Homeಕರ್ನಾಟಕಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

- Advertisement -
- Advertisement -

ಭಾರತದಾದ್ಯಂತ ಸುಮಾರು 122 ಪ್ರಕರಣಗಳಲ್ಲಿ ಬೇಕಾಗಿದ್ದ 10 ಸೈಬರ್ ವಂಚಕರನ್ನು ಬೆಂಗಳೂರು ಉತ್ತರ ಸೆನ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆನ್‌ಲೈನ್ ಟಾಸ್ಕ್ ಮೂಲಕ ಅಥವಾ ಆನ್‌ಲೈನ್ ಉದ್ಯೋಗ ವಂಚನೆಯ ಮೂಲಕ ಜನರನ್ನು ವಂಚಿಸುತ್ತಿದ್ದರು. ಪ್ರಕರಣದ ಕಿಂಗ್‌ಪಿನ್‌ಗಳು ಚೀನಾದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಆರೋಪಿಗಳ ಪೈಕಿ ಮೂವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಮೂಲಕ ಬಂಧಿಸಲಾಗಿದೆ. ಆರೋಪಿಗಳು ಪೀಣ್ಯದ ನೆಲಗದರನಹಳ್ಳಿಯಲ್ಲಿರುವ ಕಚೇರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ. ಮಹಿಳೆಯೊಬ್ಬರು ಸುಮಾರು 25 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಅವರು ಜುಲೈ 3, 2024 ರಂದು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಆರೋಪಿಗಳ ಬಂಧನ ನಡೆದಿದೆ.

ಸೆನ್ ಪೊಲೀಸರು 72 ಮೊಬೈಲ್ ಫೋನ್‌ಗಳು, 182 ಡೆಬಿಟ್ ಕಾರ್ಡ್‌ಗಳು, ವಿವಿಧ ಟೆಲಿಕಾಂ ಆಪರೇಟರ್‌ಗಳ 133 ಸಿಮ್ ಕಾರ್ಡ್‌ಗಳು, 127 ಬ್ಯಾಂಕ್ ಪಾಸ್‌ಬುಕ್‌ಗಳು ಮತ್ತು 1.74 ಲಕ್ಷ ರೂ ನಗದು ಹಾಗೂ ಆರೋಪಿಗಳು ಸಂತ್ರಸ್ತರಿಗೆ ವಂಚಿಸಲು ಬಳಸಿದ ಖಾತೆಗಳಲ್ಲಿ 7.34 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಇದನ್ನೂಓದಿ: ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

ಆರೋಪಿಗಳನ್ನು ಓಂ ಪ್ರಕಾಶ್, ಸೈಯದ್ ಯಾಹ್ಯಾ, ತೇಜಸ್, ಉಮರ್ ಫಾರೂಕ್, ಚೇತನ್, ಮೊಹಮ್ಮದ್ ಮಾಹೀನ್, ಮೊಹಮ್ಮದ್ ಮುಝಮ್ಮಿಲ್, ವಾಸಿಂ, ಸೈಯದ್ ಜೈದ್ ಮತ್ತು ಸಾಹಿ ಅಬ್ದುಲ್ ಅನನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, ಆರೋಪಿಗಳು 122 ಪ್ರಕರಣಗಳಲ್ಲಿ ಬೇಕಾಗಿದ್ದಾರೆ.

ಆರೋಪಿಗಳು ಸಾಮಾಜಿಕ ಮಾಧ್ಯಮದ ಮೂಲಕ ಸಂತ್ರಸ್ತರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ನೀಡಿದ ಕೆಲಸವನ್ನು ಪೂರ್ಣಗೊಳಿಸಲು ಹೇಳಿ ಪಾವತಿ ಮಾಡುವುದಾಗಿ ಆಮಿಷವೊಡ್ಡುತ್ತಿದ್ದರು. ಆಸಕ್ತರಾದ ಸಂತ್ರಸ್ತರನ್ನು ಆರೋಪಿಗಳು ರಚಿಸಿದ ಟೆಲಿಗ್ರಾಂ ಗುಂಪುಗಳಿಗೆ ಸೇರಿಸಲಾಗುತ್ತಿತ್ತು.

ಆರೋಪಿಗಳು ಮೊದಲು ಐಷಾರಾಮಿ ಹೋಟೆಲ್‌ಗಳ ರಿವೀವ್ ಬರೆಯುವಂತೆ ಮತ್ತು ಅದಕ್ಕಾಗಿ 150 ರಿಂದ 200 ರೂಪಾಯಿಗಳನ್ನು ನೀಡುವ ಮೂಲಕ ಸಂತ್ರಸ್ತರ ವಿಶ್ವಾಸವನ್ನು ಗಳಿಸುತ್ತಿದ್ದರು. ಸಂತ್ರಸ್ತರನ್ನು ಬಲೆಗೆ ಬೀಳಿಸಲು ಹೆಚ್ಚುವರಿ ಬೋನಸ್‌ಗಳನ್ನು ಸಹ ನೀಡಲಾಗುತ್ತಿತ್ತು.

ಇದನ್ನೂಓದಿ:  ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಅವರ ವಿಶ್ವಾಸವನ್ನು ಗಳಿಸಿದ ನಂತರ, ಹೆಚ್ಚಿನ ಲಾಭಕ್ಕಾಗಿ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಸಂತ್ರಸ್ತರನ್ನು ಕೇಳಲಾಗುತ್ತಿತ್ತು. ಅದರಂತೆ ಬಾಗಲಗುಂಟೆಯ ಟಿ ದಾಸರಹಳ್ಳಿ ನಿವಾಸಿ ಮಹಿಳೆ 25 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದರು.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರಿನಲ್ಲಿ ಬ್ಯಾಂಕ್ ಖಾತೆಗಳ ಮೂಲಕ ವಹಿವಾಟು ನಡೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಖಾತೆಗಳ ವಿವರಗಳನ್ನು ಆಧರಿಸಿ, ಏಳು ಆರೋಪಿಗಳನ್ನು ಮೊದಲು ಆರ್‌ಟಿ ನಗರ ಬಳಿ ಬಂಧಿಸಲಾಯಿತು. ಅವರು ಚೀನಾದ ಕಿಂಗ್‌ಪಿನ್‌ಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು. ಚೀನಾಕ್ಕೆ ತೆರಳಿದ್ದ ಇತರ ಮೂವರು ಆರೋಪಿಗಳು ಸೆ.15ರಂದು ವಾಪಸ್ ಬಂದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪೊಲೀಸರು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೀಣ್ಯದಲ್ಲಿರುವ ಅವರ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮೂವರು ಸಂಪಿಗೆಹಳ್ಳಿಯ ಪಿಜಿ ಸೌಲಭ್ಯದಲ್ಲಿ ತಂಗಿದ್ದು, ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದ ವಿರುದ್ಧ ಆಂಧ್ರಪ್ರದೇಶ, ಒಡಿಶಾ, ದೆಹಲಿ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...