Homeಕರೋನಾ ತಲ್ಲಣಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ

- Advertisement -
- Advertisement -

ಕೊರೊನಾ ಸೋಂಕಿನ ಪ್ರಕರಣಗಳು ಸಾಪೇಕ್ಷವಾಗಿ ಕಡಿಮೆಯಾದ ಕಾರಣ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳಿಗೆ ವಿದಾಯ ಹೇಳುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ದಿಢೀರನೆ ಅಪಾರ್ಟ್‌ಮೆಂಟ್ ಒಂದರಲ್ಲಿ 103 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ಅಲ್ಲೀಗ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ.

ರಾಜ್ಯ  ರಾಜಧಾನಿ ಬೆಂಗಳೂರಿನಲ್ಲಿರುವ ಅಪಾಟ್ಮೆಂಟ್ ಸಂಕೀರ್ಣ ಒಂದರ 103 ನಿವಾಸಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ನಂತರ ಇಡೀ ಅಪಾರ್ಟ್‌ಮೆಂಟ್ ಅನ್ನು ಕಂಟೇನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಿಲ್ಲಾ ಅಧಿಕಾರಿಗಳ ತಂಡದ ಪ್ರಕಾರ, ವಸತಿ ನಿಲಯದಲ್ಲಿ ಎರಡು ವಿವಾಹ ವಾರ್ಷಿಕೋತ್ಸವದ ಪಾರ್ಟಿಗಳನ್ನು ಆಯೋಜಿಸಿದ ಕೆಲವೇ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವು ದಾಖಲಾಗಿದೆ. ದಕ್ಷಿಣ ಬೆಂಗಳೂರಿನ ಬಿಳಕೆಹಳ್ಳಿ ಪ್ರದೇಶದ ಎಸ್‌ಎನ್‌ಎನ್ ರಾಜ್ ಲೇಕ್‌ವ್ಯೂ ಅಪಾರ್ಟ್‌ಮೆಂಟ್ ಈಗ  ಹೊಸ  ಕೊರೊನಾ ವೈರಸ್ ಕ್ಲಸ್ಟರ್ ಆಗಿ ಹೊರಹೊಮ್ಮಿದೆ. ಜಿಲ್ಲಾಡಳಿತವು ಅಪಾಟ್ಮೆಂಟ್ ಸಂಕೀರ್ಣದಲ್ಲಿ ಕಳೆದ ವಾರದಿಂದ ಸಾಮೂಹಿಕ ಕೊರೊನಾ ಪರೀಕ್ಷೆಗೆ ಚಾಲನೆ ನೀಡಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

“ನಾವು ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆ ಕಂಡಿದ್ದೇವೆ – ಫೆಬ್ರವರಿ 11 ರಂದು 7 ಪ್ರಕರಣಗಳು, ಫೆಬ್ರವರಿ 12 ರಂದು 17 ಪ್ರಕರಣಗಳು ವರದಿಯಾಗಿವೆ. ಫೆಬ್ರವರಿ 13 ರಂದು ಬಿಬಿಎಂಪಿ ಹೆಚ್ಚಿನ ತನಿಖೆಗಾಗಿ ಅಪಾರ್ಟ್‌ಮೆಂಟ್‌ಗೆ  ಧಾವಿಸಿ,  ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿದೆವು. 399 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. 1,190 ಜನರನ್ನು ಪರೀಕ್ಷಿಸಲಾಯಿತು, ಅದರಲ್ಲಿ 103 ಮಂದಿಗೆ ಸೋಂಕು ಧೃಡಪಟ್ಟಿದೆ. 103 ರಲ್ಲಿ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ “ಎಂದು ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿನ ವರದಿ ಮಾಡಿದೆ.

“ಫೆಬ್ರವರಿ 6 ಮತ್ತು 7 ರಂದು ಎರಡು ವಾರ್ಷಿಕೋತ್ಸವದ ಪಾರ್ಟಿಗಳು ನಡೆದಿವೆ ಎಂದು ನಮಗೆ ಮಾಹಿತಿ ದೊರೆತಿದೆ” ಎಂದು ಅವರು ಹೇಳಿದರು.

ಪಾಸಿಟಿವ್ ಕಂಡುಬಂದವರಲ್ಲಿ  ಹೆಚ್ಚಿನವರು 50 ಕ್ಕಿಂತ ಕಡಿಮೆ ವಯಸ್ಸಿನವರು ಮತ್ತು ರೋಗಲಕ್ಷಣವಿಲ್ಲದವರು ಎಂದು ಪ್ರದೇಶದ ತನಿಖೆ ನಡೆಸುತ್ತಿರುವ ವೈದ್ಯಕೀಯ ಅಧಿಕಾರಿ ಡಾ.ಕೃಷ್ಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್ ಪಾಲಿಸಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಬೊಮನಹಳ್ಳಿ ರಾಮಕೃಷ್ಣ ತಿಳಿಸಿದ್ದಾರೆ.

ಕಳೆದ ವರ್ಷ ಪ್ರತಿದಿನ ಒಂದು ಲಕ್ಷ ಪ್ರಕರಣಗಳನ್ನು ವರದಿ ಮಾಡುತ್ತಿದ್ದ ಭಾರತ, ಕಳೆದ ಕೆಲವು ದಿನಗಳಿಂದ 10,000 ಪ್ರಕರಣಗಳನ್ನು ದಾಖಲಿಸುತ್ತಿದೆ. ಅಮೆರಿಕ ನಂತರ ಎರಡನೇ ಅತಿ ಹೆಚ್ಚು ಹಾನಿಗೊಳಗಾದ ದೇಶದಲ್ಲಿ ಇತ್ತೀಚೆಗೆ ಕಡಿಮೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರವು ಕಳೆದ ತಿಂಗಳು ಘೋಷಿಸಿತ್ತು.

ಆದರೂ, ವಿದೇಶದಲ್ಲಿ ಕೊರೊನಾ ರೂಪಾಂತರಿತ ತಳಿಗಳು ಕಂಡು ಬಂದ ಕಾರಣ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮ  ಕೈಬಿಡದಂತೆ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಕರ್ನಾಟಕವು ಪ್ರಸ್ತುತ ಮಹಾರಾಷ್ಟ್ರ ಮತ್ತು ಕೇರಳದ ನಂತರದ ಮೂರನೇ ಅತಿ ಹೆಚ್ಚು ಕೊರೊನಾ ಬಾಧಿತ ರಾಜ್ಯವಾಗಿದೆ.


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...