Homeಕರ್ನಾಟಕಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಬೆಂಗಳೂರು: ‘ಬಿಟ್ಟಿ ಚಾಕರಿ’ಯಿಂದ ನೊಂದ ಮಸಣ ಕಾರ್ಮಿಕರು ಸಂಘಟಿತರಾಗುವತ್ತ ಹೆಜ್ಜೆ

ಮಸಣ ಕಾರ್ಮಿಕರು ಎದುರಿಸುವ ಸವಾಲುಗಳು ಅನೇಕ. ಸರ್ಕಾರದಿಂದ ಈ ದಲಿತರಿಗೆ ವೇತನ ನಿಗದಿಯಾಗಬೇಕಿದೆ.

- Advertisement -
- Advertisement -

ಉತ್ತರ ಕರ್ನಾಟಕದ ಅನೇಕ ದಲಿತ ಕಾರ್ಮಿಕರನ್ನು ‘ಬಿಟ್ಟಿ ಚಕ್ರಿ’ ಎಂಬ ಜೀತಗಾರಿಕೆಗೆ ತಳ್ಳಲಾಗಿದೆ. ಸ್ಮಶಾನದಲ್ಲಿ ಹೆಣಗಳನ್ನು ಸುಡುವ ಇಂತಹ ಅನೇಕ ಕಾರ್ಮಿಕರು ಯಾವುದೇ ಆದಾಯವಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಈ ಅನ್ಯಾಯದ ವಿರುದ್ಧ ತಾವೇ ಸಂಘಟಿತರಾಗಿ ತಮ್ಮ ದನಿ ಎತ್ತಲು ಮುಂದಾಗಿದ್ದಾರೆ.

ವಿಜಯನಗರ ಜಿಲ್ಲೆಯ ಆದಿ ಕರ್ನಾಟಕ (ಪರಿಶಿಷ್ಟ ಜಾತಿ) ಸಮುದಾಯಕ್ಕೆ ಸೇರಿದ ಏಣಗಿ ಸಣ್ಣಹನುಮಂತಪ್ಪ (50) ಅವರು ‘ನ್ಯೂಸ್‌ಕ್ಲಿಕ್‌’ ಜಾಲತಾಣದೊಂದಿಗೆ ಮಾತನಾಡಿದ್ದು, ತಮ್ಮ ಬದುಕು- ಬವಣೆ ಹಾಗೂ ಸಂಘಟನೆಯ ಕುರಿತು ವಿವರಿಸಿದ್ದಾರೆ.

“ಹಲವು ಶತಮಾನಗಳಿಂದ ಮಸಣ ಕಾರ್ಮಿಕರಾಗಿ ದುಡಿಯುತ್ತಿದ್ದೇವೆ, ಇಷ್ಟು ದಿನ ವೇತನ ಇಲ್ಲದೇ ಕೆಲಸ ಮಾಡಿದ್ದೇವೆ, ಈಗ ಸರಕಾರ ನಮ್ಮ ದುಡಿಮೆಗೆ ತಕ್ಕ ವೇತನ ನೀಡಬೇಕು” ಎಂದು ಆಗ್ರಹಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ದಲಿತ ಕಾರ್ಮಿಕರು ಮಾಡುವ ಕೆಲಸಕ್ಕೆ ಸರ್ಕಾರದಿಂದ ಯಾವುದೇ ಹಣ ಸಂದಾಯವಾಗುತ್ತಿಲ್ಲ. ಯಾರಾದರೂ ಒಬ್ಬ ವ್ಯಕ್ತಿ ಸತ್ತಾಗ ದೇಹವನ್ನು ವಿಲೇವಾರಿ ಮಾಡಲು ಈ ಕಾರ್ಮಿಕರನ್ನು ಕರೆಸಲಾಗುತ್ತದೆ. ಸಾವಿಗೀಡಾದ ವ್ಯಕ್ತಿಯ ಕುಟುಂಬವು ಈ ಕಾರ್ಮಿಕರಿಗೆ ಕೊಡಬೇಕಾದ ಕೂಲಿಯನ್ನು ನಿರ್ಧರಿಸುತ್ತದೆ.

