Homeಕರೋನಾ ತಲ್ಲಣಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಬೆಂಗಳೂರು:1 ಅಪಾರ್ಟ್‌ಮೆಂಟ್, 2 ಪಾರ್ಟಿ, 103 ಕೊರೊನಾ ಕೇಸ್!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್‌ನಲ್ಲಿರಲು ಸೂಚಿಸಲಾಗಿದೆ

- Advertisement -
- Advertisement -

ಕೊರೊನಾ ಸೋಂಕಿನ ಪ್ರಕರಣಗಳು ಸಾಪೇಕ್ಷವಾಗಿ ಕಡಿಮೆಯಾದ ಕಾರಣ, ಸಾರ್ವಜನಿಕರು ಮುನ್ನೆಚ್ಚರಿಕೆ ಕ್ರಮಗಳಿಗೆ ವಿದಾಯ ಹೇಳುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ದಿಢೀರನೆ ಅಪಾರ್ಟ್‌ಮೆಂಟ್ ಒಂದರಲ್ಲಿ 103 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಸದ್ಯ ಅಲ್ಲೀಗ ಸಾಮೂಹಿಕ ಕೊರೊನಾ ಪರೀಕ್ಷೆ ನಡೆಸಲಾಗುತ್ತಿದೆ.

ರಾಜ್ಯ  ರಾಜಧಾನಿ ಬೆಂಗಳೂರಿನಲ್ಲಿರುವ ಅಪಾಟ್ಮೆಂಟ್ ಸಂಕೀರ್ಣ ಒಂದರ 103 ನಿವಾಸಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟ ನಂತರ ಇಡೀ ಅಪಾರ್ಟ್‌ಮೆಂಟ್ ಅನ್ನು ಕಂಟೇನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಜಿಲ್ಲಾ ಅಧಿಕಾರಿಗಳ ತಂಡದ ಪ್ರಕಾರ, ವಸತಿ ನಿಲಯದಲ್ಲಿ ಎರಡು ವಿವಾಹ ವಾರ್ಷಿಕೋತ್ಸವದ ಪಾರ್ಟಿಗಳನ್ನು ಆಯೋಜಿಸಿದ ಕೆಲವೇ ದಿನಗಳಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವು ದಾಖಲಾಗಿದೆ. ದಕ್ಷಿಣ ಬೆಂಗಳೂರಿನ ಬಿಳಕೆಹಳ್ಳಿ ಪ್ರದೇಶದ ಎಸ್‌ಎನ್‌ಎನ್ ರಾಜ್ ಲೇಕ್‌ವ್ಯೂ ಅಪಾರ್ಟ್‌ಮೆಂಟ್ ಈಗ  ಹೊಸ  ಕೊರೊನಾ ವೈರಸ್ ಕ್ಲಸ್ಟರ್ ಆಗಿ ಹೊರಹೊಮ್ಮಿದೆ. ಜಿಲ್ಲಾಡಳಿತವು ಅಪಾಟ್ಮೆಂಟ್ ಸಂಕೀರ್ಣದಲ್ಲಿ ಕಳೆದ ವಾರದಿಂದ ಸಾಮೂಹಿಕ ಕೊರೊನಾ ಪರೀಕ್ಷೆಗೆ ಚಾಲನೆ ನೀಡಿದೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪೂರ್ಣಗೊಂಡ ಕೂಡಲೇ ಸಿಎಎ ಜಾರಿ: ಅಮಿತ್ ಶಾ

“ನಾವು ಪ್ರಕರಣಗಳ ಸಂಖ್ಯೆಯಲ್ಲಿ ಹಠಾತ್ ಏರಿಕೆ ಕಂಡಿದ್ದೇವೆ – ಫೆಬ್ರವರಿ 11 ರಂದು 7 ಪ್ರಕರಣಗಳು, ಫೆಬ್ರವರಿ 12 ರಂದು 17 ಪ್ರಕರಣಗಳು ವರದಿಯಾಗಿವೆ. ಫೆಬ್ರವರಿ 13 ರಂದು ಬಿಬಿಎಂಪಿ ಹೆಚ್ಚಿನ ತನಿಖೆಗಾಗಿ ಅಪಾರ್ಟ್‌ಮೆಂಟ್‌ಗೆ  ಧಾವಿಸಿ,  ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿದೆವು. 399 ಮನೆಗಳನ್ನು ಸಮೀಕ್ಷೆ ಮಾಡಲಾಗಿದೆ. 1,190 ಜನರನ್ನು ಪರೀಕ್ಷಿಸಲಾಯಿತು, ಅದರಲ್ಲಿ 103 ಮಂದಿಗೆ ಸೋಂಕು ಧೃಡಪಟ್ಟಿದೆ. 103 ರಲ್ಲಿ ಒಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ “ಎಂದು ಜಿಲ್ಲೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ಎನ್‌ಡಿಟಿವಿನ ವರದಿ ಮಾಡಿದೆ.

