Homeಕರ್ನಾಟಕಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

ಬೆಂಗಳೂರು: ನಟ, ಹೋರಾಟಗಾರ ಚೇತನ್‌ ವಿರುದ್ಧ ಎಫ್‌ಐಆರ್‌ ದಾಖಲು

- Advertisement -
- Advertisement -

“ಭೂತಕೋಲವು ಹಿಂದೂ ಸಂಪ್ರದಾಯದ ಭಾಗವಲ್ಲ” ಎಂದು ನಟ, ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಹೇಳಿದ ಕೆಲವು ದಿನಗಳ ನಂತರ ಬೆಂಗಳೂರು ಪೊಲೀಸರು ಶನಿವಾರ ಪ್ರಕರಣವನ್ನು ದಾಖಲಿಸಿದ್ದಾರೆ.

ಭೂತ ಕೋಲವು ಆದಿವಾಸಿಗಳ ಸಂಸ್ಕೃತಿಯ ಭಾಗವಾಗಿದೆ. ಅದರಲ್ಲಿ ವೈದೀಕರಣ ಇಲ್ಲ ಎಂದು ಚೇತನ್‌ ಬುಧವಾರ ಹೇಳಿದ್ದರು. “ಭಾರತದಲ್ಲಿ ಹಿಂದೂ ಧರ್ಮ ಅಸ್ತಿತ್ವಕ್ಕೆ ಬರುವ ಮೊದಲೇ ಆದಿವಾಸಿಗಳು ಕಾಡಿನ ಆರಾಧನೆಯನ್ನು ಮಾಡುತ್ತಿದ್ದರು” ಎಂದು ಚೇತನ್ ಹೇಳಿದ್ದರು.

ಹಿಂದಿ ಮತ್ತು ಹಿಂದುತ್ವದ ಹೇರಿಕೆಯನ್ನು ಒಪ್ಪಲಾಗದು ಎಂದೂ ಅವರು ತಿಳಿಸಿದ್ದರು. ಚೇತನ್ ಅವರ ಹೇಳಿಕೆಗಳಿಗೆ ಸಂಬಂಧಿಸಿದಂತೆ ಶೇಷಾದ್ರಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್‌ಐಆರ್‌ ಆಗಿದೆ.

ಬಿಜೆಪಿ ಬೆಂಬಲಿತ ಸಂಘಟನೆಯಾದ ಬಜರಂಗದಳದ ಬೆಂಗಳೂರು (ಉತ್ತರ) ಸಂಚಾಲಕ ಶಿವಕುಮಾರ್ ಅವರ ದೂರಿನ ಆಧಾರದ ಮೇಲೆ ಚೇತನ್‌ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದು ಹಿಂದುತ್ವ ಸಂಘಟನೆಯಾದ ಹಿಂದೂ ಜಾಗರಣ ವೇದಿಕೆ ಕೂಡ ಚೇತನ್‌ ವಿರುದ್ಧ ಉಡುಪಿ ಜಿಲ್ಲೆಯಲ್ಲಿ ದೂರು ದಾಖಲಿಸಿದೆ.

ಪೊಲೀಸರು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 505(2) ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ವಿಭಿನ್ನ ವರ್ಗಗಳ ನಡುವೆ ದ್ವೇಷವನ್ನುಉತ್ತೇಜಿಸಲು ಯತ್ನಿಸಲಾಗಿದೆ ಎಂದು ಆರೋಪಿಸಲಾಗಿದೆ.

ಭೂತಕೋಲ ಸಂಪ್ರದಾಯವು ಹಿಂದೂ ಸಂಸ್ಕೃತಿಯ ಭಾಗವಾಗಿದೆ ಎಂಬ ‘ಕಾಂತಾರ’ ನಿರ್ದೇಶಕ ರಿಷಬ್ ಶೆಟ್ಟಿ ಹೇಳಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ ಚೇತನ್‌ ಹೇಳಿಕೆ ನೀಡಿದ್ದರು. ಚಿತ್ರದಲ್ಲಿ ತೋರಿಸಲಾಗಿರುವ ಪಂಜುರ್ಲಿಯು ಹಿಂದೂ ಸಂಪ್ರದಾಯದ ಭಾಗ ಎಂದು ರಿಷಬ್‌ ಹೇಳಿದ್ದರು.