ಈ ಕೆಲಸ ಜಾತಿ ಆಧಾರಿತ, ಪಾರಂಪರಿಕ ದುಡಿಮೆಯಾಗಿ ಬೆಳೆದುಬಿಟ್ಟಿದೆ. ಬೇರೆ ಯಾವುದೇ ಸಮುದಾಯದವರು ಈ ಕೆಲಸ ಮಾಡಲು ಸಿದ್ಧರಿಲ್ಲ. ‘ಬಿಟ್ಟಿ ಚಕ್ರಿ’ ಎಂದು ಕರೆಯಲ್ಪಡುವ ಈ ಪದ್ಧತಿಯು ಉತ್ತರ ಕರ್ನಾಟಕದಲ್ಲಿ ಪ್ರಚಲಿತದಲ್ಲಿದೆ. ಕಾರ್ಮಿಕರನ್ನು ಜೀತಗಾರಿಕೆಗೆ ತಳ್ಳಲಾಗಿದೆ. ಶವಗಳನ್ನು ಹೂಳಲು ಗುಂಡಿ ತಗೆಯುತ್ತಾರೆ. ಆದರೆ ಇವರಿಗೆ ಸಿಗುವ ಕೂಲಿ ಯಾವಾಗಲೂ ಅತ್ಯಲ್ಪ.

ಈ ಕಾರ್ಮಿಕರು ತಮ್ಮ ಕೆಲಸದ ಸಮಯದಲ್ಲಿ ಹಲವಾರು ದೌರ್ಜನ್ಯಗಳಿಗೆ ಒಳಗಾಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಸ್ಮಶಾನ ಭೂಮಿಯನ್ನು ಕೆಲವರು ಅತ್ರಿಕ್ರಮಣ ಮಾಡುತ್ತಾರೆ. ಹೀಗಾಗಿ ಸಮಾಧಿಗಳಿಗೆ ಸ್ಥಳಾವಕಾಶ ಕಡಿಮೆಯಾಗುತ್ತದೆ. ಅಂತಹ ಸಂದರ್ಭಗಳಲ್ಲಿ ಮಸಣ ಕಾರ್ಮಿಕರು ಹಳೆಯ ಸಮಾಧಿಗಳನ್ನು ಅಗೆದು ಕೊಳೆತ ಅಥವಾ ಅರ್ಧ ಕೊಳೆತ ಶವಗಳನ್ನು ಕೈಯಿಂದ ಹೊರಗೆಳೆಯುತ್ತಾರೆ. ಹೊಸ ಶವಕ್ಕೆ ಹಳೆಯ ಸಮಾಧಿಯನ್ನು ಬಳಸುತ್ತಾರೆ. ನಂತರ ಕೊಳೆತ ದೇಹವನ್ನು ಹತ್ತಿರದ ಹೊಲಕ್ಕೆ ಒಯ್ದು ಸುಡಲಾಗುತ್ತದೆ. ಇದಕ್ಕಾಗಿ ಕೈಗವಸು ಅಥವಾ ವಿಶೇಷ ಉಪಕರಣಗಳನ್ನು ಬಳಸುವುದಿಲ್ಲ ಎಂದು ಸಣ್ಣಹನುಮಂತಪ್ಪ ಹೇಳುತ್ತಾರೆ.

ಒಂಟಿಯಾಗಿ ವಾಸಿಸುತ್ತಿದ್ದ ಅನೇಕ ಜನರು ಸಾವನ್ನಪ್ಪಿದ ನಿದರ್ಶನಗಳನ್ನು ಕೋವಿಡ್ ಸಂದರ್ಭದಲ್ಲಿ ಈ ಮಸಣ ಕಾರ್ಮಿಕರು ಎದುರಿಸಿದ್ದಾರೆ. ಯಾವುದೇ ವೇತನವಿಲ್ಲದೆ ಇಂತಹ ಕೊಳೆತ ಶವಗಳನ್ನು ವಿಲೇವಾರಿ ಮಾಡಿದ ಉದಾಹರಣೆಗಳಿವೆ.

