮಧ್ಯಂತರ ಆದೇಶವನ್ನು ತಪ್ಪಾಗಿ ಅರ್ಥೈಸಿಕೊಂಡು ಬಹುತೇಕ ಕಾಲೇಜುಗಳು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಪಟ್ಟು ಹಿಡಿದಿವೆ. ಇದರ ಜೊತೆಗೆ ಹೊಸ ಸೇರ್ಪಡೆಯಾಗಿ ಟರ್ಬನ್ ಧರಿಸುವ ವಿದ್ಯಾರ್ಥಿನಿಯರ ಮೇಲೂ ಒತ್ತಡ ಉಂಟಾಗಿದೆ.

ಹೌದು, ಬೆಂಗಳೂರಿನ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಪಿಯು ಕಾಲೇಜಿನ ಆಡಳಿತ ಮಂಡಳಿ ಸಿಖ್ ವಿದ್ಯಾರ್ಥಿನಿಯೊಬ್ಬರಿಗೆ ಟರ್ಬನ್ ತೆಗೆದು ಬರುವುದಾದರೆ ಮಾತ್ರ ತರಗತಿಗೆ ಪ್ರವೇಶ ಎಂದು ನಿರ್ದೇಶಿಸಿದ್ದಾರೆ. ಫೆಬ್ರವರಿ 10ರ ಹೈಕೋರ್ಟ್ ಮಧ್ಯಂತರ ಆದೇಶದ ಮೇರೆಗೆ 17 ವರ್ಷದ ಅಮೃತ್‌ಧಾರಿ (ದೀಕ್ಷಾಸ್ನಾನ ಪಡೆದ) ಸಿಖ್ ವಿದ್ಯಾರ್ಥಿನಿಗೆ ಟರ್ಬನ್‌ ತೆಗೆಯಬೇಕು ಎಂದು ಆದೇಶಿಸಲಾಗಿದೆ.

ಕಾಲೇಜು ವಿದ್ಯಾರ್ಥಿ ಸಂಘದ ಅಧ್ಯಕ್ಷೆಯು ಆಗಿರುವ ವಿದ್ಯಾರ್ಥಿನಿಗೆ ಫೆಬ್ರವರಿ 16 ರಂದು ಮೊದಲ ಬಾರಿಗೆ ತನ್ನ ಟರ್ಬನ್‌ ತೆಗೆಯುವಂತೆ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಆದರೆ, ಆಕೆ ನಿರಾಕರಿಸಿ, ತನ್ನ ತಂದೆಗೆ ಈ ವಿಷಯ ತಿಳಿಸಿದ್ದಾರೆ. ಕಾಲೇಜು ಆಡಳಿತ ಆಕೆಯ ತಂದೆಯೊಂದಿಗೆ ಮಾತನಾಡಿ, ತಮಗೆ ಸಿಖ್‌ ಟರ್ಬನ್‌ನ ಪ್ರಾಮುಖ್ಯತೆ ತಿಳಿದಿದೆ. ಆದರೆ, ತಾವು ಹೈಕೋರ್ಟ್ ಆದೇಶಕ್ಕೆ ಬದ್ಧರಾಗಿರುವುದಾಗಿ ತಿಳಿಸಿದ್ದಾರೆ.

 ಇದನ್ನೂ ಓದಿ: ಟರ್ಬನ್ ಆಯ್ಕೆಯಾಗಿರಬಹುದಾದರೆ, ಹಿಜಾಬ್ ಏಕೆ ಆಗಬಾರದು?: ನಟಿ ಸೋನಮ್ ಕಪೂರ್ ಪ್ರಶ್ನೆ

