Homeಮುಖಪುಟ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಸದ ತೇಜಸ್ವಿ ಸೂರ್ಯಗೆ ಬೆಂಬಲ ಸೂಚಿಸಿದ್ದಾರೆ. ನಾನು ಹಲವು ವರ್ಷಗಳಿಂದ ಪ್ರಧಾನಿಗಳಲ್ಲಿ ಎನ್‌ಐಎ ಕೇಂದ್ರಕ್ಕೆ ಮನವಿ ಮಾಡಿದ್ದೆ. ಈಗ ಒಪ್ಪಿಗೆ ಸಿಕ್ಕಿರುವುದಕ್ಕೆ ಪ್ರಧಾನಿಗಳು ಮತ್ತು ಗೃಹ ಸಚಿವ ಅಮಿತ್‌ ಶಾರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕೆಲವರು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವುದು ಬಿಜೆಪಿಯೇ, ಹಾಗಾಗಿ ಭಯೋತ್ಪಾದನೆ ಹೆಚ್ಚಾಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

 

ಇದಕ್ಕೆ ಆಕ್ಷೇಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ’ತಂತ್ರಜ್ಞಾನದಲ್ಲಿ ಜಾಗತೀಕವಾಗಿ  ಹೆಸರುವಾಸಿಯಾಗಿರುವ ಬೆಂಗಳೂರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕರ ಕೇಂದ್ರ ಎಂದಿರುವುದು ಖಂಡನೀಯ’. ಜಿಡಿಪಿ ಕುಸಿತವಾಗಿರುವ ಈ ಸಮಯದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಯಾರಾದರೂ ಹೂಡಿಕೆದಾರರು ಬರುತ್ತಾರೆಯೇ..? ಇದಕ್ಕೆ ಪ್ರಧಾನಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು,‌  ‘ಬೆಂಗಳೂರಿನಲ್ಲಿ ಎಷ್ಟು ಭಯೋತ್ಪಾದನಾ ಚಟುವಟಿಕೆಗಳು ನಡೆದಿವೆ? ಭಯೋತ್ಪಾದನಾ ಕೇಂದ್ರವೆಂಬ ಅರ್ಹತೆ ಪಡೆಯಲು ಇರುವ ಮಾನದಂಡಗಳು ಏನು ಎಂಬುದನ್ನು ಬಿಜೆಪಿಯವರಿಂದ ಕೇಳಲು ನಾನು ಇಷ್ಟಪಡುತ್ತೇನೆ’ ಎಂದಿದ್ದಾರೆ.

 

ಅಲ್ಲದೆ, “ಇನ್ನು ಮುಂದೆ ಹೂಡಿಕೆದಾರರನ್ನು ‘ಭಯೋತ್ಪಾದನಾ ನಗರ’ಕ್ಕೆ ಕರೆತರಲು ಕೈಗಾರಿಕಾ ಸಚಿವ ‌ಜಗದೀಶ್ ಶೆಟ್ಟರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಕಷ್ಟು ಶ್ರಮಪಡಬೇಕಿದೆ” ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.‌

ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್ ಮಾಡಿ ತೇಜಸ್ವಿ ಸೂರ್ಯ ವಿರುದ್ಧ, ಬಿಜೆಪಿ ಸರ್ಕರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ನಮ್ಮ ನಗರ ಅವರಿಗೆ ಎಲ್ಲವನ್ನೂ ನೀಡಿದೆ, ಆದರೆ ಅವರು ತಮ್ಮ ಅಜೆಂಡಾಕ್ಕಾಗಿ ನಮ್ಮ ನಗರದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. 1.2 ಕೋಟಿ ಜನರನ್ನು ತಪ್ಪಿತಸ್ಥರನ್ನಾಗಿ ಚಿತ್ರಿಸಿದ್ದಾರೆ. ಇಂತಹ ಅವಿವೇಕ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ”. ನನ್ನ ನಗರ ಸುಂದರ, ಕಾಸ್ಮೋಪಾಲಿಟನ್, ವೈವಿಧ್ಯಮಯ, ಐಟಿ/ಬಿಟಿ ಕೇಂದ್ರ, ಸುರಕ್ಷತೆ, ಶಾಂತಿಯುತ ಸಿಲಿಕಾನ್ ಸಿಟಿಯಾಗಿದೆ. ನನ್ನ ಈ ನಗರಕ್ಕೆ ಕಳಂಕ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಶಾಸಕಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

ರಾಜಕೀಯ ನಾಯಕರುಗಳಲ್ಲದೇ ನೆಟ್ಟಿಗರು ಕೂಡ ಸಂಸದ ತೇಜಸ್ವಿ ಹೇಳಿಕೆಗೆ ಕಿಡಿಕಾರಿದ್ದಾರೆ. ಟ್ವಿಟ್ಟರ್‌ನಲ್ಲಿ #ApologiseTejasvi ಹ್ಯಾಶ್‌ಟ್ಯಾಗ್ ಬಳಸಿ ತೇಜಸ್ವಿ ಸೂರ್ಯ ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ.

ಇನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಸದ ತೇಜಸ್ವಿ ಸೂರ್ಯಗೆ ಬೆಂಬಲ ಸೂಚಿಸಿದ್ದಾರೆ. ನಾನು ಹಲವು ವರ್ಷಗಳಿಂದ ಪ್ರಧಾನಿಗಳಲ್ಲಿ ಎನ್‌ಐಎ ಕೇಂದ್ರಕ್ಕೆ ಮನವಿ ಮಾಡಿದ್ದೆ. ಈಗ ಒಪ್ಪಿಗೆ ಸಿಕ್ಕಿರುವುದಕ್ಕೆ ಪ್ರಧಾನಿಗಳು ಮತ್ತು ಗೃಹ ಸಚಿವ ಅಮಿತ್‌ ಶಾರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.


ಇದನ್ನೂ ಓದಿ: ತೇಜಸ್ವಿನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ‘ಡಿಎನ್ಎ ಪೊಲಿಟಿಕ್ಸ್’ಕಾರಣಕ್ಕಲ್ಲ!  ಅಸಲೀ ಕಾರಣ ಕೇಳಿದ್ರೆ ಶಾಕ್ ಆಗ್ತೀರ….!! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...