ಗ್ರಾಮೀಣ ಪ್ರದೇಶಗಳಲ್ಲಿ ಬರ ಮತ್ತು ಮಳೆಗೆ ಸಂಬಂಧಿಸಿದಂತೆ ಹಲವಾರು ಮೂಢನಂಬಿಕೆಗಳಿವೆ. ಬರಗಾಲದ ಸಂದರ್ಭದಲ್ಲಿ ಸ್ಥಳೀಯರು ಮಳೆಗಾಗಿ ಪ್ರಾರ್ಥಿಸಿ ಕೆಲವು ಆಚರಣೆಗಳನ್ನು ಹಮ್ಮಿಕೊಳ್ಳುತ್ತಾರೆ. ಕಪ್ಪೆ ಮೆರವಣಿಗೆ, ಕತ್ತೆ ಮೆರವಣಿಗೆ, ಭಜನೆ ಓದುವುದು, ಪುರಾಣ ಓದುವುದು ಇತ್ಯಾದಿ ಮಾಡುತ್ತಾರೆ. ಬರ ನೀಗುವುದೆಂದು ಇವುಗಳನ್ನು ಹಮ್ಮಿಕೊಳ್ಳುತ್ತಾರೆ. ಅದೇ ರೀತಿ ಮೃತ ದೇಹವು ಸಂಪೂರ್ಣವಾಗಿ ಕೊಳೆಯದಿದ್ದಾಗ ಬರಗಾಲ ಉಂಟಾಗುತ್ತದೆ ಎಂಬ ಮೂಢನಂಬಿಕೆಯೂ ಇದೆ. ಆದ್ದರಿಂದ ಎಲ್ಲಾ ಸಮಾಧಿಗಳನ್ನು ಮತ್ತೆ ಅಗೆದು, ದೇಹಗಳನ್ನು ಪರೀಕ್ಷಿಸುವಂತೆ ಈ ಕಾರ್ಮಿಕರ ಮೇಲೆ ಒತ್ತಡ ಹೇರಿದ ನಿದರ್ಶನಗಳಿವೆ. ಯಾವುದಾದರೂ ಶವ ಸಾಕಷ್ಟು ಕೊಳೆಯದಿದ್ದರೆ, ಅಂತಹ ದೇಹವನ್ನು ಹೊರಗೆಳೆದು ಬಿಟ್ಟಿಯಾಗಿ ಸುಡಬೇಕಾಗುತ್ತದೆ.

ಸಣ್ಣಹನುಮಂತಪ್ಪ ಮಾತು ಮುಂದುವರಿಸುತ್ತಾ, “ನನ್ನ ಅಪ್ಪ, ತಾತ ಈ ಕೆಲಸ ಮಾಡ್ತಾ ಇದ್ದರು. ಈಗ ನಾನೂ ಮಾಡ್ತಾ ಇದ್ದೀನಿ. ಆದ್ರೆ ಮಗ ಈ ಕೆಲಸ ಮಾಡೋದು ಬೇಡ” ಎನ್ನುತ್ತಾರೆ.

ಮಂಗಳವಾರ ಬೆಂಗಳೂರಿನ ಇಎಂಎಸ್ ಭವನದಲ್ಲಿ ಸ್ಮಶಾನದ ಕಾರ್ಮಿಕರು ತಮ್ಮ ಸಮಸ್ಯೆಗಳ ಕುರಿತು ಚರ್ಚಿಸಿದರು. ತಮ್ಮನ್ನು ಸಫಾಯಿ ಕರ್ಮಚಾರಿಗಳೆಂದು ಗುರುತಿಸಬೇಕು, ಮೃತ ದೇಹಗಳನ್ನು ಹೂಳಲು ಮತ್ತು ವಿಲೇವಾರಿ ಮಾಡಲು ಯೋಗ್ಯವಾದ ವೇತನವನ್ನು ನಿಗದಿಪಡಿಸಬೇಕು ಎಂದು ಆಶಿಸಿದರು. ‘ಕರ್ನಾಟಕ ರಾಜ್ಯ ಮಸಣ ಕಾರ್ಮಿಕರ ಸಂಘಟನೆ’ ಎಂಬ ಬ್ಯಾನರ್ ಅಡಿಯಲ್ಲಿ ಈ ಕಾರ್ಯಕರ್ತರನ್ನು ಸಂಘಟಿಸುತ್ತಿರುವ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಈ ಸಭೆಯನ್ನು ಹಮ್ಮಿಕೊಂಡಿತ್ತು.

ದೇವದಾಸಿಯರೊಂದಿಗೆ ಕೆಲಸ ಮಾಡುತ್ತಿರುವ ಸಿಪಿಐ(ಎಂ) ಸಂಘಟಕಿ ಬಿ.ಮಾಳಮ್ಮ ಅವರೊಂದಿಗೆ ಸಂವಾದ ನಡೆಸಿದ ನಂತರ ಮಸಣ ಕಾರ್ಮಿಕರು ಒಗ್ಗೂಡಲು ನಿರ್ಧರಿಸಿದ್ದಾರೆ. ಒಗ್ಗೂಡಿ ಸಂಘ ರಚಿಸುವ ಆಲೋಚನೆ ಬಂದಿದೆ ಎಂದು ಸಣ್ಣಹನುಮಂತಪ್ಪ ವಿವರಿಸಿದ್ದಾರೆ.