“ಫೆಬ್ರವರಿ 6 ಮತ್ತು 7 ರಂದು ಎರಡು ವಾರ್ಷಿಕೋತ್ಸವದ ಪಾರ್ಟಿಗಳು ನಡೆದಿವೆ ಎಂದು ನಮಗೆ ಮಾಹಿತಿ ದೊರೆತಿದೆ” ಎಂದು ಅವರು ಹೇಳಿದರು.

ಪಾಸಿಟಿವ್ ಕಂಡುಬಂದವರಲ್ಲಿ  ಹೆಚ್ಚಿನವರು 50 ಕ್ಕಿಂತ ಕಡಿಮೆ ವಯಸ್ಸಿನವರು ಮತ್ತು ರೋಗಲಕ್ಷಣವಿಲ್ಲದವರು ಎಂದು ಪ್ರದೇಶದ ತನಿಖೆ ನಡೆಸುತ್ತಿರುವ ವೈದ್ಯಕೀಯ ಅಧಿಕಾರಿ ಡಾ.ಕೃಷ್ಣಪ್ಪ ತಿಳಿಸಿದ್ದಾರೆ.

ಇದನ್ನೂ ಓದಿ: ಫೈಜರ್ ಲಸಿಕೆ ಪಡೆದ 12,400 ಕ್ಕೂ ಹೆಚ್ಚು ಜನರಿಗೆ ಕೊರೊನಾ ಸೋಂಕು ದೃಢ!

ಅಪಾರ್ಟ್‌ಮೆಂಟ್ ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ ಮತ್ತು ಪ್ರತಿ ನಿವಾಸಿಗಳಿಗೆ ಮುಂದಿನ ಸೂಚನೆ ಬರುವವರೆಗೂ ಹೋಂ ಐಸೋಲೇಷನ್ ಪಾಲಿಸಲು ಸೂಚಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ಆಯುಕ್ತ ಬೊಮನಹಳ್ಳಿ ರಾಮಕೃಷ್ಣ ತಿಳಿಸಿದ್ದಾರೆ.

ಕಳೆದ ವರ್ಷ ಪ್ರತಿದಿನ ಒಂದು ಲಕ್ಷ ಪ್ರಕರಣಗಳನ್ನು ವರದಿ ಮಾಡುತ್ತಿದ್ದ ಭಾರತ, ಕಳೆದ ಕೆಲವು ದಿನಗಳಿಂದ 10,000 ಪ್ರಕರಣಗಳನ್ನು ದಾಖಲಿಸುತ್ತಿದೆ. ಅಮೆರಿಕ ನಂತರ ಎರಡನೇ ಅತಿ ಹೆಚ್ಚು ಹಾನಿಗೊಳಗಾದ ದೇಶದಲ್ಲಿ ಇತ್ತೀಚೆಗೆ ಕಡಿಮೆ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಸರ್ಕಾರವು ಕಳೆದ ತಿಂಗಳು ಘೋಷಿಸಿತ್ತು.

ಆದರೂ, ವಿದೇಶದಲ್ಲಿ ಕೊರೊನಾ ರೂಪಾಂತರಿತ ತಳಿಗಳು ಕಂಡು ಬಂದ ಕಾರಣ ವೈರಸ್ ವಿರುದ್ಧ ಮುಂಜಾಗ್ರತಾ ಕ್ರಮ  ಕೈಬಿಡದಂತೆ ತಜ್ಞರು ಎಚ್ಚರಿಕೆ ನೀಡುತ್ತಿದ್ದಾರೆ. ಕರ್ನಾಟಕವು ಪ್ರಸ್ತುತ ಮಹಾರಾಷ್ಟ್ರ ಮತ್ತು ಕೇರಳದ ನಂತರದ ಮೂರನೇ ಅತಿ ಹೆಚ್ಚು ಕೊರೊನಾ ಬಾಧಿತ ರಾಜ್ಯವಾಗಿದೆ.


ಇದನ್ನೂ ಓದಿ: ಟೀ ಮಾರುವವನಿಗೆ ಬಡವರ ನೋವಿನ ಅರಿವಿರುತ್ತೆ ಎಂಬ ಭ್ರಮೆಯಲ್ಲಿ ಮತ ನೀಡಿದ್ದೆವು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...