Homeಕರ್ನಾಟಕಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರು: 122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

- Advertisement -
- Advertisement -

ಭಾರತದಾದ್ಯಂತ ಸುಮಾರು 122 ಪ್ರಕರಣಗಳಲ್ಲಿ ಬೇಕಾಗಿದ್ದ 10 ಸೈಬರ್ ವಂಚಕರನ್ನು ಬೆಂಗಳೂರು ಉತ್ತರ ಸೆನ್‌ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಆನ್‌ಲೈನ್ ಟಾಸ್ಕ್ ಮೂಲಕ ಅಥವಾ ಆನ್‌ಲೈನ್ ಉದ್ಯೋಗ ವಂಚನೆಯ ಮೂಲಕ ಜನರನ್ನು ವಂಚಿಸುತ್ತಿದ್ದರು. ಪ್ರಕರಣದ ಕಿಂಗ್‌ಪಿನ್‌ಗಳು ಚೀನಾದಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

10 ಆರೋಪಿಗಳ ಪೈಕಿ ಮೂವರನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲುಕ್ ಔಟ್ ಸುತ್ತೋಲೆ (ಎಲ್‌ಒಸಿ) ಮೂಲಕ ಬಂಧಿಸಲಾಗಿದೆ. ಆರೋಪಿಗಳು ಪೀಣ್ಯದ ನೆಲಗದರನಹಳ್ಳಿಯಲ್ಲಿರುವ ಕಚೇರಿ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎಂದು ವರದಿಯಾಗಿದೆ. ಮಹಿಳೆಯೊಬ್ಬರು ಸುಮಾರು 25 ಲಕ್ಷ ರೂಪಾಯಿ ಕಳೆದುಕೊಂಡಿದ್ದರು. ಅವರು ಜುಲೈ 3, 2024 ರಂದು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನ ಅನ್ವಯ ಆರೋಪಿಗಳ ಬಂಧನ ನಡೆದಿದೆ.

ಸೆನ್ ಪೊಲೀಸರು 72 ಮೊಬೈಲ್ ಫೋನ್‌ಗಳು, 182 ಡೆಬಿಟ್ ಕಾರ್ಡ್‌ಗಳು, ವಿವಿಧ ಟೆಲಿಕಾಂ ಆಪರೇಟರ್‌ಗಳ 133 ಸಿಮ್ ಕಾರ್ಡ್‌ಗಳು, 127 ಬ್ಯಾಂಕ್ ಪಾಸ್‌ಬುಕ್‌ಗಳು ಮತ್ತು 1.74 ಲಕ್ಷ ರೂ ನಗದು ಹಾಗೂ ಆರೋಪಿಗಳು ಸಂತ್ರಸ್ತರಿಗೆ ವಂಚಿಸಲು ಬಳಸಿದ ಖಾತೆಗಳಲ್ಲಿ 7.34 ಲಕ್ಷ ರೂ. ವಶಪಡಿಸಿಕೊಂಡಿದ್ದಾರೆ.

ಇದನ್ನೂಓದಿ: ಜಿಎಸ್‌ಟಿ ಅಡಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ತರಲು ರಾಜ್ಯಗಳು ಅಡ್ಡಿ: ಕೇಂದ್ರ ಸಚಿವ

ಆರೋಪಿಗಳನ್ನು ಓಂ ಪ್ರಕಾಶ್, ಸೈಯದ್ ಯಾಹ್ಯಾ, ತೇಜಸ್, ಉಮರ್ ಫಾರೂಕ್, ಚೇತನ್, ಮೊಹಮ್ಮದ್ ಮಾಹೀನ್, ಮೊಹಮ್ಮದ್ ಮುಝಮ್ಮಿಲ್, ವಾಸಿಂ, ಸೈಯದ್ ಜೈದ್ ಮತ್ತು ಸಾಹಿ ಅಬ್ದುಲ್ ಅನನ್ ಎಂದು ಗುರುತಿಸಲಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಅಂಕಿಅಂಶಗಳ ಪ್ರಕಾರ, ಆರೋಪಿಗಳು 122 ಪ್ರಕರಣಗಳಲ್ಲಿ ಬೇಕಾಗಿದ್ದಾರೆ.

ಆರೋಪಿಗಳು ಸಾಮಾಜಿಕ ಮಾಧ್ಯಮದ ಮೂಲಕ ಸಂತ್ರಸ್ತರನ್ನು ಸಂಪರ್ಕಿಸಿ, ಆನ್‌ಲೈನ್‌ನಲ್ಲಿ ನೀಡಿದ ಕೆಲಸವನ್ನು ಪೂರ್ಣಗೊಳಿಸಲು ಹೇಳಿ ಪಾವತಿ ಮಾಡುವುದಾಗಿ ಆಮಿಷವೊಡ್ಡುತ್ತಿದ್ದರು. ಆಸಕ್ತರಾದ ಸಂತ್ರಸ್ತರನ್ನು ಆರೋಪಿಗಳು ರಚಿಸಿದ ಟೆಲಿಗ್ರಾಂ ಗುಂಪುಗಳಿಗೆ ಸೇರಿಸಲಾಗುತ್ತಿತ್ತು.

