Homeಕರ್ನಾಟಕಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

- Advertisement -
- Advertisement -

ಭಾರತದಾದ್ಯಂತ ಸುಮಾರು 122 ಪ್ರಕರಣಗಳಲ್ಲಿ ಬೇಕಾಗಿದ್ದ 10 ಸೈಬರ್ ವಂಚಕರನ್ನು ಬೆಂಗಳೂರು ಉತ್ತರ ಸೆನ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆನ್‌ಲೈನ್ ಟಾಸ್ಕ್ ಮೂಲಕ ಅಥವಾ ಆನ್‌ಲೈನ್ ಉದ್ಯೋಗ ವಂಚನೆಯ ಮೂಲಕ ಜನರನ್ನು ವಂಚಿಸುತ್ತಿದ್ದರು. ಪ್ರಕರಣದ ಕಿಂಗ್‌ಪಿನ್‌ಗಳು ಚೀನಾದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಆರೋಪಿಗಳ ಪೈಕಿ ಮೂವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಮೂಲಕ ಬಂಧಿಸಲಾಗಿದೆ. ಆರೋಪಿಗಳು ಪೀಣ್ಯದ ನೆಲಗದರನಹಳ್ಳಿಯಲ್ಲಿರುವ ಕಚೇರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ. ಮಹಿಳೆಯೊಬ್ಬರು ಸುಮಾರು 25 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಅವರು ಜುಲೈ 3, 2024 ರಂದು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಆರೋಪಿಗಳ ಬಂಧನ ನಡೆದಿದೆ.

ಸೆನ್ ಪೊಲೀಸರು 72 ಮೊಬೈಲ್ ಫೋನ್‌ಗಳು, 182 ಡೆಬಿಟ್ ಕಾರ್ಡ್‌ಗಳು, ವಿವಿಧ ಟೆಲಿಕಾಂ ಆಪರೇಟರ್‌ಗಳ 133 ಸಿಮ್ ಕಾರ್ಡ್‌ಗಳು, 127 ಬ್ಯಾಂಕ್ ಪಾಸ್‌ಬುಕ್‌ಗಳು ಮತ್ತು 1.74 ಲಕ್ಷ ರೂ ನಗದು ಹಾಗೂ ಆರೋಪಿಗಳು ಸಂತ್ರಸ್ತರಿಗೆ ವಂಚಿಸಲು ಬಳಸಿದ ಖಾತೆಗಳಲ್ಲಿ 7.34 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಇದನ್ನೂಓದಿ: ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

ಆರೋಪಿಗಳನ್ನು ಓಂ ಪ್ರಕಾಶ್, ಸೈಯದ್ ಯಾಹ್ಯಾ, ತೇಜಸ್, ಉಮರ್ ಫಾರೂಕ್, ಚೇತನ್, ಮೊಹಮ್ಮದ್ ಮಾಹೀನ್, ಮೊಹಮ್ಮದ್ ಮುಝಮ್ಮಿಲ್, ವಾಸಿಂ, ಸೈಯದ್ ಜೈದ್ ಮತ್ತು ಸಾಹಿ ಅಬ್ದುಲ್ ಅನನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, ಆರೋಪಿಗಳು 122 ಪ್ರಕರಣಗಳಲ್ಲಿ ಬೇಕಾಗಿದ್ದಾರೆ.

ಆರೋಪಿಗಳು ಸಾಮಾಜಿಕ ಮಾಧ್ಯಮದ ಮೂಲಕ ಸಂತ್ರಸ್ತರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ನೀಡಿದ ಕೆಲಸವನ್ನು ಪೂರ್ಣಗೊಳಿಸಲು ಹೇಳಿ ಪಾವತಿ ಮಾಡುವುದಾಗಿ ಆಮಿಷವೊಡ್ಡುತ್ತಿದ್ದರು. ಆಸಕ್ತರಾದ ಸಂತ್ರಸ್ತರನ್ನು ಆರೋಪಿಗಳು ರಚಿಸಿದ ಟೆಲಿಗ್ರಾಂ ಗುಂಪುಗಳಿಗೆ ಸೇರಿಸಲಾಗುತ್ತಿತ್ತು.

ಆರೋಪಿಗಳು ಮೊದಲು ಐಷಾರಾಮಿ ಹೋಟೆಲ್‌ಗಳ ರಿವೀವ್ ಬರೆಯುವಂತೆ ಮತ್ತು ಅದಕ್ಕಾಗಿ 150 ರಿಂದ 200 ರೂಪಾಯಿಗಳನ್ನು ನೀಡುವ ಮೂಲಕ ಸಂತ್ರಸ್ತರ ವಿಶ್ವಾಸವನ್ನು ಗಳಿಸುತ್ತಿದ್ದರು. ಸಂತ್ರಸ್ತರನ್ನು ಬಲೆಗೆ ಬೀಳಿಸಲು ಹೆಚ್ಚುವರಿ ಬೋನಸ್‌ಗಳನ್ನು ಸಹ ನೀಡಲಾಗುತ್ತಿತ್ತು.

ಇದನ್ನೂಓದಿ:  ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಅವರ ವಿಶ್ವಾಸವನ್ನು ಗಳಿಸಿದ ನಂತರ, ಹೆಚ್ಚಿನ ಲಾಭಕ್ಕಾಗಿ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಸಂತ್ರಸ್ತರನ್ನು ಕೇಳಲಾಗುತ್ತಿತ್ತು. ಅದರಂತೆ ಬಾಗಲಗುಂಟೆಯ ಟಿ ದಾಸರಹಳ್ಳಿ ನಿವಾಸಿ ಮಹಿಳೆ 25 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದರು.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರಿನಲ್ಲಿ ಬ್ಯಾಂಕ್ ಖಾತೆಗಳ ಮೂಲಕ ವಹಿವಾಟು ನಡೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಖಾತೆಗಳ ವಿವರಗಳನ್ನು ಆಧರಿಸಿ, ಏಳು ಆರೋಪಿಗಳನ್ನು ಮೊದಲು ಆರ್‌ಟಿ ನಗರ ಬಳಿ ಬಂಧಿಸಲಾಯಿತು. ಅವರು ಚೀನಾದ ಕಿಂಗ್‌ಪಿನ್‌ಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು. ಚೀನಾಕ್ಕೆ ತೆರಳಿದ್ದ ಇತರ ಮೂವರು ಆರೋಪಿಗಳು ಸೆ.15ರಂದು ವಾಪಸ್ ಬಂದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪೊಲೀಸರು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೀಣ್ಯದಲ್ಲಿರುವ ಅವರ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮೂವರು ಸಂಪಿಗೆಹಳ್ಳಿಯ ಪಿಜಿ ಸೌಲಭ್ಯದಲ್ಲಿ ತಂಗಿದ್ದು, ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದ ವಿರುದ್ಧ ಆಂಧ್ರಪ್ರದೇಶ, ಒಡಿಶಾ, ದೆಹಲಿ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...