Homeಕರ್ನಾಟಕಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

- Advertisement -
- Advertisement -

ಭಾರತದಾದ್ಯಂತ ಸುಮಾರು 122 ಪ್ರಕರಣಗಳಲ್ಲಿ ಬೇಕಾಗಿದ್ದ 10 ಸೈಬರ್ ವಂಚಕರನ್ನು ಬೆಂಗಳೂರು ಉತ್ತರ ಸೆನ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆನ್‌ಲೈನ್ ಟಾಸ್ಕ್ ಮೂಲಕ ಅಥವಾ ಆನ್‌ಲೈನ್ ಉದ್ಯೋಗ ವಂಚನೆಯ ಮೂಲಕ ಜನರನ್ನು ವಂಚಿಸುತ್ತಿದ್ದರು. ಪ್ರಕರಣದ ಕಿಂಗ್‌ಪಿನ್‌ಗಳು ಚೀನಾದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಆರೋಪಿಗಳ ಪೈಕಿ ಮೂವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಮೂಲಕ ಬಂಧಿಸಲಾಗಿದೆ. ಆರೋಪಿಗಳು ಪೀಣ್ಯದ ನೆಲಗದರನಹಳ್ಳಿಯಲ್ಲಿರುವ ಕಚೇರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ. ಮಹಿಳೆಯೊಬ್ಬರು ಸುಮಾರು 25 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಅವರು ಜುಲೈ 3, 2024 ರಂದು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಆರೋಪಿಗಳ ಬಂಧನ ನಡೆದಿದೆ.

ಸೆನ್ ಪೊಲೀಸರು 72 ಮೊಬೈಲ್ ಫೋನ್‌ಗಳು, 182 ಡೆಬಿಟ್ ಕಾರ್ಡ್‌ಗಳು, ವಿವಿಧ ಟೆಲಿಕಾಂ ಆಪರೇಟರ್‌ಗಳ 133 ಸಿಮ್ ಕಾರ್ಡ್‌ಗಳು, 127 ಬ್ಯಾಂಕ್ ಪಾಸ್‌ಬುಕ್‌ಗಳು ಮತ್ತು 1.74 ಲಕ್ಷ ರೂ ನಗದು ಹಾಗೂ ಆರೋಪಿಗಳು ಸಂತ್ರಸ್ತರಿಗೆ ವಂಚಿಸಲು ಬಳಸಿದ ಖಾತೆಗಳಲ್ಲಿ 7.34 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಇದನ್ನೂಓದಿ: ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

ಆರೋಪಿಗಳನ್ನು ಓಂ ಪ್ರಕಾಶ್, ಸೈಯದ್ ಯಾಹ್ಯಾ, ತೇಜಸ್, ಉಮರ್ ಫಾರೂಕ್, ಚೇತನ್, ಮೊಹಮ್ಮದ್ ಮಾಹೀನ್, ಮೊಹಮ್ಮದ್ ಮುಝಮ್ಮಿಲ್, ವಾಸಿಂ, ಸೈಯದ್ ಜೈದ್ ಮತ್ತು ಸಾಹಿ ಅಬ್ದುಲ್ ಅನನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, ಆರೋಪಿಗಳು 122 ಪ್ರಕರಣಗಳಲ್ಲಿ ಬೇಕಾಗಿದ್ದಾರೆ.

ಆರೋಪಿಗಳು ಸಾಮಾಜಿಕ ಮಾಧ್ಯಮದ ಮೂಲಕ ಸಂತ್ರಸ್ತರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ನೀಡಿದ ಕೆಲಸವನ್ನು ಪೂರ್ಣಗೊಳಿಸಲು ಹೇಳಿ ಪಾವತಿ ಮಾಡುವುದಾಗಿ ಆಮಿಷವೊಡ್ಡುತ್ತಿದ್ದರು. ಆಸಕ್ತರಾದ ಸಂತ್ರಸ್ತರನ್ನು ಆರೋಪಿಗಳು ರಚಿಸಿದ ಟೆಲಿಗ್ರಾಂ ಗುಂಪುಗಳಿಗೆ ಸೇರಿಸಲಾಗುತ್ತಿತ್ತು.

ಆರೋಪಿಗಳು ಮೊದಲು ಐಷಾರಾಮಿ ಹೋಟೆಲ್‌ಗಳ ರಿವೀವ್ ಬರೆಯುವಂತೆ ಮತ್ತು ಅದಕ್ಕಾಗಿ 150 ರಿಂದ 200 ರೂಪಾಯಿಗಳನ್ನು ನೀಡುವ ಮೂಲಕ ಸಂತ್ರಸ್ತರ ವಿಶ್ವಾಸವನ್ನು ಗಳಿಸುತ್ತಿದ್ದರು. ಸಂತ್ರಸ್ತರನ್ನು ಬಲೆಗೆ ಬೀಳಿಸಲು ಹೆಚ್ಚುವರಿ ಬೋನಸ್‌ಗಳನ್ನು ಸಹ ನೀಡಲಾಗುತ್ತಿತ್ತು.

ಇದನ್ನೂಓದಿ:  ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಅವರ ವಿಶ್ವಾಸವನ್ನು ಗಳಿಸಿದ ನಂತರ, ಹೆಚ್ಚಿನ ಲಾಭಕ್ಕಾಗಿ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಸಂತ್ರಸ್ತರನ್ನು ಕೇಳಲಾಗುತ್ತಿತ್ತು. ಅದರಂತೆ ಬಾಗಲಗುಂಟೆಯ ಟಿ ದಾಸರಹಳ್ಳಿ ನಿವಾಸಿ ಮಹಿಳೆ 25 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದರು.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರಿನಲ್ಲಿ ಬ್ಯಾಂಕ್ ಖಾತೆಗಳ ಮೂಲಕ ವಹಿವಾಟು ನಡೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಖಾತೆಗಳ ವಿವರಗಳನ್ನು ಆಧರಿಸಿ, ಏಳು ಆರೋಪಿಗಳನ್ನು ಮೊದಲು ಆರ್‌ಟಿ ನಗರ ಬಳಿ ಬಂಧಿಸಲಾಯಿತು. ಅವರು ಚೀನಾದ ಕಿಂಗ್‌ಪಿನ್‌ಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು. ಚೀನಾಕ್ಕೆ ತೆರಳಿದ್ದ ಇತರ ಮೂವರು ಆರೋಪಿಗಳು ಸೆ.15ರಂದು ವಾಪಸ್ ಬಂದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪೊಲೀಸರು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೀಣ್ಯದಲ್ಲಿರುವ ಅವರ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮೂವರು ಸಂಪಿಗೆಹಳ್ಳಿಯ ಪಿಜಿ ಸೌಲಭ್ಯದಲ್ಲಿ ತಂಗಿದ್ದು, ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದ ವಿರುದ್ಧ ಆಂಧ್ರಪ್ರದೇಶ, ಒಡಿಶಾ, ದೆಹಲಿ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...