Homeಮುಖಪುಟಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ...

ಸಿಲಿಕಾನ್ ಸಿಟಿಯ ಐಷಾರಾಮಿ ಹೋಟೆಲ್‌ಗಳ ಮೇಲೆ ದಾಳಿ: ಅಡುಗೆ ಮನೆಯಲ್ಲಿ ಸಿಕ್ತು 250.KG ಕೊಳೆತ ಮಾಂಸ ಮತ್ತು ತರಕಾರಿ

- Advertisement -
- Advertisement -

ಶಾಲಾ-ಕಾಲೇಜುಗಳ ಸುತ್ತಮುತ್ತ ಜಂಕ್ ಫುಡ್ ಮಾರಾಟದ ವಿರುದ್ಧ ಸಮರ ಸಾರಿದ್ದ ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ (FSDA) ಇಲಾಖೆ, ಶುಕ್ರವಾರ ಬೆಂಗಳೂರಿನ ಫೈವ್-ಸ್ಟಾರ್ ಹೋಟೆಲ್‌ಗಳ ಮೇಲೆ ದಿಢೀರ್ ದಾಳಿ ನಡೆಸಿ ಶಾಕ್ ನೀಡಿದೆ. ಆಹಾರ ಸುರಕ್ಷತಾ ನಿಯಮಗಳ ತೀವ್ರ ಉಲ್ಲಂಘನೆ, ಅವಧಿ ಮುಗಿದ ಆಹಾರ ಪದಾರ್ಥಗಳ ಬಳಕೆ ಹಾಗೂ ನೈರ್ಮಲ್ಯ ಕೊರತೆ ಹಿನ್ನೆಲೆಯಲ್ಲಿ ಬರೋಬ್ಬರಿ 250 ಕೆಜಿಗೂ ಹೆಚ್ಚು ಮಾಂಸ, 207 ಕೆಜಿ ಕೊಳೆತ ತರಕಾರಿ, 32 ಲೀಟರ್ ಅವಧಿ ಮುಗಿದ ಹಾಲು ಹಾಗೂ 3 ಕೆಜಿ ಬೇಕರಿ ಉತ್ಪನ್ನಗಳನ್ನು ಜಪ್ತಿ ಮಾಡಿ ತಕ್ಷಣವೇ ನಾಶಪಡಿಸಲಾಗಿದೆ.

ಆರೋಗ್ಯ ಸಚಿವ ಯು.ಟಿ. ಖಾದರ್ ಅವರ ಮಾರ್ಗದರ್ಶನದಲ್ಲಿ, ಆಹಾರ ಸುರಕ್ಷತಾ ಆಯುಕ್ತರ ಕಚೇರಿಯಿಂದ ನಿಯೋಜನೆಗೊಂಡ 30 ಅಧಿಕಾರಿಗಳ ತಂಡವು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿದ್ದ ಪಂಚ ತಾರಾ ಮತ್ತು ತ್ರಿ-ಸ್ಟಾರ್ ಸೇರಿದಂತೆ ಒಟ್ಟು 26 ಹೋಟೆಲ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿ ಈ ಪರಿಶೀಲನೆ ನಡೆಸಿದೆ.

ಈ ಪರಿಶೀಲನೆಯ ವೇಳೆ ದಿ ಲಲಿತ್ ಅಶೋಕ್‌ನಲ್ಲಿ 76 ಕೆಜಿ ಮಾಂಸ, 200 ಕೆಜಿ ಕಳಪೆ ತರಕಾರಿ ಹಾಗೂ 32 ಲೀಟರ್ ಎಕ್ಸ್‌ಪೈರ್ಡ್ ಹಾಲು ಪತ್ತೆಯಾಗಿದ್ದರೆ, ಶಂಗ್ರಿ-ಲಾದಲ್ಲಿ 15 ಕೆಜಿ ಮಾಂಸ, ಫೋರ್ ಸೀಸನ್ಸ್‌ನಲ್ಲಿ 19 ಕೆಜಿ ಮಾಂಸ, ವಿವಾಂತ ವೈಟ್‌ಫೀಲ್ಡ್‌ನಲ್ಲಿ 3 ಕೆಜಿ ಅವಧಿ ಮುಗಿದ ಬೇಕರಿ ಉತ್ಪನ್ನಗಳು, ತಾಜ್ ಯಶವಂತಪುರದಲ್ಲಿ 72 ಕೆಜಿ ಮಾಂಸ/ಮೀನು ಹಾಗೂ ರ್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ 50 ಕೆಜಿ ಚಿಕನ್, 25 ಕೆಜಿ ಮಾಂಸ, 23 ಕೆಜಿ ಮೀನು ಮತ್ತು 7 ಕೆಜಿ ಕಳಪೆ ತರಕಾರಿ ಜಪ್ತಿಯಾಗಿದೆ.