ಸೋಮವಾರ ಕಾಲೇಜಿನಲ್ಲಿ ನಡೆದ ಪ್ರಾಯೋಗಿಕ ಪರೀಕ್ಷೆ ವೇಳೆ ಕಾಲೇಜಿನಲ್ಲಿ ಪರಿಶೀಲನೆ ನಡೆಸುತ್ತಿದ್ದ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಶ್ರೀರಾಮ್ ಅವರು ನ್ಯಾಯಾಲಯದ ಆದೇಶದಂತೆ ಇಬ್ಬರು ವಿದ್ಯಾರ್ಥಿಗಳಿಗೆ ಹಿಜಾಬ್ ತೆಗೆಯುವಂತೆ ಸೂಚಿಸಿದ್ದರಿಂದ ಈ ಸಮಸ್ಯೆ ಆರಂಭವಾಗಿದೆ. ಯಾವುದೇ ವಿದ್ಯಾರ್ಥಿನಿಗೆ ಹಿಜಾಬ್ ಧರಿಸಲು ಅವಕಾಶ ನೀಡುವುದಿಲ್ಲ ಎಂದರೇ, ಸಿಖ್ ವಿದ್ಯಾರ್ಥಿನಿಯರಿಗೂ ಟರ್ಬನ್ ಧರಿಸಲು ಅವಕಾಶ ನೀಡಬಾರದು ಎಂದು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಕಾಲೇಜು ಆಡಳಿತಮಂಡಳಿ ಸಿಖ್ ವಿದ್ಯಾರ್ಥಿನಿ ಟರ್ಬನ್ ತೆಗೆಯುವಂತೆ ತಿಳಿಸಿ, ಆಕೆಯ ತಂದೆಗೆ ಈ ಬಗ್ಗೆ ಇ-ಮೇಲ್ ಮಾಡಿದ್ದಾರೆ.

ಈ ಕುರಿತು ವಿದ್ಯಾರ್ಥಿನಿ ತಂದೆ ಗುರುಚರಣ್ ಸಿಂಗ್, ಗುರುಸಿಂಗ್ ಸಭಾಗೆ ಪತ್ರ ಬರೆದಿದ್ದಾರೆ. ಕಳೆದ 17 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿರುವ ಅಮೃತ್‌ಧಾರಿ ಸಿಖ್‌ ಆಗಿರುವ ನನ್ನ ಮತ್ತು ನನ್ನ ಕುಟುಂಬಕ್ಕೆ ಎಂದಿಗೂ ತೊಂದರೆಯಾಗಿಲ್ಲ. ನನಗೆ ಮೂವರು ಹೆಣ್ಣು ಮತ್ತು ಒಬ್ಬ ಗಂಡು ಮಗನಿದ್ದಾನೆ. ನನ್ನ ಎಲ್ಲಾ ಹೆಣ್ಣು ಮಕ್ಕಳು ಕೇಂದ್ರಿಯ ವಿದ್ಯಾಲಯದಲ್ಲಿ ಶಿಕ್ಷಣ ಪಡೆದಿದ್ದಾರೆ. ಹೆಮ್ಮೆಯಿಂದ ಶಾಲೆಯಲ್ಲಿ ಈ ಐದು ಕಕ್ಕರ್‌ಗಳನ್ನು ( Uncut Hair and Keski(Dastaar), Kanga, Kara, Kirpaan and Kachera) ಧರಿಸಿದ್ದರು. 16 ವರ್ಷಗಳಿಂದ ಯಾರೂ ಇದನ್ನು ವಿರೋಧಿಸಲಿಲ್ಲ ಎಂದು ಹೇಳಿದ್ದಾರೆ.

ಮಕ್ಕಳು ಶಾಲೆಯಲ್ಲಿ ಸಿಖ್ ಮಾರ್ಷಲ್ ಆರ್ಟ್ ಮತ್ತು ಕೀರ್ತನ್ ಅನ್ನು ವಿಭಿನ್ನವಾಗಿ ಪ್ರದರ್ಶಿಸಿದ್ದಾರೆ. ನನ್ನ ಮಗಳು ತನ್ನ ಟರ್ಬನ್ ಜೊತೆಗೆ ರಾಷ್ಟ್ರೀಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ ಅಲ್ಲಿಯೂ ಹೆಲ್ಮೆಟ್ ಬಳಸಲಿಲ್ಲ. ಭಾರತದಲ್ಲಿ ಮತ್ತು ಪ್ರಪಂಚದಾದ್ಯಂತ, ಸಿಖ್ ಪುರುಷರು ಮತ್ತು ಮಹಿಳೆಯರು ದ್ವಿಚಕ್ರ ವಾಹನಗಳನ್ನು ಓಡಿಸುವಾಗ ಟರ್ಬನ್ ಧರಿಸುತ್ತಾರೆ. ಭಾರತೀಯ ಸೇನೆ ಮತ್ತು ಇತರ ದೇಶಗಳಲ್ಲಿ ಸಿಖ್ ಸೈನಿಕರು ಕ್ಯಾಪ್ ಅಥವಾ ಹೆಲ್ಮೆಟ್ ಬದಲಿಗೆ ಟರ್ಬನ್ ಧರಿಸುತ್ತಾರೆ. ಯುದ್ಧದ ನಡುವೆಯೂ ಸಹ ಹೆಲ್ಮೆಟ್ ಬದಲಿಗೆ ಟರ್ಬನ್  ಧರಿಸುತ್ತಾರೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: Hijab Live | ಹಿಜಾಬ್ ಲೈವ್‌ | ಮಧ್ಯಂತರ ಆದೇಶ ವಿದ್ಯಾರ್ಥಿಗಳಿಗಷ್ಟೆ ಅನ್ವಯ, ಶಿಕ್ಷಕರಿಗಲ್ಲ: ಮುಖ್ಯ ನ್ಯಾಯಮೂರ್ತಿ

