ಬೆಂಗಳೂರು ‘ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ’ ಎಂಬ ಹೇಳಿಕೆ ನೀಡಿದ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಕೆಲವರು ಕರ್ನಾಟಕದಲ್ಲಿ ಆಡಳಿತ ನಡೆಸುತ್ತಿರುವುದು ಬಿಜೆಪಿಯೇ, ಹಾಗಾಗಿ ಭಯೋತ್ಪಾದನೆ ಹೆಚ್ಚಾಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.
“ಕಳೆದ ಕೆಲವು ವರ್ಷಗಳಲ್ಲಿ, ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರಬಿಂದುವಾಗಿದೆ. ನಗರದ ತನಿಖಾ ಸಂಸ್ಥೆಯಿಂದ ನಡೆದ ಅನೇಕ ಬಂಧನಗಳು ಮತ್ತು ಸ್ಲೀಪರ್ ಸೇಲ್ಗಳಿಂದ ಇದು ಸಾಬೀತಾಗಿದೆ. ಹಾಗಾಗಿ ಬೆಂಗಳೂರಿನಲ್ಲಿ ಎನ್ಐಎಯ ಶಾಶ್ವತ ವಿಭಾಗ ತೆರೆಯುವಂತೆ ಗೃಹ ಸಚಿವರಿಗೆ ಒತ್ತಾಯಿಸಿದ್ದೇನೆ. ಅವರು ಭರವಸೆ ನೀಡಿದ್ದು, ಅದಷ್ಟು ಬೇಗ ಬೆಂಗಳೂರಿನಲ್ಲಿ ಎನ್ಐಎ ಕೇಂದ್ರ ಆರಂಭವಾಗಲಿದೆ” ಎಂದು ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು.
ಇದನ್ನೂ ಓದಿ: ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ಸಂಸದ ತೇಜಸ್ವಿ ಸೂರ್ಯ ನೇಮಕ
In last few years, Bluru has become epicenter of terror activities, proven through many NIA arrests & busted sleeper cells in the city.
I urged Hon HM Sri @AmitShah Ji to set up a permanent division of NIA in Bluru
I thank him for his assurance that it will be set up soon! pic.twitter.com/ASxMuumtPr
— Tejasvi Surya (@Tejasvi_Surya) September 27, 2020
ಇದಕ್ಕೆ ಆಕ್ಷೇಪಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ’ತಂತ್ರಜ್ಞಾನದಲ್ಲಿ ಜಾಗತೀಕವಾಗಿ ಹೆಸರುವಾಸಿಯಾಗಿರುವ ಬೆಂಗಳೂರನ್ನು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಭಯೋತ್ಪಾದಕರ ಕೇಂದ್ರ ಎಂದಿರುವುದು ಖಂಡನೀಯ’. ಜಿಡಿಪಿ ಕುಸಿತವಾಗಿರುವ ಈ ಸಮಯದಲ್ಲಿ ಇಂತಹ ಹೇಳಿಕೆಗಳನ್ನು ಕೇಳಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಯಾರಾದರೂ ಹೂಡಿಕೆದಾರರು ಬರುತ್ತಾರೆಯೇ..? ಇದಕ್ಕೆ ಪ್ರಧಾನಿ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸುತ್ತಾರೆಯೇ’ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕನ್ನಡ ಭಾಷೆಯ ಪ್ರಕರಣಕ್ಕೆ ಕೋಮು ಬಣ್ಣ ಕೊಟ್ಟ ಬಿಜೆಪಿ ಸಂಸದ: ತೇಜಸ್ವಿ ನಡೆಗೆ ವ್ಯಾಪಕ ಖಂಡನೆ
BJP MP @Tejasvi_Surya calling Bengaluru, a global city known for Technology and Innovation, as an epicenter of terror is highly condemnable.
GDP growth has crashed and with such statements, which investor will come to Bengaluru & Karnataka?
Will PM and FM @nsitharaman answer?
— DK Shivakumar (@DKShivakumar) September 28, 2020
ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಟ್ವೀಟ್ ಮಾಡಿದ್ದು, ‘ಬೆಂಗಳೂರಿನಲ್ಲಿ ಎಷ್ಟು ಭಯೋತ್ಪಾದನಾ ಚಟುವಟಿಕೆಗಳು ನಡೆದಿವೆ? ಭಯೋತ್ಪಾದನಾ ಕೇಂದ್ರವೆಂಬ ಅರ್ಹತೆ ಪಡೆಯಲು ಇರುವ ಮಾನದಂಡಗಳು ಏನು ಎಂಬುದನ್ನು ಬಿಜೆಪಿಯವರಿಂದ ಕೇಳಲು ನಾನು ಇಷ್ಟಪಡುತ್ತೇನೆ’ ಎಂದಿದ್ದಾರೆ.
Would love to hear from @BJP4Karnataka, how many terror activities have been orchestrated in Bengaluru? What is the criteria for qualification as an “epicenter”?
