Homeಕರ್ನಾಟಕಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಮಸಣ ಕಾರ್ಮಿಕರು ಎದುರಿಸುವ ಸವಾಲುಗಳು ಅನೇಕ. ಸರ್ಕಾರದಿಂದ ಈ ದಲಿತರಿಗೆ ವೇತನ ನಿಗದಿಯಾಗಬೇಕಿದೆ.

- Advertisement -
- Advertisement -

ಉತ್ತರ ಕರ್ನಾಟಕದ ಅನೇಕ ದಲಿತ ಕಾರ್ಮಿಕರನ್ನು ‘ಬಿಟ್ಟಿ ಚಕ್ರಿ’ ಎಂಬ ಜೀತಗಾರಿಕೆಗೆ ತಳ್ಳಲಾಗಿದೆ. ಸ್ಮಶಾನದಲ್ಲಿ ಹೆಣಗಳನ್ನು ಸುಡುವ ಇಂತಹ ಅನೇಕ ಕಾರ್ಮಿಕರು ಯಾವುದೇ ಆದಾಯವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ಅನ್ಯಾಯದ ವಿರುದ್ಧ ತಾವೇ ಸಂಘಟಿತರಾಗಿ ತಮ್ಮ ದನಿ ಎತ್ತಲು ಮುಂದಾಗಿದ್ದಾರೆ.

ವಿಜಯನಗರ ಜಿಲ್ಲೆಯ ಆದಿ ಕರ್ನಾಟಕ (ಪರಿಶಿಷ್ಟ ಜಾತಿ) ಸಮುದಾಯಕ್ಕೆ ಸೇರಿದ ಏಣಗಿ ಸಣ್ಣಹನುಮಂತಪ್ಪ (50) ಅವರು ‘ನ್ಯೂಸ್‌ಕ್ಲಿಕ್‌’ ಜಾಲತಾಣದೊಂದಿಗೆ ಮಾತನಾಡಿದ್ದು, ತಮ್ಮ ಬದುಕು- ಬವಣೆ ಹಾಗೂ ಸಂಘಟನೆಯ ಕುರಿತು ವಿವರಿಸಿದ್ದಾರೆ.

“ಹಲವು ಶತಮಾನಗಳಿಂದ ಮಸಣ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ, ಇಷ್ಟು ದಿನ ವೇತನ ಇಲ್ಲದೇ ಕೆಲಸ ಮಾಡಿದ್ದೇವೆ, ಈಗ ಸರಕಾರ ನಮ್ಮ ದುಡಿಮೆಗೆ ತಕ್ಕ ವೇತನ ನೀಡಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದಲಿತ ಕಾರ್ಮಿಕರು ಮಾಡುವ ಕೆಲಸಕ್ಕೆ ಸರ್ಕಾರದಿಂದ ಯಾವುದೇ ಹಣ ಸಂದಾಯವಾಗುತ್ತಿಲ್ಲ. ಯಾರಾದರೂ ಒಬ್ಬ ವ್ಯಕ್ತಿ ಸತ್ತಾಗ ದೇಹವನ್ನು ವಿಲೇವಾರಿ ಮಾಡಲು ಈ ಕಾರ್ಮಿಕರನ್ನು ಕರೆಸಲಾಗುತ್ತದೆ. ಸಾವಿಗೀಡಾದ ವ್ಯಕ್ತಿಯ ಕುಟುಂಬವು ಈ ಕಾರ್ಮಿಕರಿಗೆ ಕೊಡಬೇಕಾದ ಕೂಲಿಯನ್ನು ನಿರ್ಧರಿಸುತ್ತದೆ.

