Homeಕರ್ನಾಟಕಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

“ಭೂತಕೋಲವು ಹಿಂದೂ ಸಂಪ್ರದಾಯದ ಭಾಗವಲ್ಲ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಹೇಳಿದ ಕೆಲವು ದಿನಗಳ ನಂತರ ಬೆಂಗಳೂರು ಪೊಲೀಸರು ಶನಿವಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಭೂತ ಕೋಲವು ಆದಿವಾಸಿಗಳ ಸಂಸ್ಕೃತಿಯ ಭಾಗವಾಗಿದೆ. ಅದರಲ್ಲಿ ವೈದೀಕರಣ ಇಲ್ಲ ಎಂದು ಚೇತನ್‌ ಬುಧವಾರ ಹೇಳಿದ್ದರು. “ಭಾರತದಲ್ಲಿ ಹಿಂದೂ ಧರ್ಮ ಅಸ್ತಿತ್ವಕ್ಕೆ ಬರುವ ಮೊದಲೇ ಆದಿವಾಸಿಗಳು ಕಾಡಿನ ಆರಾಧನೆಯನ್ನು ಮಾಡುತ್ತಿದ್ದರು” ಎಂದು ಚೇತನ್ ಹೇಳಿದ್ದರು.

ಹಿಂದಿ ಮತ್ತು ಹಿಂದುತ್ವದ ಹೇರಿಕೆಯನ್ನು ಒಪ್ಪಲಾಗದು ಎಂದೂ ಅವರು ತಿಳಿಸಿದ್ದರು. ಚೇತನ್ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಶೇಷಾದ್ರಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಬೆಂಗಳೂರು (ಉತ್ತರ) ಸಂಚಾಲಕ ಶಿವಕುಮಾರ್ ಅವರ ದೂರಿನ ಆಧಾರದ ಮೇಲೆ ಚೇತನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದು ಹಿಂದುತ್ವ ಸಂಘಟನೆಯಾದ ಹಿಂದೂ ಜಾಗರಣ ವೇದಿಕೆ ಕೂಡ ಚೇತನ್‌ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ದೂರು ದಾಖಲಿಸಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಭಿನ್ನ ವರ್ಗಗಳ ನಡುವೆ ದ್ವೇಷವನ್ನುಉತ್ತೇಜಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಭೂತಕೋಲ ಸಂಪ್ರದಾಯವು ಹಿಂದೂ ಸಂಸ್ಕೃತಿಯ ಭಾಗವಾಗಿದೆ ಎಂಬ ‘ಕಾಂತಾರ’ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಚೇತನ್‌ ಹೇಳಿಕೆ ನೀಡಿದ್ದರು. ಚಿತ್ರದಲ್ಲಿ ತೋರಿಸಲಾಗಿರುವ ಪಂಜುರ್ಲಿಯು ಹಿಂದೂ ಸಂಪ್ರದಾಯದ ಭಾಗ ಎಂದು ರಿಷಬ್‌ ಹೇಳಿದ್ದರು.

ರಿಷಬ್‌ ಹೇಳಿಕೆಗೆ ಹಲವಾರು ಜನ ಆಕ್ಷೇಪ ವ್ಯಕ್ತಪಡಿಸಿದ್ದರು. ಭೂತಕೋಲವು ಹೇಗೆ ಅವೈದಿಕವಾಗಿದೆ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಚೇತನ್‌ ವಿರುದ್ಧ ಈ ವರ್ಷ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸುವುದನ್ನು ರಾಜ್ಯ ಸರ್ಕಾರ ನಿಷೇಧ ಹೇರಿದ ಬಳಿಕ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಾಧೀಶರನ್ನು ಟೀಕಿಸಿದ ಆರೋಪದಲ್ಲಿ ಚೇತನ್‌ ಅವರನ್ನು ಫೆಬ್ರವರಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದರು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ #ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ : ಚುನಾವಣೆ ಹೊಸ್ತಿಲಲ್ಲಿ ತ್ವರಿತಗೊಂಡ ಸಿಎಎ ಜಾರಿ ಪ್ರಕ್ರಿಯೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಪ್ರಕ್ರಿಯೆಯು ಅತ್ಯಂತ ವೇಗ ಪಡೆದುಕೊಂಡಿದೆ. ಇತ್ತೀಚಿನ ಬೆಳವಣಿಗೆಗಳು ರಾಜ್ಯದ ರಾಜಕೀಯ ಸಮೀಕರಣಗಳನ್ನು ಬದಲಿಸುವ ಮುನ್ಸೂಚನೆ ನೀಡುತ್ತಿವೆ. ಕೇಂದ್ರ ಗೃಹ ಸಚಿವಾಲಯವು...