ಆರೋಪಿಗಳು ಮೊದಲು ಐಷಾರಾಮಿ ಹೋಟೆಲ್‌ಗಳ ರಿವೀವ್ ಬರೆಯುವಂತೆ ಮತ್ತು ಅದಕ್ಕಾಗಿ 150 ರಿಂದ 200 ರೂಪಾಯಿಗಳನ್ನು ನೀಡುವ ಮೂಲಕ ಸಂತ್ರಸ್ತರ ವಿಶ್ವಾಸವನ್ನು ಗಳಿಸುತ್ತಿದ್ದರು. ಸಂತ್ರಸ್ತರನ್ನು ಬಲೆಗೆ ಬೀಳಿಸಲು ಹೆಚ್ಚುವರಿ ಬೋನಸ್‌ಗಳನ್ನು ಸಹ ನೀಡಲಾಗುತ್ತಿತ್ತು.

ಇದನ್ನೂಓದಿ:  ವಿಶ್ವಸಂಸ್ಥೆ ಅಧಿವೇಶನ : ಇಸ್ರೇಲ್ ಪ್ರಧಾನಿ ಭಾಷಣ ಆರಂಭಿಸುತ್ತಿದ್ದಂತೆ ಎದ್ದು ಹೊರ ನಡೆದ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳು

ಅವರ ವಿಶ್ವಾಸವನ್ನು ಗಳಿಸಿದ ನಂತರ, ಹೆಚ್ಚಿನ ಲಾಭಕ್ಕಾಗಿ ಕ್ರಿಪ್ಟೋಕರೆನ್ಸಿ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಸಂತ್ರಸ್ತರನ್ನು ಕೇಳಲಾಗುತ್ತಿತ್ತು. ಅದರಂತೆ ಬಾಗಲಗುಂಟೆಯ ಟಿ ದಾಸರಹಳ್ಳಿ ನಿವಾಸಿ ಮಹಿಳೆ 25 ಲಕ್ಷ ರೂಪಾಯಿ ಕಳೆದುಕೊಂಡಿದ್ದು, ಪ್ರಕರಣ ದಾಖಲಿಸಿದ್ದರು.122 ಪ್ರಕರಣಗಳಿಗೆ ಬೇಕಾಗಿದ್ದ 10 ಸೈಬರ್ ವಂಚಕರ ಬಂಧನ

ಬೆಂಗಳೂರಿನಲ್ಲಿ ಬ್ಯಾಂಕ್ ಖಾತೆಗಳ ಮೂಲಕ ವಹಿವಾಟು ನಡೆದಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ. ಈ ಖಾತೆಗಳ ವಿವರಗಳನ್ನು ಆಧರಿಸಿ, ಏಳು ಆರೋಪಿಗಳನ್ನು ಮೊದಲು ಆರ್‌ಟಿ ನಗರ ಬಳಿ ಬಂಧಿಸಲಾಯಿತು. ಅವರು ಚೀನಾದ ಕಿಂಗ್‌ಪಿನ್‌ಗಳ ಆಜ್ಞೆಯ ಮೇರೆಗೆ ಕಾರ್ಯನಿರ್ವಹಿಸುತ್ತಿದ್ದರು. ಚೀನಾಕ್ಕೆ ತೆರಳಿದ್ದ ಇತರ ಮೂವರು ಆರೋಪಿಗಳು ಸೆ.15ರಂದು ವಾಪಸ್ ಬಂದಾಗ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದ್ದು, ಪೊಲೀಸರು ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಪೀಣ್ಯದಲ್ಲಿರುವ ಅವರ ಕಚೇರಿ ಮೇಲೂ ಪೊಲೀಸರು ದಾಳಿ ನಡೆಸಿ ಕೆಲ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳ ಪೈಕಿ ಮೂವರು ಸಂಪಿಗೆಹಳ್ಳಿಯ ಪಿಜಿ ಸೌಲಭ್ಯದಲ್ಲಿ ತಂಗಿದ್ದು, ದಾಳಿ ನಡೆಸಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ತಂಡದ ವಿರುದ್ಧ ಆಂಧ್ರಪ್ರದೇಶ, ಒಡಿಶಾ, ದೆಹಲಿ, ಗುಜರಾತ್, ತಮಿಳುನಾಡು ಮತ್ತಿತರ ರಾಜ್ಯಗಳಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ವರದಿಯಾಗಿದೆ.

ವಿಡಿಯೊ ನೋಡಿ: ದಲಿತರಿಗೆ ಅಧಿಕಾರ ಸಿಕ್ಕಾಗ ಕೇಳುವಷ್ಟು ಪ್ರಶ್ನೆಗಳನ್ನು ಬೇರೆಯವರಿಗೆ ಸಿಕ್ಕಾಗ ಕೇಳಲ್ಲ: ಹೆಚ್.ಡಿ. ಉಮಾಶಂಕರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...