ಇದನ್ನೂ ಓದಿರಿ: ಬೆಂಗಳೂರು: ದೇವಾಲಯಗಳಲ್ಲಿ ಚಪ್ಪಲಿ ಕಾಯುವ ಕೆಲಸ ಪರಿಶಿಷ್ಟರಿಗೆ ಮೀಸಲು; ವಿರೋಧದ ಬಳಿಕ ಟೆಂಡರ್‌ ರದ್ದು

“ಮಾಳಮ್ಮ ಅಕ್ಕ ನಮ್ಮ ಹಳ್ಳಿಗಳಿಗೆ ಬಂದು ಮಸಣ ಕಾರ್ಮಿಕರ ಸಮೀಕ್ಷೆ ಮಾಡಿಸಿದರು. ಒಗ್ಗೂಡಿ ಸಂಘ ಕಟ್ಟಿದರೆ ಸರಕಾರದ ಮುಂದೆ ನಿಮ್ಮ ಬೇಡಿಕೆಗಳನ್ನು ಇಡಬಹುದು ಎಂದು ಹೇಳಿದ್ದರು. ಮಾಳಮ್ಮ ಅಕ್ಕನಿಗಿಂತ ಮುಂಚೆ ಯಾರೂ ನಮ್ಮ ಬಗ್ಗೆ ವಿಚಾರಿಸಿದವರಿಲ್ಲ” ಎಂದಿದ್ದಾರೆ.

ಅಂತಹ ದುರ್ಬಲ ಕಾರ್ಮಿಕರಿಗೆ ಸಹಾಯ ಮಾಡುವ ಜವಾಬ್ದಾರಿಯನ್ನು ಮಾಳಮ್ಮ ಅವರು 2014ರಲ್ಲಿ ವಹಿಸಿಕೊಂಡರು. ಅವರು ಅನುಭವಿ ಸಂಘಟಕಿ ಹಾಗೂ ಕರ್ನಾಟಕ ರಾಜ್ಯ ದೇವದಾಸಿ ವಿಮೋಚನಾ ಸಂಘದ ಪ್ರಧಾನ ಕಾರ್ಯದರ್ಶಿಯೂ ಹೌದು.

‘ನ್ಯೂಸ್‌ಕ್ಲಿಕ್‌’ನೊಂದಿಗೆ ಮಾತನಾಡಿರುವಅವರು, “ಸಮಾಧಿಯನ್ನು ತೋಡುವುದನ್ನು ಹೊರತುಪಡಿಸಿ ಅನೇಕ ಕೆಲಸಗಳನ್ನು ಈ ಕಾರ್ಮಿಕರು ಮಾಡುತ್ತಾರೆ. ಶವಕ್ಕೆ ಸಂಬಂಧಿಸಿದ ಕೊಳಕಾದ ವಸ್ತುಗಳನ್ನೂ ವಿಲೇವಾರಿ ಮಾಡಬೇಕಾಗಿರುತ್ತದೆ. ಶವದೊಂದಿಗೆ ವಿಧಿ ವಿಧಾನಗಳಲ್ಲಿ ಬಳಸುವ ಹಣ್ಣು-ಹಂಪಲುಗಳನ್ನು ವಿಲೇವಾರಿ ಮಾಡಬೇಕಿರುತ್ತದೆ. ಶವ ಸಂಸ್ಕಾರಕ್ಕೆ ಬೇಕಾದ ಸೌದೆಯನ್ನು ಕಾಡಿಗೆ ಹೋಗಿ ಕಡಿದು ತರಬೇಕಿರುತ್ತದೆ. ಇವರಿಗೆ ಯಾವುದೇ ವಾಹನ ಸೌಲಭ್ಯವೂ ಇಲ್ಲದೆ ತಲೆಯ ಮೇಲೆ ಕಟ್ಟಿಗೆಗಳನ್ನು ಹೊತ್ತು ಸಾಗಿಸಬೇಕಾಗುತ್ತದೆ” ಎಂದಿದ್ದಾರೆ.

ವರದಿ ಕೃಪೆ: ನ್ಯೂಸ್‌ಕ್ಲಿಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...