ರಾಜಸ್ಥಾನದ ಭಿವಾಡಿಯಲ್ಲಿ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ಘರ್ಷಣೆ: ಯುವಕ ಸಾವು

ಜೈಪುರ: ರಾಜಸ್ಥಾನದ ಭಿವಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಗೋ ಕಳ್ಳಸಾಗಣೆದಾರರು ಮತ್ತು ಗೋರಕ್ಷಕರ ನಡುವೆ ನಡೆದ ಘರ್ಷಣೆಯಲ್ಲಿ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಈ ಘಟನೆಯಿಂದಾಗಿ ಮೃತನ ಕುಟುಂಬ ಪ್ರತಿಭಟನೆ ನಡೆಸಿದ್ದು, ಆತನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು...

ಖಮೇನಿ ಹತ್ಯೆ ಬಗ್ಗೆ ಪ್ರಧಾನಿ ಮೋದಿ ತಮ್ಮ ನಿಲುವು ತಿಳಿಸಬೇಕು: ರಾಹುಲ್ ಗಾಂಧಿ ಒತ್ತಾಯ

ಇರಾನ್‌ನ ಪರಮೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯ ಬಗ್ಗೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇಳಿದ್ದಾರೆ. ಅಮೆರಿಕ ಮತ್ತು...

ಇರಾನ್‌ ಮೇಲೆ ಇಸ್ರೇಲ್ ದಾಳಿ: ಟೆಹ್ರಾನ್‌ನಿಂದ 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ಕೋಮ್‌ಗೆ ಸ್ಥಳಾಂತರ

ನವದೆಹಲಿ: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿಗಳು ತೀವ್ರಗೊಳ್ಳುತ್ತಿರುವ ಮಧ್ಯೆ, ಟೆಹ್ರಾನ್‌ನಿಂದ ಸ್ಥಳಾಂತರಿಸಲ್ಪಟ್ಟ ಭಾರತೀಯ ವಿದ್ಯಾರ್ಥಿಗಳನ್ನು ಕೋಮ್‌ಗೆ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ, ಆದರೆ ಭಾರತೀಯ ರಾಯಭಾರ ಕಚೇರಿಯು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ಪ್ರಜೆಗಳನ್ನು ಮನೆಯೊಳಗೆ ಇರುವಂತೆ...

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

'ಪಿಟಿಸಿಎಲ್‌ (PTCL) ಕಾಯ್ದೆ' ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು 'ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ' ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ...

ರಾಜಸ್ಥಾನ| ‘ನೀವು ಕೆಳಜಾತಿಯವರು, ಎಲ್‌ಎಲ್‌ಬಿ ನಿಮಗೆ ಸೂಕ್ತವಲ್ಲ..’; ದಲಿತ ವಿದ್ಯಾರ್ಥಿನಿಗೆ ಪ್ರಾಧ್ಯಾಪಕರಿಂದ ಜಾತಿ ನಿಂದನೆ

ರಾಜಸ್ಥಾನದ ಚುರುವಿನ ಸರ್ಕಾರಿ ಕಾನೂನು ಕಾಲೇಜಿನ ಮೂರನೇ ಸೆಮಿಸ್ಟರ್ ದಲಿತ ಎಲ್‌ಎಲ್‌ಬಿ ವಿದ್ಯಾರ್ಥಿನಿಯೊಬ್ಬರು, ಇಬ್ಬರು ಪ್ರಾಧ್ಯಾಪಕರಿಂದ ಜಾತಿ ಆಧಾರಿತ ನಿಂದನೆ, ಬೆದರಿಕೆ ಮತ್ತು ತಾರತಮ್ಯ ಆರೋಪದ ಮೇಲೆ ಪೊಲೀಸ್ ದೂರು ದಾಖಲಿಸಿದ್ದಾರೆ. ಎಸ್‌ಸಿ...