ಈ ಕೆಲಸ ಜಾತಿ ಆಧಾರಿತ, ಪಾರಂಪರಿಕ ದುಡಿಮೆಯಾಗಿ ಬೆಳೆದುಬಿಟ್ಟಿದೆ. ಬೇರೆ ಯಾವುದೇ ಸಮುದಾಯದವರು ಈ ಕೆಲಸ ಮಾಡಲು ಸಿದ್ಧರಿಲ್ಲ. ‘ಬಿಟ್ಟಿ ಚಕ್ರಿ’ ಎಂದು ಕರೆಯಲ್ಪಡುವ ಈ ಪದ್ಧತಿಯು ಉತ್ತರ ಕರ್ನಾಟಕದಲ್ಲಿ ಪ್ರಚಲಿತದಲ್ಲಿದೆ. ಕಾರ್ಮಿಕರನ್ನು ಜೀತಗಾರಿಕೆಗೆ ತಳ್ಳಲಾಗಿದೆ. ಶವಗಳನ್ನು ಹೂಳಲು ಗುಂಡಿ ತಗೆಯುತ್ತಾರೆ. ಆದರೆ ಇವರಿಗೆ ಸಿಗುವ ಕೂಲಿ ಯಾವಾಗಲೂ ಅತ್ಯಲ್ಪ.

ಈ ಕಾರ್ಮಿಕರು ತಮ್ಮ ಕೆಲಸದ ಸಮಯದಲ್ಲಿ ಹಲವಾರು ದೌರ್ಜನ್ಯಗಳಿಗೆ ಒಳಗಾಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಸ್ಮಶಾನ ಭೂಮಿಯನ್ನು ಕೆಲವರು ಅತ್ರಿಕ್ರಮಣ ಮಾಡುತ್ತಾರೆ. ಹೀಗಾಗಿ ಸಮಾಧಿಗಳಿಗೆ ಸ್ಥಳಾವಕಾಶ ಕಡಿಮೆಯಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಮಸಣ ಕಾರ್ಮಿಕರು ಹಳೆಯ ಸಮಾಧಿಗಳನ್ನು ಅಗೆದು ಕೊಳೆತ ಅಥವಾ ಅರ್ಧ ಕೊಳೆತ ಶವಗಳನ್ನು ಕೈಯಿಂದ ಹೊರಗೆಳೆಯುತ್ತಾರೆ. ಹೊಸ ಶವಕ್ಕೆ ಹಳೆಯ ಸಮಾಧಿಯನ್ನು ಬಳಸುತ್ತಾರೆ. ನಂತರ ಕೊಳೆತ ದೇಹವನ್ನು ಹತ್ತಿರದ ಹೊಲಕ್ಕೆ ಒಯ್ದು ಸುಡಲಾಗುತ್ತದೆ. ಇದಕ್ಕಾಗಿ ಕೈಗವಸು ಅಥವಾ ವಿಶೇಷ ಉಪಕರಣಗಳನ್ನು ಬಳಸುವುದಿಲ್ಲ ಎಂದು ಸಣ್ಣಹನುಮಂತಪ್ಪ ಹೇಳುತ್ತಾರೆ.

ಒಂಟಿಯಾಗಿ ವಾಸಿಸುತ್ತಿದ್ದ ಅನೇಕ ಜನರು ಸಾವನ್ನಪ್ಪಿದ ನಿದರ್ಶನಗಳನ್ನು ಕೋವಿಡ್ ಸಂದರ್ಭದಲ್ಲಿ ಈ ಮಸಣ ಕಾರ್ಮಿಕರು ಎದುರಿಸಿದ್ದಾರೆ. ಯಾವುದೇ ವೇತನವಿಲ್ಲದೆ ಇಂತಹ ಕೊಳೆತ ಶವಗಳನ್ನು ವಿಲೇವಾರಿ ಮಾಡಿದ ಉದಾಹರಣೆಗಳಿವೆ.