ಕ್ರ.ಸಂ.ಹೋಟೆಲ್ ಹೆಸರುಜಪ್ತಿ ಮಾಡಲಾದ ಕಳಪೆ / ಅವಧಿ ಮುಗಿದ ಪದಾರ್ಥಗಳು
1ದಿ ಲಲಿತ್ ಅಶೋಕ್ (South Annexe)76 ಕೆಜಿ ಮಾಂಸ, 200 ಕೆಜಿ ಕಳಪೆ ತರಕಾರಿ ಮತ್ತು 32 ಲೀಟರ್ ಎಕ್ಸ್‌ಪೈರ್ಡ್ ಹಾಲು
2ಶಂಗ್ರಿ-ಲಾ (Shangri-La)15 ಕೆಜಿ ಕಳಪೆ ಮಾಂಸ
3ಫೋರ್ ಸೀಸನ್ಸ್ (Four Seasons)19 ಕೆಜಿ ಕಳಪೆ ಮಾಂಸ
4ವಿವಾಂತ ವೈಟ್‌ಫೀಲ್ಡ್ (Vivanta Whitefield)3 ಕೆಜಿ ಅವಧಿ ಮುಗಿದ ಬೇಕರಿ ಉತ್ಪನ್ನಗಳು
5ತಾಜ್ ಯಶವಂತಪುರ (Taj Yeshwantpur)72 ಕೆಜಿ ಹಾಳಾದ ಮಾಂಸ ಮತ್ತು ಮೀನು
6ರ್ಯಾಡಿಸನ್ ಬ್ಲೂ (Radisson Blu)50 ಕೆಜಿ ಚಿಕನ್, 25 ಕೆಜಿ ಮಾಂಸ, 23 ಕೆಜಿ ಮೀನು ಹಾಗೂ 7 ಕೆಜಿ ತರಕಾರಿ

ಹೋಟೆಲ್ ಅಡುಗೆ ಮನೆ ಹಾಗೂ ಸಂಗ್ರಹಣಾ ಕೊಠಡಿಗಳಲ್ಲಿ ನೈರ್ಮಲ್ಯ ಸಂಪೂರ್ಣ ಹಾಳಾಗಿದ್ದು, ತರಕಾರಿಗಳ ಮೇಲೆ ಬೂಷ್ಟು ಬಂದಿದ್ದರೂ ಅದನ್ನು ಅಡುಗೆಗೆ ಬಳಸಲಾಗುತ್ತಿತ್ತು. ಸಸ್ಯಾಹಾರಿ ಮತ್ತು ಮಾಂಸಾಹಾರಿ ಪದಾರ್ಥಗಳನ್ನು ಒಂದೇ ಕಡೆ ಇಡಲಾಗಿತ್ತು ಹಾಗೂ ಎಫ್‌ಎಸ್‌ಎಸ್‌ಎಐ ನಿಯಮಾವಳಿಗಳಿಗೆ ವಿರುದ್ಧವಾಗಿ ಲೇಬಲಿಂಗ್ ನಿರ್ವಹಿಸಲಾಗಿತ್ತು.

ಪರಿಶೀಲನೆಯ ವೇಳೆ ಪತ್ತೆಯಾದ ಟೀ ಪುಡಿ, ಚಿಕನ್, ಮಟನ್, ಮೀನು, ಅಡುಗೆ ಎಣ್ಣೆ, ಖಾರದ ಪುಡಿ, ಅರಿಶಿನ, ಸಾಸ್, ಚೀಸ್, ಮಸಾಲೆ ಪದಾರ್ಥಗಳು ಹಾಗೂ ಹಾಲಿನ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಲ್ಯಾಬ್ ವರದಿ ಬಂದ ತಕ್ಷಣವೇ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿ ತಪ್ಪಿತಸ್ಥ ಐಷಾರಾಮಿ ಹೋಟೆಲ್‌ಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಆಹಾರ ಸುರಕ್ಷತಾ ಆಯುಕ್ತರು ಸ್ಪಷ್ಟಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಪಾಕಿಸ್ತಾನಿ ಎಂದ ಪ್ರಕರಣ : ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಹೈಕೋರ್ಟ್‌ ತರಾಟೆ

ಕಲಬುರಗಿಯಲ್ಲಿ ನಡೆದಿದ್ದ ಪ್ರತಿಭಟನೆಯ ವೇಳೆ ಐಎಎಸ್‌ ಅಧಿಕಾರಿ ಫೌಝಿಯಾ ತರನ್ನುಮ್‌ ಅವರನ್ನು ಭಾರತೀಯರೋ ಅಥವಾ ಪಾಕಿಸ್ತಾನಿಯೋ ಎಂದಿದ್ದ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಎನ್‌. ರವಿಕುಮಾರ್‌ ವಿರುದ್ಧ ಶುಕ್ರವಾರ (ಆ.7) ಕರ್ನಾಟಕ ಹೈಕೋರ್ಟ್‌...

