Homeಮುಖಪುಟ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಸದ ತೇಜಸ್ವಿ ಸೂರ್ಯಗೆ ಬೆಂಬಲ ಸೂಚಿಸಿದ್ದಾರೆ. ನಾನು ಹಲವು ವರ್ಷಗಳಿಂದ ಪ್ರಧಾನಿಗಳಲ್ಲಿ ಎನ್‌ಐಎ ಕೇಂದ್ರಕ್ಕೆ ಮನವಿ ಮಾಡಿದ್ದೆ. ಈಗ ಒಪ್ಪಿಗೆ ಸಿಕ್ಕಿರುವುದಕ್ಕೆ ಪ್ರಧಾನಿಗಳು ಮತ್ತು ಗೃಹ ಸಚಿವ ಅಮಿತ್‌ ಶಾರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.

- Advertisement -
- Advertisement -

ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕೆಲವರು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವುದು ಬಿಜೆಪಿಯೇ, ಹಾಗಾಗಿ ಭಯೋತ್ಪಾದನೆ ಹೆಚ್ಚಾಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್‌ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್‌ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್‌ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ

 

ಇದಕ್ಕೆ ಆಕ್ಷೇಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ’ತಂತ್ರಜ್ಞಾನದಲ್ಲಿ ಜಾಗತೀಕವಾಗಿ  ಹೆಸರುವಾಸಿಯಾಗಿರುವ ಬೆಂಗಳೂರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕರ ಕೇಂದ್ರ ಎಂದಿರುವುದು ಖಂಡನೀಯ’. ಜಿಡಿಪಿ ಕುಸಿತವಾಗಿರುವ ಈ ಸಮಯದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಯಾರಾದರೂ ಹೂಡಿಕೆದಾರರು ಬರುತ್ತಾರೆಯೇ..? ಇದಕ್ಕೆ ಪ್ರಧಾನಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ

ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು,‌  ‘ಬೆಂಗಳೂರಿನಲ್ಲಿ ಎಷ್ಟು ಭಯೋತ್ಪಾದನಾ ಚಟುವಟಿಕೆಗಳು ನಡೆದಿವೆ? ಭಯೋತ್ಪಾದನಾ ಕೇಂದ್ರವೆಂಬ ಅರ್ಹತೆ ಪಡೆಯಲು ಇರುವ ಮಾನದಂಡಗಳು ಏನು ಎಂಬುದನ್ನು ಬಿಜೆಪಿಯವರಿಂದ ಕೇಳಲು ನಾನು ಇಷ್ಟಪಡುತ್ತೇನೆ’ ಎಂದಿದ್ದಾರೆ.

 

ಅಲ್ಲದೆ, “ಇನ್ನು ಮುಂದೆ ಹೂಡಿಕೆದಾರರನ್ನು ‘ಭಯೋತ್ಪಾದನಾ ನಗರ’ಕ್ಕೆ ಕರೆತರಲು ಕೈಗಾರಿಕಾ ಸಚಿವ ‌ಜಗದೀಶ್ ಶೆಟ್ಟರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಕಷ್ಟು ಶ್ರಮಪಡಬೇಕಿದೆ” ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.‌

ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್ ಮಾಡಿ ತೇಜಸ್ವಿ ಸೂರ್ಯ ವಿರುದ್ಧ, ಬಿಜೆಪಿ ಸರ್ಕರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ನಮ್ಮ ನಗರ ಅವರಿಗೆ ಎಲ್ಲವನ್ನೂ ನೀಡಿದೆ, ಆದರೆ ಅವರು ತಮ್ಮ ಅಜೆಂಡಾಕ್ಕಾಗಿ ನಮ್ಮ ನಗರದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. 1.2 ಕೋಟಿ ಜನರನ್ನು ತಪ್ಪಿತಸ್ಥರನ್ನಾಗಿ ಚಿತ್ರಿಸಿದ್ದಾರೆ. ಇಂತಹ ಅವಿವೇಕ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ”. ನನ್ನ ನಗರ ಸುಂದರ, ಕಾಸ್ಮೋಪಾಲಿಟನ್, ವೈವಿಧ್ಯಮಯ, ಐಟಿ/ಬಿಟಿ ಕೇಂದ್ರ, ಸುರಕ್ಷತೆ, ಶಾಂತಿಯುತ ಸಿಲಿಕಾನ್ ಸಿಟಿಯಾಗಿದೆ. ನನ್ನ ಈ ನಗರಕ್ಕೆ ಕಳಂಕ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಶಾಸಕಿ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್‌ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?

ರಾಜಕೀಯ ನಾಯಕರುಗಳಲ್ಲದೇ ನೆಟ್ಟಿಗರು ಕೂಡ ಸಂಸದ ತೇಜಸ್ವಿ ಹೇಳಿಕೆಗೆ ಕಿಡಿಕಾರಿದ್ದಾರೆ. ಟ್ವಿಟ್ಟರ್‌ನಲ್ಲಿ #ApologiseTejasvi ಹ್ಯಾಶ್‌ಟ್ಯಾಗ್ ಬಳಸಿ ತೇಜಸ್ವಿ ಸೂರ್ಯ ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ.

ಇನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಸದ ತೇಜಸ್ವಿ ಸೂರ್ಯಗೆ ಬೆಂಬಲ ಸೂಚಿಸಿದ್ದಾರೆ. ನಾನು ಹಲವು ವರ್ಷಗಳಿಂದ ಪ್ರಧಾನಿಗಳಲ್ಲಿ ಎನ್‌ಐಎ ಕೇಂದ್ರಕ್ಕೆ ಮನವಿ ಮಾಡಿದ್ದೆ. ಈಗ ಒಪ್ಪಿಗೆ ಸಿಕ್ಕಿರುವುದಕ್ಕೆ ಪ್ರಧಾನಿಗಳು ಮತ್ತು ಗೃಹ ಸಚಿವ ಅಮಿತ್‌ ಶಾರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.


ಇದನ್ನೂ ಓದಿ: ತೇಜಸ್ವಿನಿಗೆ ಬಿಜೆಪಿ ಟಿಕೆಟ್ ತಪ್ಪಿಸಿದ್ದು ‘ಡಿಎನ್ಎ ಪೊಲಿಟಿಕ್ಸ್’ಕಾರಣಕ್ಕಲ್ಲ!  ಅಸಲೀ ಕಾರಣ ಕೇಳಿದ್ರೆ ಶಾಕ್ ಆಗ್ತೀರ….!! 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...