ಗ್ರಾಮೀಣ ಪ್ರದೇಶಗಳಲ್ಲಿ ಬರ ಮತ್ತು ಮಳೆಗೆ ಸಂಬಂಧಿಸಿದಂತೆ ಹಲವಾರು ಮೂಢನಂಬಿಕೆಗಳಿವೆ. ಬರಗಾಲದ ಸಂದರ್ಭದಲ್ಲಿ ಸ್ಥಳೀಯರು ಮಳೆಗಾಗಿ ಪ್ರಾರ್ಥಿಸಿ ಕೆಲವು ಆಚರಣೆಗಳನ್ನು ಹಮ್ಮಿಕೊಳ್ಳುತ್ತಾರೆ. ಕಪ್ಪೆ ಮೆರವಣಿಗೆ, ಕತ್ತೆ ಮೆರವಣಿಗೆ, ಭಜನೆ ಓದುವುದು, ಪುರಾಣ ಓದುವುದು ಇತ್ಯಾದಿ ಮಾಡುತ್ತಾರೆ. ಬರ ನೀಗುವುದೆಂದು ಇವುಗಳನ್ನು ಹಮ್ಮಿಕೊಳ್ಳುತ್ತಾರೆ. ಅದೇ ರೀತಿ ಮೃತ ದೇಹವು ಸಂಪೂರ್ಣವಾಗಿ ಕೊಳೆಯದಿದ್ದಾಗ ಬರಗಾಲ ಉಂಟಾಗುತ್ತದೆ ಎಂಬ ಮೂಢನಂಬಿಕೆಯೂ ಇದೆ. ಆದ್ದರಿಂದ ಎಲ್ಲಾ ಸಮಾಧಿಗಳನ್ನು ಮತ್ತೆ ಅಗೆದು, ದೇಹಗಳನ್ನು ಪರೀಕ್ಷಿಸುವಂತೆ ಈ ಕಾರ್ಮಿಕರ ಮೇಲೆ ಒತ್ತಡ ಹೇರಿದ ನಿದರ್ಶನಗಳಿವೆ. ಯಾವುದಾದರೂ ಶವ ಸಾಕಷ್ಟು ಕೊಳೆಯದಿದ್ದರೆ, ಅಂತಹ ದೇಹವನ್ನು ಹೊರಗೆಳೆದು ಬಿಟ್ಟಿಯಾಗಿ ಸುಡಬೇಕಾಗುತ್ತದೆ.

ಸಣ್ಣಹನುಮಂತಪ್ಪ ಮಾತು ಮುಂದುವರಿಸುತ್ತಾ, “ನನ್ನ ಅಪ್ಪ, ತಾತ ಈ ಕೆಲಸ ಮಾಡ್ತಾ ಇದ್ದರು. ಈಗ ನಾನೂ ಮಾಡ್ತಾ ಇದ್ದೀನಿ. ಆದ್ರೆ ಮಗ ಈ ಕೆಲಸ ಮಾಡೋದು ಬೇಡ” ಎನ್ನುತ್ತಾರೆ.

ಮಂಗಳವಾರ ಬೆಂಗಳೂರಿನ ಇಎಂಎಸ್ ಭವನದಲ್ಲಿ ಸ್ಮಶಾನದ ಕಾರ್ಮಿಕರು ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿದರು. ತಮ್ಮನ್ನು ಸಫಾಯಿ ಕರ್ಮಚಾರಿಗಳೆಂದು ಗುರುತಿಸಬೇಕು, ಮೃತ ದೇಹಗಳನ್ನು ಹೂಳಲು ಮತ್ತು ವಿಲೇವಾರಿ ಮಾಡಲು ಯೋಗ್ಯವಾದ ವೇತನವನ್ನು ನಿಗದಿಪಡಿಸಬೇಕು ಎಂದು ಆಶಿಸಿದರು. ‘ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘಟನೆ’ ಎಂಬ ಬ್ಯಾನರ್ ಅಡಿಯಲ್ಲಿ ಈ ಕಾರ್ಯಕರ್ತರನ್ನು ಸಂಘಟಿಸುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಈ ಸಭೆಯನ್ನು ಹಮ್ಮಿಕೊಂಡಿತ್ತು.

ದೇವದಾಸಿಯರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ(ಎಂ) ಸಂಘಟಕಿ ಬಿ.ಮಾಳಮ್ಮ ಅವರೊಂದಿಗೆ ಸಂವಾದ ನಡೆಸಿದ ನಂತರ ಮಸಣ ಕಾರ್ಮಿಕರು ಒಗ್ಗೂಡಲು ನಿರ್ಧರಿಸಿದ್ದಾರೆ. ಒಗ್ಗೂಡಿ ಸಂಘ ರಚಿಸುವ ಆಲೋಚನೆ ಬಂದಿದೆ ಎಂದು ಸಣ್ಣಹನುಮಂತಪ್ಪ ವಿವರಿಸಿದ್ದಾರೆ.

ಇದನ್ನೂ ಓದಿರಿ: ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

“ಮಾಳಮ್ಮ ಅಕ್ಕ ನಮ್ಮ ಹಳ್ಳಿಗಳಿಗೆ ಬಂದು ಮಸಣ ಕಾರ್ಮಿಕರ ಸಮೀಕ್ಷೆ ಮಾಡಿಸಿದರು. ಒಗ್ಗೂಡಿ ಸಂಘ ಕಟ್ಟಿದರೆ ಸರಕಾರದ ಮುಂದೆ ನಿಮ್ಮ ಬೇಡಿಕೆಗಳನ್ನು ಇಡಬಹುದು ಎಂದು ಹೇಳಿದ್ದರು. ಮಾಳಮ್ಮ ಅಕ್ಕನಿಗಿಂತ ಮುಂಚೆ ಯಾರೂ ನಮ್ಮ ಬಗ್ಗೆ ವಿಚಾರಿಸಿದವರಿಲ್ಲ” ಎಂದಿದ್ದಾರೆ.

ಅಂತಹ ದುರ್ಬಲ ಕಾರ್ಮಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ಮಾಳಮ್ಮ ಅವರು 2014ರಲ್ಲಿ ವಹಿಸಿಕೊಂಡರು. ಅವರು ಅನುಭವಿ ಸಂಘಟಕಿ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿಯೂ ಹೌದು.

‘ನ್ಯೂಸ್‌ಕ್ಲಿಕ್‌’ನೊಂದಿಗೆ ಮಾತನಾಡಿರುವಅವರು, “ಸಮಾಧಿಯನ್ನು ತೋಡುವುದನ್ನು ಹೊರತುಪಡಿಸಿ ಅನೇಕ ಕೆಲಸಗಳನ್ನು ಈ ಕಾರ್ಮಿಕರು ಮಾಡುತ್ತಾರೆ. ಶವಕ್ಕೆ ಸಂಬಂಧಿಸಿದ ಕೊಳಕಾದ ವಸ್ತುಗಳನ್ನೂ ವಿಲೇವಾರಿ ಮಾಡಬೇಕಾಗಿರುತ್ತದೆ. ಶವದೊಂದಿಗೆ ವಿಧಿ ವಿಧಾನಗಳಲ್ಲಿ ಬಳಸುವ ಹಣ್ಣು-ಹಂಪಲುಗಳನ್ನು ವಿಲೇವಾರಿ ಮಾಡಬೇಕಿರುತ್ತದೆ. ಶವ ಸಂಸ್ಕಾರಕ್ಕೆ ಬೇಕಾದ ಸೌದೆಯನ್ನು ಕಾಡಿಗೆ ಹೋಗಿ ಕಡಿದು ತರಬೇಕಿರುತ್ತದೆ. ಇವರಿಗೆ ಯಾವುದೇ ವಾಹನ ಸೌಲಭ್ಯವೂ ಇಲ್ಲದೆ ತಲೆಯ ಮೇಲೆ ಕಟ್ಟಿಗೆಗಳನ್ನು ಹೊತ್ತು ಸಾಗಿಸಬೇಕಾಗುತ್ತದೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂಸ್‌ಕ್ಲಿಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...