Homeಕರೋನಾ ತಲ್ಲಣಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ

- Advertisement -
- Advertisement -

ಕೊರೊನಾ ಸೋಂಕಿನ ಪ್ರಕರಣಗಳು ಸಾಪೇಕ್ಷವಾಗಿ ಕಡಿಮೆಯಾದ ಕಾರಣ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳಿಗೆ ವಿದಾಯ ಹೇಳುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ದಿಢೀರನೆ ಅಪಾರ್ಟ್‌ಮೆಂಟ್ ಒಂದರಲ್ಲಿ 103 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ಅಲ್ಲೀಗ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ.

ರಾಜ್ಯ  ರಾಜಧಾನಿ ಬೆಂಗಳೂರಿನಲ್ಲಿರುವ ಅಪಾಟ್ಮೆಂಟ್ ಸಂಕೀರ್ಣ ಒಂದರ 103 ನಿವಾಸಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ನಂತರ ಇಡೀ ಅಪಾರ್ಟ್‌ಮೆಂಟ್ ಅನ್ನು ಕಂಟೇನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಿಲ್ಲಾ ಅಧಿಕಾರಿಗಳ ತಂಡದ ಪ್ರಕಾರ, ವಸತಿ ನಿಲಯದಲ್ಲಿ ಎರಡು ವಿವಾಹ ವಾರ್ಷಿಕೋತ್ಸವದ ಪಾರ್ಟಿಗಳನ್ನು ಆಯೋಜಿಸಿದ ಕೆಲವೇ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವು ದಾಖಲಾಗಿದೆ. ದಕ್ಷಿಣ ಬೆಂಗಳೂರಿನ ಬಿಳಕೆಹಳ್ಳಿ ಪ್ರದೇಶದ ಎಸ್‌ಎನ್‌ಎನ್ ರಾಜ್ ಲೇಕ್‌ವ್ಯೂ ಅಪಾರ್ಟ್‌ಮೆಂಟ್ ಈಗ  ಹೊಸ  ಕೊರೊನಾ ವೈರಸ್ ಕ್ಲಸ್ಟರ್ ಆಗಿ ಹೊರಹೊಮ್ಮಿದೆ. ಜಿಲ್ಲಾಡಳಿತವು ಅಪಾಟ್ಮೆಂಟ್ ಸಂಕೀರ್ಣದಲ್ಲಿ ಕಳೆದ ವಾರದಿಂದ ಸಾಮೂಹಿಕ ಕೊರೊನಾ ಪರೀಕ್ಷೆಗೆ ಚಾಲನೆ ನೀಡಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

“ನಾವು ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆ ಕಂಡಿದ್ದೇವೆ – ಫೆಬ್ರವರಿ 11 ರಂದು 7 ಪ್ರಕರಣಗಳು, ಫೆಬ್ರವರಿ 12 ರಂದು 17 ಪ್ರಕರಣಗಳು ವರದಿಯಾಗಿವೆ. ಫೆಬ್ರವರಿ 13 ರಂದು ಬಿಬಿಎಂಪಿ ಹೆಚ್ಚಿನ ತನಿಖೆಗಾಗಿ ಅಪಾರ್ಟ್‌ಮೆಂಟ್‌ಗೆ  ಧಾವಿಸಿ,  ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿದೆವು. 399 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. 1,190 ಜನರನ್ನು ಪರೀಕ್ಷಿಸಲಾಯಿತು, ಅದರಲ್ಲಿ 103 ಮಂದಿಗೆ ಸೋಂಕು ಧೃಡಪಟ್ಟಿದೆ. 103 ರಲ್ಲಿ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ “ಎಂದು ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿನ ವರದಿ ಮಾಡಿದೆ.

“ಫೆಬ್ರವರಿ 6 ಮತ್ತು 7 ರಂದು ಎರಡು ವಾರ್ಷಿಕೋತ್ಸವದ ಪಾರ್ಟಿಗಳು ನಡೆದಿವೆ ಎಂದು ನಮಗೆ ಮಾಹಿತಿ ದೊರೆತಿದೆ” ಎಂದು ಅವರು ಹೇಳಿದರು.

ಪಾಸಿಟಿವ್ ಕಂಡುಬಂದವರಲ್ಲಿ  ಹೆಚ್ಚಿನವರು 50 ಕ್ಕಿಂತ ಕಡಿಮೆ ವಯಸ್ಸಿನವರು ಮತ್ತು ರೋಗಲಕ್ಷಣವಿಲ್ಲದವರು ಎಂದು ಪ್ರದೇಶದ ತನಿಖೆ ನಡೆಸುತ್ತಿರುವ ವೈದ್ಯಕೀಯ ಅಧಿಕಾರಿ ಡಾ.ಕೃಷ್ಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್ ಪಾಲಿಸಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಬೊಮನಹಳ್ಳಿ ರಾಮಕೃಷ್ಣ ತಿಳಿಸಿದ್ದಾರೆ.

ಕಳೆದ ವರ್ಷ ಪ್ರತಿದಿನ ಒಂದು ಲಕ್ಷ ಪ್ರಕರಣಗಳನ್ನು ವರದಿ ಮಾಡುತ್ತಿದ್ದ ಭಾರತ, ಕಳೆದ ಕೆಲವು ದಿನಗಳಿಂದ 10,000 ಪ್ರಕರಣಗಳನ್ನು ದಾಖಲಿಸುತ್ತಿದೆ. ಅಮೆರಿಕ ನಂತರ ಎರಡನೇ ಅತಿ ಹೆಚ್ಚು ಹಾನಿಗೊಳಗಾದ ದೇಶದಲ್ಲಿ ಇತ್ತೀಚೆಗೆ ಕಡಿಮೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರವು ಕಳೆದ ತಿಂಗಳು ಘೋಷಿಸಿತ್ತು.

ಆದರೂ, ವಿದೇಶದಲ್ಲಿ ಕೊರೊನಾ ರೂಪಾಂತರಿತ ತಳಿಗಳು ಕಂಡು ಬಂದ ಕಾರಣ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮ  ಕೈಬಿಡದಂತೆ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಕರ್ನಾಟಕವು ಪ್ರಸ್ತುತ ಮಹಾರಾಷ್ಟ್ರ ಮತ್ತು ಕೇರಳದ ನಂತರದ ಮೂರನೇ ಅತಿ ಹೆಚ್ಚು ಕೊರೊನಾ ಬಾಧಿತ ರಾಜ್ಯವಾಗಿದೆ.


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...