Homeಕರ್ನಾಟಕಬೆಂಗಳೂರು: 15 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ; ಶಿಕ್ಷಕ ಅರೆಸ್ಟ್‌

ಬೆಂಗಳೂರು: 15 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ; ಶಿಕ್ಷಕ ಅರೆಸ್ಟ್‌

- Advertisement -
- Advertisement -

ಸುಮಾರು ಮೂರು ತಿಂಗಳ ಕಾಲ ಕನಿಷ್ಠ 15 ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಸರ್ಕಾರಿ ಶಾಲೆಯ ಶಿಕ್ಷಕನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ಶುಕ್ರವಾರ ವರದಿ ಮಾಡಿದೆ.

54 ವರ್ಷದ ಆಂಜನಪ್ಪ, ನಗರದ ಹೆಬ್ಬಾಳ ಪ್ರದೇಶದ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕನಾಗಿದ್ದನು. ತರಗತಿ ವೇಳೆ ಮತ್ತು ಊಟದ ವಿರಾಮದ ಸಮಯದಲ್ಲಿ ವಿದ್ಯಾರ್ಥಿಗಳನ್ನು ಅನುಚಿತವಾಗಿ ಈತ ಸ್ಪರ್ಶಿಸುತ್ತಿದ್ದನು. ಕೆಲವು ವಿದ್ಯಾರ್ಥಿಗಳಿಗೆ ಚುಂಬಿಸುತ್ತಿದ್ದನು ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳು ಆಂಜನಪ್ಪನ ವರ್ತನೆಯ ಬಗ್ಗೆ ಪೋಷಕರಿಗೆ ತಿಳಿಸಿದಾಗ ವಿಷಯ ಬೆಳಕಿಗೆ ಬಂದಿದೆ ಎಂದು ಪೊಲೀಸ್ ಇನ್ಸ್‌ಪೆಕ್ಟರ್ ದಿಲೀಪ್ ಕುಮಾರ್ ಕೆ.ಎಚ್. ಮಾಹಿತಿ ನೀಡಿದ್ದಾರೆ.

ಮಕ್ಕಳು ತಮ್ಮ ಪೋಷಕರಲ್ಲಿ ವಿಷಯ ತಿಳಿಸಿದ ಬಳಿಕ ಶಾಲೆಯ ಮುಖ್ಯೋಪಾಧ್ಯಾಯರ ಬಳಿ ವಿಷಯ ತಲುಪಿತು. ಅವರು ಆರೋಪದ ಬಗ್ಗೆ ತನಿಖೆ ಆರಂಭಿಸಿದ್ದರು.

ಆಂತರಿಕ ವಿಚಾರಣೆಯಲ್ಲಿ ಆರೋಪಗಳು ಪ್ರಾಥಮಿಕವಾಗಿ ನಿಜವೆಂದು ತೀರ್ಮಾನಿಸಿದ ನಂತರ ಮುಖ್ಯೋಪಾಧ್ಯಾಯರು ಪೊಲೀಸರಲ್ಲಿ ದೂರು ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

“ದೈಹಿಕ ಶಿಕ್ಷಕ ಆಂಜನಪ್ಪ ಎರಡರಿಂದ ಮೂರು ತಿಂಗಳ ಅವಧಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ” ಎಂದು ಇನ್‌ಸ್ಪೆಕ್ಟರ್‌‌ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ.

ವಿದ್ಯಾರ್ಥಿಗಳ ಹಲವಾರು ದೂರುಗಳ ನಡುವೆ, ಮುಖ್ಯೋಪಾಧ್ಯಾಯರು ತನಿಖೆ ನಡೆಸಿದ್ದರು. ಅಂತಿಮವಾಗಿ ಮಂಗಳವಾರ ರಾತ್ರಿ ಪೊಲೀಸರನ್ನು ಸಂಪರ್ಕಿಸಿದ್ದರು.

ಬುಧವಾರ ಶಿಕ್ಷಕನನ್ನು ಬಂಧಿಸಲಾಗಿದೆ. ಲೈಂಗಿಕ ದೌರ್ಜನ್ಯ ಮತ್ತು ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾನೂನು ಹಾಗೂ ಐಪಿಸಿ ಸೆಕ್ಷನ್‌ 354 ಅಡಿಯಲ್ಲಿ ಪೊಲೀಸರು ಆತನ ಮೇಲೆ ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿರಿ: ಮಂಡ್ಯ: ಟ್ಯೂಷನ್‌ಗೆ ಬಂದಿದ್ದ ಬಾಲಕಿಯನ್ನು ಅತ್ಯಾಚಾರ ಎಸಗಿ ಕೊಲೆ ಮಾಡಿದ ಶಿಕ್ಷಕ

ಮಂಡ್ಯದ ಮಳವಳ್ಳಿಯಲ್ಲಿ ಟ್ಯೂಷನ್‌ಗೆಂದು ತೆರಳಿದ್ದ 6ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಶಿಕ್ಷಕನೇ ಕೊಂದಿದ್ದ ಘಟನೆ ಇತ್ತೀಚೆಗೆ ವರದಿಯಾಗಿತ್ತು.

ಶಿಕ್ಷಕ ಕಾಂತರಾಜು ಬಾಲಕಿಯನ್ನು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ ಎಂದು ವರದಿಯಾಗಿತ್ತು. ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಆರೋಪಿ ಕಾಂತರಾಜು ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗ್ರಾಮದವನಾಗಿದ್ದು, ಕಳೆದ 15 ವರ್ಷಗಳಿಂದ ಮೈಸೂರಿನಲ್ಲಿ ನೆಲೆಸಿದ್ದ. ಬಾಲಕಿಯನ್ನು ಆರೋಪಿಯು ಚಾಕೊಲೇಟ್ ನೀಡುವುದಾಗಿ ಪುಸಲಾಯಿಸಿ ಕರೆದೊಯ್ದು, ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾಗಿ ತಿಳಿದು ಬಂದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಬ್ಬ ಶಿಕ್ಷಕ ಇಂತಹದ್ದೇ ಅಪರಾಧದಲ್ಲಿ ಸಿಕ್ಕಿಬಿದ್ದಿದ್ದಾನೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...