Homeಕರ್ನಾಟಕಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಆರೋಪಕ್ಕೆ ಒಳಗಾದ 16 ವರ್ಷದ ಬಾಲಕ ಆತ್ಮಹತ್ಯೆ

ಬೆಂಗಳೂರು: ಪರೀಕ್ಷೆಯಲ್ಲಿ ಕಾಪಿ ಹೊಡೆದ ಆರೋಪಕ್ಕೆ ಒಳಗಾದ 16 ವರ್ಷದ ಬಾಲಕ ಆತ್ಮಹತ್ಯೆ

- Advertisement -
- Advertisement -

ಪರೀಕ್ಷೆಯ ವೇಳೆ ಕಾಪಿ ಹೊಡೆದಿದ್ದಾರೆ ಎಂದು ಆರೋಪಿಸಿದ್ದಕ್ಕೆ ಮನನೊಂದು 10 ನೇ ತರಗತಿ ವಿದ್ಯಾರ್ಥಿಯೊಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತ 16 ವರ್ಷದ ಬಾಲಕನನ್ನು ಮೊಯಿನ್ ಖಾನ್ ಎಂದು ಗುರುತಿಸಲಾಗಿದೆ.

ಬಾಲಕ ವಾಸವಿದ್ದ ಉತ್ತರ ಬೆಂಗಳೂರಿನ ಬಾಲಾಜಿ ಲೇಔಟ್‌ನಲ್ಲಿ ನವೆಂಬರ್ 8 ಮಂಗಳವಾರ ಈ ಘಟನೆ ನಡೆದಿದೆ. ಮೊಯಿನ್ ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತಾದರೂ, ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಶಾಲೆಯಲ್ಲಿ ಬೆಳಿಗ್ಗೆ 10 ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿತ್ತು. ಈ ಸಂದರ್ಭದಲ್ಲಿ ಇನ್ವಿಜಿಲೇಟರ್ ಮೋಯಿನ್ ನಕಲು ಮಾಡುತ್ತಿದ್ದಾರೆ ಎಂದು ಗುರುತಿಸಿದ್ದರು ಎಂದು ವರದಿಯಾಗಿದೆ. ಅದಕ್ಕೆ ಶಿಕ್ಷೆಯಾಗಿ, ಶಿಕ್ಷಕರು ಮೊಯಿನ್ ಅವರನ್ನು ತರಗತಿಯ ಹೊರಗೆ ಕಳುಹಿಸಿ, ಅಲ್ಲಿಯೇ ಇರುವಂತೆ ಸೂಚಿಸಿದ್ದರು.

ಇದನ್ನೂ ಓದಿ: ಮಳಲಿ ಪೇಟೆ ಮಸೀದಿ ವಿವಾದ | ಆಡಳಿತ ಮಂಡಳಿ ಅರ್ಜಿ ವಜಾ; ಬಿಜೆಪಿ ಬೆಂಬಲಿತ ವಿಎಚ್‌ಪಿ ಅರ್ಜಿ ಪುರಸ್ಕರಿಸಿದ ಕೋರ್ಟ್‌

ಇದರಿಂದಾಗಿ ಅವಮಾನ ಅನುಭವಿಸಿದ ಮೋಯಿನ್ ಶಾಲೆಯಿಂದ ಹೊರಟು ತನ್ನ ಮನೆಯ ಸಮೀಪವಿರುವ ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ತರೆಳಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

“ನನ್ನ ಮಗ ಪರೀಕ್ಷೆಯ ಸಮಯದಲ್ಲಿ ನಕಲು ಮಾಡುವಾಗ ಸಿಕ್ಕಿಬಿದ್ದಿದ್ದಾನೆ ಎಂದು ಶಾಲೆಯಿಂದ ಬೆಳಿಗ್ಗೆ 11.30 ರ ಸುಮಾರಿಗೆ ನಮಗೆ ಕರೆ ಬಂದಿತ್ತು. ಅವರು ನನ್ನನ್ನು ಶಾಲೆಗೆ ಬರಲು ಹೇಳಿದರು. ನಾನು ಅಲ್ಲಿಗೆ ಧಾವಿಸಿ ನೋಡಿದಾಗ, ನನ್ನ ಮಗ ಈಗಾಗಲೇ ಹೊರಟು ಹೋಗಿದ್ದರು” ಎಂದು ಮೊಯಿನ್ ಅವರ ತಂದೆ ಮೊಹಮ್ಮದ್ ನೂರ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಮೋಯಿನ್ ಅವರನ್ನು ಮೇಲ್ವಿಚಾರಣೆಯಿಲ್ಲದೆ ಶಾಲೆಯಿಂದ ಹೊರ ಹೋಗಲು ಬಿಟ್ಟು ಶಾಲಾ ಆಡಳಿತ ಮಂಡಳಿ ಮತ್ತು ಭದ್ರತಾ ಸಿಬ್ಬಂದಿ ನಿರ್ಲಕ್ಷ್ಯ ವಹಿಸಿದೆ. ವಿದ್ಯಾರ್ಥಿಯ ಸಾವಿಗೆ ಶಾಲೆಯ ಆಡಳಿತ ಮಂಡಳಿ ಮತ್ತು ಭದ್ರತಾ ಸಿಬ್ಬಂದಿಯೆ ಕಾರಣವಾಗಿದೆ ಎಂದು ಆರೋಪಿಸಿ ನೂರ್ ಅವರು ಸಂಪಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ‘ಹಿಂದೂ’ ಪದ ವಿವಾದ: ಬಹಿರಂಗ ಚರ್ಚೆಗೆ ಸತೀಶ್‌ ಜಾರಕಿಹೊಳಿ ಪಂಥಾಹ್ವಾನ- ಏನಂದರು ಜನ?

ಮೊಯಿನ್ ಅವರನ್ನು ಶಿಕ್ಷಿಸಿದ ಶಿಕ್ಷಕಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಸಂಪಿಗೆಹಳ್ಳಿ ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸಿಲ್ಲ, ಆದರೆ ನೂರ್ ಆರೋಪದ ಆಧಾರದ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.


ಜೀವ ಅಮೂಲ್ಯವಾಗಿದೆ. ಎಲ್ಲಾ ಸಮಸ್ಯೆಗಳಿಗೂ ಪರಿಹಾರವಿದೆ. ಮಾನಸಿಕ ಆರೋಗ್ಯ ಸಮಸ್ಯೆಗಳಿದ್ದರೆ ಅಥವಾ ಆತ್ಮಹತ್ಯೆ ಮಾಡಿಕೊಳ್ಳುವ ಭಾವನೆ ಬಂದರೆ ನಿಮಗೆ ಭಾವನಾತ್ಮಕ ಬೆಂಬಲವನ್ನು ನೀಡಿ ಆತ್ಮಹತ್ಯೆ ತಡೆಗಟ್ಟುವ ಸಂಸ್ಥೆಗಳ ಕೆಲವು ಸಹಾಯವಾಣಿ ಸಂಖ್ಯೆಗಳು ಇಲ್ಲಿವೆ.
ಸಹಾಯ (24-ಗಂಟೆ): 080 65000111, 080 65000222
24×7 ಸಹಾಯವಾಣಿ: 98204667260
ಭಾರತದಾದ್ಯಂತ ಸಹಾಯವಾಣಿಗಾಗಿ ಇಲ್ಲಿ ಕ್ಲಿಕ್ ಮಾಡಿ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...