“ಆದರೆ, ವಸಂತನಗರದ ಮೌಂಟ್ ಕಾರ್ಮೆಲ್ ಕಾಲೇಜಿನಲ್ಲಿ ಇಂದು ನಡೆದ ಘಟನೆ ನಮ್ಮ ಕುಟುಂಬವನ್ನು ಬೆಚ್ಚಿ ಬೀಳಿಸಿದೆ. ನನ್ನ ಮಗಳು, ಪಿಯು ಎರಡನೇ ವರ್ಷದ ವಿದ್ಯಾರ್ಥಿನಿ ಮತ್ತು ಕಾಲೇಜಿನ ವಿದ್ಯಾರ್ಥಿ ಘಟಕದ ಅಧ್ಯಕ್ಷೆ ಅಮಿತೇಶ್ವರ್ ಕೌರ್ ಅವರನ್ನು ಕಾಲೇಜು ಅಧಿಕಾರಿಗಳು ಕರೆದು ಟರ್ಬನ್ ತೆಗೆದು ನಂತರ ಕಾಲೇಜಿಗೆ ಬರಬಹುದೇ ಎಂದು ಕೇಳಿದ್ದಾರೆ. ಆದರೆ ಅಕೆ ಅಮೃತಧಾರಿ ಸಿಖ್ ಆಗಿರುವುದರಿಂದ ಅದನ್ನು ನಿರಾಕರಿಸಿದ್ದಾರೆ. ಸಿಖ್‌ ಸಮುದಾಯದವರಿಗೆ ಟರ್ಬನ್ ತೆಗೆಯಲು ಹೇಳುವುದು ಇಡೀ ಸಿಖ್ ಸಮುದಾಯಕ್ಕೆ ಮಾಡಿದ ದೊಡ್ಡ ಅವಮಾನ” ಎಂದಿದ್ದಾರೆ.

“ತಮ್ಮ ನಂಬಿಕೆಯ ಭಾಗವಾಗಿ ಸ್ಕಾರ್ಫ್ / ದುಪಟ್ಟಾದಿಂದ ತಲೆಯನ್ನು ಮುಚ್ಚಲು ಬಯಸುವ ಮುಸ್ಲಿಂ ಹುಡುಗಿಯರು/ಮಹಿಳೆಯರ ಪರವಾಗಿ ನಾವು ಸಹ ನಿಲ್ಲುತ್ತೇವೆ ಮತ್ತು ನಮ್ಮ ದೇಶದಲ್ಲಿ ಈಗಾಗಲೇ ಆಚರಣೆಯಲ್ಲಿರುವಂತೆ, ಇದರಿಂದ ಯಾರಿಗೂ ಯಾವುದೇ ತೊಂದರೆಯು ಆಗದ ಕಾರಣ, ಸ್ಕಾರ್ಫ್ ಮತ್ತು ಟರ್ಬನ್ ಬಣ್ಣವು ಸಂಸ್ಥೆಯ ಸಮವಸ್ತ್ರದೊಂದಿಗೆ ಹೊಂದಿಕೆಯಾಗುವವಂತಿದ್ದು ಅವರಿಗೆ ಧರಿಸಲು ಅವಕಾಶ ನೀಡುವಂತೆ ಅಧಿಕಾರಿಗಳನ್ನು ವಿನಂತಿಸುತ್ತೇವೆ” ಎಂದು ತಿಳಿಸಿದ್ದಾರೆ.

