Homeಕರ್ನಾಟಕಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಆರೋಪಕ್ಕೆ ಒಳಗಾದ 16 ವರ್ಷದ ಬಾಲಕ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಆರೋಪಕ್ಕೆ ಒಳಗಾದ 16 ವರ್ಷದ ಬಾಲಕ ಆತ್ಮಹತ್ಯೆ

- Advertisement -
- Advertisement -

ಪರೀಕ್ಷೆಯ ವೇಳೆ ಕಾಪಿ ಹೊಡೆದಿದ್ದಾರೆ ಎಂದು ಆರೋಪಿಸಿದ್ದಕ್ಕೆ ಮನನೊಂದು 10 ನೇ ತರಗತಿ ವಿದ್ಯಾರ್ಥಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತ 16 ವರ್ಷದ ಬಾಲಕನನ್ನು ಮೊಯಿನ್ ಖಾನ್ ಎಂದು ಗುರುತಿಸಲಾಗಿದೆ.

ಬಾಲಕ ವಾಸವಿದ್ದ ಉತ್ತರ ಬೆಂಗಳೂರಿನ ಬಾಲಾಜಿ ಲೇಔಟ್‌ನಲ್ಲಿ ನವೆಂಬರ್ 8 ಮಂಗಳವಾರ ಈ ಘಟನೆ ನಡೆದಿದೆ. ಮೊಯಿನ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯಲ್ಲಿ ಬೆಳಿಗ್ಗೆ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಇನ್ವಿಜಿಲೇಟರ್ ಮೋಯಿನ್ ನಕಲು ಮಾಡುತ್ತಿದ್ದಾರೆ ಎಂದು ಗುರುತಿಸಿದ್ದರು ಎಂದು ವರದಿಯಾಗಿದೆ. ಅದಕ್ಕೆ ಶಿಕ್ಷೆಯಾಗಿ, ಶಿಕ್ಷಕರು ಮೊಯಿನ್ ಅವರನ್ನು ತರಗತಿಯ ಹೊರಗೆ ಕಳುಹಿಸಿ, ಅಲ್ಲಿಯೇ ಇರುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಮಳಲಿ ಪೇಟೆ ಮಸೀದಿ ವಿವಾದ | ಆಡಳಿತ ಮಂಡಳಿ ಅರ್ಜಿ ವಜಾ; ಬಿಜೆಪಿ ಬೆಂಬಲಿತ ವಿಎಚ್‌ಪಿ ಅರ್ಜಿ ಪುರಸ್ಕರಿಸಿದ ಕೋರ್ಟ್‌

ಇದರಿಂದಾಗಿ ಅವಮಾನ ಅನುಭವಿಸಿದ ಮೋಯಿನ್ ಶಾಲೆಯಿಂದ ಹೊರಟು ತನ್ನ ಮನೆಯ ಸಮೀಪವಿರುವ ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ತರೆಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ನನ್ನ ಮಗ ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಶಾಲೆಯಿಂದ ಬೆಳಿಗ್ಗೆ 11.30 ರ ಸುಮಾರಿಗೆ ನಮಗೆ ಕರೆ ಬಂದಿತ್ತು. ಅವರು ನನ್ನನ್ನು ಶಾಲೆಗೆ ಬರಲು ಹೇಳಿದರು. ನಾನು ಅಲ್ಲಿಗೆ ಧಾವಿಸಿ ನೋಡಿದಾಗ, ನನ್ನ ಮಗ ಈಗಾಗಲೇ ಹೊರಟು ಹೋಗಿದ್ದರು” ಎಂದು ಮೊಯಿನ್ ಅವರ ತಂದೆ ಮೊಹಮ್ಮದ್ ನೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೋಯಿನ್ ಅವರನ್ನು ಮೇಲ್ವಿಚಾರಣೆಯಿಲ್ಲದೆ ಶಾಲೆಯಿಂದ ಹೊರ ಹೋಗಲು ಬಿಟ್ಟು ಶಾಲಾ ಆಡಳಿತ ಮಂಡಳಿ ಮತ್ತು ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದೆ. ವಿದ್ಯಾರ್ಥಿಯ ಸಾವಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಭದ್ರತಾ ಸಿಬ್ಬಂದಿಯೆ ಕಾರಣವಾಗಿದೆ ಎಂದು ಆರೋಪಿಸಿ ನೂರ್ ಅವರು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಮೊಯಿನ್ ಅವರನ್ನು ಶಿಕ್ಷಿಸಿದ ಶಿಕ್ಷಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ, ಆದರೆ ನೂರ್ ಆರೋಪದ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....