ರಿಷಬ್‌ ಹೇಳಿಕೆಗೆ ಹಲವಾರು ಜನ ಆಕ್ಷೇಪ ವ್ಯಕ್ತಪಡಿಸಿದ್ದರು. ಭೂತಕೋಲವು ಹೇಗೆ ಅವೈದಿಕವಾಗಿದೆ ಎಂಬ ವಿಶ್ಲೇಷಣೆಗಳು ಬಂದಿದ್ದವು.

ಚೇತನ್‌ ವಿರುದ್ಧ ಈ ವರ್ಷ ದಾಖಲಾಗಿರುವ ಎರಡನೇ ಪ್ರಕರಣ ಇದಾಗಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ ಧರಿಸುವುದನ್ನು ರಾಜ್ಯ ಸರ್ಕಾರ ನಿಷೇಧ ಹೇರಿದ ಬಳಿಕ ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಹಿಜಾಬ್‌ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಆಲಿಸಿದ ಕರ್ನಾಟಕ ಹೈಕೋರ್ಟ್ ಪೀಠದ ಭಾಗವಾಗಿದ್ದ ನ್ಯಾಯಾಧೀಶರನ್ನು ಟೀಕಿಸಿದ ಆರೋಪದಲ್ಲಿ ಚೇತನ್‌ ಅವರನ್ನು ಫೆಬ್ರವರಿಯಲ್ಲಿ ಬೆಂಗಳೂರು ಪೊಲೀಸರು ಬಂಧಿಸಿದ್ದರು.

ನಟ ಚೇತನ್‌‌ ತಮ್ಮ ಟ್ವೀಟ್‌ನಲ್ಲಿ “ಕರ್ನಾಟಕ ಹೈಕೋರ್ಟ್ ತೀರ್ಪಿನ ಬಗ್ಗೆ ನಾನು ಸುಮಾರು ಎರಡು ವರ್ಷಗಳ ಹಿಂದೆ ಬರೆದ ಟ್ವೀಟ್ ಇದು. ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣದಲ್ಲಿ ಇಂತಹ ಗೊಂದಲದ ಕಾಮೆಂಟ್ಗಳನ್ನು ಮಾಡಿದ್ದಾರೆ.  ಈಗ ಇದೇ ನ್ಯಾಯಾಧೀಶರು ಸರ್ಕಾರಿ ಶಾಲೆಗಳಲ್ಲಿ #ಹಿಜಾಬ್ ಸ್ವೀಕಾರಾರ್ಹವೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುತ್ತಿದ್ದಾರೆ. ಇವರಿಗೆ ಅಗತ್ಯವಿರುವ ಸ್ಪಷ್ಟತೆ ಇದೆಯೇ?” ಎಂದು ಪ್ರಶ್ನಿಸಿದ್ದರು.

“ಚೇತನ್ ಅವರು ಸಾಮಾನ್ಯ ಜನರಲ್ಲಿ ಮತ್ತು ಒಂದು ಕೋಮಿನ (ಮುಸ್ಲಿಂ) ಜನಾಂಗದವರಿಗೆ ಕಾನೂನು- ಸುವ್ಯವಸ್ಥೆ, ನ್ಯಾಯಾಂಗ, ಸರ್ಕಾರ ಮತ್ತು ಸಾಂವಿಧಾನಿಕ ವ್ಯವಸ್ಥೆಯ ಮೇಲೆ ಅಪನಂಬಿಕೆ ಮತ್ತು ಆಕ್ರೋಶ ಬರುವ ಹಾಗೇ ಮೇಲ್ಕಂಡಂತೆ ಟ್ವೀಟ್ ಮಾಡಿ ಮುಸ್ಲಿಂ ಕೋಮಿನವರು ಮತ್ತು ಇತರೆ ಜನರು ಪ್ರತಿಭಟನೆ, ಗಲಭೆ, ಇತ್ಯಾದಿಗಳು ಮಾಡುವಂತೆ ಪ್ರಚೋದಿಸಿದ್ದಾರೆ” ಎಂದು ಎಫ್‌ಐಆರ್‌ನಲ್ಲಿ ಆರೋಪಿಸಲಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...