ಈ ಘಟನೆಯು ಒಂದೇ ಅಲ್ಲ. ವಿವಿಧ ಶಾಲೆಗಳು, ಸಂಸ್ಥೆಗಳು, ಕಾರ್ಪೊರೇಟ್‌ಗಳು, ಮೆಟ್ರೋ ನಿಲ್ದಾಣಗಳು, ಶಾಪಿಂಗ್ ಮಾಲ್‌ಗಳು ಇತ್ಯಾದಿಗಳಲ್ಲಿ ಹಲವಾರು ಬಾರಿ ಸಂಭವಿಸಿದೆ. ಅಲ್ಲಿ ಸಿಖ್ ವಿದ್ಯಾರ್ಥಿಗಳನ್ನು ತಮ್ಮ ದೇಹದ ಮೇಲೆ ಐದು ಕಕ್ಕರ್‌ಗಳನ್ನು ಧರಿಸಲು ಅನುಮತಿ ನೀಡದೆ ಅವಮಾನಿಸಲಾಗಿದೆ. ಈ ವಿದ್ಯಾರ್ಥಿಗಳು ಅನೇಕ ಬಾರಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಸ್ಪರ್ಧಿಸಲು ವಿಫಲರಾಗುತ್ತಾರೆ.  ಹೀಗಾಗಿ ವಿಶೇಷವಾಗಿ ದಕ್ಷಿಣ ಭಾರತದಲ್ಲಿ ಪ್ರಮುಖ ಜಾಗೃತಿ ಸಮಸ್ಯೆ ಕಂಡುಬರುತ್ತಿದೆ. ಸಿಖ್ ಆಚರಣೆಗಳು, ಸಂಸ್ಕೃತಿ ಮತ್ತು ಐದು ಕಕ್ಕರ್‌ಗಳ ಪ್ರಾಮುಖ್ಯತೆಯ ಕುರಿತು ಸಂಬಂಧಿತ ಸರ್ಕಾರಿ ಅಧಿಕಾರಿಗಳಿಂದ ಈ ಸಂಸ್ಥೆಗಳಿಗೆ ಸೂಚನೆಗಳನ್ನು ನೀಡಬೇಕು. ಸಿಖ್ ರೆಹತ್ ಮರ್ಯಾದಾ ಮತ್ತು ಭಾರತದ ಸಂವಿಧಾನದ ಆರ್ಟಿಕಲ್ 25ರ ಪ್ರಕಾರ ಸಿಖ್ ಸಮುದಾಯವು ತಮ್ಮ ನಂಬಿಕೆಯನ್ನು ಮುಕ್ತವಾಗಿ ಅನುಸರಿಸಲು ಶ್ರೀ ಗುರು ಸಿಂಗ್ ಸಭಾ ಎಲ್ಲಾ ಸಂಸ್ಥೆಗಳಿಗೆ ಒಂದು ಸುತ್ತೋಲೆ ಕಳುಹಿಸುವ ಅಗತ್ಯವಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಸಾಮಾನ್ಯ ಜನರ ಸ್ಥಿತಿ ನೆನೆದು ಆತಂಕವಾಗುತ್ತಿದೆ, ಇದಕ್ಕೆ ಹೋರಾಟವೊಂದೇ ಪರಿಹಾರ: ಮೇಘಾ