Sri @JagadishShettar @nsitharaman will have a tough time convincing investors to come to the city of terrorism. https://t.co/BMjdzBOK6M
— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) September 28, 2020
ಅಲ್ಲದೆ, “ಇನ್ನು ಮುಂದೆ ಹೂಡಿಕೆದಾರರನ್ನು ‘ಭಯೋತ್ಪಾದನಾ ನಗರ’ಕ್ಕೆ ಕರೆತರಲು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸಾಕಷ್ಟು ಶ್ರಮಪಡಬೇಕಿದೆ” ಎಂದು ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.
ಕಾಂಗ್ರೆಸ್ ಶಾಸಕಿ ಸೌಮ್ಯ ರೆಡ್ಡಿ ಟ್ವೀಟ್ ಮಾಡಿ ತೇಜಸ್ವಿ ಸೂರ್ಯ ವಿರುದ್ಧ, ಬಿಜೆಪಿ ಸರ್ಕರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ”ನಮ್ಮ ನಗರ ಅವರಿಗೆ ಎಲ್ಲವನ್ನೂ ನೀಡಿದೆ, ಆದರೆ ಅವರು ತಮ್ಮ ಅಜೆಂಡಾಕ್ಕಾಗಿ ನಮ್ಮ ನಗರದ ವರ್ಚಸ್ಸಿಗೆ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. 1.2 ಕೋಟಿ ಜನರನ್ನು ತಪ್ಪಿತಸ್ಥರನ್ನಾಗಿ ಚಿತ್ರಿಸಿದ್ದಾರೆ. ಇಂತಹ ಅವಿವೇಕ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ”. ನನ್ನ ನಗರ ಸುಂದರ, ಕಾಸ್ಮೋಪಾಲಿಟನ್, ವೈವಿಧ್ಯಮಯ, ಐಟಿ/ಬಿಟಿ ಕೇಂದ್ರ, ಸುರಕ್ಷತೆ, ಶಾಂತಿಯುತ ಸಿಲಿಕಾನ್ ಸಿಟಿಯಾಗಿದೆ. ನನ್ನ ಈ ನಗರಕ್ಕೆ ಕಳಂಕ ತರಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಶಾಸಕಿ ಕಿಡಿಕಾರಿದ್ದಾರೆ.
BBMP -BJP
State – BJP
Centre -BJP
25/28 MPs from BJP
What are these people doing? Eating ಕಡ್ಲೆ ಪುರಿ ?Our city have given these ppl everything & they want to ruin, defame our city for their agenda? 1.2 crore ppl are offended & will not tolerated such nonsense #BengaluruPride
— Sowmya Reddy | ಸೌಮ್ಯ ರೆಡ್ಡಿ (@Sowmyareddyr) September 27, 2020
ಇದನ್ನೂ ಓದಿ: ಭೂಸುಧಾರಣಾ ಕಾಯ್ದೆ ತಿದ್ದುಪಡಿ: ಬಿಜೆಪಿಯವರು ಕಾಂಗ್ರೆಸ್ನವರನ್ನು ಪೇಚಿಗೆ ಸಿಲುಕಿಸಿದ್ದು ಹೇಗೆ?
ರಾಜಕೀಯ ನಾಯಕರುಗಳಲ್ಲದೇ ನೆಟ್ಟಿಗರು ಕೂಡ ಸಂಸದ ತೇಜಸ್ವಿ ಹೇಳಿಕೆಗೆ ಕಿಡಿಕಾರಿದ್ದಾರೆ. ಟ್ವಿಟ್ಟರ್ನಲ್ಲಿ #ApologiseTejasvi ಹ್ಯಾಶ್ಟ್ಯಾಗ್ ಬಳಸಿ ತೇಜಸ್ವಿ ಸೂರ್ಯ ಕ್ಷಮೆ ಕೇಳುವಂತೆ ಒತ್ತಾಯಿಸುತ್ತಿದ್ದಾರೆ.
Bigot Tejasvi Surya called Bengaluru as the epicenter of terror hub ..
By doing this he is only disrespecting his own constituency , that means he was elected by terrorists??
#ApologiseTejasvi pic.twitter.com/YI3oXJUT8R
— Surbhi ?? (@SurrbhiM) September 27, 2020
You are an international shame to feminism & your own constituency whom you casually called terrorists.
What a Disgrace to have an MP like you.#ApologiseTejasvi pic.twitter.com/w8aNUKM4IE— Haris Butt?? (@harisbutt142) September 27, 2020
ಇನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಸದ ತೇಜಸ್ವಿ ಸೂರ್ಯಗೆ ಬೆಂಬಲ ಸೂಚಿಸಿದ್ದಾರೆ. ನಾನು ಹಲವು ವರ್ಷಗಳಿಂದ ಪ್ರಧಾನಿಗಳಲ್ಲಿ ಎನ್ಐಎ ಕೇಂದ್ರಕ್ಕೆ ಮನವಿ ಮಾಡಿದ್ದೆ. ಈಗ ಒಪ್ಪಿಗೆ ಸಿಕ್ಕಿರುವುದಕ್ಕೆ ಪ್ರಧಾನಿಗಳು ಮತ್ತು ಗೃಹ ಸಚಿವ ಅಮಿತ್ ಶಾರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.