ಬೆಂಗಳೂರು: ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮಹಿಳೆ ಸಾವು, ಮೂವರ ರಕ್ಷಣೆ

ಬೆಂಗಳೂರು: ಸೋಮವಾರ ರಾತ್ರಿ ಉತ್ತರ ಬೆಂಗಳೂರಿನಲ್ಲಿರುವ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಮೃತರನ್ನು 55 ವರ್ಷದ ಸವಿತಾ ಎಂದು ಗುರುತಿಸಲಾಗಿದೆ. ಅವರ ಪತಿ ಗುತ್ತಿಗೆದಾರ ರಮೇಶ್...

ಲಕ್ನೋ | 12 ವರ್ಷದ ಬಾಲಕ ಉನೈಝ್ ಗುಂಡೇಟಿಗೆ ಬಲಿ : ಸಂಚು ರೂಪಿಸಿ ಕೊಲೆ ಮಾಡಲಾಗಿದೆ ಎಂದ ಕುಟುಂಬ

ಉತ್ತರ ಪ್ರದೇಶದ ಲಕ್ನೋದಲ್ಲಿ 12 ವರ್ಷದ ಬಾಲಕನೊಬ್ಬ ಗುಂಡೇಟಿನಿಂದ ಮೃತಪಟ್ಟಿದ್ದು, ಆತನನ್ನು ಕೊಲೆ ಮಾಡಲಾಗಿದೆ. ಕೃತ್ಯವನ್ನು ಮುಚ್ಚಿ ಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆ ದೇಶದ ಗಮನ ಸೆಳೆದಿದ್ದು, ಸಾಮಾಜಿಕ...

ಕೇರಳ: ಪೊಲೀಸರ ‘ದುರುದ್ದೇಶಪೂರಿತ ಮೊಕದ್ದಮೆ’ಗಾಗಿ ನಿವೃತ್ತ ಸೇನಾ ಅಧಿಕಾರಿಗೆ ಕೇರಳ ನ್ಯಾಯಾಲಯದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

ಕೊಲ್ಲಂ, ಕೇರಳ: ಪೊಲೀಸರ "ದುರುದ್ದೇಶಪೂರಿತ ಮೊಕದ್ದಮೆ"ಗಾಗಿ ನಿವೃತ್ತ ಸೇನಾ ಅಧಿಕಾರಿಯೊಬ್ಬರಿಗೆ ಕೇರಳ ನ್ಯಾಯಾಲಯವು 5 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದೆ.  ಪ್ರಿನ್ಸಿಪಲ್ ಮುನ್ಸಿಫ್ ರಾಗಿ ಎಸ್. ಅವರು, 54 ವರ್ಷದ ನಿವೃತ್ತ ನಾಯಕ್ ಸುಬೇದಾರ್...

ಮಧ್ಯಪ್ರದೇಶ: ಇಂದೋರ್‌ನಲ್ಲಿ ಒಳಚರಂಡಿಗೆ ಇಳಿದು ಇಬ್ಬರು ಪೌರ ಕಾರ್ಮಿಕರು ಸಾವು: ವಿಷಕಾರಿ ಅನಿಲ ಶಂಕೆ

ಇಂದೋರ್‌ನ ಚೋಯಿತ್ರಮ್ ಆಸ್ಪತ್ರೆ ಬಳಿ ಸೋಮವಾರ ಒಳಚರಂಡಿ ಒಳಗೆ ಇಳಿದ ಕಾರಣ ಕರಣ್ ಮತ್ತು ಅಜಯ್ ಎಂದು ಗುರುತಿಸಲಾದ ಇಂದೋರ್ ಮಹಾನಗರ ಪಾಲಿಕೆಯ ಇಬ್ಬರು ಪೌರ ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.  ವಲಯ 13ರ...