‘ರಷ್ಯಾ ನಿರ್ಬಂಧ ಮಸೂದೆ’ ಅಂಗೀಕರಿಸಿದ ಅಮೆರಿಕ ಸೆನೆಟ್: ಭಾರತದ ಮೇಲೆ ಶೇ. 100ರಷ್ಟು ಸುಂಕ ವಿಧಿಸುವ ಎಚ್ಚರಿಕೆ

ಉಕ್ರೇನ್ ವಿರುದ್ಧದ ಯುದ್ಧಕ್ಕೆ ಆರ್ಥಿಕ ನೆರವು ಸಿಗದಂತೆ ಮಾಡಲು, ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಹೆಚ್ಚಾಗಿ ಖರೀದಿಸುವ ಭಾರತ ಮತ್ತು ಚೀನಾದಂತಹ ಪ್ರಮುಖ ದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕದ ಸೆನೆಟ್‌ ಬೃಹತ್‌ ಬೆಂಬಲದೊಂದಿಗೆ ಹೊಸ ಮಸೂದೆಯನ್ನು...

ಆರ್‌ಎಸ್‌ಎಸ್‌ ಗೂಂಡಾಗಳಿಗೆ ಶಾಯಿ ಇರುವುದು ಬರೆಯಲು, ಎರಚಲು ಅಲ್ಲ ಎಂಬುವುದು ಗೊತ್ತಿಲ್ಲ, ನಮ್ಮ ಸಂಕಲ್ಪಕ್ಕೆ ಮಿತಿಯಿಲ್ಲ : ನೇಹಾ ಬೋರಾ

ಜಾರ್ಖಂಡ್ ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಲು ಹೋಗಿದ್ದ ವೇಳೆ ತನ್ನ ಮೇಲೆ ಶಾಯಿ ಎರಚಿರುವುದಕ್ಕೆ ಅಖಿಲ ಭಾರತ ವಿದ್ಯಾರ್ಥಿ ಸಂಘದ (AISA) ರಾಷ್ಟ್ರೀಯ ಅಧ್ಯಕ್ಷೆ ನೇಹಾ ಬೋರಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ...

ಮನೆಗೆ ಬರುವ ಸಂದರ್ಶಕರೊಂದಿಗೆ ಪಿಎಸ್‌ಐ ‘ಅಸಭ್ಯ’ ವರ್ತನೆ; ಆಕ್ರೋಶ ವ್ಯಕ್ತಪಡಿಸಿದ ಅಭಿಜೀತ್ ದಿಪ್ಕೆ

ಛತ್ರಪತಿ ಸಂಭಾಜಿನಗರದಲ್ಲಿರುವ ತಮ್ಮ ಮನೆಯಲ್ಲಿ ಭದ್ರತಾ ಪಡೆಯ ಭಾಗವಾಗಿ ನಿಯೋಜಿಸಲಾದ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಅವರು, ಜನರು ನಮ್ಮನ್ನು ಭೇಟಿಯಾಗದಂತೆ ತಡೆಯುತ್ತಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಂಚಾಲಕ ಅಭಿಜೀತ್ ದಿಪ್ಕೆ...

ಮೋಹನ್ ಭಾಗವತ್‌ ದೇಶಪ್ರವೇಶ ನಿಷೇಧಿಸುವಂತೆ ಕೆನಡಾದ 40ಕ್ಕೂ ಹೆಚ್ಚು ಸಂಘಟನೆಗಳಿಂದ ಸರ್ಕಾರಕ್ಕೆ ಒತ್ತಾಯ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಮುಖ್ಯಸ್ಥ ಮೋಹನ್ ಭಾಗವತ್‌ ದೇಶದೊಳಗೆ ಪ್ರವೇಶಿಸುವುದನ್ನು ತಡೆಯುವಂತೆ ಕೆನಡಾದ 40ಕ್ಕೂ ಹೆಚ್ಚು ನಾಗರಿಕ, ಮಾನವ ಹಕ್ಕುಗಳು, ಕಾರ್ಮಿಕ ಮತ್ತು ಧಾರ್ಮಿಕ ಸಂಘಟನೆಗಳು ಅಲ್ಲಿನ ಸಾರ್ವಜನಿಕ ಸುರಕ್ಷತಾ ಸಚಿವರಿಗೆ...

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...