ಇನ್ನು ಈ ಘಟನೆ ಕುರಿತು ನಾನುಗೌರಿ.ಕಾಂ ಜೊತೆಗೆ ಮಾತನಾಡಿರುವ ಲೇಖಕ ಅಮನ್‌ದೀಪ್ ಸಂಧು, “ಸದ್ಯದಲ್ಲಿ ಈ ಘಟನೆಯ ವಿಚಾರಣೆ ವೇಗ ಪಡೆಯಬೇಕು. ಪ್ರಕರಣ ಬೀದಿಗಿಳಿದೆರೆ ನಿಜಕ್ಕೂ ಕೆಟ್ಟ ಸ್ಥಿತಿ ಉಂಟಾಗುತ್ತದೆ. ಸಂವಿಧಾನದ ಆರ್ಟಿಕಲ್ 25 ಸಿಖ್ ಪುರುಷ ಮತ್ತು ಮಹಿಳೆಯರಿಗೆ ಟರ್ಬನ್ ಧರಿಸುವ ಹಕ್ಕು ನೀಡಿದೆ. ಆದ್ದರಿಂದ ಇದು ಸಂವಿಧಾನದ ಉಲ್ಲಂಘನೆಯಗುತ್ತದೆ. ಹೈಕೋರ್ಟ್ ಆದೇಶವನ್ನು ತಪ್ಪಾಗಿ ಅರ್ಥೈಸಲಾಗಿದೆ. ಯಾರಿಗೆ ಏನು ಬೇಕೊ ಅದನ್ನು ಧರಿಸಲು ನ್ಯಾಯಾಲಯ ಅನುಮತಿ ನೀಡಬೇಕು. ಶಿಕ್ಷಣ ಮುಖ್ಯವಾಗಬೇಕೆ ಹೊರತು ಅವರು ಧರಿಸು ಬಟ್ಟೆಯಲ್ಲ. ಮುಸ್ಲಿಂಮರು ಹಿಜಾಬ್, ಸಿಖ್ಖರು ಟರ್ಬನ್, ಹಿಂದೂಗಳು ಜನಿವಾರ, ಸಿಂಧೂರ ಧರಿಸುತ್ತಾರೆ. ನಾವು ಮನುಷ್ಯರು ನಾವು ಇರುವುದೇ ಹೀಗೆ…ಹೀಗಾಗಿ ಶಿಕ್ಷಣ ಮುಖ್ಯವಾಗಬೇಕು” ಎಂದಿದ್ದಾರೆ.

“ಇದಲ್ಲದೇ ಟರ್ಬನ್ ಧರಿಸುವ ಒಂದು ಕಾರಣಕ್ಕೆ ಮಂಗಳೂರಿನಲ್ಲಿ 7 ವರ್ಷದ ಸಿಖ್ ಮಗುವಿಗೆ ಶಾಲಾ ದಾಖಲಾತಿ ನಿರಾಕರಿಸಲಾಗಿದೆ. ಇಂತಹ ವಿಚಾರ ಬೀದಿಗೆ (ಪ್ರತಿಭಟನೆಗೆ) ಬಂದರೆ ಮಾತ್ರ ಪರಿಸ್ಥಿತಿ ಅತಿ ಕೆಟ್ಟದಾಗುತ್ತದೆ. ಐತಿಹಾಸಿಕ ರೈತ ಆಂದೋಲನ ಹಿಂದುತ್ವ ಸರ್ಕಾರವನ್ನು ಸೋಲಿಸಿದೆ. ಈಗ ಮತ್ತೆ ಈ ಘಟನೆ ಹಿಂದುತ್ವಕ್ಕೆ ಭಾರಿ ಪೆಟ್ಟು ನೀಡುತ್ತದೆ. ಇದು ಈಗಾಗಲೇ ದೊಡ್ಡ ವಿವಾದವಾಗಿದೆ. ಬಿಜೆಪಿ ಆಡಳಿತದ ಮಧ್ಯಪ್ರದೇಶ, ಪುದುಚರಿ ಸೇರಿದಂತೆ ಹಲವೆಡೆ ಇಂತಹ ಘಟನೆಗಳು ನಡೆಯುತ್ತಿದೆ. ಇದು ಜನರನ್ನು ನೈಜ್ಯ ಸಮಸ್ಯೆಗಳಿಂದ ಬೇರೆಡೆಗೆ ಸೆಳೆಯುವ ಯತ್ನ” ಎಂದು ಆರೋಪಿಸಿದ್ದಾರೆ.

ನ್ಯಾಯಾಲಯದ ಮಧ್ಯಂತರ ಆದೇಶವು ಕಾಲೇಜು ಅಭಿವೃದ್ಧಿ ಸಮಿತಿಗಳು ವಿದ್ಯಾರ್ಥಿಗಳ ಡ್ರೆಸ್ ಕೋಡ್ ಅಥವಾ ಸಮವಸ್ತ್ರವನ್ನು ಸೂಚಿಸಿರುವ ಸಂಸ್ಥೆಗಳಿಗೆ ಮಾತ್ರ ಅನ್ವಯಿಸುತ್ತದೆ.


ಇದನ್ನೂ ಓದಿ: ಪೇಟ ಧರಿಸಿದವರು ಸೇನೆಯಲ್ಲಿರಬಹುದಾದರೆ, ಶಾಲೆಯಲ್ಲಿ ಹಿಜಾಬ್ ಯಾಕಿರಬಾರದು: ಹಿರಿಯ ವಕೀಲ ಪ್ರೊ. ರವಿವರ್ಮ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...